Thursday, January 29

Focus

ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

Focus, ಪ್ರಮುಖ ಸುದ್ದಿ, ರಾಜ್ಯ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಬೈಕ್'ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರನ್ನು ಅರುಣ್, ಮನೋಜ್, ನರಸಿಂಹಮೂರ್ತಿ, ನಂದೀಶ್ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಆ ವೇಳೆ, ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.....
2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನ

2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ. ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023ರ ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ, 2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ದಶಕಗಳ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯ ಕಂದಾಯ ಗ್ರಾಮ ರಚನೆ ಅಭಿಯಾನದ ಮುಖಾಂತರ ...
ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ದೇಶದಲ್ಲೇ ಸುಸಜ್ಜಿತ ರೈಲ್ವೆ ಟರ್ಮಿನಲ್

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ದೇಶದಲ್ಲೇ ಸುಸಜ್ಜಿತ ರೈಲ್ವೆ ಟರ್ಮಿನಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ಹಾಗೂ ವಿಶ್ವದರ್ಜೆಯ ರೈಲ್ವೆ ಟರ್ಮಿನಲ್ ಬೆಂಗಳೂರಿಗೆ ಬರಲು ಸಜ್ಜಾಗಿದೆ. ಚೀನಾದ ಐಕಾನಿಕ್ ಹ್ಯಾಂಗ್‌ಝೌ ರೈಲು ನಿಲ್ದಾಣದಿಂದ ಸ್ಫೂರ್ತಿ ಪಡೆದು, ನಗರ ಚಲನಶೀಲತೆಯ ಭವಿಷ್ಯಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾದ ಸಂಪೂರ್ಣವಾಗಿ ಎತ್ತರದ (ಎಲಿವೇಟೆಡ್) ರೈಲ್ವೆ ಟರ್ಮಿನಲ್ ಯಲಹಂಕದಲ್ಲಿ ನಿರ್ಮಾಣವಾಗಲಿದೆ ಎಂದು ಸಂಸದ ಡಾ. ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ. ಸುಮಾರು ₹6,000 ಕೋಟಿ ಹೂಡಿಕೆಯಲ್ಲಿ ನಿರ್ಮಾಣವಾಗಲಿರುವ ಈ ಮಹತ್ವದ ಯೋಜನೆಯು 20 ಎಕರೆ ವಿಸ್ತೀರ್ಣದಲ್ಲಿ ರೂಪುಗೊಳ್ಳಲಿದ್ದು, 16 ಅತ್ಯಾಧುನಿಕ ವೇದಿಕೆಗಳು, 10 ಸ್ಥಿರ ಮಾರ್ಗಗಳು ಹಾಗೂ 15 ಪಿಟ್ ಮಾರ್ಗಗಳನ್ನು ಒಳಗೊಂಡಿರಲಿದೆ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ. ಅಲ್ಲದೆ, ಮೆಟ್ರೋ ಸೇವೆಯೊಂದಿಗೆ ತಡೆರಹಿತ ಏಕೀಕರಣವೂ ಈ ಟರ್ಮಿನಲ್‌ನ ಪ್ರಮುಖ ವೈಶಿಷ್ಟ್ಯವಾಗಿರಲಿದೆ. ಈ ಹೆಗ್ಗುರುತು ಯೋಜನೆಯಿಂದ ಉತ್ತರ ಬೆಂಗಳೂರಿನ ಸಂಚಾರ ದಟ್ಟಣೆ ಗಮನಾರ್ಹವಾಗಿ ಕಡಿಮೆಯಾಗಲಿದ್ದು, ಈಗಿರುವ ರೈಲ್ವೆ ಟರ್ಮಿನಲ್‌ಗಳ ಮೇಲಿನ ಒತ್...
ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿಯ ದಿ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ವಿಶೇಷ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸಿದರು. ದೆಹಲಿ ಮತ್ತು ಉತ್ತರ ಭಾರತದ ಕ್ರೈಸ್ತ ಸಮುದಾಯದ ಭಾರಿ ಪ್ರಾರ್ಥನಾ ಕೂಟದಲ್ಲಿ ಪ್ರಧಾನಮಂತ್ರಿ ಉಪಸ್ಥಿತರಿದ್ದರು. #WATCH | Prime Minister Narendra Modi attended the Christmas morning service at The Cathedral Church of the Redemption in Delhi along with a large congregation of Christians of Delhi and North India on the occassion of #Christmas2025 today. The service included prayers,… pic.twitter.com/wVuQe6GYKQ— ANI (@ANI) December 25, 2025 ಈ ಸಂದರ್ಭದಲ್ಲಿ ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್ ಸ್ವರೂಪ್ ಅವರು ಪ್ರಧಾನಮಂತ್ರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನಾ ಸೇವೆಯಲ್ಲಿ ಕ್ರಿಸ್‌ಮಸ್ ಕ್ಯಾರೋಲ್‌ಗಳು, ಸ್ತುತಿಗೀತೆಗಳು ಹಾಗೂ ಶಾಂತಿ, ಸಹಬಾಳ್ವೆ ಮತ್ತ...
ಹಿರಿಯೂರು ಅಪಘಾತ; ಶಾಲಾ ಬಸ್ ಚಾಲಕನೇ ಇಡೀ ಘಟನೆಗೆ ಪ್ರತ್ಯಕ್ಷದರ್ಶಿ ಸಾಕ್ಷಿ

ಹಿರಿಯೂರು ಅಪಘಾತ; ಶಾಲಾ ಬಸ್ ಚಾಲಕನೇ ಇಡೀ ಘಟನೆಗೆ ಪ್ರತ್ಯಕ್ಷದರ್ಶಿ ಸಾಕ್ಷಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇ ಗೌಡ ಮಾಧ್ಯಮಗಳಿಗೆ ಮಾಹಿತಿ ನೀಡಿ, "ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್ ಬಸ್. ಇಂಧನ ಟ್ಯಾಂಕರ್ ಟ್ರಕ್ ವಿಭಜಕವನ್ನು ಹಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಎಂಟು ಜನರು ಸಾವನ್ನಪ್ಪಿದ್ದಾರೆ, ಕೆಲವರು ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. #WATCH | Chitradurga, Karnataka | IGP Dr BR Ravikante Gowda says, "The accident happened at 2 am... A container crossed the divider and hit a moving bus... Three people are missing... Hopefully, they are alive... One person is at risk and has been taken to the hospital for… https://t.co/aTrDHKnYD9 pic.twitter.com/IkKiOl2dKv— ANI (@ANI) December 25, 2025 ಕಂಟೇನರ್ ಚಾಲಕ ಕೂಡ ಸಾವನ್ನಪ್ಪಿದ್ದಾರೆ. ಒಟ್ಟು, ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಒಬ್ಬ ವ್ಯಕ್ತಿಯ ದೇಹದ 20% ಸುಟ್ಟುಹೋಗಿರುವುದರಿಂದ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ...
ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಅಪಘಾತ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಬಳಿ ಇಂದು ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದನ್ನು ಕೇಳಿ ಅತ್ಯಂತ ದುಃಖವಾಯಿತು.ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ… pic.twitter.com/OmmTmqIuaf— Ramalinga Reddy (@RLR_BTM) December 25, 2025 ಅಪಘಾತ ಸ್ಥಳದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್‌ಗೆ ಡಿಕ್ಕಿ ಹೊಡೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ....
SDPT REUNION; ಜಗತ್ತಿನ ನಾನಾ ದೇಶಗಳಿಂದ ಕಟೀಲಿಗೆ ಮರಳಿದ ಹಳೆಯ ವಿದ್ಯಾರ್ಥಿಗಳು

SDPT REUNION; ಜಗತ್ತಿನ ನಾನಾ ದೇಶಗಳಿಂದ ಕಟೀಲಿಗೆ ಮರಳಿದ ಹಳೆಯ ವಿದ್ಯಾರ್ಥಿಗಳು

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: 'ಗುರುಗಳನ್ನು ವಿದ್ಯಾರ್ಥಿಗಳು ಮತ್ತು ವೈದ್ಯರನ್ನು ರೋಗಿಗಳು ತಮ್ಮ ಕೆಲಸ ಮುಗಿದ ನಂತರ ಮರೆತುಬಿಡುತ್ತಾರೆ' ಎಂಬುದು ಜನರಾಡಿಕೊಳ್ಳುತ್ತಿರುವ ಮಾತುಗಳು. ಆದರೆ, 'ಬದುಕಿಗೆ ರೂಪಕೊಟ್ಟ ಗುರುಗಳೇ ಸರ್ವಸ್ವ' ಎಂದು ಸಾರಿ ಹೇಳುವವರೂ ಇದ್ದಾರೆ. ಅದಕ್ಕೆ ಸಾಕ್ಷಿಯಾಗಿದ್ದೇ ಪುರಾಣ ಪ್ರಸಿದ್ಧ ಕಟೀಲು ದೇವಸ್ಥಾನದ ಅಧೀನದ SDPT ಕಾಲೇಜಿನ ಹಳೆಯ ವಿದ್ಯಾರ್ಥಿಗಳು. ಈ ಕಾಲೇಜು ಸುಮಾರು 3 ದಶಕಗಳ ಹಿಂದೆ ಅಸ್ತಿತ್ವಕ್ಕೆ ಬಂದ ವಿದ್ಯಾಸಂಸ್ಥೆ. ಆಗ ಕುಗ್ರಾಮದಂತಿದ್ದ ಕಟೀಲು ಸಮೀಪದ ಗುಡ್ಡ ಪ್ರದೇಶದಲ್ಲಿ ತಲೆ ಎತ್ತಿದ್ದ ಈ ಶ್ರೀ ದುರ್ಗಾಪರಮೇಶ್ವರಿ ಕಾಲೇಜು ಇದೀಗ ದೇಶಾದ್ಯಂತ ಹೆಸರುಗಳಿಸಿದೆ. ಗುಡ್ಡದಲ್ಲಿ ಕಾಲೇಜು ಆರಂಭದ ದಿನಗಳಲ್ಲಿ ' ಅಷ್ಟು ಎತ್ತರ ಹತ್ತುವವರು ಯಾರು?' ಎಂದು ಪ್ರಶ್ನಿಸಿದ್ದವರೇ ಹೆಚ್ಚು ಮಂದಿ. ವಾಸ್ತವ ಏನೆಂದರೆ, 'ಈ ಕಾಲೇಜಿನಲ್ಲಿ ಕಲಿತು ಎತ್ತರಕ್ಕೆ ಏರಿದವರೇ ಹೆಚ್ಚು ಮಂದಿ' ಈ ಕಾಲೇಜಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಹತ್ತಾರು ದೇಶಗಳಲ್ಲಿ ಪ್ರತಿಷ್ಠಿತ ಹುದ್ದೆಗಳಲ್ಲಿದ್ದಾರೆ. ದಶಕದ ಹಿಂದೆ, ಅಕ್ಷರ ದಾಸೋಹಕ್ಕೆ ಕಟೀಲು ದೇಗುಲದ ಅನ್ನ ದಾಸೋಹ ಸ್ಫೂರ್ತಿಯಾಗಿ...

ಹಿರಿಯೂರು ಬಳಿ ಭೀಕರ ಅಪಘಾತ; 9 ಮಂದಿ ಸಜೀವ ದಹನ

Focus, ಪ್ರಮುಖ ಸುದ್ದಿ, ರಾಜ್ಯ
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಗ್ರಾಮದ ಬಳಿ ಗುರುವಾರ ಬೆಳಗಿನ ಜಾವ ಖಾಸಗಿ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಪಘಾತದಲ್ಲಿ ಕನಿಷ್ಠ 9 ಮಂದಿ ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಅಪಘಾತಕ್ಕೀಡಾಗಿದೆ. ಡಿಕ್ಕಿಯಾದ ತಕ್ಷಣವೇ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆಗ ಪ್ರಯಾಣಿಕರು ಬಸ್ಸಿನೊಳಗೆ ಸಿಲುಕಿಕೊಂಡಿದ್ದರು. ಕ್ ರಸ್ತೆ ವಿಭಜಕವನ್ನು ದಾಟಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಟ್ರಕ್ ಚಾಲಕ ಕೂಡಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸುದ್ದಿ ತಿಳಿದು, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇ ಗೌಡ, ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳೂ ಸ್ಥಳ...
ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ

ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಳ್ಳಾರಿ ಜೀನ್ಸ್ ಪಾರ್ಕ್- ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ನುಡಿದಂತೆ ನಡೆಯುತ್ತಿರುವ ನಮ್ಮ ಸರ್ಕಾರ ಬಳ್ಳಾರಿಯನ್ನು ಜವಳಿ ಉದ್ಯಮದ ಭವಿಷ್ಯದ ಹಬ್ ಆಗಿ ರೂಪಿಸುವತ್ತ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಬಳ್ಳಾರಿ ಜೀನ್ಸ್ ಪಾರ್ಕ್‌ನಲ್ಲಿ ಕೈಗಾರಿಕಾ ನಿವೇಶನಗಳ ದರವನ್ನು ಎಕರೆಗೆ ₹1.35 ಕೋಟಿಯಿಂದ ₹67.50 ಲಕ್ಷಕ್ಕೆ ಇಳಿಸಲಾಗಿದ್ದು, ಇದರಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಣೆ ಸಾಧ್ಯವಾಗಿದೆ ಎಂದವರು ತಿಳಿಸಿದ್ದಾರೆ. ದರ ಇಳಿಕೆಯೊಂದಿಗೆ ಸೌಲಭ್ಯಗಳ ವಿಸ್ತರಣೆ ಮಾಡಲಾಗಿದ್ದು, ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಅವಕಾಶದ ಹೊಸ ಬಾಗಿಲು ತೆರೆದಿದೆ. ಇದರ ಪರಿಣಾಮವಾಗಿ ನೇರ–ಪರೋಕ್ಷ ಉದ್ಯೋಗ ಸೃಷ್ಟಿ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಮತ್ತು ಪೂರಕ ವಲಯಗಳ ಬೆಳವಣಿಗೆ ಸಾಧ್ಯವಾಗಲಿದೆ ಎಂದಿದ್ದಾರೆ. ಉತ್ತರ ಕರ್ನಾಟಕದ ಆರ್ಥಿಕ ಸಬಲೀಕರಣಕ್ಕೆ ಬಳ್ಳಾರಿ ಜೀನ್ಸ್ ಪಾರ್ಕ್ ಮಹತ್ವದ ಕೊಡುಗೆ ನೀಡಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ....
ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ತೀರ್ಮಾನಿಸಬೇಕು; ಸಿಎಂ

ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ತೀರ್ಮಾನಿಸಬೇಕು; ಸಿಎಂ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ ಎಂದರು. ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದ ಸಿಎಂ, ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದರು. ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವೇ ಇಲ್ಲ ಎಂದರು....