Tuesday, June 24

ಪ್ರಮುಖ ಸುದ್ದಿ

10 ಜಿಲ್ಲಾ ಬಿಜೆಪಿ ಘಟಕಗಳಿಗೆ ಹೊಸ ಜಿಲ್ಲಾಧ್ಯಕ್ಷರ ನೇಮಕ

10 ಜಿಲ್ಲಾ ಬಿಜೆಪಿ ಘಟಕಗಳಿಗೆ ಹೊಸ ಜಿಲ್ಲಾಧ್ಯಕ್ಷರ ನೇಮಕ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರ: ರಾಜ್ಯದ ವಿವಿಧ ಜಿಲ್ಲೆಗಳ ಘಟಕಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. 10 ಜಿಲ್ಲಾ ಘಟಕಗಳಿಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ. ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ: ಮೈಸೂರು ಗ್ರಾಮಾಂತರ – ಕೆಎನ್‌ ಸುಬ್ಬಣ್ಣ. ಹಾಸನ – ಸಿದ್ದೇಶ್‌ ನಾಗೇಂದ್ರ. ಕೊಡಗು – ರವಿ ಕಾಳಪ್ಪ ಉಡುಪಿ – ಕುತ್ಯಾರು ನವೀನ್ ಶೆಟ್ಟಿ ದಾವಣಗೆರೆ – ಎನ್‌ ರಾಜಶೇಖರ ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ ಚಿತ್ರದುರ್ಗ – ಕೆ.ಟಿ. ಕುಮಾರಸ್ವಾಮಿ ತುಮಕೂರು – ಎಚ್.ಎಸ್. ರವಿಕುಮಾರ್ ಮಧುಗಿರಿ – ಚಿದಾನಂದ ಗೌಡ ಚಿಕ್ಕಬಳ್ಳಾಪುರ – ಎಸ್‌.ವಿ. ರಾಮಚಂದ್ರ ಗೌಡ...
ಭಾರೀ ಮಳೆ ಹಿನ್ನೆಲೆ: ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಭಾರೀ ಮಳೆ ಹಿನ್ನೆಲೆ: ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಬಿರುಸುಗೊಂಡಿದ್ದು, ಭಾರೀ ಮಳೆಯಿಂದಾಗಿ ಜನಜೀವನ ಏರುಪೇರಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ಗುರುವಾರ ರಜೆ ಘೋಷಿಸಲಾಗಿದೆ. ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುರುವಾರ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ....
ಬಳ್ಳಾರಿ–ಚಿಕ್ಕಜಾಜೂರು ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಕೇಂದ್ರ ಸಂಪುಟ ಅನುಮತಿ

ಬಳ್ಳಾರಿ–ಚಿಕ್ಕಜಾಜೂರು ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಕೇಂದ್ರ ಸಂಪುಟ ಅನುಮತಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಬಳ್ಳಾರಿ–ಚಿಕ್ಕಜಾಜೂರು ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಕೇಂದ್ರ ಸಂಪುಟ ಅನುಮತಿ ಅನುಮತಿ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಜಲ ಶಕ್ತಿ ಹಾಗೂ ರಾಜ್ಯ ರೈಲ್ವೆ ಖಾತೆ ಸಚಿವ ಬಿ ಸೋಮಣ್ಣ, ಬುಧವಾರ ನಡೆದ ಸಚಿವ ಸಂಪುಟದಲ್ಲಿ ಬಳ್ಳಾರಿ–ಚಿಕ್ಕಜಾಜೂರು ನಡುವಿನ 185 ಕಿ.ಮೀ ಉದ್ದದ ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಅನುಮತಿ ನೀಡಿ, 3,340 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಈ ಮಹತ್ವದ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಹಾಗೂ ಮಾನ್ಯ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‌ ಅವರಿಗೆ ಸೋಮಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ. ಈ ರೈಲ್ವೆ ಮಾರ್ಗದ ದ್ವಿಪಥೀಕರಣದಿಂದ ಹೊಸಪೇಟೆ - ಬಳ್ಳಾರಿ ಕೈಗಾರಿಕಾ ಪ್ರದೇಶ, ಬಳ್ಳಾರಿ - ಚಿತ್ರದುರ್ಗ ಗಣಿಗಾರಿಕೆ ಪ್ರದೇಶ ಹಾಗೂ ಮಂಗಳೂರು ಬಂದರು ಮತ್ತು ಹೈದರಾಬಾದ್ ಪ್ರದೇಶಗಳ ನಡುವೆ ನೇರ ಸಂಪರ್ಕ, ಪ್ರವಾಸೋದ್ಯಮ, ಸರಕು ಸಾಗಣೆ ಸೇರಿದಂತೆ ಸಾರಿಗೆ ಸಂಪರ್ಕಕ್ಕೆ ಅನುಕೂಲವಾಗಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನತೆಗೆ ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿಗಳ ಕೊಡುಗೆಯ...
ಮರು ಜಾತಿ ಗಣತಿ, ಸಿಎಂ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ?

ಮರು ಜಾತಿ ಗಣತಿ, ಸಿಎಂ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮತ್ತೊಮ್ಮೆ ಜಾತಿ ಸಮೀಕ್ಷೆ ನಡೆಸುವ ತೀರ್ಮಾನದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕಪಾಳಮೋಕ್ಷ ಮಾಡಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೋಲು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಗೆಲುವು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರು ಜಾತಿ ಸಮೀಕ್ಷೆಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖಭಂಗವಾಗಿ ಸೋಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಗೆಲುವಾಗಿದೆ. ಈ ವರದಿಯನ್ನು ನಾವೆಲ್ಲರೂ ವಿರೋಧಿಸಿದ್ದೆವು‌. ಕಾಂಗ್ರೆಸ್ ಹೈಕಮಾಂಡ್ ಗೆ ಈ ವರದಿ ಸರಿಯಿಲ್ಲ ಎನ್ನಿಸಿದೆ. ಹೈಕಮಾಂಡ್ ನಿಂದ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷವಾಗಿದೆ. ಯಾರು ಏನೇ ಮಾಡಿದರೂ ವರದಿ ಜಾರಿ ಮಾಡುತ್ತೇನೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು‌‌. ಈಗ ಅವರು ಹೇಳಿದಂತೆ ನಡೆದುಕೊಳ್ಳದೇ ಇರುವುದರಿಂದ ರಾಜೀನಾಮೆ ಕೊಡುವುದು ಸೂಕ್ತ. 160 ಕೋಟಿ ರೂ. ವ್ಯರ್ಥವಾಗಿದ್ದು, ಮರು ಸಮೀಕ್ಷೆ ನಡೆಸಲು ಇವರ ಬಳಿ ಹಣವಿಲ್ಲ. ಇದಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಹೈಕಮಾಂಡ್ ಶಂಖದಿಂದ ಬಂದರೆ ಮಾತ್ರ ತೀರ್ಥವ...
ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ‘ನ್ಯಾಕ್’ ಕಿರೀಟ..! ‘ಎ’ ಗ್ರೇಡ್ ಮಾನ್ಯತೆ

ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ‘ನ್ಯಾಕ್’ ಕಿರೀಟ..! ‘ಎ’ ಗ್ರೇಡ್ ಮಾನ್ಯತೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹುಬ್ಬಳ್ಳಿ : ರಾಜ್ಯದ ವಿಶ್ವವಿದ್ಯಾಲಯ 'KSLU' ಪ್ರತಿಷ್ಠೆ ಮತ್ತಷ್ಟು ಹೆಚ್ಚಿದೆ. ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) ಅಭಿವೃದ್ಧಿಗೆ ಫುಲ್ ಮಾರ್ಕ್ಸ್ ನೀಡಿರುವ ನ್ಯಾಕ್‌ ತಂಡ 'ಎ' ಗ್ರೇಡ್ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದೆ. ಹುಬ್ಬಳ್ಳಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ನ್ಯಾಕ್‌ ನಿಂದ 'ಎ' ಗ್ರೇಡ್ ದೊರೆತಿದ್ದು, ವಿಶ್ವವಿದ್ಯಾಲಯದ ಹೆಮ್ಮೆ ಹೆಚ್ಚಿಸಿದೆ ಎಂನು ಶಿಕ್ಷಣ ತಜ್ಞರು ಸಂತಸ ಹಂಚಿಕೊಂಡಿದ್ದಾರೆ. ಕಳೆದ 15 ವರ್ಷಗಳಿಂದ ವಿವಿಯು ಕಾನೂನು ಮೌಲ್ಯಾಧಾರಿತ ಶಿಕ್ಷಣವನ್ನು ಒದಗಿಸುತ್ತಿದ್ದು, 128 ಸಂಯೋಜಿತ ಕಾನೂನು ಕಾಲೇಜುಗಳನ್ನು ತನ್ನ ವ್ಯಾಪ್ತಿಯಲ್ಲಿ ಹೊಂದಿದೆ. ಈ ವಿಶ್ವವಿದ್ಯಾಲಯಕ್ಕೆ ಮೇ ತಿಂಗಳಲ್ಲಿ ನ್ಯಾಕ್ ಪೀರ್ ತಂಡ ಭೇಟಿ ನೀಡಿ ಪರಿಶೀಲಿಸಿತ್ತು. ಅಧ್ಯಕ್ಷೆ ಡಾ. ನಿಶಿತಾ ಜಾಲ, ಡಾ.ಕೆ. ಜಯಚಂದ್ರ ರೆಡ್ಡಿ, ಡಾ. ಜಯಶಂಕರ ಕೆ. ಐ., ಡಾ. ಸುಭೀರ್ ಕುಮಾರ ರಾಯ್, ಡಾ. ಧರಮೇಂದ್ರ ಕುಮಾರ ಮಿಶ್ರಾ, ಡಾ. ತೆನುಮೋಜಿ ರಾಮಾನುಜಂ ಮತ್ತು ಡಾ. ಜಗನ್ನಾಥ ಪಾಟೀಲ ಅವರನ್ನೊಳಗೊಂಡ ತಂಡವು ಹೈಬ್ರಿಡ್ ಮೋಡ್‌ನಲ್ಲ...
ಮುಂದಿನ 2-3 ದಿನ ಭಾರೀ ಮಳೆ ಸಾಧ್ಯತೆ; ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ

ಮುಂದಿನ 2-3 ದಿನ ಭಾರೀ ಮಳೆ ಸಾಧ್ಯತೆ; ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಭಾರತ ಹವಾಮಾನ ಇಲಾಖೆ (IMD) ಮಧ್ಯಪ್ರದೇಶ, ಛತ್ತೀಸ್‌ಗಢ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಅಸ್ಸಾಂನಾದ್ಯಂತ ಹಲವಾರು ಜಿಲ್ಲೆಗಳಿಗೆ ಮುಂದಿನ 2-3 ದಿನಗಳ ಕಾಲ ಭಾರೀಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದೆ. ಗುಡುಗು, ಮಿಂಚು ಮತ್ತು ಗಂಟೆಗೆ 60 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಮಧ್ಯಪ್ರದೇಶದ ಧಾರ್, ಬರ್ವಾನಿ, ಖಾರ್ಗೋನ್, ದಿಂಡೋರಿ, ಮಾಂಡ್ಲಾ ಮತ್ತು ಬಾಲಘಾಟ್ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಛತ್ತೀಸ್‌ಗಢದಲ್ಲಿಯೂ ಸಹ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ, ಮುಂಗೇಲಿ, ಕಬೀರ್ಧಾಮ್, ಬೆಮೆತಾರಾ, ರಾಯ್‌ಪುರ, ದುರ್ಗ್, ರಾಜನಂದಗಾಂವ್, ಬಲೋಡ್, ಕಾಂಕೇರ್ ಮತ್ತು ನಾರಾಯಣಪುರಗಳಿಗೆ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರದ ಕೆಲವು ಭಾಗಗಳು, ವಿಶೇಷವಾಗಿ ಗೊಂಡಿಯಾ, ಭಂಡಾರ, ಚಂದ್ರಾಪುರ, ವಾರ್ಧಾ ಮತ್ತು ನಾಂದೇಡ್‌ಗಳು ಇದೇ ರೀತಿಯ ಎಚ್ಚರಿಕೆಗಳನ್ನು ನೀಡಿವೆ. ದಕ್ಷಿಣದಲ್ಲಿ, ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ ಮತ್ತು ರಾಮನಗರ ಜಿಲ್ಲೆಗಳು ಪ್ರತಿಕೂಲ ಪರಿಸ್ಥಿತಿಯನ್ನು ...
ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಹೈದರಾಬಾದ್: ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯೂ ಆಗಿರುವ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಂಗಳವಾರ ನಿರ್ದೇಶಕ ಹರೀಶ್ ಶಂಕರ್ ಅವರ ಮುಂಬರುವ ಮನರಂಜನಾ ಚಿತ್ರ 'ಉಸ್ತಾದ್ ಭಗತ್ ಸಿಂಗ್' ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಚಿತ್ರತಂಡ ಈಗ ಹೊಸ ವೇಳಾಪಟ್ಟಿಯನ್ನು ಪ್ರಾರಂಭಿಸಿದೆ, ಇದು ಕನಿಷ್ಠ ಒಂದು ತಿಂಗಳ ಕಾಲ ಮುಂದುವರಿಯುವ ನಿರೀಕ್ಷೆಯಿದೆ. ಪವನ್ ಕಲ್ಯಾಣ್ ಮಂಗಳವಾರ ಹೈದರಾಬಾದ್‌ನಲ್ಲಿ ಚಿತ್ರತಂಡಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದು, ಸೆಟ್‌ಗಳಲ್ಲಿ ಹೆಚ್ಚಿನ ಉತ್ಸಾಹ ಹೆಚ್ಚಿಸಿತು. ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ನವೀನ್ ಯೆರ್ನೇನಿ ಮತ್ತು ವೈ. ರವಿಶಂಕರ್ ಅವರು ಅದ್ಧೂರಿಯಾಗಿ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಸಂಗೀತ ನೀಡುತ್ತಿರುವುದು ಯಶಸ್ಸಿನ ಹಾದಿಯಲ್ಲಿರುವ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್. ಈ ಚಿತ್ರಕ್ಕೆ ಅಯನಂಕ ಬೋಸ್ ಛಾಯಾಗ್ರಹಣ ಮಾಡುತ್ತಿದ್ದು, ಉಜ್ವಲ್ ಕುಲಕರ್ಣಿ ಸಂಕಲನ ನಿರ್ವಹಿಸಲಿದ್ದಾರೆ. ಈ ಚಿತ್ರದಲ್ಲಿ ರಾಮ್-ಲಕ್ಷ್ಮಣ್ ಜೋಡಿ ಸಾಹಸ ಸನ್ನಿವೇಶಗಳನ್ನು ನೃತ್ಯ ಸಂಯೋಜನೆ ಮಾಡಲಿ...
ಮತ್ತೆ ಜಾತಿ ಗಣತಿ: ಈಗಾಗಲೇ ಖರ್ಚು ಮಾಡಿರುವ 160 ಕೋಟಿ ರೂ ವ್ಯರ್ಥ? ವಿಜಯೇಂದ್ರ ಪ್ರಶ್ನೆ

ಮತ್ತೆ ಜಾತಿ ಗಣತಿ: ಈಗಾಗಲೇ ಖರ್ಚು ಮಾಡಿರುವ 160 ಕೋಟಿ ರೂ ವ್ಯರ್ಥ? ವಿಜಯೇಂದ್ರ ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕಾರಣ ಇದೀಗ ಮತ್ತೆ ಜಾತಿ ಗಣತಿ ಜಟಾಪಟಿಗೆ ಸಾಕ್ಷಿಯಾಗುತ್ತಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಡೆಯನ್ನು ಪ್ರತಿಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ, ಜಾತಿ ಜನಗಣತಿಯನ್ನು ಪ್ರಸ್ತಾಪಿಸುತ್ತದೆ ಅದು ಸಾಮಾಜಿಕ ಕಾಳಜಿಯಿಂದಲ್ಲ, ಬದಲಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸದಾ ಸಂಚು ರೂಪಿಸುತ್ತಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ. <blockquote class="twitter-tweet" data-media-max-width="560"><p lang="kn" dir="ltr">ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ, ಜಾತಿ ಜನಗಣತಿಯನ್ನು ಪ್ರಸ್ತಾಪಿಸುತ್ತದೆ ಅದು ಸಾಮಾಜಿಕ ಕಾಳಜಿಯಿಂದಲ್ಲ, ಬದಲಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸದಾ ಸಂಚು ರೂಪಿಸುತ್ತಿರುತ್ತದೆ. <br><br>ಬೆಂಗಳೂರಿನ ದುರಂತದ ಕಾಲ್ತುಳಿತದ 11 ಅಮಾಯಕರ ಸಾವುಗಳಿಗೆ ರಾ...
ಜಾತಿ ಜನಗಣತಿ ದತ್ತಾಂಶ 10 ವರ್ಷ ಹಳೆಯದಾಗಿದ್ದರಿಂದ ಮರು ಗಣತಿ: ಡಿಕೆಶಿ ಸ್ಪಷ್ಟನೆ

ಜಾತಿ ಜನಗಣತಿ ದತ್ತಾಂಶ 10 ವರ್ಷ ಹಳೆಯದಾಗಿದ್ದರಿಂದ ಮರು ಗಣತಿ: ಡಿಕೆಶಿ ಸ್ಪಷ್ಟನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮರು ಜಾತಿಗಣತಿಯ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಜಾತಿ ಜನಗಣತಿ ದತ್ತಾಂಶವು ಸುಮಾರು 10 ವರ್ಷ ಹಳೆಯದಾಗಿರುವುದರಿಂದ ಪ್ರತಿಯೊಂದು ವರ್ಗದ ಪ್ರಮುಖರಿಗೂ ಈ ಬಗ್ಗೆ ಮಾತನಾಡಲು ಅವಕಾಶವನ್ನು ನೀಡಿ ಸಾಮಾಜಿಕ ನ್ಯಾಯ ಒದಗಿಸುವಂತೆ ವರಿಷ್ಠರು ಸಲಹೆ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ. ಯಾವ ವರ್ಗದವರಿಂದಲೂ ಸಣ್ಣ ಅಪಸ್ವರ ಬಾರದಂತೆ, ಯಾರಿಗೂ ಅನ್ಯಾಯ ಆಗದಂತೆ ಅವಕಾಶವನ್ನು ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಡಿಕೆಶಿ ತಿಳಿಸಿದ್ದಾರೆ. <blockquote class="twitter-tweet" data-media-max-width="560"><p lang="kn" dir="ltr">ಸರ್ವರಿಗೂ ನ್ಯಾಯ- ನಮ್ಮ ಧ್ಯೇಯ<br><br>ಜಾತಿ ಜನಗಣತಿ ದತ್ತಾಂಶವು ಸುಮಾರು 10 ವರ್ಷ ಹಳೆಯದಾಗಿರುವುದರಿಂದ ಪ್ರತಿಯೊಂದು ವರ್ಗದ ಪ್ರಮುಖರಿಗೂ ಈ ಬಗ್ಗೆ ಮಾತನಾಡಲು ಅವಕಾಶವನ್ನು ನೀಡಿ ಸಾಮಾಜಿಕ ನ್ಯಾಯ ಒದಗಿಸುವಂತೆ ವರಿಷ್ಠರು ಸಲಹೆ ನೀಡಿದ್ದಾರೆ. ಹೀಗಾಗಿ ಯಾವ ವರ್ಗದವರಿಂದಲೂ ಸಣ್ಣ ಅಪಸ್ವರ ಬಾರದಂತೆ, ಯಾರಿಗೂ ಅನ್ಯಾಯ ಆಗದಂತೆ ಅವಕ...
‘ಕಿಸ್’: ರೊಮ್ಯಾಂಟಿಕ್ ಎಂಟರ್‌ಟೈನರ್ಸ್ ರೊಮ್ಯಾಂಟಿಕ್ ಸ್ಯಾಂಗ್..

‘ಕಿಸ್’: ರೊಮ್ಯಾಂಟಿಕ್ ಎಂಟರ್‌ಟೈನರ್ಸ್ ರೊಮ್ಯಾಂಟಿಕ್ ಸ್ಯಾಂಗ್..

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿರ್ದೇಶಕ ಸತೀಶ್ ಅವರ 'ಕಿಸ್' ಚಿತ್ರದ ಎರಡನೇ ಸಿಂಗಲ್ ಜಿಲ್ಲೆಮಾ ಹಾಡಿನ ಲಿರಿಕಲ್ ವಿಡಿಯೋವನ್ನು ಬಿಡುಗಡೆಯಾಗಿದ್ದು ಸಿನಿರಸಿಕ್ಕರಿಂದ ಸಕತ್ ಲೈಕ್ಸ್ ಗಿಟ್ಟಿಸಿಕೊಂಡಿದೆ. ರೊಮ್ಯಾಂಟಿಕ್ ಎಂಟರ್‌ಟೈನರ್ ಮಂಗಳವಾರ ಈ ಹಾಡಿನ ಲಿರಿಕಲ್ ವಿಡಿಯೋವನ್ನು ಬಿಡುಗಡೆ ಮಾಡಿದೆ. https://www.youtube.com/watch?v=B3h5jZaeIkc ಇಬ್ಬರ ಆಳವಾದ ಪ್ರೀತಿಯನ್ನು ತೋರಿಸುವ ಈ ರೊಮ್ಯಾಂಟಿಕ್ ಹಾಡಿನ ಲಿರಿಕಲ್ ವಿಡಿಯೋದ ಲಿಂಕ್ ಅನ್ನು ನಟ ಕವಿನ್ ಹಂಚಿಕೊಂಡಿದ್ದಾರೆ. ವಿಷ್ಣು ಎಡವನ್ ಅವರ ಸಾಹಿತ್ಯ ಹೊಂದಿರುವ ಈ ಪೆಪ್ಪಿ ರೊಮ್ಯಾಂಟಿಕ್ ಹಾಡಿಗೆ ಜೆನ್ ಮಾರ್ಟಿನ್ ಸಂಗೀತ ನೀಡಿದ್ದಾರೆ. ಇದನ್ನು ಆದಿತ್ಯ ಆರ್‌ಕೆ ಮತ್ತು ಪ್ರಿಯಾ ಮಾಲಿ ಹಾಡಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಬಿಡುಗಡೆಯಾಗಬೇಕಿದ್ದ 'ಕಿಸ್' ಚಿತ್ರವು ಈಗ ಈ ವರ್ಷದ ಜುಲೈನಲ್ಲಿ ಬಿಡುಗಡೆಗೆ ಚಿತ್ರ ತಂಡ ನಿರ್ಧರಿಸಿದೆ. ಖ್ಯಾತ ನೃತ್ಯ ಸಂಯೋಜಕ ಸತೀಶ್ ನಿರ್ದೇಶನದಲ್ಲಿ ಮತ್ತು ನಿರ್ದೇಶಕಿ ಮಂತ್ರಿರಾ ಮೂರ್ತಿ ಅವರ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ 'ಅಯೋಧ್ಯ' ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ಪ್ರೀತಿ ಅಸ್ರಾನಿ ನಟಿಸ...