Saturday, March 21

Focus

‘ಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ವ್ಯರ್ಥ ಪ್ರಯತ್ನ ಬಿಡಿ’: ಬಿಜೆಪಿಗೆ ದಿನೇಶ್ ಕಿವಿಮಾತು

‘ಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ವ್ಯರ್ಥ ಪ್ರಯತ್ನ ಬಿಡಿ’: ಬಿಜೆಪಿಗೆ ದಿನೇಶ್ ಕಿವಿಮಾತು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜನತೆಯ ಎದುರು ಸುಳ್ಳಿನ ಸರಮಾಲೆಗಳೆನ್ನೇ ಹಣೆದು, ಬಿಬಿಎಂಪಿ ಆಸ್ತಿಗಳನ್ನೇ ಅಡವಿಟ್ಟು ಆಡಳಿತ ನಡೆಸಿದ್ದು ನಿಮ್ಮ ಜಾಯಮಾನ. 2008- 2013ರ ನಿಮ್ಮ ಅವಧಿಯಲ್ಲಿ ಅದೆಷ್ಟು ಆಸ್ತಿಗಳನ್ನು ಅಡವಿಟ್ಟಿದ್ರಿ ಎನ್ನೋದನ್ನು ಒಮ್ಮೆ ಜ್ಞಾಪಿಸಿಕೊಳ್ಳಿ. ಆ ಆಸ್ತಿಗಳನ್ನು ಸಾಲಮುಕ್ತಗೊಳಿಸಿದ್ದು ನಮ್ಮ ಕಾಂಗ್ರೆಸ್ ಸರ್ಕಾರ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಆಸ್ಪತ್ರೆಗಳ ಅವ್ಯವಸ್ಥೆ ಕುರಿತ ಬಿಜೆಪಿ ಟೀಕೆಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ದಿನೇಶ್ ಗುಂಡೂರಾವ್, ಯುಪಿಎ ಸರ್ಕಾರ ಇದ್ದಾಗ 2014ರಲ್ಲಿ ಭಾರತದ ಸರ್ಕಾರದ ಸಾಲ ₹55 ಲಕ್ಷ ಕೋಟಿ ಇತ್ತು. ನಿಮ್ಮ ಆಡಳಿತದ ಹತ್ತು ವರ್ಷದ ಅದು ಬರೋಬ್ಬರಿ ₹200 ಲಕ್ಷ ಕೋಟಿಗೂ ಅಧಿಕವಾಗಿದೆ. ನಿಮ್ಮದೇ ಕೇಂದ್ರ ಸರ್ಕಾರ ಮಾಡಿರುವ ಈ ಬೆಟ್ಟದಷ್ಟು ಸಾಲ ಎಲ್ಲೆಲ್ಲಿ ವಿನಿಯೋಗವಾಗಿದೆ ಎನ್ನುವ ಲೆಕ್ಕ ಕೊಡ್ತೀರಾ? ಎಂದು ಪ್ರಶ್ನಿಸಿದ್ದಾರೆ.ಜನರಿಗೆ ನಾವು ನೀಡಿದ ಭರವಸೆಯಂತೆ ನಮ್ಮ ಸರ್ಕಾರ ನುಡಿದಂತೆ ನಡೆದುಕೊಂಡು ಬಂದಿದೆ. ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಿದ್ದು ಸ್ವಾವಲಂಬಿ ಬದುಕು ಕಲ್ಪಿಸಿಕೊಟ್ಟಿದ್ದೇವೆ. ...
“ಸಂಸತ್ತಿನಲ್ಲಿ ಪ್ರತಿದಿನ ಫೈಲ್‌ಗಳನ್ನು ಬೀಸಿ ಗಂಭೀರ ಆರೋಪ ಮಾಡುವ ರಾಹುಲ್ ಗಾಂಧಿ, ಕರ್ನಾಟಕದ ವಿಚಾರ ಬಂದಾಗ ಮೌನ

“ಸಂಸತ್ತಿನಲ್ಲಿ ಪ್ರತಿದಿನ ಫೈಲ್‌ಗಳನ್ನು ಬೀಸಿ ಗಂಭೀರ ಆರೋಪ ಮಾಡುವ ರಾಹುಲ್ ಗಾಂಧಿ, ಕರ್ನಾಟಕದ ವಿಚಾರ ಬಂದಾಗ ಮೌನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ನಡೆದಿದೆ ಎನ್ನಲಾದ ₹2,500 ಕೋಟಿ ಮೊತ್ತದ ಅಬಕಾರಿ ಹಗರಣ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೌನವನ್ನು ಕರ್ನಾಟಕ ಬಿಜೆಪಿ ಪ್ರಶ್ನಿಸಿದೆ.ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಶುಕ್ರವಾರ ಹೇಳಿಕೆ ನೀಡಿದ್ದು, “ಸಂಸತ್ತಿನಲ್ಲಿ ಪ್ರತಿದಿನ ಫೈಲ್‌ಗಳನ್ನು ಬೀಸಿ ಗಂಭೀರ ಆರೋಪ ಮಾಡುವ ರಾಹುಲ್ ಗಾಂಧಿ, ಕರ್ನಾಟಕದ ವಿಚಾರ ಬಂದಾಗ ಮೌನವಾಗಿರುವುದು ಅರ್ಥವಾಗುತ್ತಿಲ್ಲ” ಎಂದು ಟೀಕಿಸಿದರು.ರಾಜ್ಯ ಅಬಕಾರಿ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಗಂಭೀರ ಆರೋಪಗಳು ಹೊರಬಂದಿದ್ದರೂ, ಕಾಂಗ್ರೆಸ್ ನೇತೃತ್ವದ ಸರ್ಕಾರ ತನಿಖೆಗೆ ಅವಕಾಶ ನೀಡಿಲ್ಲ. ಈ ಕುರಿತು ರಾಹುಲ್ ಗಾಂಧಿ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ ಎಂದು ಅಶೋಕ ಆರೋಪಿಸಿದರು.“ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ಆದಾಯ ಕೇಂದ್ರವನ್ನಾಗಿ ಮಾಡಿಕೊಂಡಿರುವರೇ? ಅಬಕಾರಿ ನೀತಿಗಳನ್ನು ಸಾರ್ವಜನಿಕ ಹಿತಕ್ಕಾಗಿ ರೂಪಿಸಲಾಗಿದೆಯೇ ಅಥವಾ ರಾಜಕೀಯ ನಿಧಿ ಸಂಗ್ರಹಕ್ಕಾಗಿಯೇ?” ಎಂದು ಅಶೋಕ ಪ್ರಶ್ನಿಸ...
ಬಾಂಗ್ಲಾದೇಶ ಚುನಾವಣೆ: ಬಿಎನ್‌ಪಿ ಗೆಲುವಿಗೆ ಮೋದಿ ಅಭಿನಂದನೆ

ಬಾಂಗ್ಲಾದೇಶ ಚುನಾವಣೆ: ಬಿಎನ್‌ಪಿ ಗೆಲುವಿಗೆ ಮೋದಿ ಅಭಿನಂದನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಹಾಗೂ ಅದರ ನಾಯಕ ತಾರಿಕ್ ರೆಹಮಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಬಾಂಗ್ಲಾದೇಶದ ಹೊಸ ರಾಜಕೀಯ ನಾಯಕತ್ವದೊಂದಿಗೆ ಕಾರ್ಯನಿರ್ವಹಿಸಲು ಭಾರತ ಸಿದ್ಧವಿರುವುದನ್ನು ಸೂಚಿಸಿದ್ದಾರೆ.ಸಾಮಾಜಿಕ ಜಾಲತಾಣ X ನಲ್ಲಿ ಹಂಚಿಕೊಂಡ ಸಂದೇಶದಲ್ಲಿ ಪ್ರಧಾನಿ ಮೋದಿ, ಭಾರತವು ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಪ್ರಾದೇಶಿಕ ಸ್ಥಿರತೆಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ. ಈ ಜನಾದೇಶವು ತಾರಿಕ್ ರೆಹಮಾನ್ ಅವರ ನಾಯಕತ್ವದ ಮೇಲೆ ಜನರ ವಿಶ್ವಾಸವನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ.ಪ್ರಜಾಸತ್ತಾತ್ಮಕ, ಪ್ರಗತಿಶೀಲ ಮತ್ತು ಸಮಾವೇಶಾತ್ಮಕ ಬಾಂಗ್ಲಾದೇಶ ನಿರ್ಮಾಣಕ್ಕೆ ಭಾರತ ಮುಂದುವರಿದೂ ಬೆಂಬಲ ನೀಡಲಿದೆ. ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಿ, ಸಾಮಾನ್ಯ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಎರಡೂ ದೇಶಗಳು ಸಹಕಾರ ಮುಂದುವರಿಸಲಿವೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ....
ಎಂ.ಸತ್ಯವರ ಬಳಿ ಬೈಕ್,ಕ್ಯಾಂಟರ್, ಎಕ್ಸ್‌ಯುವಿ ಕಾರಿನ ನಡುವೆ ಅಪಘಾತ: ಏಳು ಮಂದಿ ದುರ್ಮರಣ

ಎಂ.ಸತ್ಯವರ ಬಳಿ ಬೈಕ್,ಕ್ಯಾಂಟರ್, ಎಕ್ಸ್‌ಯುವಿ ಕಾರಿನ ನಡುವೆ ಅಪಘಾತ: ಏಳು ಮಂದಿ ದುರ್ಮರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಸಮೀಪ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ.ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್‌ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಬೈಕ್‌ಗೆ ಎಕ್ಸ್‌ಯುವಿ ಕಾರು ಮೊದಲು ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಮೃತರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ನಿವಾಸಿಗಳೆಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ....
ಸಾವಿರಾರು ಕೋಟಿ ಬಾಕಿ; ಮಾರ್ಚ್ 5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ

ಸಾವಿರಾರು ಕೋಟಿ ಬಾಕಿ; ಮಾರ್ಚ್ 5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ರಾಜ್ಯ ಸರ್ಕಾರದಿಂದ ಬಾಕಿ ಬಿಲ್ ಬಿಡುಗಡೆ ಆಗದಿರುವುದನ್ನು ವಿರೋಧಿಸಿ ಗುತ್ತಿಗೆದಾರರು ಮಾರ್ಚ್ 5ರಂದು ಬೃಹತ್ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಈ ಸಂಬಂಧ ಮಂಡ್ಯದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್. ಮಂಜುನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಕಿ ಹಣ ತಕ್ಷಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುವ ತೀರ್ಮಾನ ಕೈಗೊಳ್ಳಲಾಯಿತು.ಸಭೆ ಬಳಿಕ ಮಾತನಾಡಿದ ಮಂಜುನಾಥ್, “ರಾಜ್ಯ ಮಟ್ಟದಲ್ಲಿ ಗುತ್ತಿಗೆದಾರರ ಸುಮಾರು ₹37,000 ಕೋಟಿ ಬಾಕಿ ಉಳಿದಿದೆ. ಮಂಡ್ಯ ಜಿಲ್ಲೆಯಲ್ಲಿ ಮಾತ್ರವೇ ₹950 ಕೋಟಿ ಹಣ ಬಾಕಿಯಾಗಿದೆ. ಸಾಲ ಮಾಡಿ ಕೆಲಸ ನಿರ್ವಹಿಸಿದ್ದೇವೆ. ಆದರೆ ಹಣ ಬಿಡುಗಡೆ ಆಗದ ಕಾರಣ ಬಡ್ಡಿ ಕಟ್ಟಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ” ಎಂದು ಹೇಳಿದರು.ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದನೆ ದೊರಕಿಲ್ಲ ಎಂದು ಆರೋಪಿಸಿದ ಅವರು, “ಹಿಂದಿನ ಸರ್ಕಾರದ ಅವಧಿಗಿಂತಲೂ ಈಗ ಕಮಿಷನ್ ಸಮಸ್ಯೆ ಹೆಚ್ಚಾಗಿದೆ” ಎಂದು ದೂರಿದರು.ಬಾಕಿ ಹಣ ತಕ್ಷಣ ಬಿಡ...
‘ಟಾಕ್ಸಿಕ್’ ಟೀಸರ್ ವಿವಾದ: ಮಹಿಳಾ ಆಯೋಗ ಮತ್ತು ಸೆನ್ಸಾರ್ ಮಂಡಳಿಗೆ ದೂರು

‘ಟಾಕ್ಸಿಕ್’ ಟೀಸರ್ ವಿವಾದ: ಮಹಿಳಾ ಆಯೋಗ ಮತ್ತು ಸೆನ್ಸಾರ್ ಮಂಡಳಿಗೆ ದೂರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆಯಾದ ಬಳಿಕ ಮಹಿಳಾ ಆಯೋಗ ಮತ್ತು ಸೆನ್ಸಾರ್ ಮಂಡಳಿಗೆ ದೂರುಗಳು ಸಲ್ಲಿಕೆಯಾಗಿರುವ ನಡುವೆಯೇ, ರಾಷ್ಟ್ರೀಯ ಕ್ರೈಸ್ತರ ಒಕ್ಕೂಟವೂ ಚಿತ್ರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದೆ. ಟೀಸರ್‌ನಲ್ಲಿ ದೇವದೂತ ಸಂತ ಮಿಕಯೇಲ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಒಕ್ಕೂಟ ಆರೋಪಿಸಿದೆ.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಕರ್ನಾಟಕ ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲಾ, ಟೀಸರ್ ಆಧರಿಸಿ ಸಂಪೂರ್ಣ ಸಿನಿಮಾವನ್ನು ನಿರ್ಧರಿಸುವುದು ಸರಿಯಲ್ಲ ಎಂದು ಹೇಳಿದರು.“ಒಂದು ಟೀಸರ್ ನೋಡಿ ಇಡೀ ಸಿನಿಮಾ ಹೀಗೆಯೇ ಇರಲಿದೆ ಎಂದು ಮುಂಚಿತವಾಗಿ ತೀರ್ಮಾನಿಸುವುದು ತಪ್ಪು. ಪ್ರತಿಭಟನೆ ಮಾಡುವ ಮನಸ್ಸಿದ್ದರೆ ಮೊದಲು ಸಿನಿಮಾ ನೋಡಿ ನಂತರ ಅಭಿಪ್ರಾಯ ವ್ಯಕ್ತಪಡಿಸಲಿ. ಕನ್ನಡ ಚಿತ್ರರಂಗಕ್ಕೆ 93 ವರ್ಷಗಳ ಇತಿಹಾಸವಿದೆ. ಈ ಅವಧಿಯಲ್ಲಿ ಯಾವುದೇ ಧರ್ಮವನ್ನು ಅವಹೇಳನ ಮಾಡುವ ರೀತಿಯಲ್ಲಿ ಚಿತ್ರರಂಗ ನಡೆದುಕೊಂಡಿಲ್ಲ. ಸರ್ವಧರ್ಮ ಸಹಿಷ್ಣುತೆಯನ್ನೇ ಪಾಲಿಸಿಕೊಂಡು ಬಂದಿದೆ” ಎಂದು ಅವರು ಹೇಳಿದರು.ಚಿತ್ರ ಇನ್ನೂ ಸೆನ್ಸಾರ್ ಆಗಿಲ್ಲ. ಸೆನ್ಸಾರ್ ಮಂಡಳಿ ಸ...
ಫೆ.14ರಂದು ಲೋಕನಾಯಕ ಶತಾಯುಷಿ ಡಾ||ಭೀಮಣ್ಣ ಖಂಡ್ರೆ ನುಡಿನಮನ ಕಾರ್ಯಕ್ರಮ

ಫೆ.14ರಂದು ಲೋಕನಾಯಕ ಶತಾಯುಷಿ ಡಾ||ಭೀಮಣ್ಣ ಖಂಡ್ರೆ ನುಡಿನಮನ ಕಾರ್ಯಕ್ರಮ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು:ಹೋಟೆಲ್ ಮೌರ್ಯ ಸಭಾಂಗಣದಲ್ಲಿ ಲೋಕನಾಯಕ ಶತಾಯುಷಿ ಡಾ||ಭೀಮಣ್ಣ ಖಂಡ್ರೆ ರವರ ನುಡಿನಮನ ಕಾರ್ಯಕ್ರಮ ಫೆಬ್ರವರಿ 14ರಂದು ಅರಮನೆ ಮೈದಾನ ಗಾಯಿತ್ರಿ ವಿಹಾರ ಆಯೋಜಿಸಲಾಗಿದೆ.ನುಡಿನಮನ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಮತ್ತು ಕೆಪಿಸಿಸಿ ನಾಯಕರಾದ ಎಸ್.ಮನೋಹರ್, ಜಿ.ಕೃಷ್ಣಪ್ಪ, ಸೇರಿದಂತೆ ಅನೇಕರು ಭಾಗವಹಿಸಿದರು.ಸಚಿವ ರಾಮಲಿಂಗಾರೆಡ್ಡಿರವರು ಮಾತನಾಡಿ ಶಾಸಕರಾಗಿ ಮತ್ತು ಸಚಿವರಾಗಿ ಭೀಮಣ್ಣ ಖಂಡ್ರೆರವರು ರಾಜ್ಯಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಶಿವಾಜಿನಗರ ಬಸ್ ನಿಲ್ದಾಣವನ್ನು ಭೀಮಣ್ಣ ಖಂಡ್ರೆರವರು ಗುದ್ದಲಿಪೂಜೆ ನೇರವೆರಿಸಿದ್ದರು. ಭೀಮಣ್ಣ ಖಂಡ್ರೆರವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಕಾರಣದಿಂದ ಬ್ರಿಟಿಷರು ಅವರ ಸಂಪತ್ತು ಆನ್ನು ಜಪ್ತಿ ಮಾಡಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ನೆನಪಿಸಿದರು.ಶತಾಯುಷಿ ಭೀಮಣ್ಣ ಖಂಡ್ರೆರವರಿಗೆ ಕರ್ನಾಟಕ ರತ್ನ ಕೊಡಮಾಡಬೇಕು ಮಾನ್ಯ ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಲಾಗುವುದು ...
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ; ಸೇವೆಗಳಲ್ಲಿ ವ್ಯತ್ಯಯ…

ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ; ಸೇವೆಗಳಲ್ಲಿ ವ್ಯತ್ಯಯ…

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ವಿವಿಧ ಬೇಡಿಕೆಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಫೆಬ್ರವರಿ 12ರಂದು ಬ್ಯಾಂಕ್‌ಗಳ ರಾಷ್ಟ್ರವ್ಯಾಪಿ ಮುಷ್ಕರ ನಡೆಯಲಿದೆ. ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ, ಭಾರತೀಯ ಬ್ಯಾಂಕ್ ನೌಕರರ ಒಕ್ಕೂಟ (ಬಿಇಎಫ್‌ಐ) ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ) ಸೇರಿದಂತೆ ಪ್ರಮುಖ ಸಂಘಟನೆಗಳು ಈ ಕುರಿತು ಮುಷ್ಕರ ನೋಟಿಸ್ ನೀಡಿವೆ.ಭಾರತೀಯ ಬ್ಯಾಂಕುಗಳ ಸಂಘ (ಐಬಿಎ) ಜತೆ ನಡೆದ ಸಮಾಲೋಚನೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ವಾರದಲ್ಲಿ ಐದು ದಿನಗಳ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜನವರಿ 27ರಂದು ಕೂಡ ಬ್ಯಾಂಕ್‌ಗಳು ಒಂದು ದಿನದ ಮುಷ್ಕರ ನಡೆಸಿದ್ದವು.ಕಳೆದ ವರ್ಷ ಸರ್ಕಾರ ಅಧಿಸೂಚನೆ ಹೊರಡಿಸಿದ ನಾಲ್ಕು ಹೊಸ ಕಾರ್ಮಿಕ ಕಾನೂನುಗಳಿಗೆ ವಿರೋಧವಾಗಿ 10 ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆದಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಬ್ಯಾಂಕ್ ನೌಕರರು ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳ ಜೊತೆಗೆ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮತ್ತು ಅಂಚೆ ಕಚೇರಿಗಳ ಸೇವೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ...
ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ದುಬೈ: ಸದೃಢ ರಾಷ್ಟ್ರ ಹಾಗೂ ನಾಡು ಕಟ್ಟಬೇಕಾದರೆ ಅಲ್ಲಿ ಆರೋಗ್ಯ ರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಜಾಗತಿಕ ಆರೋಗ್ಯ ಸಮುದಾಯ ಒಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದರು.ದುಬೈನಲ್ಲಿ ನಡೆದ ಮೂರು ದಿನಗಳ ವಿಶ್ವ ಆರೋಗ್ಯ ಪ್ರದರ್ಶನ (WHX)ದಲ್ಲಿ ಪಾಲ್ಗೊಂಡಿದ್ದ ಸಚಿವರು, ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡುತ್ತಿರುವ ಆದ್ಯತೆಗಳು ಹಾಗೂ ಕರ್ನಾಟಕದ ಗಮನಾರ್ಹ ಪ್ರಗತಿಯನ್ನು ಪ್ರಸ್ತುತಪಡಿಸಿದರು. "ಆರೋಗ್ಯ ಸವಾಲುಗಳನ್ನು ಎದುರಿಸುವಾಗ ಯಾವುದೇ ಅಡೆತಡೆಗಳು ಅಥವಾ ಗಡಿಗಳು ಇರಬಾರದು, ಆರೋಗ್ಯಕರ ಜನಸಂಖ್ಯೆ ಎಂದರೆ ಆರೋಗ್ಯಕರ ರಾಷ್ಟ್ರ ಎಂದರ್ಥ. ಮಾನವೀಯತೆಯಡಿ ನಾವು ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.ದುಬೈನಲ್ಲಿ ನಡೆಯುತ್ತಿರುವ ಮೂರು ದಿನಗಳ WHX 2026 ಪ್ರದರ್ಶನದಲ್ಲಿ 180 ಕ್ಕೂ ಹೆಚ್ಚು ದೇಶಗಳಿಂದ 4,800ಕ್ಕೂ ಹೆಚ್ಚು ಮಂದಿ ಭಾಗವಹಿಸುತ್ತಿದ್ದಾರೆ. ಪ್ರದರ್ಶನವು ಅತ್ಯಾಧುನಿಕ ವೈದ್ಯಕೀಯ ಸಾಧನಗಳು, ಇಮೇಜಿಂಗ್, ಡಯಾಗ್ನೋಸ...
‘ನರೇಗಾ ಬಚವೋ’ ಕರಾವಳಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ: ಕೇಂದ್ರದ ವಿರುದ್ಧ ಆಕ್ರೋಶ

‘ನರೇಗಾ ಬಚವೋ’ ಕರಾವಳಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ: ಕೇಂದ್ರದ ವಿರುದ್ಧ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಗೆ ತಿದ್ದುಪಡಿ ಮಾಡಿ ಹೆಸರು ಹಾಗೂ ಅನುಷ್ಠಾನ ವಿಧಾನದಲ್ಲಿ ಬದಲಾವಣೆ ತರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ‘ನರೇಗಾ ಬಚವೋ ಸಂಗ್ರಾಮ್ ಪಾದಯಾತ್ರೆ’ ಗಮನಸೆಳೆದಿದೆ.ಸುಳ್ಯದಿಂದ ಮೂಲ್ಕಿವರೆಗೆ ನಾಲ್ಕು ದಿನಗಳ ಪಾದಯಾತ್ರೆಗೆ ಸೋಮವಾರ ಚಾಲನೆ ಸಿಕ್ಕಿತ್ತು. ನೂರಾರು ಕಾರ್ಯಕರ್ತರು ಮೊದಲ ದಿನ ಭಾಗವಹಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ನಾಯಕರು “ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಬಡವರ ಪಾಲಿನ ವರದಾನವಾದ ಉದ್ಯೋಗ ಖಾತರಿ ಯೋಜನೆಯಲ್ಲಿ ತಿದ್ದುಪಡಿ ಮಾಡಿ ಅದರ ಮೂಲ ಉದ್ದೇಶವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಿದರು. ಯೋಜನೆಯನ್ನು ಪುನರ್‌ಸ್ಥಾಪಿಸಬೇಕೆಂದು ಒತ್ತಾಯಿಸಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅದರ ಭಾಗವಾಗಿ ಜಿಲ್ಲೆಯಲ್ಲಿ ಪಾದಯಾತ್ರೆ ನಡೆಯುತ್ತಿದೆ ಎಂದರು.“ಕೇಂದ್ರ ಸರ್ಕಾರ ಅನುದಾನವನ್ನು ಕಡಿತ ಮಾಡಿ ರಾಜ್ಯ ಸರ್ಕಾರದ ಮೇಲೆ ಹೊರೆ ಹಾಕುವ ಮೂಲಕ ಯೋಜನೆಯನ್ನು ಕ...