ಹೈದರಾಬಾದ್: ಟಾಲಿವುಡ್ನ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ದಂಡ/ ಜೈಲು ಶಿಕ್ಷೆ ಪ್ರಕಟವಾಗಿದೆ.
ಮುಂಬೈನ ಸ್ಥಳೀಯ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ ಎನ್ನಲಾಗಿದೆ.2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಮಹೇಶ್ಚಂದ್ರ ಮಿಶ್ರಾ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಕಳೆದ ಏಳು ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿತ್ತು. ಇದೀಗ ರಾಮ್ ಗೋಪಾಲ್ ವರ್ಮಾವಿರುದ್ಧ ಕೋರ್ಟ್ ತೀರ್ಪು ಪ್ರಕಟಿಸಿದೆ. ಜ.21ರಂದು ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ದೂರುದಾರರಿಗೆ ಮೂರು ತಿಂಗಳಲ್ಲಿ 3.72 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. ಮೊತ್ತ ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ.
ಘಟನೆ ಏನು?...
‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿಯನ್ನು ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ‘ಪೈಲ್ವಾನ್’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಘೋಷಿಸಲಾಗಿದೆ. ಆದರೆ ಈ ಪುರಸ್ಕಾರವನ್ನು ತಾವು ಸ್ವೀಕರಿಸುವುದಿಲ್ಲ ಎಂದು ಸುದೀಪ್ ಹೇಳಿಕೊಂಡಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣ 'X'ನಲ್ಲಿ ಕಿಚ್ಚ ಸುದೀಪ್ ಹಾಕಿರುವ ಪೋಸ್ಟ್ ಗಮನಸೆಳೆದಿದೆ. 'ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆಯುವುದು ನಿಜಕ್ಕೂ ಒಂದು ಸೌಭಾಗ್ಯ, ಮತ್ತು ಈ ಗೌರವಕ್ಕಾಗಿ ನಾನು ತೀರ್ಪುಗಾರರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಆದಾಗ್ಯೂ , ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುವುದನ್ನು ನಿಲ್ಲಿಸುವ ನಿರ್ಧಾರ ಮಾಡಿಕೊಂಡಿದ್ದೇನೆ ಎಂದು ನಾನು ತಿಳಿಸಲೇಬೇಕು. ವಿವಿಧ ವೈಯಕ್ತಿಕ ಕಾರಣಗಳಿಗಾಗಿ ಈ ನಿರ್ಧಾರವನ್ನು ಕೈಗೊಂಡಿದ್ದೇನೆ. ತಮ್ಮ ಕಲೆಯಲ್ಲಿ ತಮ್ಮ ಹೃದಯವನ್ನು ಹರಿಸಿದ ಅನೇಕ ಅರ್ಹ ನಟರಿದ್ದಾರೆ. ನಾನು ಬಯಸುವುದಕ್ಕಿಂತ ಹೆಚ್ಚು. ಅವರಲ್ಲಿ ಒಬ್ಬರು ಅದನ್ನು ಪಡೆಯುವುದನ್ನು ನೋಡುವುದು ನನಗೆ ಇನ್ನಷ್ಟು ಸಂತೋಷವನ್ನು ನೀಡು...
ಬೆಂಗಳೂರು: 2019ರ ರಾಜ್ಯ ಸಿನಿಮಾ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ ಸುದೀಪ್ಗೆ ಅತ್ಯುತ್ತಮ ನಟ ಪ್ರಶಸ್ತಿ ಘೋಷಿಸಲಾಗಿದೆ.ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕಾರ ಪಟ್ಟಿ ಇಲ್ಲಿದೆ.
ಅತ್ಯುತ್ತಮ ನಟ: ಸುದೀಪ್ (ಪೈಲ್ವಾನ್ ಚಿತ್ರ)
ಅತ್ಯುತ್ತಮ ನಟಿ: ಅನುಪಮಾ ಗೌಡ (ತ್ರಯಂಬಕಂ ಚಿತ್ರ)
ಅತ್ಯುತ್ತಮ ಸಿನಿಮಾ: ಮೋಹನದಾಸ (ನಿರ್ದೇಶನ ಪಿ ಶೇಷಾದ್ರಿ), ಲವ್ ಮಾಕ್ಟೆಲ್ (ನಿರ್ದೇಶನ ಡಾರ್ಲಿಂಗ್ ಕೃಷ್ಣ), ಅರ್ಘ್ಯಂ (ನಿರ್ದೇಶನ ವೈ ಶ್ರೀನಿವಾಸ್)
ಸಾಮಾಜಿಕ ಕಳಕಳಿ ಚಿತ್ರ: ಕನ್ನೇರಿ (ನಿರ್ದೇಶನ ಮಂಜುನಾಥ ಎಸ್)
ಮನರಂಜನಾ ಸಿನಿಮಾ: ಇಂಡಿಯಾ vs ಇಂಗ್ಲೆಂಡ್ (ನಿರ್ದೇಶನ ನಾಗತಿಹಳ್ಳಿ ಚಂದ್ರಶೇಖರ್)
ಮಕ್ಕಳ ಸಿನಿಮಾ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು (ನಿರ್ದೇಶನ ಅರುಣ್ ಕುಮಾರ್)
ಪ್ರಾದೇಶಿಕ ಸಿನಿಮಾ: ಟ್ರಿಬಲ್ ತಲಾಖ್ (ಬ್ಯಾರಿ ಭಾಷೆ)
ಅತ್ಯುತ್ತಮ ಪೋಷಕ ನಟಿ: ಅನೂಷಾ ಕೃಷ್ಣ (ಬ್ರಾಹ್ಮಿ ಚಿತ್ರ)
ಅತ್ಯುತ್ತಮ ಪೋಷಕ ನಟ: ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರ)
ಅತ್ಯುತ್ತಮ ಕತೆ: ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ (ಸಾಹಿತಿ: ಜಯಂತ್ ...
ಬೆಂಗಳೂರು: 'ಟಾಕ್ಸಿಕ್' ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸರ್ಕಾರ ಶೋಕಾಸ್ ನೋಟಿಸ್ ನೀಡಿದೆ. ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಶೂಟಿಂಗ್ ಸಂಬಂಧ ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ ಇದೆ. ಈ ಸಂಬಂಧ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದ್ದಾರೆ.ನೋಟಿಸ್ ಗೆ ಅಧಿಕಾರಿಗಳು ಉತ್ತರ ನೀಡಲಿದ್ದು, ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ....
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿದ ಘಟನೆಯನ್ನು ಬೇಧಿಸಿರುವ ಮುಂಬೈ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಡಿಸಿಪಿ ದೀಕ್ಷಿತ್ಕುಮಾರ್ ಅಶೋಕ್ ಗೆದಮ್ ಆರೋಪಿಯನ್ನು ಥಾಣೆಯ ಘೋಡ್ಬಂದರ್ ರಸ್ತೆಯಲ್ಲಿರುವ ಹಿರಾನಂದಾನಿ ಎಸ್ಟೇಟ್ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.ಆರೋಪಿ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಬಾಂಗ್ಲಾದೇಶದ ಪ್ರಜೆಯಾಗಿದ್ದಾನೆ. ಕಳ್ಳತನ ಸಂಬಂಧ ಆತ ಮನೆಯೊಳಗೆ ನುಗ್ಗಿದ್ದು, ಆತನಿಗೆ ತಾನು ನತಮ ಮನೆಯೊಳಗೆ ಪ್ರವೇಶಿಸಿದ್ದೇನೆ ಎಂಬುದು ಗೊತ್ತಿರಲಿಲ್ಲ ಎಂಬುದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಡಿಸಿಪಿ ತಿಳಿಸಿದ್ದಾರೆ.ಆರೋಪಿ ಬಾಂಗ್ಲಾದೇಶದವನಾಗಿದ್ದು, ಭಾರತ ಪ್ರವೇಶಿಸಿದ ನಂತರ ತನ್ನ ಹೆಸರನ್ನು ಬಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದ ಸಂಗತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದವರು ವಿವರಿಸಿದ್ದಾರೆ....
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಕೊಲೆ ಯತ್ನ ಪ್ರಕರಣದ ಆರೋಪಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಗುರುವಾರ ಮಧ್ಯರಾತ್ರಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ಅಪರಿಚಿತ ವ್ಯಕ್ತಿ ದಾಂಧಲೆ ನಡೆಸಿದ್ದ. ಕಳ್ಳತನಕ್ಕೆ ಯತ್ನಿಸಿದ್ದ ಆತ ಸೈಫ್ ಅಲಿ ಖಾನ್ ಅವರನ್ನು ಚೂರಿಯಿಂದ ಇರಿದಿದ್ದ.ಆರೋಪಿಯ ಪತ್ತೆಗೆ ಬಲೇ ಬೀಸಿದ್ದ ಬಾಂದ್ರಾ ಠಾಣೆಯ ಪೊಲೀಸರು, ಘಟನೆ ನಡೆದ ಸುಮಾರು 30 ಗಂಟೆಗಳಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.#BREAKINGPolice arrest attacker who assaulted #SaifAliKhan inside his home!Accused reportedly demanded ₹1 crore from Saif to spare his son Jeh from harm. Attacker clearly appears confident & unfazed by consequences. Investigations ongoing https://t.co/ykAyRsL1c2 pic.twitter.com/wqk4ywWvrq
— Nabila Jamal (@nabilajamal_) January 17, 2025ಈ ನಡುವೆ ಬಂಧಿತ ಆರೋಪಿಯೇ ದಾಳಿಕೋರನೆಂಬ ಮಾಹಿತಿ ಹಂಚಿಕೊಳ್ಳಲು ಪೊಲೀಸ...
ಚೆನ್ನೈ: ನಿರ್ದೇಶಕ ನೆಲ್ಸನ್ ಅವರು ಸೂಪರ್ಸ್ಟಾರ್ ರಜನಿಕಾಂತ್ ನಾಯಕನಾಗಿರುವ ಬಹುನಿರೀಕ್ಷಿತ ಆಕ್ಷನ್ ಎಂಟರ್ಟೈನರ್ 'ಜೈಲರ್ 2' ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ಮೆಗಾ ಬಜೆಟ್'ನ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ.ಚಿತ್ರವನ್ನು ನಿರ್ಮಿಸುತ್ತಿರುವ ಸನ್ ಪಿಕ್ಚರ್ಸ್, ಪೊಂಗಲ್ ಹಬ್ಬದ ಶುಭ ದಿನದಂದು ಟೀಸರ್ ಅನ್ನು ಬಿಡುಗಡೆ ಮಾಡಿದೆ. ಟೀಸರ್ ಹಂಚಿಕೊಂಡಿರುವ "ಸನ್ ಪಿಕ್ಚರ್ಸ್' 'ಜೈಲರ್ 2' ಸಿನಿಮಾದಲ್ಲಿ ಸೂಪರ್ಸ್ಟಾರ್ ಪಾತ್ರದ ಸುಳಿವನ್ನು ನೀಡಿದೆ. ಭಾಗ 1 ರಂತೆಯೇ, 'ಜೈಲರ್ 2'ರಲ್ಲಿ ಅನಿರುದ್ಧ್ ಸಂಗೀತ ಸಂಯೋಜಿಸಲಿದ್ದಾರೆ ಮತ್ತು ನೆಲ್ಸನ್ ಚಿತ್ರವನ್ನು ನಿರ್ದೇಶಿಸಲಿದ್ದಾರೆ.ಸಂಗೀತ ನಿರ್ದೇಶಕ ಅನಿರುದ್ಧ್ ಮತ್ತು ನಿರ್ದೇಶಕ ನೆಲ್ಸನ್ ಗೋವಾದಲ್ಲಿ ತಮಾಷೆಯ ಸಂಭಾಷಣೆ ನಡೆಸುತ್ತಿರುವಾಗ, ರೇಡಿಯೊದಲ್ಲಿ ಚಂಡಮಾರುತವು ಕರಾವಳಿಗೆ ಬರುತ್ತಿದೆ ಎಂಬ ಘೋಷಣೆಯೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ, ಅಲ್ಲಿ ಅವರು ನೆಲ್ಸನ್ ಹೇಳುವ ಕಥೆಯ ಚರ್ಚೆಯ ಮೂಲಕ ಬಂದಿದ್ದಾರೆ.https://www.youtube.com/watch?v=sl7gy2uxhjYಸಂಗೀತ ನಿರ್ದೇಶಕ ಮತ್ತು ನಿರ್ದೇಶಕ ಇಬ್ಬರೂ ರಕ್ಷಣೆಗ...
ಡಾಲಿ ಧನಂಜಯ್ ಮತ್ತು ನಾಗಭೂಷಣ್ ಕಾಂಬಿನೇಷನ್ನ ಸಿನಿಮಾ ‘ವಿದ್ಯಾಪತಿ’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಡಾಲಿ ಧನಂಜಯ್ ನಿರ್ಮಾಣ ಮಾಡಿರುವ, ನಾಗಭೂಷಣ್ ನಟಿಸಿರುವ ‘ವಿದ್ಯಾಪತಿ’ ಮುಂಬರುವ ಏಪ್ರಿಲ್ ೧೦ರಂದು ಬಿಡುಗಡೆಯಾಗಲಿದೆ. ಈ ಕುರಿತಂತೆ ಡಾಲಿ ಪಿಕ್ಚರ್ಸ್ ತಂಡ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. View this post on Instagram
A post shared by Daali Pictures (@daalipictures)...
ನಟಿ ರಶ್ಮಿಕಾ ಮಂದಣ್ಣ ಅವರು ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಗಾಯಗೊಂಡಿದ್ದಾರೆ ಎನ್ನಲಾಗಿದೆ.ಸಲ್ಮಾನ್ ಖಾನ್ ನಟನೆಯ ಸಿಖಂದರ್ ಸಿನಿಮಾದ ಶೂಟಿಂಗ್ಗೆ ತಯಾರಿ ನಡೆಸುವ ನಡುವೆ ಜಿಮ್ನಲ್ಲಿ ಭಾಗಿಯಾಗಿದ್ದರು. ಆ ಸಂದರ್ಭದಲ್ಲಿ ಎಡವಟ್ಟಾಗಿ ನಟಿಗೆ ಗಾಯಗಳಾಗಿವೆ ಎನ್ನಲಾಗಿದೆ. ಆದರೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ನಟಿ ರಶ್ಮಿಕಾ ಅವರಿಗೆ ಕೆಲ ದಿನಗಳವರೆಗೆ ವಿಶ್ರಾಂತಿ ಅಗತ್ಯವಿದ್ದು, 'ಸಿಖಂದರ್' ಚಿತ್ರದ ಶೂಟಿಂಗ್'ನಿಂದಲೂ ಅವರು ದೂರ ಉಳಿಯಬೇಕಿದೆ ಎಂದು ಆಪ್ತ ಮೂಲಗಳು ತಿಳಿಸಿವೆ....