
UPSC ಪರೀಕ್ಷೆ ದಿನದಂದೇ PSI ಪರೀಕ್ಷೆ; ಸದನದಲ್ಲಿ ಸಿಎಂ ಹೇಳೋದು ಒಂದು, ನಡೆಯಲ್ಲಿ ಮತ್ತೊಂದು?
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ಪರೀಕ್ಷೆ ನಡೆಯುವ ದಿನಾಂಕದಂದೇ ರಾಜ್ಯದಲ್ಲಿ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಸರ್ಕಾರವು ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದೆ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿದೆ.ಯುವಕರ ಭವಿಷ್ಯದ ಕುರಿತು ಎಳ್ಳಷ್ಟು ಕಾಳಜಿಯಿಲ್ಲದ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಯುಪಿಎಸ್ಸಿ ಪರೀಕ್ಷೆ ನಡೆಯುವ ದಿನಾಂಕದಂದೇ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದೆ. ಯುಪಿಎಸ್ಸಿ ಹಲವು ತಿಂಗಳುಗಳ ಮೊದಲೇ ಪರೀಕ್ಷೆ ದಿನಾಂಕ ಪ್ರಕಟಿಸುತ್ತಿದೆ. ಅದರಂತೆ, ಜೂನ್ 16ರಂದು ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆ ನಡೆದಿದ್ದು, ಸೆಪ್ಟೆಂಬರ್ 22ಕ್ಕೆ ಮುಖ್ಯ ಪರೀಕ್ಷೆ ನಡೆಯಲಿದೆ. ವಿವೇಚನೆ, ಸಂವೇದನೆ ಇಲ್ಲದ ಸಿಎಂ ಸಿದ್ದರಾಮಯ್ಯ ಸರ್ಕಾರ ಪಿಎಸ್ಐ ಪರೀಕ್ಷೆಯನ್ನು ಸೆ.22ರಂದೇ ನಡೆಸುವುದಾಗಿ ಜುಲೈ 31ರಂದು ಪ್ರಕಟಿಸಿದೆ. ಈ ಮೂಲಕ ಯುವಕರ ಉದ್ಯೋಗದ ಕನಸಿಗೆ ಕೊಳ್ಳಿಯಿಡುವ ಕೆಲಸ ಮಾಡಿದೆ. ಸೆ.22ರಂದು ನಿಗದಿಯಾಗಿರ...









