Saturday, December 6

ಪ್ರಮುಖ ಸುದ್ದಿ

ಬ್ಯಾಂಕುಗಳ ವಿಲೀನ ಬಗ್ಗೆ ಯಾವುದೇ ಚಿಂತನೆ ಇಲ್ಲ: ಸರ್ಕಾರದ ಸ್ಪಷ್ಟನೆ

ಬ್ಯಾಂಕುಗಳ ವಿಲೀನ ಬಗ್ಗೆ ಯಾವುದೇ ಚಿಂತನೆ ಇಲ್ಲ: ಸರ್ಕಾರದ ಸ್ಪಷ್ಟನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕುಗಳ (ಪಿಎಸ್‌ಬಿ) ವಿಲೀನ ಅಥವಾ ಹೂಡಿಕೆ ಹಿಂತೆಗೆತಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಪ್ರಸ್ತಾವನೆಯನ್ನು ಪರಿಗಣಿಸುತ್ತಿಲ್ಲ ಎಂದು ಕೇಂದ್ರ ಹಣಕಾಸು ಇಲಾಖೆಯ ರಾಜ್ಯ ಸಚಿವ ಪಂಕಜ್ ಚೌಧರಿ ರಾಜ್ಯಸಭೆಯಲ್ಲಿ ಮಂಗಳವಾರ ತಿಳಿಸಿದ್ದಾರೆ. 2026ರೊಳಗೆ ನಾಲ್ಕು ಪಿಎಸ್‌ಬಿಗಳನ್ನು ಹೂಡಿಕೆ ಹಿಂತೆಗೆತ ಅಥವಾ ದೊಡ್ಡ ಬ್ಯಾಂಕುಗಳೊಂದಿಗಿನ ವಿಲೀನಕ್ಕೆ ಸರ್ಕಾರ ಯೋಜನೆ ಹಾಕಿಕೊಂಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಸ್ತುತ ಪಿಎಸ್‌ಬಿಗಳ ವಿಲೀನ ಅಥವಾ ಹೂಡಿಕೆ ಹಿಂತೆಗೆತಕ್ಕೆ ಯಾವುದೇ ಪ್ರಸ್ತಾವನೆಯೂ ಸರ್ಕಾರದ ಮುಂದೆ ಇಲ್ಲ” ಎಂದು ಸ್ಪಷ್ಟಪಡಿಸಿದರು. ಇತ್ತೀಚೆಗೆ ಸರ್ಕಾರ ಪಿಎಸ್‌ಬಿ ಏಕೀಕರಣದ ಹೊಸ ನೀಲನಕ್ಷೆ ಸಿದ್ಧಪಡಿಸುತ್ತಿದೆ, ಸಾಲದಾತರ ಸಂಖ್ಯೆಯನ್ನು 12ರಿಂದ ನಾಲ್ಕಕ್ಕೆ ಇಳಿಸಲು ಯೋಚಿಸಿದೆ ಎಂಬ ವರದಿಗಳು ಹೊರಬಿದ್ದಿದ್ದವು. ಬ್ಯಾಂಕುಗಳ ಬ್ಯಾಲೆನ್ಸ್ ಶೀಟ್‌ಗಳನ್ನು ಬಲಪಡಿಸಲು, ಕಾರ್ಯಾಚರಣಾ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ಬ್ಯಾಂಕಿಂಗ್ ಸಂಸ್ಥೆಗಳನ್ನು ರೂಪಿಸಲು ಈ ಯೋಚನೆಯನ್ನು ಕೈಗೆತ್ತಿಕೊಳ್ಳಲಾಗಿ...
ಹೊಸ ಕಾರ್ಮಿಕ ಸಂಹಿತೆಯಿಂದ 77 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯ: ಎಸ್‌ಬಿಐ ವರದಿ

ಹೊಸ ಕಾರ್ಮಿಕ ಸಂಹಿತೆಯಿಂದ 77 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯ: ಎಸ್‌ಬಿಐ ವರದಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸುಧಾರಣೆಗಳ ಅನುಷ್ಠಾನವು ಮಧ್ಯಮ ಅವಧಿಯಲ್ಲಿ ಭಾರತದ ಕಾರ್ಮಿಕ ವಲಯದಲ್ಲಿ ಉದ್ಯೋಗ ಮತ್ತು ಔಪಚಾರಿಕೀಕರಣವನ್ನು ಗಮನಾರ್ಹವಾಗಿ ಹೆಚ್ಚಿಸಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವರದಿಯನ್ನು ಎತ್ತಿ ತೋರಿಸಿದೆ. ಹೊಸ ಕಾರ್ಮಿಕ ಸಂಹಿತೆಗಳು ನಿರುದ್ಯೋಗವನ್ನು ಶೇಕಡಾ 1.3 ರಷ್ಟು ಕಡಿಮೆ ಮಾಡಬಹುದು. ಇದು 77 ಲಕ್ಷ ಜನರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಗೆ ಕಾರಣವಾಗುತ್ತದೆ ಎಂದು ವರದಿ ಹೇಳಿದೆ. ಭಾರತದ ಹೊಸ ಕಾರ್ಮಿಕ ಸಂಹಿತೆಗಳು ಮಧ್ಯಮ ಅವಧಿಯಲ್ಲಿ ನಿರುದ್ಯೋಗವನ್ನು ಶೇಕಡಾ 1.3 ರಷ್ಟು ಕಡಿಮೆ ಮಾಡಬಹುದು. ಇದು 77 ಲಕ್ಷ ಜನರ ಹೆಚ್ಚುವರಿ ಉದ್ಯೋಗ ಸೃಷ್ಟಿಯನ್ನು ಸೂಚಿಸುತ್ತದೆ ಎಂದು ಅದು ಹೇಳಿದೆ. ಈ ಮೌಲ್ಯಮಾಪನವು 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಪ್ರಸ್ತುತ ಕಾರ್ಮಿಕ ಬಲ ಭಾಗವಹಿಸುವಿಕೆಯ ದರವು ಶೇಕಡಾ 60.1 ರಷ್ಟಿದೆ ಮತ್ತು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸರಾಸರಿ ದುಡಿಯುವ ವಯಸ್ಸಿನ ಜನಸಂಖ್ಯೆಯು ಶೇಕಡಾ 70.7 ರಷ್ಟಿದೆ. ವರದಿಯ ಪ್ರಕಾರ, ಹೊಸ ಕಾರ್ಮಿಕ ಸಂಹಿತೆಗಳ ಅನುಷ್ಠಾನವು ಕಾರ್ಮ...
ಚಿಕ್ಕಪೇಟೆಯ ಮಾಜಿ ಶಾಸಕ ಆರ್‌.ವಿ. ದೇವರಾಜ್ ಹೃದಯಾಘಾತದಿಂದ ವಿಧಿವಶ

ಚಿಕ್ಕಪೇಟೆಯ ಮಾಜಿ ಶಾಸಕ ಆರ್‌.ವಿ. ದೇವರಾಜ್ ಹೃದಯಾಘಾತದಿಂದ ವಿಧಿವಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕ ಆರ್‌.ವಿ. ದೇವರಾಜ್ (67) ಅವರು ವಿಧಿವಶರಾಗಿದ್ದಾರೆ. ಡಿಸೆಂಬರ್ 3ರಂದು ತಮ್ಮ ಜನ್ಮದಿನದ ಪ್ರಯುಕ್ತ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿದ್ದ ವೇಳೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ದೇವರಾಜ್ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ. ಆರ್‌.ವಿ. ದೇವರಾಜ್ ಅವರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಿರಿಯ ನಾಯಕರು ಮಾಜಿ ಶಾಸಕ ಶ್ರೀ ಆರ್. ವಿ. ದೇವರಾಜ್ ನಿಧಾನ ಬಗ್ಗೆ ಕಾಂಗ್ರೆಸ್ ನಾಯಕ ಹೆಚ್.ಎಂ.ರೇವಣ್ಣ ದುಃಖ ವ್ಯಕ್ತಪಡಿಸಿದ್ದಾರೆ. ಪಕ್ಷದ ತತ್ವಗಳಿಗೆ ಅಚಲ ಬದ್ಧತೆ, ಜನಪರ ನಿಲುವು ಮತ್ತು ನೆಲಬದ್ಧ ರಾಜಕೀಯವೇ ಅವರ ಬದುಕಿನ ಗುರುತು ಎಂದು ಸಾಮಾಜಿಕ ಮಾಧ್ಯಮ 'X'ನಲ್ಲಿ ಬರೆದುಕೊಂಡಿರುವ ರೇವಣ್ಣ, ಈ ದುಃಖದ ಕ್ಷಣದಲ್ಲಿ ಅವರ ಕುಟುಂಬದವರಿಗೆ, ಹಾಗೂ ಅಭಿಮಾನ...
ನೆಲಮಂಗಲ: ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆ; ನವ ವಿವಾಹಿತೆ ದಾರುಣ ಸಾವು

ನೆಲಮಂಗಲ: ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆ; ನವ ವಿವಾಹಿತೆ ದಾರುಣ ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆಯಾಗಿ ಸ್ನಾನಕ್ಕೆ ತೆರಳಿದ್ದ ನವ ವಿವಾಹಿತೆ ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಹಾಸನ ಮೂಲದ 24 ವರ್ಷದ ಭೂಮಿಕಾ ಎಂಬವರು ಗ್ಯಾಸ್ ಗೀಜರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಅನಿಲ ಸೋರಿಕೆಯಿಂದ ಉಂಟಾದ ವಿಷಕಾರಿ ವಾತಾವರಣ ದಿಂದ ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಮನೆಯಲ್ಲಿ ಬೇರಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ. ಪತಿ ಕೃಷ್ಣಮೂರ್ತಿ ಪೀಣ್ಯಾದ ಪ್ರತಿಷ್ಠಿತ ಕಂಪನಿಯಲ್ಲಿ ಸೆಕೆಂಡ್ ಶಿಫ್ಟ್ ಕೆಲಸ ಮುಗಿಸಿ ಮನೆಗೆ ವಾಪಾಸಾದ ವೇಳೆ ಬಾಗಿಲು ತೆರೆದಿಲ್ಲ. ಸ್ನಾನದ ಕೋಣೆಯ ಕಿಟಕಿಯಿಂದ ಇಣುಕಿ ನೋಡಿದಾಗ ಕೆಳಗೆ ಬಿದ್ದಿರುವುದು ಕಂಡುಬಂದಿದೆ. ಬಾಗಿಲು ಮುರಿದು ನೋಡಿದಾಗ ಆಕೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ‌ ನೆಲಮಂಗಲ ಸುತ್ತಮುತ್ತ ಕಳೆದೆರಡು ವರ್ಷಗಳಲ್ಲಿ 10 ರಿಂದ 12 ಮಂದಿ ಇದೇ ರೀತಿ ಜೀವತೆತ್ತಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸುದ್ದಿ ತಿಳಿದು ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರ...
ಖಾಲಿ ಹುದ್ದೆಗಳ ಭರ್ತಿಗಾಗಿ ಹೋರಾಡುತ್ತಿದ್ದವರ  ದೌರ್ಜನ್ಯ; ಯತ್ನಾಳ್ ಆಕ್ರೋಶ

ಖಾಲಿ ಹುದ್ದೆಗಳ ಭರ್ತಿಗಾಗಿ ಹೋರಾಡುತ್ತಿದ್ದವರ ದೌರ್ಜನ್ಯ; ಯತ್ನಾಳ್ ಆಕ್ರೋಶ

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಬೆಂಗಳೂರು: ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪರೀಕ್ಷಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸರ್ಕಾರದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, 'ಕುರ್ಚಿ ಕುಸ್ತಿ' ಯಲ್ಲಿ ಸ್ತಬ್ದವಾಗಿರುವ ಆಡಳಿತದಿಂದ ನೇಮಕಾತಿಗಳು ಆಗದೆ ಪರೀಕ್ಷಾರ್ಥಿಗಳ ಶ್ರಮ ಫಲ ನೀಡದೆ ಇದ್ದರೆ ಇನ್ನೊಂದು ಕಡೆ ವಯೋಮಿತಿ ಮೀರುವ ಆತಂಕದಲ್ಲಿದ್ದಾರೆ. ಸರ್ಕಾರದಿಂದ ಪರೀಕ್ಷಾರ್ಥಿಗಳಿಗೆ ಯಾವುದೇ ಸ್ಪಷ್ಟ ಭರವಸೆ ಇಲ್ಲದೆ ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ ಎಂದಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪರೀಕ್ಷಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ. 'ಕುರ್ಚಿ ಕುಸ್ತಿ' ಯಲ್ಲಿ ಸ್ತಬ್ದವಾಗಿರುವ ಆಡಳಿತದಿಂದ ನೇಮಕಾತಿಗಳು ಆಗದೆ ಪರೀಕ್ಷಾರ್ಥಿಗಳ ಶ್ರಮ ಫಲ ನೀಡದೆ ಇದ್ದರೆ ಇನ್ನೊಂದು ಕಡೆ ವಯೋಮಿತಿ ಮೀರುವ… pic.twitter.com/4cGjlRPC1n...
ಸಂಸತ್ ಅಧಿವೇಶನ: ಮೊದಲ ದಿನವೇ ಪ್ರಧಾನಿ ಮೋದಿ ಬಗ್ಗೆ ಖರ್ಗೆ ಟೀಕೆ

ಸಂಸತ್ ಅಧಿವೇಶನ: ಮೊದಲ ದಿನವೇ ಪ್ರಧಾನಿ ಮೋದಿ ಬಗ್ಗೆ ಖರ್ಗೆ ಟೀಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ತೀವ್ರ ಟೀಕೆ ಮಾಡಿದ್ದಾರೆ. ಸಂಸತ್ತಿನಲ್ಲಿ ಮುಖ್ಯ ವಿಷಯಗಳನ್ನು ಪ್ರಾಮಾಣಿಕವಾಗಿ ಮಂಡಿಸುವ ಬದಲು ಮತ್ತೊಮ್ಮೆ “ನಾಟಕ” ನಡೆಸಿದ್ದಾರೆ ಎಂದು ಖರ್ಗೆ ದೂರಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ತಮ್ಮ ಪ್ರತಿಕ್ರಿಯೆ ಹಂಚಿಕೊಂಡ ಖರ್ಗೆ, “ಪ್ರಧಾನಿ ಮೋದಿಯವರು ಸಂಸತ್ತಿನಲ್ಲಿ ಮುಖ್ಯ ವಿಷಯಗಳನ್ನು ತಿಳಿಸುವ ಬದಲು ಮತ್ತೆ ನಾಟಕ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಕಳೆದ 11 ವರ್ಷಗಳಿಂದ ಸಂಸದೀಯ ಮಾನದಂಡಗಳು, ಘನತೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ನಿರಂತರವಾಗಿ ಕುಗ್ಗಿಸಲಾಗಿದೆ ಎಂದು ಅವರು ಆರೋಪಿಸಿದರು. ಮಳೆಗಾಲದ ಕಳೆದ ಅಧಿವೇಶನದಲ್ಲೇ ಕನಿಷ್ಠ 12 ಮಸೂದೆಗಳು ಚರ್ಚೆಯಿಲ್ಲದೇ ಅಥವಾ 15 ನಿಮಿಷಗಳೊಳಗೆ ತರಾತುರಿಯಲ್ಲಿ ಅಂಗೀಕರಿಸಲ್ಪಟ್ಟ ಉದಾಹರಣೆ ನೀಡಿದರು. ರೈತ ವಿರೋಧಿ ಕಾನೂನುಗಳು, ಜಿಎಸ್‌ಟಿ ಮತ್ತು ಭಾರತೀಯ ನಾಗರಿಕ ಭದ್ರತಾ ಸಂಹಿತೆ ಸೇರಿದಂತೆ ಹಲವು ವಿವಾದಾತ್ಮಕ ಮಸೂದೆಗಳನ್ನು “ಸಂಸತ್ತಿನಾದ್ಯಂತ ಬುಲ್‌ಡೋಜರ್ ಮಾಡಲಾಗ...

ಜಗಳೂರು: ಶರಣಬಸವೇಶ್ವರ ಸ್ವಾಮಿಯ ರಥೋತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

Focus, ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ
ಜಗಳೂರು : ಕಾರ್ತಿಕ ಮಾಸದ ಅಂಗವಾಗಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಜಗಳೂರು ತಾಲೂಕಿನ‌ ಗಡಿ ಗ್ರಾಮ ಖಾನಾಮಡುಗಿನ ದಾಸೋಹ ಮಠದ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ಪ್ರತಿವರ್ಷದಂತೆ ಕಾರ್ತಿಕ ಮಾಸದಲ್ಲಿ ನಡೆಯುವ ರಥೋತ್ಸವವು ಭಾನುವಾರ ಜರುಗಿತು. ಸ್ವಾಮಿಯ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡಿ ಪೂಜಾ ವಿಧಿ ವಿಧಾನಗಳನ್ನು ಪೂರೈಸಿದ ನಂತರ ಸಾವಿರಾರು ಭಕ್ತರು ತೇರಿನ ಗಾಲಿಗೆ ಕಾಯಿ ಹೊಡೆದು ಪೂಜೆ ಮಾಡಿ ಭಕ್ತಿ ಸಮರ್ಪಿಸಿದರು. ನಂತರ ರಥವನ್ನು ಎಳೆದು ಕೈಂಕರ್ಯ ನೆರವೇರಿಸಲಾಯಿತು. ಹಿರಿಯೂರು ತಾಲೂಕಿನ ಮೇಟಿ ಕುರ್ಕಿ ತಿಪ್ಪೇಸ್ವಾಮಿ ಎಂಬುವವರು ಸ್ವಾಮಿಯ ಮುಕ್ತಿ ಬಾವುಟವನ್ನು ಒಂದು ಲಕ್ಷದ ಹತ್ತು ಸಾವಿರದ ಹನ್ನೇರೆಡು ರೂಪಾಯಿಗಳಿಗೆ ಹಾರಜಿನಲ್ಲಿ ಪಡೆದುಕೊಂಡರು. ದಾಸೋಹ ಮಠದ ಐರ್ಮಡಿ ಶಿವರ್ಯರ ಮಾರ್ಗದರ್ಶನದಲ್ಲಿ ಜಾತ್ರಾ ವೈಭವದ ವಿಧಿವಿಧಾನಗಳು ನೆರವೇರಿದವು....
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು; 2024ರಲ್ಲಿ 31,934, ಈ ವರ್ಷ 6,561

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು; 2024ರಲ್ಲಿ 31,934, ಈ ವರ್ಷ 6,561

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಡೆಂಗ್ಯೂ ಪ್ರಕರಣಗಳು 2024ನೇ ಸಾಲಿನಲ್ಲಿ 31,934 ಕಂಡು ಬಂದಿದ್ದರೆ 2025ರ ಪ್ರಸಕ್ತ ಸಾಲಿನಲ್ಲಿ ಈ ಪ್ರಮಾಣ 6,561 ಕ್ಕೆ ಇಳಿದಿದ್ದು, ಶೇಕಡವಾರು 81% ಕಡಿಮೆಯಾಗಿದೆ. ಅಲ್ಲದೆ, ಸಾವು ಸಂಭವಿಸಿಲ್ಲ. ಇದು ನಿಜಕ್ಕೂ ಪರಿಣಾಮಕಾರಿ ಫಲಿತಾಂಶವಾಗಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇದೇ ಮಾದರಿಯಲ್ಲಿ, ಕಂಡುಬರುತ್ತಿದ್ದ ಚಿಕನ್ ಗುನ್ಯಾ ಜ್ವರದ ಪ್ರಮಾಣವೂ ಶೇ.59ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ 2024ರ ಸಾಲಿನಲ್ಲಿ 2,348 ಪ್ರಕರಣಗಳು ಕಂಡುಬಂದಿದ್ದರೆ 2025ರ ನವೆಂಬರ್ ಕೊನೆವಾರದ ತನಕ 974 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ. 2024ರಲ್ಲಾದ ಡೆಂಗ್ಯೂ ಪ್ರಕರಣಗಳ ಹೆಚ್ಚಳವನ್ನು ಗಂಭಿರವಾಗಿ ಪರಿಗಣಿಸಿ ಸಾಂಕ್ರಾಮಿಕ ರೋಗಗಳ ಪಟ್ಟಿಗೆ ಡೆಂಗ್ಯೂವನ್ನು ಸೇರಿಸಲಾಯಿತು. ನಿಯಂತ್ರಣಕ್ಕಾಗಿ ನಿರಂತರವಾಗಿ ಅರಿವು ಕಾರ್ಯಕ್ರಮ, ಸ್ವಚ್ಚತೆ, ಉಚಿತ ಔಷಧ ಚಿಕಿತ್ಸೆಗಳ ಜತೆಗೆ ಅದರ ನಿಯಮಾವಳಿ ಪ್ರಕಾರ ಲಾರ್ವಾ ನಿಯಂತ್ರಣ ಕ್ರಮಗಳನ್ನು ಅನುಸರಿಸದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ₹2000 ತನಕ ದಂಡ ಶಿಕ್ಷೆ ವಿಧಿಸುವ ಕ್ರ...
ಜಿಎಸ್‌ಟಿ ಸೆಸ್ ಬದಲಿಗೆ ತಂಬಾಕು–ಪಾನ್ ಮಸಾಲಾ ಮೇಲೆ ಹೆಚ್ಚುವರಿ ತೆರಿಗೆ: ಈ ಅಧಿವೇಶನದಲ್ಲಿ ಮಸೂದೆ ಮಂಡನೆ

ಜಿಎಸ್‌ಟಿ ಸೆಸ್ ಬದಲಿಗೆ ತಂಬಾಕು–ಪಾನ್ ಮಸಾಲಾ ಮೇಲೆ ಹೆಚ್ಚುವರಿ ತೆರಿಗೆ: ಈ ಅಧಿವೇಶನದಲ್ಲಿ ಮಸೂದೆ ಮಂಡನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಚಳಿಗಾಲದ ಅಧಿವೇಶನ ಆರಂಭದ ದಿನವೇ ಕೇಂದ್ರ ಸರ್ಕಾರ 13ಕ್ಕೂ ಹೆಚ್ಚು ಪ್ರಮುಖ ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲು ಸಜ್ಜಾಗಿದೆ. ಇದರಲ್ಲಿ ಕೇಂದ್ರ ಅಬಕಾರಿ ತಿದ್ದುಪಡಿ ಮಸೂದೆ–2025 ಮತ್ತು ಆರೋಗ್ಯ ಭದ್ರತಾ ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ–2025 ಪ್ರಮುಖವಾಗಿವೆ. ತಂಬಾಕು, ಪಾನ್ ಮಸಾಲಾ ಸೇರಿದಂತೆ ‘ಪಾಪ’ ವಸ್ತುಗಳ ಮೇಲೆ ಈಗ ವಿಧಿಸುತ್ತಿರುವ ಜಿಎಸ್‌ಟಿ ಪರಿಹಾರ ಸೆಸ್‌ಗೆ ಬದಲಾಗಿ, ಅಬಕಾರಿ ಸುಂಕದ ರೂಪದಲ್ಲಿ ಹೆಚ್ಚುವರಿ ತೆರಿಗೆ ಮುಂದುವರಿಸಲು ಈ ಮಸೂದೆಗಳನ್ನು ತರಲಾಗುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಎರಡು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲು ನಿರ್ಧರಿಸಿದ್ದಾರೆ. ಪ್ರಸ್ತುತ ಈ ವಸ್ತುಗಳ ಮೇಲೆ ಜಿಎಸ್‌ಟಿ 28% ವಿಧಿಸಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ವಿವಿಧ ದರಗಳಲ್ಲಿ ಪರಿಹಾರ ಸೆಸ್ ವಿಧಿಸಲಾಗುತ್ತಿದೆ. ಕೋವಿಡ್‌ ಅವಧಿಯಲ್ಲಿ ರಾಜ್ಯಗಳ ಜಿಎಸ್‌ಟಿ ಆದಾಯ ನಷ್ಟವನ್ನು ಪೂರೈಸಲು ಕೇಂದ್ರ ಸರ್ಕಾರ ತೆಗೆದುಕೊಂಡಿದ್ದ ಸಾಲ ಮರುಪಾವತಿಗಾಗಿ ಪರಿಹಾರ ಸೆಸ್ ಸಂಗ್ರಹವನ್ನು ಬಳಸಲಾಗುತ್ತಿತ್ತು. ಈ ಸಾಲ ಡಿಸೆಂಬರ್...
ಆಂಧ್ರ ಕರಾವಳಿಯಲ್ಲಿ 13 ಬಾಂಗ್ಲಾದೇಶಿ ಮೀನುಗಾರರ ಬಂಧನ

ಆಂಧ್ರ ಕರಾವಳಿಯಲ್ಲಿ 13 ಬಾಂಗ್ಲಾದೇಶಿ ಮೀನುಗಾರರ ಬಂಧನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ವಿಶಾಖಪಟ್ಟಣ: ಆಂಧ್ರಪ್ರದೇಶದ ಶ್ರೀಕಾಕುಲಂ ಕರಾವಳಿಯಲ್ಲಿ ಅಲೆಮಾರಿ ಆಗಿ ತಲುಪಿದ್ದ 13 ಬಾಂಗ್ಲಾದೇಶಿ ಮೀನುಗಾರರನ್ನು ಸಮುದ್ರ ಪೊಲೀಸರು ಭಾನುವಾರ ವಶಕ್ಕೆ ಪಡೆಯಿದರು. ದೋಣಿಯ ಇಂಧನ ಹಾಗೂ ಆಹಾರ ಸಂಪೂರ್ಣ ಖಾಲಿಯಾಗಿದ್ದ ಕಾರಣ, ಅವರು ಸಮುದ್ರದಲ್ಲಿ ಹಲವು ದಿನಗಳಿಂದ ಸಿಲುಕಿಕೊಂಡಿದ್ದರೆಂದು ತಿಳಿದುಬಂದಿದೆ. ಎಚರ್ಲಾ ಮಂಡಲದ ಮುಸವಾನಿಪೇಟೆ ಬಳಿ ದೋಣಿ ಕಂಡುಬಂದ ವೇಳೆ ಸ್ಥಳೀಯ ಮೀನುಗಾರರು ಅವರ ಚಲನವಲನಗಳನ್ನು ಅನುಮಾನಾಸ್ಪದವಾಗಿ ಕಂಡು ಸಮುದ್ರ ಪೊಲೀಸರಿಗೆ ಮಾಹಿತಿ ನೀಡಿದರು. ದೋಣಿ ಮತ್ತು ಅದರಲ್ಲಿದ್ದವರನ್ನು ದಡಕ್ಕೆ ತರಲು ಮೂರು ದೋಣಿಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಯಿತು. ಅವರ ಭಾಷೆ ಮತ್ತು ಉಡುಪಿನ ಆಧಾರದಲ್ಲಿ ಅವರು ಬಾಂಗ್ಲಾದೇಶದವರೇ ಎಂದು ಗುರುತಿಸಲಾಯಿತು. ವಶಕ್ಕೆ ಪಡೆದ ನಂತರ ಪೊಲೀಸರು ಅವರನ್ನು ವಿಚಾರಣೆ ನಡೆಸಿದರು. ಆದರೆ ಹಸಿವು, ದೈಹಿಕ ದೌರ್ಬಲ್ಯ ಮತ್ತು ಭಯದಿಂದ ಬಳಲುತ್ತಿದ್ದ ಮೀನುಗಾರರಿಗೆ ಸಂವಹನ ನಡೆಸಲು ತೊಂದರೆಯಾಗಿತ್ತು. ಬಂಗಾಳಿ ಭಾಷೆಯನ್ನೂ ತಿಳಿದ ಕೆಲವು ಸ್ಥಳೀಯ ಮೀನುಗಾರರ ಸಹಾಯದಿಂದ ಮೂಲಭೂತ ಮಾಹಿತಿಯನ್ನು ಪಡೆದುಕೊಳ್ಳಲಾಯಿತು. ಬಾಂಗ್ಲಾದೇಶದ ಜಲಪ್...