Saturday, December 6

Focus

ಮನು ಭಾಕರ್ ಸಹಿತ ನಾಲ್ವರು ಕ್ರೀಟಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ

ಮನು ಭಾಕರ್ ಸಹಿತ ನಾಲ್ವರು ಕ್ರೀಟಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದ ಮಹಿಳಾ ಶೂಟರ್ ಮನು ಭಾಕರ್ ಸಹಿತ ನಾಲ್ವರು ಅಪ್ರತಿಮ ಕ್ರೀಟಾಪಟುಗಳಿಗೆ ಕೇಂದ್ರ ಸರ್ಕಾರ ಖೇಲ್ ರತ್ನ ಪ್ರಶಸ್ತಿ ಪ್ರಕಟಿಸಿದೆ. ವಿಶ್ವ ಚೆಸ್ ಚಾಂಪಿಯನ್​ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದ 18 ವರ್ಷದ ಡಿ.ಗುಕೇಶ್ ಹಾಗೂ ಭಾರತದ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಅವರಿಗೂ ಕೇಂದ್ರ ಸರ್ಕಾರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಿಸಿದೆ. ರಾಷ್ಟ್ರಪತಿ ಭವನದಲ್ಲಿ ಈ ತಿಂಗಳ 17 ರಂದು ಈ ನಾಲ್ವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ....
ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ; ಸುಮಾರು 50 ವಾಹನಗಳು ಭಸ್ಮ

ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ; ಸುಮಾರು 50 ವಾಹನಗಳು ಭಸ್ಮ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಹೊರವಲಯದ ಮಹದೇವಪುರ ಬಳಿಯ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡದಲ್ಲಿ ಸಂಭವಿಸಿ ಕನಿಷ್ಠ 50 ವಾಹನಗಳು ಸುಟ್ಟು ಭಸ್ಮವಾಗಿವೆ. ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಎನ್ಬಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟುಹೋಗಿವೆ ಎಂದು ಅಂದಾಜಿಸಲಾಗಿದೆ....
ಮೂಡಿಗೆರೆಯ 69 ವರ್ಷದ ಮುರುಗೇಶ್ ಬೆಂಗಳೂರಿನಲ್ಲಿ ನಾಪತ್ತೆ; ಪ್ರಕರಣ ದಾಖಲು

ಮೂಡಿಗೆರೆಯ 69 ವರ್ಷದ ಮುರುಗೇಶ್ ಬೆಂಗಳೂರಿನಲ್ಲಿ ನಾಪತ್ತೆ; ಪ್ರಕರಣ ದಾಖಲು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನ ರಾಮಮೂರ್ತಿನಗರದ ದಾಸಪ್ಪ ಲೇಔಟ್'ನ ಬಸಿಲಿಕಾ ಲಿಲಯದಲ್ಲಿ ವಾಸವಿದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಸಮೀಪದ ಬಳ್ಳುರು ಗ್ರಾಮದ ನಿವಾಸಿ 69 ವರ್ಷದ ಮುರುಗೇಶ್ ಅವರು ನಾಪತ್ತೆಯಾಗಿದ್ದಾರೆ. ಸುಮಾರು ತಿಂಗಳ ಹಿಂದೆ ತಮ್ಮ ಪುತ್ರ ಪುನೀತ ಕುಮಾರ್ ಮನೆಯಲ್ಲಿ ವಾಸವಿದ್ದರು. ರಾಮಮೂರ್ತಿನಗರದ 3 ನೇ ಮುಖ್ಯ ರಸ್ತೆ, 2ನೇ ಕ್ರಾಸ್'ನಲ್ಲಿರುವ ದಾಸಪ್ಪ ಲೇಔಟ್'ನ ಬಸಿಲಿಕಾ ಲಿಲಯದಲ್ಲಿ ಪುನೀತ ಕುಮಾರ್ ವಾಸವಿದ್ದು ಅವರ ಜೊತೆ ಉಳಿದುಕೊಂಡಿದ್ದರು. 31.12.2024 ರಂದು ಬೆಳಿಗೆ 09-40 ಗಂಟೆ ಸುಮಾರಿಗೆ ಬೀಡಿ ಖರೀದಿಸಲೆಂದು ಮನೆ ಸಮೀಪದ ಅಂಗಡಿಯತ್ತ ತೆರಳಿರುವ ಮುರುಗೇಶ್ ಅವರು ಮತ್ತೆ ಮನೆಗೆ ವಾಪಸ್ಸು ಬಂದಿಲ್ಲ ಎಂದು ಅವರ ಪುತ್ರ ಪುನೀತ ಕುಮಾರ್ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ನಾಪತ್ತೆಯ್ತಾಗಿರುವ ಮುರುಗೇಶ್ ಅವರಿಗಾಗಿ ಹುಡುಕಾಟ ನಡೆಸಿದ್ದಾರೆ. ಇದೇ ವೇಳೆ, ನಾಪತ್ತೆಯಾಗಿರುವ ಮುರುಗೇಶ್ ಅವರು ಕನ್ನಡ ಮತ್ತು ತಮಿಳು ಭಾಷೆ ಬಲ್ಲವರಾಗಿದ್ದು, ಅವರ ಬಗ್ಗೆ ಸುಳಿವು ಸಿಕ್ಕಿದಲ್ಲಿ 9480266440 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡ...
ನ್ಯೂ ಓರ್ಲಿಯನ್ಸ್‌ ದಾಳಿ ನಂತರ ಅಮೇರಿಕಾದಲ್ಲಿ ಕಟ್ಟೆಚ್ಚರ

ನ್ಯೂ ಓರ್ಲಿಯನ್ಸ್‌ ದಾಳಿ ನಂತರ ಅಮೇರಿಕಾದಲ್ಲಿ ಕಟ್ಟೆಚ್ಚರ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನ್ಯೂ ಓರ್ಲಿಯನ್ಸ್‌: ಅಮೆರಿಕದ ನ್ಯೂ ಓರ್ಲಿಯನ್ಸ್‌'ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಶಂಕಿತ ಉಗ್ರರು ನಡೆಸಿದ್ದಾರೆನ್ನಲಾದ ಕೃತ್ಯದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ನ್ಯೂ ಓರ್ಲಿಯನ್ಸ್‌'ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಜನಸಂದಣಿಯ ಮೇಲೆ ಟ್ರಕ್ ನುಗ್ಗಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಗುಂಡಿನ ದಾಳಿ ನಡೆದಿದೆ.. ಹೊಸ ವರ್ಷ ಸಂಭ್ರಮ ವೇಳೆ ಶಂಕಿತ ಈ ಕೃತ್ಯ ನಡೆಸಿದ್ದು, ಫ್ಘಟನೆ ನಂತರ ಅಮೆರಿಕಾದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ....
ರಾಜ್ಯ ಬಿಜೆಪಿಯಲ್ಲಿ ಕುತೂಹಲ; ವಿಜಯೇಂದ್ರ ನಡೆಯ ಅಚ್ಚರಿ

ರಾಜ್ಯ ಬಿಜೆಪಿಯಲ್ಲಿ ಕುತೂಹಲ; ವಿಜಯೇಂದ್ರ ನಡೆಯ ಅಚ್ಚರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದಿನಕ್ಕೊಂದು ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ರಾಜ್ಯ ಬಿಜೆಪಿಯಲ್ಲಿ ಇದೀಗ ವಿಜಯೇಂದ್ರ ನಡೆ ಸಂಚಲನಕ್ಕೆ ಕಾರಣವಾಗಿದೆ. ಪಕ್ಷದೊಳಗಿನ ಆಂತರಿಕ ಕಚ್ಚಾಟದ ನಡುವೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬುಧವಾರ ಸಂಜೆ ಅಮಿತ್ ಶಾ ಅವರನ್ನು ಭೇಟಿ ಮಾಡಿ “ವಚನ’ ಪುಸ್ತಕ ನೀಡಿದ ವಿಜಯೇಂದ್ರ ರಾಜ್ಯ ರಾಜಕೀಯ ಬಗ್ಗೆ ಚರ್ಚಿಸಿದ್ದಾರೆ. ಅಮಿತ್ ಶಾ ಭೇಟಿ ಕುರಿತು ಸಾಮಾಜಿಕ ಜಾಲತಾಣ'X' ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನ ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು ಎಂದು ತಿಳಿಸಿದ್ದಾರೆ. ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಶ್ರೀ @AmitShah ಜೀ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ...
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ವಿದ್ಯಾರ್ಥಿ ವೇತನ; ಸಿಎಂಗೆ ಕಾಂಗ್ರೆಸ್ ಅಭಿನಂದನೆ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ವಿದ್ಯಾರ್ಥಿ ವೇತನ; ಸಿಎಂಗೆ ಕಾಂಗ್ರೆಸ್ ಅಭಿನಂದನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಅಭಿನಂದನೆ ಸಲ್ಲಿಸಿದೆ. ಸರ್ಕಾರದ ವಿದ್ಯಾಸಿರಿ ಯೋಜನೆಯ ಅಡಿಯಲ್ಲಿ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ವಿದ್ಯಾರ್ಥಿ ವೇತನವನ್ನು ಪಾವತಿ ಮಾಡಲಾಗುತ್ತದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ತಾಂತ್ರಿಕ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಸುಮಾರು ಐದು ಕೋಟಿ ರೂಪಾಯಿ ವಿದ್ಯಾರ್ಥಿ ವೇತನವನ್ನು ರಾಜ್ಯ ಸರ್ಕಾರವು ಪಾವತಿ ಮಾಡಿರುತ್ತದೆ. ತಾಂತ್ರಿಕ ಕಾರಣದ ಆಧಾರದ ಮೇಲೆ ಆರ್ಥಿಕ ಇಲಾಖೆಯು ವಿದ್ಯಾರ್ಥಿ ವೇತನ ಪಾವತಿ ಮಾಡಿರಲಿಲ್ಲ. 09-09-2024 ರ ತಮ್ಮ ಪತ್ರದ ಆಧಾರದ ಮೇಲೆ ಮಾನ್ಯ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೆ ಕ್ರಮ ಕೈಗೊಂಡಿರುತ್ತಾರೆ. ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರಕ್ಕೆ, ವಿಶ...
KSRTCಗೆ ಮತ್ತೆ 9 ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು

KSRTCಗೆ ಮತ್ತೆ 9 ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಸಿಕ್ಕಿವೆ. 6 AdWorld Showdown ಚಿನ್ನದ ಪ್ರಶಸ್ತಿ, 2 Grow Care India ಹಾಗೂ 1 PRSI ರಾಷ್ಟ್ರೀಯ ಪ್ರಶಸ್ತಿ-2024ಯನ್ನು KSRTC ಪಡೆದುಕೊಂಡಿದೆ. AdWorld Showdown ಪ್ರಶಸ್ತಿಗಳು : ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯ- ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ ಅಂಬಾರಿ ಉತ್ಸವ ಬಸ್ ಅತ್ಯುತ್ತಮ ಬ್ರಾಂಡ್ ಅನುಭವ. ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ ಪಲ್ಲಕ್ಕಿ ಬಸ್ಸುಗಳ -ಅತ್ಯುತ್ತಮ ಗ್ರಾಹಕ ಸ್ವೀಕೃತಿ ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್- ಅತ್ಯುತ್ತಮ ಸಾರ್ವಜನಿಕ ಸಂಪರ್ಕ ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ವರ್ಷದ ಅತ್ಯುತ್ತಮ ಬ್ರ್ಯಾಂಡ್ ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳ ಅನುಷ್ಟಾನಕ್ಕಾಗಿ ಗ್ರೋ ಕೇರ್ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ. PRSI ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್ ಚಿತ್ರ ವಿಭಾಗದಲ್ಲಿ ಲಭಿಸಿದೆ. ನಿ...
ಅಮೇರಿಕಾದಲ್ಲಿ ಹೊಸವರ್ಷಾಚರಣೆ ವೇಳೆ ದಾಳಿ; 10 ಮಂದಿ ಸಾವು

ಅಮೇರಿಕಾದಲ್ಲಿ ಹೊಸವರ್ಷಾಚರಣೆ ವೇಳೆ ದಾಳಿ; 10 ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನ್ಯೂಯಾರ್ಕ್: ಅಮೆರಿಕದ ನ್ಯೂ ಓರ್ಲಿಯನ್ಸ್‌'ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಶಂಕಿತ ಉಗ್ರರು ನಡೆಸಿದ್ದಾರೆನ್ನಲಾದ ಕೃತ್ಯದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ನ್ಯೂ ಓರ್ಲಿಯನ್ಸ್‌'ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಜನಸಂದಣಿಯ ಮೇಲೆ ಟ್ರಕ್ ನುಗ್ಗಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಗುಂಡಿನ ದಾಳಿ ನಡೆದಿದೆ.. ಹೊಸ ವರ್ಷ ಸಂಭ್ರಮ ವೇಳೆ ಶಂಕಿತ ಈ ಕೃತ್ಯ ನಡೆಸಿದ್ದು, ಫ್ಘಟನೆ ನಂತರ ಅಮೆರಿಕಾದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ....
ಹೊಸ ವರ್ಷವು ನಿರಂತರ ಹರ್ಷ ತರಲಿ: ಮೋದಿ, ರಾಹುಲ್ ಶುಭ ಹಾರೈಕೆ

ಹೊಸ ವರ್ಷವು ನಿರಂತರ ಹರ್ಷ ತರಲಿ: ಮೋದಿ, ರಾಹುಲ್ ಶುಭ ಹಾರೈಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಹೊಸ ವರ್ಷವು ನಿರಂತರ ಹರ್ಷ ತರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೃಶದ ಜನತೆಗೆ ಶುಭ ಹಾರೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಟ್ವೀಟ್ ಮಾಡಿ, ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷ, ಆರೋಗ್ಯ ಮತ್ತು ಸಮೃದ್ಧಿ ಲಭಿಸಲಿ ಎಂದು ಶುಭ ಹಾರೈಸಿದ್ದಾರೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿ, ಈ ವರ್ಷವು ಎಲ್ಲರ ಜೀವನದಲ್ಲಿ ಹೊಸ ಉತ್ಸಾಹ, ಹೊಸ ಸಂತೋಷ ತರಲಿ ಎಂದು ಶುಭ ಹಾರೂಸಿದ್ದಾರೆ....
ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ; ಶುಭಾಶಯ ವನಿಮಯದ ಸಡಗರ

ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ; ಶುಭಾಶಯ ವನಿಮಯದ ಸಡಗರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ನಾಡಿನಾದ್ಯಂತ ಹೊಸವರ್ಷವನ್ನು ಸಂಭ್ರಮ ಸಡಗರದಿಂದ ಸ್ವಾಗತಿಸಲಾಗುತ್ತಿದೆ. ಹೊಸ ವರ್ಷದ ಮೊದಲ ದಿನದಂದು ಶುಭಾಶಯಗಳ ವಿನಿನಯ ಜೋರಾಗಿ ಸಾಗಿದೆ. ಇದೇ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 2025 ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಭಾರತ ಮತ್ತು ವಿಶ್ವಕ್ಕೆ ಉಜ್ವಲ ಸೃಷ್ಟಿಸಲು ಒಟ್ಟಾಗಿ ಕೆಲಸ ಸಂಕಲ್ಪ ಮಾಡೋಣ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನರಿಗೆ ಶುಭಾಶಯ ಹಂಚಿಕೊಂಡಿದ್ದಾರೆ....