Thursday, January 29

Focus

ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ

ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಳ್ಳಾರಿ ಜೀನ್ಸ್ ಪಾರ್ಕ್- ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ನುಡಿದಂತೆ ನಡೆಯುತ್ತಿರುವ ನಮ್ಮ ಸರ್ಕಾರ ಬಳ್ಳಾರಿಯನ್ನು ಜವಳಿ ಉದ್ಯಮದ ಭವಿಷ್ಯದ ಹಬ್ ಆಗಿ ರೂಪಿಸುವತ್ತ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಬಳ್ಳಾರಿ ಜೀನ್ಸ್ ಪಾರ್ಕ್‌ನಲ್ಲಿ ಕೈಗಾರಿಕಾ ನಿವೇಶನಗಳ ದರವನ್ನು ಎಕರೆಗೆ ₹1.35 ಕೋಟಿಯಿಂದ ₹67.50 ಲಕ್ಷಕ್ಕೆ ಇಳಿಸಲಾಗಿದ್ದು, ಇದರಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಣೆ ಸಾಧ್ಯವಾಗಿದೆ ಎಂದವರು ತಿಳಿಸಿದ್ದಾರೆ. ದರ ಇಳಿಕೆಯೊಂದಿಗೆ ಸೌಲಭ್ಯಗಳ ವಿಸ್ತರಣೆ ಮಾಡಲಾಗಿದ್ದು, ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಅವಕಾಶದ ಹೊಸ ಬಾಗಿಲು ತೆರೆದಿದೆ. ಇದರ ಪರಿಣಾಮವಾಗಿ ನೇರ–ಪರೋಕ್ಷ ಉದ್ಯೋಗ ಸೃಷ್ಟಿ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಮತ್ತು ಪೂರಕ ವಲಯಗಳ ಬೆಳವಣಿಗೆ ಸಾಧ್ಯವಾಗಲಿದೆ ಎಂದಿದ್ದಾರೆ. ಉತ್ತರ ಕರ್ನಾಟಕದ ಆರ್ಥಿಕ ಸಬಲೀಕರಣಕ್ಕೆ ಬಳ್ಳಾರಿ ಜೀನ್ಸ್ ಪಾರ್ಕ್ ಮಹತ್ವದ ಕೊಡುಗೆ ನೀಡಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ....
ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ತೀರ್ಮಾನಿಸಬೇಕು; ಸಿಎಂ

ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ತೀರ್ಮಾನಿಸಬೇಕು; ಸಿಎಂ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ ಎಂದರು. ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದ ಸಿಎಂ, ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದರು. ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವೇ ಇಲ್ಲ ಎಂದರು....
ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ; ಸಿಎಂ ಭರವಸೆ.

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ; ಸಿಎಂ ಭರವಸೆ.

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗೃಹಲಕ್ಷ್ಮಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಂಗರೊಂದಿಗೆ ಮಾತನಾಡಿದ ಅವರು, ಫೆಬ್ರವರಿ - ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಸರ್ಕಾರದ ಬಳಿ ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ? ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ? ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ, ಹಣ ಇನ್ನು ಬಿಡುಗಡೆಯಾಗಿಲ್ಲ ಅಷ್ಟೆ ಎಂದರು....
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿ ಆರೋಪ ಹಾಸ್ಯಾಸ್ಪದ. ಬಿಜೆಪಿ ಮಾತ್ರ ಏಕೆ ಇದನ್ನು ವಿರೋಧಿಸುತ್ತದೆ? ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಭಯಪಡಬೇಕು. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಶಾಂತಿ ಹಾಗೂ ಭ್ರಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದ್ದೇವೆ. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿಯೇ ಎಂದರು....
ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

ಗೃಹಲಕ್ಷ್ಮೀ ವಿವಾದ; ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? HDK ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ಎಂದು ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿನ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? ಎಂದು ಪ್ರಶ್ನಿಸಿದ್ದಾರೆ. ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ ? - ಶ್ರೀ @hd_kumaraswamy , ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು pic.twitter.com/u78yxmZSuJ— Janata Dal Secular (@JanataDal_S) December 22, 2025...
ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮನರೇಗ ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತ ಸರ್ಕಾರವು ಐತಿಹಾಸಿಕ ಪ್ರಮಾದವನ್ನು ಮಾಡಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿದ್ದ ಯೋಜನೆಯ ಹೆಸರನ್ನು ಬದಲಿಸಲಾಗಿದೆ. ಇಷ್ಟು ದಿನ ಬೇರೆ ಹೆಸರಿನಲ್ಲಿದ್ದ ಯೋಜನೆಗಳ ಹೆಸರನ್ನು ಮಹಾತ್ಮಾ ಗಾಂಧೀಜಿ ಹೆಸರಿಗೆ ಬದಲಿಸಲಾಗುತ್ತಿತ್ತು. ಭಾರತ ಸರ್ಕಾರವು ದೇಶದ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ. ಮನರೇಗಾ ಯೋಜನೆ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿ ಯೋಜನೆಯಾಗಿದ್ದು, ಇದು ಆರ್ಥಿಕವಾಗಿ ತೀರಾ ಹಿಂದುಳಿದ ಜನರಿಗೆ ಸಂವಿಧಾನಿಕವಾಗಿ ಉದ್ಯೋಗ ಖಾತರಿ ಹಕ್ಕನ್ನು ನೀಡಲಾಗಿತ್ತು. ಗ್ರಾಮೀಣ ಭಾಗದ ಬಡ ಕುಟುಂಬದ ವ್ಯಕ್ತಿಗೆ ವರ್ಷಕ್ಕೆ 100 ದಿನಗಳ ಉದ್ಯೋಗ ನೀಡುವ ಖಾತರಿ ಯೋಜನೆ ಇದಾಗಿ...

ದೆಹಲಿ ಪೊಲೀಸರ ನೋಟಿಸ್ ಬಗ್ಗೆ ಕೋರ್ಟ್ ಮೊರೆಹೋಗಲು ಡಿ.ಕೆ.ಶಿವಕುಮಾರ್ ನಿರ್ಧಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದೆಹಲಿ ಪೊಲೀಸರು ನೀಡಿರುವ ನೋಟಿಸ್ ಕುರಿತಂತೆ ಕೋರ್ಟ್ ಮೊರೆಹೋಗಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. "ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಾವುದೇ ಎಫ್ ಐಆರ್ ಇಲ್ಲದೇ ಇ.ಡಿ ಈ ಪ್ರಕರಣವನ್ನು ಹೇಗೆ ಕೈಗೆತ್ತಿಕೊಂಡಿತು. ನಮ್ಮ ಮೇಲೂ ಇ.ಡಿ‌ ಬೇಕಾದಷ್ಟು ‌ಪ್ರಕರಣಗಳನ್ನು ದಾಖಲಿಸಿತ್ತು.‌ ಕೊನೆಗೆ ಏನಾಯಿತು? ಜೈಲಿನಲ್ಲಿ ಇಟ್ಟರು. ತುಘಲಕ್ ಪೊಲೀಸ್ ಠಾಣೆಯಲ್ಲಿ ಇಟ್ಟರು" ಎಂದರು. "ಸೋನಿಯಾಗಾಂಧಿ ಅವರು ಹಾಗೂ ರಾಹುಲ್ ಗಾಂಧಿ ಅವರಿಗೂ ಇದೇ ರೀತಿ ಮಾಡಲು ಹೊರಟರು ಆದರೆ ಧೈರ್ಯ ಸಾಲದೆ ಚಾರ್ಜ್ ಶೀಟ್ ಹಾಕಿದರು. ನ್ಯಾಯಾಲಯ ಇದನ್ನು ತಿರಸ್ಕರಿಸಿತು. ನ್ಯಾಯಾಲಯವು ಪೊಲೀಸರ ಬಳಿ ಚಾರ್ಜ್ ಶೀಟ್ ಎಲ್ಲಿ, ಎಫ್ ಐಆರ್ ಎಲ್ಲಿ ಎಂದು ಕೇಳಿತು. ನಮ್ಮ ವಕೀಲರಾದ ಅಭಿಷೇಕ್ ಮನುಸಿಂಗ್ವಿ ಅವರು ವಾದ ಮಾಡಿದರು. ಇವರು ಕಾನೂನುಗಳನ್ನು ಪರಿಶೀಲಿಸಿದಾಗ, ಯಾವುದೇ ವ್ಯಕ್ತಿ ದೂರು ನೀಡಿದರೆ ಪ್ರಕರಣದಾಖಲಿಸಲು ಬರುವುದಿಲ್ಲ. ಯಾವುದಾದರೂ ಸಂಸ್ಥೆ ಮುಖಾಂತರ ದೂರು ನೀಡಬೇಕು" ಎಂದರು. "ನನಗೂ ದೆಹಲಿ...
‘ದ್ವೇಷ ಭಾಷಣ, ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ’; ಸರ್ಕಾರದ ದಿಟ್ಟ ನಡೆಗೆ ಪದ್ಮರಾಜ್ ಅಭಿನಂದನೆ.

‘ದ್ವೇಷ ಭಾಷಣ, ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ’; ಸರ್ಕಾರದ ದಿಟ್ಟ ನಡೆಗೆ ಪದ್ಮರಾಜ್ ಅಭಿನಂದನೆ.

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025’ ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿರುವ ನಡುವೆ, ಈ ಮಸೂದೆ ಸಾಮಾಜಿಕ ಸಾಮರಸ್ಯ ಕಾಪಾಡಲು ಸಹಕಾರಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ' ಜಾರಿಗೆ ತರುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದ ಮೊದಲ ವ್ಯಕ್ತಿ ಪದ್ಮರಾಜ್ ಆರ್. ಪೂಜಾರಿ. ಇದೀಗ ಈ ವಿದೇಯಕ ಜಾರಿಯಾಗುತ್ತಿರುವ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ. ವಿಧೇಯಕವು ಯಾರ ವಿರುದ್ದವೂ ಸೇಡು ತೀರಿಸಲು ಅಲ್ಲ, ಸಾಮಾಜಿಕ ಸ್ವಾಸ್ತ್ಯ ಕಾಪಾಡುವುದಕ್ಕಷ್ಟೇ' ಎಂದವರು ಹೇಳಿದ್ದಾರೆ. ವಿಧೇಯಕವನ್ನು ಪ್ರತಿಪಕ್ಷಗಳು ಜನವಿರೋಧಿ ಎಂದು ಟೀಕಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಇದೊಂದು ಜನಸ್ನೇಹಿ ಮತ್ತು ಕಾಲದ ಅಗತ್ಯಕ್ಕೆ ತಕ್ಕ ಕ್ರಮವಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ದ್ವೇಷ ಭಾಷಣ ನಿಯಂತ್ರಣಕ್ಕೆ ಕರ್ನಾಟಕಕ್ಕೆ ಸೂಕ್ತ ಕಾನೂನು ಅಗತ್ಯವಿದೆ ಎಂಬುದನ್ನು ತಾವು ಹಲವು ತಿಂಗಳ ಹಿಂದೆಯೇ ಪ್ರತಿಪಾದ...
SSB 62ನೇ ಸ್ಥಾಪನಾ ದಿನ: ಉನ್ನತ ನಾಯಕರಿಂದ ಶುಭಾಶಯ

SSB 62ನೇ ಸ್ಥಾಪನಾ ದಿನ: ಉನ್ನತ ನಾಯಕರಿಂದ ಶುಭಾಶಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಸಶಸ್ತ್ರ ಸೀಮಾ ಬಲ (SSB)ದ 62ನೇ ಸ್ಥಾಪನಾ ದಿನದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವಾರು ಉನ್ನತ ನಾಯಕರು ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಶುಭಾಶಯ ಕೋರಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು Xನಲ್ಲಿ ಸಂದೇಶ ಪ್ರಕಟಿಸಿ, “SSB ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳು. ಗಡಿಗಳ ರಕ್ಷಣೆಯಿಂದ ಹಿಡಿದು ಸಂಕಷ್ಟದ ವೇಳೆಯಲ್ಲಿ ನಾಗರಿಕರೊಂದಿಗೆ ಹೆಗಲಿಗೆ ಹೆಗಲು ನಿಲ್ಲುವವರೆಗೆ SSB ಸದಾ ರಾಷ್ಟ್ರವನ್ನು ಹೆಮ್ಮೆಪಡಿಸಿದೆ. ಕರ್ತವ್ಯನಿರತ ಹುತಾತ್ಮರಿಗೆ ನಮನಗಳು,” ಎಂದು ಹೇಳಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, “ಸೇವೆ, ಭದ್ರತೆ ಮತ್ತು ಸಮರ್ಪಣೆಯ ಪ್ರತೀಕವಾದ SSBಯ ಎಲ್ಲಾ ಧೈರ್ಯಶಾಲಿ ಸೈನಿಕರಿಗೆ ಮತ್ತು ಅವರ ಕುಟುಂಬಗಳಿಗೆ ಸ್ಥಾಪನಾ ದಿನದ ಶುಭಾಶಯಗಳು. ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತ್ವದ ರಕ್ಷಣೆಗೆ ನಿಮ್ಮ ಅಚಲ ಬದ್ಧತೆ ಶ್ಲಾಘನೀಯ,” ಎಂದು ತಿಳಿಸಿದ್ದಾರೆ. ಕೇಂದ್ರ ಸಚಿವ ನ...
ರಾಜಧಾನಿ ಎಕ್ಸ್‌ಪ್ರೆಸ್‌ ಡಿಕ್ಕಿ: ಏಳು ಆನೆಗಳ ಸಾವು

ರಾಜಧಾನಿ ಎಕ್ಸ್‌ಪ್ರೆಸ್‌ ಡಿಕ್ಕಿ: ಏಳು ಆನೆಗಳ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ/ಗುವಾಹಟಿ: ಶನಿವಾರ ಬೆಳಗಿನ ಜಾವ ಅಸ್ಸಾಂನ ಹೊಜೈ ಸಮೀಪ ಸೈರಾಂಗ್–ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಆನೆಗಳು ಸಾವನ್ನಪ್ಪಿದ್ದು, ಒಂದು ಮರಿ ಗಾಯಗೊಂಡಿದೆ. ಅಪಘಾತದಿಂದ ರೈಲಿನ ಕೆಲವು ಬೋಗಿಗಳು ಹಳಿತಪ್ಪಿದ್ದು, ಈಶಾನ್ಯ ಭಾಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ನವದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ಬೆಳಿಗ್ಗೆ 2.17ರ ಸುಮಾರಿಗೆ ಹಳಿ ದಾಟುತ್ತಿದ್ದ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಏಳು ಆನೆಗಳ ಸಾವನ್ನು ದೃಢಪಡಿಸಿದ್ದು, ಗಾಯಗೊಂಡ ಮರಿಯನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗಿದೆ. ಡಿಕ್ಕಿಯ ಪರಿಣಾಮ ರೈಲಿನ ಕೆಲ ಬೋಗಿಗಳು ಹಳಿ ತಪ್ಪಿದ್ದರೂ, ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. ಮಿಜೋರಾಂನ ಐಜ್ವಾಲ್ ಸಮೀಪದ ಸೈರಾಂಗ್‌ನಿಂದ ದೆಹಲಿಯ ಆನಂದ್ ವಿಹಾರ್‌ ಟರ್ಮಿನಲ್‌ಗೆ ಸಂಚರಿಸುವ ಈ ರೈಲು ಗುವಾಹಟಿಯಿಂದ ಸುಮಾರು 126 ಕಿಮ...