
ಕನ್ನಡ ಭಾಷೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಕಮಲ್ ಹಾಸನ್ ನಡೆ ಬಗ್ಗೆ ಹೈಕೋರ್ಟ್ ಗರಂ
ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪಕ್ಕೆ ಗುರಿಯಾಗಿರುವ ತಮಿಳು ನಟ ಕಮಲ್ ಹಾಸನ್ ಬಗ್ಗೆ ಹೈಕೋರ್ಟ್ ಕೂಡಾ ಗರಂ ಆಗಿದೆ. ಕಮಲ್ ಹಾಸನ್ ಕ್ಷಮೆ ಕೇಳುವಂತೆ ಕನ್ನಡಿಗರು ಪಟ್ಟು ಹಿಡಿದಿದ್ದು, ಕನ್ನಡ ಚಿತ್ರೋದ್ಯಮ ಕೂಡಾ ಕಮಲ್ ಹಾಸನ್ ಅವರ ಹೊಸ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದೆ.
ಈ ಸಂದಿಗ್ಧ ಪರಿಸ್ಥಿತಿ ನಡುವೆ ಹೈಕೋರ್ಟ್ ಮೆಟ್ಟಿಲೇರಿರುವ ಕಮಲ್ ಹಾಸನ್ ನಡೆ ಬಗ್ಗೆ ನ್ಯಾಯಪೀಠ ಕೂಡಾ ಅಸಮಾಧಾನ ವ್ಯಕ್ತಪಡಿಸಿದೆ. ಕಮಲ್ ಹಾಸನ್ ಅವರ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ನಟ ಕ್ಷಮೆ ಕೇಳಲು ನಿರಾಕರಿಸಿದ್ದರಿಂದ ಜಟಿಲ ಸಮಸ್ಯೆ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಥಗ್ ಲೈಫ್ ಚಿತ್ರತಂಡದ ಪರವಾಗಿ ವಾದ ಮಂಡಿಸಿದ ವಕೀಲರು, ಉಂಟಾಗಿರುವ ವಿವಾದ ಸಂಬಂಧಿಸಿದಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆ ಮಾತುಕತೆ ನಡೆಸಿ ಅನಂತರವೇ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆ ಮಾಡಲಾಗುವುದು ಎಂದು ನ್ಯಾಯಾಲಯದ ಗಮನಸೆಳೆದರು. ವಾದವನ್ನು ಆಲಿಸಿದ ನ್ಯಾಯಮೂರ್ತಿ ವಿಚಾರಣೆಯನ್ನು ಈ ತಿಂಗಳ 10ಕ್ಕೆ ಮುಂದೂಡಿದರು.
ಈ ನ...