Saturday, December 6

ಸಿನಿಮಾ

ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ

ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ 'ಭೈರಾದೇವಿ' ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. 'ಭೈರಾದೇವಿ' ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ. https://www.youtube.com/watch?v=Jr3up-ZFm4A&t=4s...
ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ 'ಚೌಧರಿ' ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ. https://www.youtube.com/watch?v=4noS-o_9q0o&t=2s...
ಜೈಲರ್ ನಂತರ ʼವೆಟ್ಟೈಯನ್‌ʼ; ರಜನಿ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ

ಜೈಲರ್ ನಂತರ ʼವೆಟ್ಟೈಯನ್‌ʼ; ರಜನಿ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ʼಜೈಲರ್‌ʼ ಬಳಿಕ ರಜಿನಿಕಾಂತ್‌ ಖಾಕಿ ತೊಟ್ಟು ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಪಾತ್ರದ ʼವೆಟ್ಟೈಯನ್‌ʼ ಚಿತ್ರ ಸಿನಿ ಲೋಕದಲ್ಲಿ ಕುತೂಹಲ ಕೆರಳಿಸಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ʼವೆಟ್ಟೈಯನ್‌ʼ ಟ್ರೇಲರ್ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಮಿತಾಭ್ ಬಚ್ಚನ್ ಕೂಡಾ ವಿಶೇಷ ಪಾತ್ರದಲ್ಲಿ ಗಮನಸೆಳೆದಿದ್ದಾರೆ. https://youtu.be/zPqMbwmGC1U?si=Kn7rPkKdUMYJUUlu
ಸೂಪರ್‌ಸ್ಟಾರ್ ರಜನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸೂಪರ್‌ಸ್ಟಾರ್ ರಜನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜಿನಿಕಾಂತ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಅವರನ್ಬು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೊಟ್ಟೆ ನೋವು ಕಾಣಿಸಿಕೊಂಡು ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 27ರಂದು ‘ದೇವರ’ ಸಿನಿಮಾ ಬಿಡುಗಡೆ​ ಆಗಲಿದೆ. ಇದೇ ಸಂದರ್ಭದಲ್ಲಿ 'ದೇವರ' ಚಿತ್ರದ ಮತ್ತೊಂದು ಟ್ರೇಲರ್ ಬಿಡುಗಡೆಯಾಗಿದೆ. 'ಆರ್​ಆರ್​ಆರ್​’ ಸಿನಿಮಾ ಬಳಿಕ ಜೂನಿಯರ್​ ಎನ್‌ಟಿಆರ್​ ಅವರು ಈ ಚಿತ್ರದಲ್ಲಿ ಕಮಾಲ್ ಪ್ರದರ್ಶಿಸಲಿದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ. https://youtu.be/HNYA6bqL6bU?si=nIRtqhPMISPhVIbJ...
ಬಂಧನವಾಗಿ 100 ದಿನಗಳ ನಂತರ ಜಾಮೀನಿಗಾಗಿ ದರ್ಶನ್ ಅರ್ಜಿ

ಬಂಧನವಾಗಿ 100 ದಿನಗಳ ನಂತರ ಜಾಮೀನಿಗಾಗಿ ದರ್ಶನ್ ಅರ್ಜಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರು ಕೊನೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. 57ನೇ ಸಿಟಿ ಸಿವಿಲ್ ನ್ಯಾಯಾಲಯವು ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ್ ಬಂಧನವಾಗಿ 100 ದಿನಗಳ ಬಳಿಕ ನಟ ಜಾಮೀನು ಕೋರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ....
ಅಂದು ಸುದ್ದಿ ನಿರೂಪಕ ಈಗ ಬೆಳ್ಳಿತೆರೆಯ ಹೀರೋ ರಾಘವ ಸೂರ್ಯ; ‘ರಮ್ಮಿ ಆಟ’ ಚಿತ್ರದ ಸುತ್ತ

ಅಂದು ಸುದ್ದಿ ನಿರೂಪಕ ಈಗ ಬೆಳ್ಳಿತೆರೆಯ ಹೀರೋ ರಾಘವ ಸೂರ್ಯ; ‘ರಮ್ಮಿ ಆಟ’ ಚಿತ್ರದ ಸುತ್ತ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
📝 ಈಶ್ವರ್ ಸಿರಿಗೇರಿ ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಮ್ಮಿ ಆಟ / ರಮ್ಮಿ ಗೇಮ್ ಮನುಕುಲದ ಅವನತಿ ಎಂಬ ಅಪವಾದವಿದೆ, ತಮ್ಮ ಜೀವವನ್ನೇ ಆಹುತಿ ಮಾಡಿಕೊಳ್ಳುತ್ತಿರುವ ಪ್ರಸ್ತುತ ಯುವ ಸಮೂಹದ ಬಗ್ಗೆ ಸೃಜನಶೀಲ ಕಥೆಯನ್ನುಟ್ಟುಕೊಂಡು, ಆನ್‌ಲೈನ್ ರಮ್ಮಿ ಆಡುವುದರಿಂದ ಏನೆಲ್ಲ ಸಮಸ್ಯೆಗಳಾಗುತ್ತವೆ. ಜನ ಸಮೂಹವು ಯಾವೆಲ್ಲಾ ರೀತಿ ಮೋಸ ಹೋಗುತ್ತಾರೆ. ಹಾಗೆಯೇ ಆನ್‌ಲೈನ್‌ ರಮ್ಮಿ ಗೇಮ್‌ ಕುರಿತು ಜನರಿಗೆ ಎಚ್ಚರಿಕೆ ನೀಡುವಂತಹ ಸಿನಿಮಾವೊಂದು ಕನ್ನಡ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದೆ. ಸೆಪ್ಟೆಂಬರ್ 20ರಿಂದಲೇ 'ರಮ್ಮಿ ಆಟ" ಈ ಸಿನಿಮಾ ಮೂಲಕ ಕನ್ನಡ ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿದ್ದ ರಾಘವ ಸೂರ್ಯ ಸಿನಿಮಾದಲ್ಲಿ ಹೀರೋ ಆಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದ್ದು ವಿಶೇಷ. ಈ ಆಟದಿಂದ ಏನೆಲ್ಲ‌ ಪರಿಣಾಮಗಳಾಗುತ್ತವೆ ಎಂಬ ಕಥೆಯನ್ಬು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಸುದ್ದಿ ಸಂಸ್ಥೆಯಲ್ಲಿ ನಿರೂಪಕರಾಗಿದ್ದಾಗಲೇ ರಾಘವ ಸೂರ್ಯ ಅವರು ಈ ಚಿತ್ರದ ಆಫರ್ ಸ್ವೀಕರಿಸಿ, ಕಿರುತೆರೆಯಿಂದ ಬಿಗ್ ಸ್ಕ್ರೀನ್‌ಗೆ ಜಿಗಿದಿದ್ದಾರೆ. ಕನ್ನಡ ಮಾಧ್ಯಮ ಕ್ಷೇತ್ರದಲ್ಲಿನ ತಮ್ಮದೇ ಆದ ಛಾಪು ಮೂಡಿಸಿದ ಖ್...
ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಹೈದರಾಬಾದ್: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ದೂರಿನ ಆಧಾರದಲ್ಲಿ ಜಾನಿ ಮಾಸ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಅರೋಪ ಬಗ್ಗೆ ದೂರು ದಾಖಲಾಗಿತ್ತು. ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧದ ಈ ಆರೋಪ ದಕ್ಷಿಣ ಭಾರತದ ಚಿತ್ರೋದ್ಯಮಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿಯಾಗಿತ್ತು. ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ದಾಖಲಾಗಿದೆ. ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಜಾನಿ ಮಾಸ್ಟರ್ ಅವರನ್ನು ಹೈದರಾಬಾದ್‌ನ ಪೊಲೀಸರು ನಾಲ್ಕು ತಂಡಗಳಲ್ಲಿ ಹುಡಿಲುಕಾಟ ನಡೆಸುತ್ತಿದ್ದರು. ಈ ನಡುವೆ, ಜಾನಿ ಮಾಸ್ಟರ್ ಅವರನ್ನು ಗೋವಾದಲ್ಲಿ ಪತ್ತೆ ಮಾಡಿದ ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ....
ದೀಪಾವಳಿ ವೇಳೆ ನಟ ರಾಕ್ಷಸನ ”ಜೀಬ್ರಾ’ ಅವತಾರ!

ದೀಪಾವಳಿ ವೇಳೆ ನಟ ರಾಕ್ಷಸನ ”ಜೀಬ್ರಾ’ ಅವತಾರ!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ನಟ ಡಾಲಿ ಧನಂಜಯ್ ಮತ್ತು ತೆಲುಗು ನಟ ಸತ್ಯದೇವ್ ಕಾಂಬಿನೇಶನ್‌ನ 'ಜೀಬ್ರಾ' ಚಿತ್ರ ಸಿನಿಲೋಕದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ. ಇದೊಂದು ಮಲ್ಟಿಸ್ಟಾರರ್ ಸಿನಿಮಾ ಜೊತೆಗೆ ಪ್ಯಾನ್ ಇಂಡಿಯಾ ಸಿನಿಮಾ ಎಂದು ಧನಂಜಯ್ ತಿಳಿಸಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ 'ಜೀಬ್ರಾ' ಬಿಡುಗಡೆಯಾಗಲಿದೆ. ಅಕ್ಟೋಬರ್ 31ರಂದು ಕನ್ನಡ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ 'ಜೀಬ್ರಾ' ತೆರೆ ಕಾಣಲಿದೆಯಂತೆ. ಈ ನಡುವೆ, 'ಜೀಬ್ರಾ' ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಮೋಷನ್ ಪೋಸ್ಟರ್ ಗಮನಸಳೆದಿದೆ....
ಇದೀಗ ‘ದೇವರ’ ಹವಾ; ಬಿಡುಗಡೆಗೆ ಮುನ್ನವೇ ದಾಖಲೆಯ ಗಳಿಕೆ

ಇದೀಗ ‘ದೇವರ’ ಹವಾ; ಬಿಡುಗಡೆಗೆ ಮುನ್ನವೇ ದಾಖಲೆಯ ಗಳಿಕೆ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಜೂನಿಯರ್​ ಎನ್​ಟಿಆರ್ ಅಭಿನಯದ ‘ದೇವರ’ ಚಿತ್ರ ಸಿನಿಲೋಕದಲ್ಲಿ ಬಿಡುಗಡೆಗೆ ಮುನ್ನವೇ ಹವಾ ಸೃಷ್ಟಿಸಿದೆ. ಸೆಪ್ಟೆಂಬರ್ 27ರಂದು ‘ದೇವರ’ ಸಿನಿಮಾ ಬಿಡುಗಡೆ ಅಗಲಿದ್ದು ಈಗಲೇ ಗಳಿಕೆಯಲ್ಲಿ ದಾಖಲೆ ಸೃಷ್ಟಿಸುವ ಪ್ರಯತ್ನದಲ್ಲಿದೆ. ಕೊರಟಾಲ ಶಿವ ಅವರು ಈ ಚಿತ್ರವನ್ನು ನಿರ್ದೇಶನದ ಈ ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಗಳಿಕೆ ಮೂಲಕ ಸುದ್ದಿಯಲ್ಲಿದೆ. ಅಮೆರಿಕದಲ್ಲೇ ಬರೋಬ್ಬರಿ 8 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ. ರಿಲೀಸ್​ಗೂ ಮೊದಲೇ ಅಡ್ವಾನ್ಸ್ ಬುಕಿಂಗ್ ಪ್ರಾರಂಭಿಸಲಾಗಿದ್ದು ಅಮೆರಿಕದಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್​ಗಳು ಮಾರಾಟ ಆಗಿವೆ. ಈ ಮೂಲಕ 8 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎನ್ನಲಾಗುತ್ತಿದೆ....