Tuesday, June 24

ಪ್ರಮುಖ ಸುದ್ದಿ

ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ‘ಗಜಾನನ ಕ್ರಿಕೆಟರ್ಸ್’ ಟೀಸರ್

ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ‘ಗಜಾನನ ಕ್ರಿಕೆಟರ್ಸ್’ ಟೀಸರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಭಾರತದಲ್ಲಿ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕರಾವಳಿಯಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಎಂದರೆ ಒಂದು ಆರಾಧನೆ. ಅದೇ ಅಂಡರ್ ಆರ್ಮ್ ಕ್ರಿಕೆಟ್ ನ ಕಥೆ ತುಳು ಸಿನಿಮಾದಲ್ಲಿ ಬರುತ್ತಿದೆ ಎಂದರೆ ಅಭಿಮಾನಿಗಳಿಗೆ ಒಂದು ಹಬ್ಬ. ಹೌದು ಭಾರತದಲ್ಲಿ ಪ್ರಪ್ರಥಮ ಬಾರಿಗೆ ಅಂಡರ್ ಆರ್ಮ್ ಕ್ರಿಕೆಟ್ ಕಥೆಯನ್ನು ಗಜಾನನ ಕ್ರಿಕೆಟರ್ಸ್ ಸಿನಿಮಾದ ಮೂಲಕ ತೆರೆದಿಡಲಾಗಿದೆ. ಕ್ರಿಕೆಟ್ ಕುರಿತ ಸಿನಿಮಾ 'ಗಜಾನನ ಕ್ರಿಕೆಟರ್ಸ್' ಟೀಸರ್ ಬಿಡುಗಡೆಯಾಗಿದ್ದು ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಚಿತ್ರದ ಮೊದಲ ನೋಟ ಬಿಡುಗಡೆಯಾಗಿದ್ದು ಚಿತ್ರ ಪ್ರೇಮಿಗಳ ಕುತೂಹಲ ಕೆರಳುವಂತೆ ಮಾಡಿದೆ. ಈ ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ಅನ್ವಿತಾ ಸಾಗರ್, ಸಮತಾ ಅಮೀನ್, ಪ್ರಜ್ವಲ್ ಶೆಟ್ಟಿ, ನವೀನ್ ಡಿ ಪಡಿಲ್, ಅರವಿಂದ ಬೋಳಾರ್, ಬೋಜರಾಜ್ ವಾಮಂಜೂರ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ವಾಳ್ತಾರ್ ನಂದಳಿಕೆ, ಸಚಿನ್ ಮಾಡ ಸೇರಿದಂತೆ ಕರಾವಳಿಯ ಹಾಲವಾರು ಹೆಸರಾಂತ ಕಲಾವಿದರು ನಟಿಸಿದ್ದಾರೆ. ಇದರಿಂದ ಈ...
‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ ಸಿ

‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ ಸಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿರ್ದೇಶಕ ಶೇಖರ್ ಕಮ್ಮುಲ ಅವರ ಮನರಂಜನಾ ಚಿತ್ರ 'ಕುಬೇರಾ'ದ ಟ್ರಿಮ್ ಮಾಡಿದ ಆವೃತ್ತಿಗೆ ಸೆನ್ಸಾರ್ ಮಂಡಳಿಯು ಈಗ ಯು/ಎ ಪ್ರಮಾಣಪತ್ರದೊಂದಿಗೆ ಅನುಮೋದನೆ ನೀಡಿದೆ. ಬಿಡುಗಡೆಗೆ ಅನುಮತಿ ಪಡೆದಿರುವ ಟ್ರಿಮ್ ಮಾಡಿದ ಆವೃತ್ತಿಯು 181 ನಿಮಿಷಗಳ (ಮೂರು ಗಂಟೆ ಒಂದು ನಿಮಿಷ) ರನ್ ಟೈಮ್ ಹೊಂದಿದೆ. ಸೆನ್ಸಾರ್ ಮಂಡಳಿಯು ಅನುಮತಿ ನೀಡಿದ ಕುಬೇರಾದ ಹಿಂದಿನ ಆವೃತ್ತಿಯು ಮೂರು ಗಂಟೆ 15 ನಿಮಿಷಗಳ ರನ್ ಟೈಮ್ ಹೊಂದಿತ್ತು ಎಂಬುದನ್ನು ನೆನಪಿಸಿಕೊಳ್ಳಬಹುದು. ಆದಾಗ್ಯೂ, ಚಿತ್ರದ ನಿರ್ಮಾಪಕರು ಸಂದರ್ಶನವೊಂದರಲ್ಲಿ, ಕೊನೆಯ ಕ್ಷಣದ ಉದ್ವಿಗ್ನತೆಯನ್ನು ತಡೆಗಟ್ಟಲು ಚಿತ್ರವನ್ನು ಸೆನ್ಸಾರ್ ಮಾಡಿಸಲಾಗಿದೆ ಮತ್ತು ಈಗ ಆವೃತ್ತಿಯನ್ನು ಮೂರು ಗಂಟೆಗಳಿಗಿಂತ ಕಡಿಮೆ ಮಾಡುವುದಾಗಿ ಹೇಳಿದ್ದರು. ಅದರಂತೆ, ಈಗ, ಟ್ರಿಮ್ ಮಾಡಿದ ಆವೃತ್ತಿಯು ಮೂರು ಗಂಟೆ ಒಂದು ನಿಮಿಷದ ರನ್ ಟೈಮ್ ಹೊಂದಿದೆ. ನಾಗಾರ್ಜುನ ಜೊತೆ ನಾಯಕನಾಗಿ ನಟಿಸಿರುವ ಧನುಷ್, ಈ ಚಿತ್ರದಲ್ಲಿ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡುತ್ತಾ, "ನಾನು ಬಿಸಿಲಿನಲ್ಲಿ ನಿಲ್ಲಬೇಕು ಎಂದು ಕೇಳಿದ್ದೆ. ನಾನು ಸಾಕಷ್ಟು ಸಂಶೋಧನೆ ಮಾಡಬೇಕಾಗಿತ್ತು......
KSRTC, BMTC ಸಿಬ್ಬಂದಿ ಮೇಲೆ ದೌರ್ಜನ್ಯ; ಕೃತ್ಯ ಮರುಕಳಿಸದಂತೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಗೃಹ ಇಲಾಖೆಗೆ ರಾಮಲಿಂಗಾ ರೆಡ್ಡಿ ಪತ್ರ

KSRTC, BMTC ಸಿಬ್ಬಂದಿ ಮೇಲೆ ದೌರ್ಜನ್ಯ; ಕೃತ್ಯ ಮರುಕಳಿಸದಂತೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಗೃಹ ಇಲಾಖೆಗೆ ರಾಮಲಿಂಗಾ ರೆಡ್ಡಿ ಪತ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ-ದೌರ್ಜನ್ಯ ಕೃತ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಇಂತಹಾ ಘಟನೆಗಳನ್ನು ತಡೆಯಲು ಸೂಕ್ತ ಕ್ರಮವಹಿಸುವಂತೆ ಗೃಹ ಸಚಿವ ಪರಮೇಶ್ವರ್ ಅವರಿಗೆ ಸಲಹೆ ನೀಡಿದ್ದಾರೆ. ಈ ಸಂಬಂಧ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಬರೆದಿರುವ ಪತ್ರ ಗಮನಸೆಳೆದಿದೆ. BMTC ಸಿಬ್ಬಂದಿ ಮೇಲೆ ಪದೇಪದೆ ನಡೆಯುತ್ತಿರುವ ಹಲ್ಲೆ ಮತ್ತು ಅವಮಾನದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಮಲಿಂಗಾ ರೆಡ್ಡಿ ಒತ್ತಾಯಿಸಿದ್ದಾರೆ. ಈ‌ ಹಿಂದೆಯೂ ಹಲವಾರು ಈ ರೀತಿಯ ಪ್ರಕರಣಗಳು ನಡೆದಿದ್ದು, ಆಯುಕ್ತರು ಬೆಂಗಳೂರುರವರಿಗೆ ಪತ್ರ ಬರೆದು ಸೂಕ್ತ ಕ್ರಮ ತೆಗೆದುಕೊಳ್ಳಲು ಹಾಗೂ ಈ ಸಂಬಂಧ ಖುದ್ದು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವಿವರಿಸಲು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ. ಈ ಎಲ್ಲಾ ಕ್ರಮಗಳ ಹೊರತಾಗಿಯೂ ಮತ್ತೊಂದು ಪ್ರಕರಣವು ಎರಡು ದಿನಗಳಿಂದಷ್ಟೇಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ಆಘಾತಕಾರಿಯಾಗಿದೆ ಎಂದು ರಾಮಲಿಂಗಾ ರೆಡ್ಡಿಯವರು ಗೃಹ ಸಚಿವರ ಗಮನಸೆಳೆದಿದ್ದಾರೆ. ...
ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಚುರುಕುಗೊಂಡ ಹಿನ್ನೆಲೆಯಲ್ಲಿ, ಜೂನ್ 16ರ ವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಬಿಸಿಲು-ಮಳೆಯ ಜತೆಯ ವಾತಾವರಣ ಮುಂದುವರೆಯುವ ನಿರೀಕ್ಷೆ ಇದೆ. ಇದೇ ವೇಳೆ, ಜೂನ್ 15ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 17ರಿಂದ ಮಳೆಯ ತೀವ್ರತೆ ಸ್ವಲ್ಪ ಇಳಿಮುಖವಾಗಲಿದ್ದು, ಜೂನ್ 18ರ ವರೆಗೆ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಕರ್ನಾಟಕದ ಇತರ ಭಾಗಗಳಲ್ಲಿಯೂ, ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ವ್ಯಕ್ತವಾಗಿದ್ದು, ಕರಾವಳಿ ಭಾಗಗಳಿಗೆ ಎಚ್ಚರಿಕೆಯನ್ನು ಕೋರಲಾಗಿದೆ....
ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಉತ್ತರಾಖಂಡ: ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಡೆಹ್ರಾಡೂನ್ ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೌರಿಕುಂಡದ ಬಳಿ ಪತನಗೊಂಡಿದೆ. ಭಾನುವಾರ ಮುಂಜಾನೆ ಸಂಭವಿಸಿದ ಈ ದುರ್ಘಟನೆಯಲ್ಲಿ ಪೈಲಟ್ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. #WATCH | Rudraprayag, Uttarakhand: Today, a helicopter operating a flight on the sector Shri Kedarnath to Guptkashi was involved in an accident. A total of 07 people were on board this helicopter, who died on the spot. Rescue teams were immediately dispatched under the direction… pic.twitter.com/DFSa7glmrI— ANI (@ANI) June 15, 2025 ಆರ್ಯನ್ ಅವಿಯೇಷನ್ ಕಂಪನಿಗೆ ಸೇರಿದ ಹೆಲಿಕಾಪ್ಟರ್ 6 ಪ್ರಯಾಣಿಕರನ್ನು ಹೊತ್ತು ಗುಪ್ತಕಾಶಿಗೆ ತೆರಳುತ್ತಿತ್ತು. ಈ ವೇಳೆ ಗೌರಿಕುಂಡ್ ಬಳಿ ಬೆಳಗಿನ ಜಾವ 5.30ರ ಸುಮಾರಿಗೆ ಪತನವಾಗಿದೆ. ಪೈಲಟ್ ಸೇರಿ ಒಟ್ಟು 7 ಮಂದಿ ಇದ್ದರು ಎನ್ನಲಾಗಿದ್ದು, ಎಲ್ಲರೂ ಸಾವನ್ನಪ್ಪಿದ್ದಾರ...
ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರ್ವಜನಿಕ ಜೀವನದಲ್ಲಿ ಸೈದ್ಧಾಂತಿಕವಾಗಿ ಎದುರಿಸಲಾಗದ ಪಲಾಯನವಾದಿಗಳು ವಾಮಮಾರ್ಗದಲ್ಲಿ ರಾಜಕೀಯ ಎದುರಾಳಿಗಳ ಮೇಲೆ ಕೆಸರು ಎರಚುವ ಪ್ರಯತ್ನ ಮಾಡುತ್ತಾರೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. ತೇಜಸ್ ಎ ಗೌಡ ಎಂಬ ವ್ಯಕ್ತಿ ಸುಳ್ಳು ಆರೋಪಗಳನ್ನು ಮಾಡಿ ನನ್ನ ತೇಜೋವದೆ ಮಾಡುವ ದುರುದ್ದೇಶದಿಂದ ಮುಕ್ತಾಯಗೊಂಡಿರುವ ಪ್ರಕರಣಗಳ ಉಲ್ಲೇಖ ಮಾಡಿ ಮತ್ತು ನ್ಯಾಯಾಲಗಳ ಆದೇಶಕ್ಕೆ ವಿರುದ್ಧವಾಗಿ ಮಾನ್ಯ ರಾಜ್ಯಪಾಲರಿಗೆ ದೂರು ನೀಡಿ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇವರ ಪ್ರಯತ್ನದ ಹಿಂದೆ ಸುಳ್ಳು ದೂರುಗಳ ಮುಖಾಂತರ ಹಣ ಮಾಡುವ ದುರುದ್ದೇಶವೂ ಇರುವಂತಿದೆ. ಇಂತಹ ಸುಳ್ಳು ದೂರುಗಳ ಮೇಲೆ ಅನೇಕ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ ಎಂದು ರಮೇಶ್ ಬಾಬು ಪ್ರತಿಕ್ರಿಯಿದ್ದಾರೆ. ಇವರ ದುರುದ್ದೇಶಪೂರಿತ ಮತ್ತು ಸುಳ್ಳು ಸುದ್ದಿಯ ಆರೋಪಗಳ ಮೇಲೆ ಬೆಂಗಳೂರು ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲೆಗಳ ಸಮೇತ ತಾನು ದೂರು ನೀಡಿದ್ದು, ಮುಂದಿನ ಕ್ರಮಕ್ಕಾಗಿ ಪೋಲಿಸರು ದೂರನ್ನು ದಾಖಲಿಸಿಕ...
ಇಸ್ರೇಲ್ ಏರ್‌ಸ್ಟ್ರೈಕ್ : 6 ಪರಮಾಣು ವಿಜ್ಞಾನಿಗಳೂ ಸೇರಿ 78 ಮಂದಿ ಸಾವು

ಇಸ್ರೇಲ್ ಏರ್‌ಸ್ಟ್ರೈಕ್ : 6 ಪರಮಾಣು ವಿಜ್ಞಾನಿಗಳೂ ಸೇರಿ 78 ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಜೆರುಸಲೆಂ: ಟೆಹ್ರಾನ್‌ನಲ್ಲಿ ಭೀಕರ ದಾಳೆ ನಡೆಸಿದ ಇಸ್ರೇಲ್, ಇರಾನ್‌ನ ಮೇಲೆ ಎಬ್ಬಿಸುವ ಹಲ್ಲೆ ಮಾಡಿದೆ. ಈ ವೈಮಾನಿಕ ದಾಳೆಯಲ್ಲಿ ಅಂತಹವರಲ್ಲದ 78 ಮಂದಿ ಬಲಿಯಾಗಿದ್ದು, 329ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚು ಚರ್ಚೆಗೆ ಒಳಪಟ್ಟದ್ದು ಈ ದಾಳಿಯಲ್ಲಿ ಇರಾನ್ ಪರಮಾಣು ಇಂಧನ ಸಂಸ್ಥೆಯ ಮಾಜಿ ಮುಖ್ಯಸ್ಥ ಫೆರೆಡೌನ್ ಅಬ್ಬಾಸಿ ಸೇರಿದಂತೆ 6 ಮಂದಿ ಪರಮಾಣು ವಿಜ್ಞಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಜೊತೆಗೆ, ಇರಾನ್‌ನ ಪ್ರಮುಖ ಸೇನಾ ನಾಯಕ ಜನರಲ್ ಅಮೀರ್ ಅಲಿ ಹಾಜಿಜಾದೆ ಹತ್ಯೆಯಾದ್ದನ್ನು ಇರಾನ್ ಖಚಿತಪಡಿಸಿದೆ....
ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: 'ಒಂದು ದೇಶ, ಒಂದು ಚುನಾವಣೆ' ತೀರ್ಮಾನ ಮೂಲಕ ದೇಶದ ಗಮನ ಸೆಳೆದಿರುವ ಕೇಂದ್ರ ಸರ್ಕಾರ ಇದೀಗ 'ಒಂದು ದೇಶ ಏಕರೂಪದ ಶಿಕ್ಷಣ ವ್ಯವಸ್ಥೆ' ಜಾರಿ ಬಗ್ಗೆ ಚಿಂತನೆ ನಡೆಸಿದೆ. ಈ ಸಂಬಂಧ ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ (Department of Higher Education) ಇಂದು (13.062025 ಶುಕ್ರವಾರ) ಯುಜಿಸಿ ಗೆ ಮಹತ್ವದ ನಿರ್ದೇಶನ ನೀಡಿದೆ. ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಹದೆಗೆಟ್ಟಿದ್ದು ಕಾರ್ಪೊರೇಟ್ ಲಾಭಿಯಿಂದಾಗಿ ಶಾಲೆಗಳಲ್ಲಿ ದುಬಾರಿ ಶುಲ್ಕ ವಿಧಿಸಲಾಗುತ್ತಿದೆ. ಏಕರೂಪ ಶಿಕ್ಷಣ ಹಾಗೂ ಅಗತ್ಯ ಶಿಕ್ಷಣದ ಸಾಂವಿಧಾನಿಕ ಆಶಯಗಳಿಗೆ ಶಿಕ್ಷಣ ಸಂಸ್ಥೆಗಳು ಅಡ್ಡಿಯಾಗುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ನಿಯಂತ್ರಣ ಪ್ರಾಧಿಕಾರ ಸ್ಥಾಪಿಸಬೇಕೆಂದು ಕೋರಿ 'ಸಿಟಿಜನ್ ರೈಟ್ಸ್ ಫೌಂಡೇಷನ್ (CRF)' ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಕೇಂದ್ರ ಶಿಕ್ಷಣ ಶುಲ್ಕ ನಿಯಂತ್ರಣ ಪ್ರಾಧಿಕಾರ (CEFRA) ರಚನೆಯ ಪ್ರಕ್ರಿಯೆಗೆ ಚಾಲನೆ ನೀಡಿದೆ. ಕೇಂದ್ರ...
ಅಹ್ಮದಾಬಾದ್ ಬಳಿ ಭೀಕರ ವಿಮಾನ ಅಪಘಾತ; ಸಂಸದರೂ ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ಶಂಕೆ

ಅಹ್ಮದಾಬಾದ್ ಬಳಿ ಭೀಕರ ವಿಮಾನ ಅಪಘಾತ; ಸಂಸದರೂ ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ಶಂಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಅಹಮದಾಬಾದ್: ಗುಜರಾತ್ ರಾಜ್ಯದ ಅಹಮದಾಬಾದ್ ಬಳಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಅಹ್ಮದಾಬಾದ್ ವಿಮಾನ ನಿಲ್ದಾಣದ ಬಳಿಯ ವಿಮಾನ ಪಾತನವಾಗಿದ್ದು, ಬೆಂಕಿ ಹಾಗೂ ದಟ್ಟ ಹೊಗೆ ನೋಡುಗರನ್ನು ಬೆಚ್ಚಿ ಬೀಳಿಸಿದೆ. ಅಹ್ಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ವಿಮಾನವೇ ದುರಂತಕ್ಕೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆಗಷ್ಟೇ ಟೇಕ್ ಆಫ್ ಆದ ವಿಮಾನದಲ್ಲಿ ಸಂಸದರು ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಅದೇ ವಿಮಾನ ಅಪಘಾತವಾಗಿದೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 🚨✈️ BREAKING: Passenger plane crashes near #Ahmedabad airport in Meghani Nagar. Thick smoke, fire reported. Emergency services on site. Casualties unconfirmed. More updates soon. 🙏 #PlaneCrash #AhmedabadCrash #BreakingNews#Ahmedabad #crash #airindia@LevinaNeythiri @airindia pic.twitter.com/zbyTiOOaD0— Aarya Dixit (@aaryadixit26) June 12, 20...
ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

ಕಾಲ್ತುಳಿತ ದುರಂತ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಬಿಜೆಪಿ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕೋರಿದ್ದಾರೆ. ಈ ಕುರಿತು ಅವರು ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ದಿನದಂದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಯುವಜನರು ಮೃತಪಟ್ಟಿದ್ದಾರೆ. 75 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಜನರ ಸುರಕ್ಷತೆಯ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಹಾಗೂ ಈ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದು ಕಂಡುಬಂದಿದೆ ಎಂದು ಆರ್‌.ಅಶೋಕ ಪತ್ರದಲ್ಲಿ ದೂರಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 35 ಸಾವಿರ ಜನರು ಹೋಗಬಹುದು. ಆದರೆ ಉಚಿತ ಪಾಸ್‌ ಹಾಗೂ ತಪ್ಪಾದ ಘೋಷಣೆ/ಪ್ರಕಟಣೆಗಳಿಂದಾಗಿ ಅತ್ಯಧಿಕ ಸಂಖ್ಯೆಯಲ್ಲಿ ಜನರು ಬಂದು ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ. ಇಂತಹ ಬೃಹತ್‌ ಕಾರ್ಯಕ್ರಮದಲ್ಲಿ ಪೊಲೀಸ್‌ ಹಾಗೂ ಭದ್ರತಾ ಸಿಬ್ಬಂದಿಯ ಕೊರತೆ ಕೂಡ ಇತ್ತು. ಆಂಬ್ಯುಲೆನ್ಸ್‌, ಪ್ರಾಥಮಿಕ ಚಿಕಿತ್ಸಾ ವ್ಯವಸ್ಥೆ, ...