Thursday, January 29

Focus

ವಯಾಗ್ರ ಮಾರಾಟ ದಂಧೆ; ನಕಲಿ ಕಾಲ್‌ಸೆಂಟರ್ ಪತ್ತೆ, 8 ಮಂದಿ ಬಂಧನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬೈ: ಅಮೆರಿಕದ ನಾಗರಿಕರಿಗೆ ನಕಲಿ ವಯಾಗ್ರ ಸೇರಿದಂತೆ ನಿಯಂತ್ರಿತ ಔಷಧಿಗಳನ್ನು ಮಾರಾಟ ಮಾಡುತ್ತಿದ್ದ ಅಂಟರ್‌ನ್ಯಾಷನಲ್ ನಕಲಿ ಕಾಲ್‌ಸೆಂಟರ್‌ ಮೇಲೆ ಮುಂಬೈ ಅಪರಾಧ ಶಾಖೆ ದಾಳಿ ನಡೆಸಿ, ಎಂಟು ಮಂದಿಯನ್ನು ಬಂಧಿಸಿದೆ. ಪ್ರಮುಖ ಆರೋಪಿ ಸೇರಿದಂತೆ ಇನ್ನಿಬ್ಬರು ಪರಾರಿಯಾಗಿದ್ದಾರೆ. ಜೋಗೇಶ್ವರಿ (ಪಶ್ಚಿಮ)ಯ ಅಂಬೋಲಿ ಪ್ರದೇಶದ ಎಸ್‌.ವಿ.ರಸ್ತೆಯ ಕೆವ್ನಿಪಾದದಲ್ಲಿ “ಟೀಂ ಗ್ರ್ಯಾಂಡ್ 9 ಸೆಕ್ಯುರಿಟಿ ಸರ್ವೀಸಸ್ ಎಲ್‌ಎಲ್‌ಪಿ” ಹೆಸರಿನಲ್ಲಿ ಕಳೆದ ಆರು–ಏಳು ತಿಂಗಳಿಂದ ಕಾರ್ಯಾಚರಿಸುತ್ತಿದ್ದ ಈ ಕೇಂದ್ರದಲ್ಲಿ ನೌಕರರು ಯುಎಸ್ ಮೂಲದ ಟೆಲಿಮಾರ್ಕೆಟರ್‌ಗಳಂತೆ ನಟಿಸಿ, ಔಷಧ ಕಂಪನಿಗಳ ಪ್ರತಿನಿಧಿಗಳೆಂದು ಹೇಳಿಕೊಂಡು ಅಮೆರಿಕನ್ನರ ಖಾಸಗಿ ಡೇಟಾವನ್ನು ಬಳಸಿ ವಂಚನೆ ನಡೆಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ಆಮಿರ್ ಇಕ್ಬಾಲ್ ಶೇಖ್ (40), ಮಹಿರ್ ಇಕ್ಬಾಲ್ ಪಟೇಲ್ (26), ಮೊಹಮ್ಮದ್ ಶಬೀಬ್ ಶೇಖ್ (26), ಮೊಹಮ್ಮದ್ ಅಯಾಜ್ ಶೇಖ್ (26), ಆಡಮ್ ಎಹ್ಸಾನುಲ್ಲಾ ಶೇಖ್ (32), ಆರ್ಯನ್ ಖುರೇಷಿ (19), ಅಮಾನ್ ಶೇಖ್ (19) ಮತ್ತು ಹಶ್ಮತ್ ಜರಿವಾಲಾ (29) ಎಂದು ಗುರುತಿಸ...
ರಾಜ್ಯ ಸರ್ಕಾರದ ಶೇ.63 ರಷ್ಟು ಭ್ರಷ್ಟಾಚಾರ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

ರಾಜ್ಯ ಸರ್ಕಾರದ ಶೇ.63 ರಷ್ಟು ಭ್ರಷ್ಟಾಚಾರ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ಶೇ.63ರಷ್ಟಿದೆ ಎಂಬ ಉಪಲೋಕಾಯುಕ್ತ ಬಿ. ವೀರಪ್ಪ ಅವರ ಹೇಳಿಕೆ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಟೀಕಾಸ್ತ್ರ ಪ್ರಯೋಗಿಸಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ವಿರೋಧ ಪಕ್ಷದ ನಾಯಕ ಆರ್‌. ಅಶೋಕ, “ಇದು ಆಡಳಿತಕ್ಕೆ ಅವಮಾನ. ಸರ್ಕಾರಕ್ಕೆ ಸ್ವಾಭಿಮಾನ ಇದ್ದರೆ ವಿಸರ್ಜಿಸಲಿ. ಸಿಬಿಐ ತನಿಖೆಗೆ ಒಪ್ಪಿಗೆ ನೀಡಲಿ” ಎಂದು ಹೇಳಿದರು. "ಕಮಿಷನ್‌ಗಳಲ್ಲಿ ಕರ್ನಾಟಕ ಎಟಿಎಂ" ಎಂದು ಅಶೋಕ ಆರೋಪಿಸಿದರು. ವಾಲ್ಮೀಕಿ ನಿಗಮದಲ್ಲಿ ₹187 ಕೋಟಿ ಹಣ ದುರುಪಯೋಗ, ಭೋವಿ ನಿಗಮದಲ್ಲಿ ಏಕರೆಗೆ ₹25 ಲಕ್ಷ ಕಮಿಷನ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಿವೇಶನ ಹಂಚಿಕೆ, ಬಾರ್ ಲೈಸೆನ್ಸ್‌ಗೆ ₹20 ಲಕ್ಷ ಬೇಡಿಕೆ, ಟ್ರಾನ್ಸ್‌ಫಾರ್ಮರ್‌ಗಳಲ್ಲಿ ₹90 ಕೋಟಿ ಹಗರಣ ನಡೆದಿದೆ ಎಂದು ಅಶೋಕ್ ಗಮನಸೆಳೆದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು....
ರಷ್ಯಾ ಅಧ್ಯಕ್ಷ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

ರಷ್ಯಾ ಅಧ್ಯಕ್ಷ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಅಧಿಕೃತ ಭಾರತ ಭೇಟಿಗೆ ಗುರುವಾರ ರಾತ್ರಿ ನವದೆಹಲಿಗೆ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿ ಸ್ವತಃ ವಿಮಾನ ನಿಲ್ದಾಣಕ್ಕೆ ತೆರಳಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. In a notable departure from usual practice, Prime Minister Shri @narendramodi personally welcomed Russian President Vladimir Putin upon his arrival at the Delhi airport.President Putin is undertaking a two-day State visit to India, during which he will participate in the 23rd… pic.twitter.com/n89gV1S6XX— BJP (@BJP4India) December 4, 2025 ವಿಮಾನದಿಂದ ಇಳಿದ ಬಳಿಕ ಇಬ್ಬರು ನಾಯಕರು ಪರಸ್ಪರ ಅಪ್ಪಿಕೊಂಡು ಮಾತನಾಡಿದರು. ಬಳಿಕ ಅಲ್ಪಕಾಲದ ಸಾಂಸ್ಕೃತಿಕ ಸ್ವಾಗತ ಕಾರ್ಯಕ್ರಮವನ್ನು ವೀಕ್ಷಿಸಿದರು. ವಿಮಾನ ನಿಲ್ದಾಣದಿಂದ ಇಬ್ಬರೂ ಒಂದೇ ವಾಹನದಲ್ಲಿ ಹೊರಟು ಗಮನಸೆಳೆದರು. ಪುಟಿನ್ ಭೇಟಿಯ ಸಂದರ್ಭದಲ್ಲಿ ಭಾರತ-ರಷ್ಯಾ ನಡುವೆ ಮಹತ್ವದ ಒಪ್ಪಂದಗಳು ಏರ್ಪಡಲಿವೆ ಎಂದು ...
KIALನಲ್ಲಿ ಕಸ್ಟಮ್ಸ್ ದಾಳಿ; ಭಾರಿ ಮೌಲ್ಯದ ವಸ್ತು, ಅಪರೂಪದ ಪ್ರಾಣಿಗಳು ವಶ

KIALನಲ್ಲಿ ಕಸ್ಟಮ್ಸ್ ದಾಳಿ; ಭಾರಿ ಮೌಲ್ಯದ ವಸ್ತು, ಅಪರೂಪದ ಪ್ರಾಣಿಗಳು ವಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ವಸ್ತುಗಳು ಮತ್ತು ಪ್ರಾಣಿಗಳನ್ನು ತರಲಾಗುತ್ತಿದ್ದ ವಿಚಾರ ಮತ್ತೊಮ್ಮೆ ಬೆಳಕಿಗೆ ಬಂದಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಈ ಅಕ್ರಮ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ವಿಶೇಷ ತಂಡ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಸಿಗರೇಟ್, ಇ-ಸಿಗರೇಟ್ ಸೇರಿದಂತೆ ಮೌಲ್ಯವಂತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ವಿದೇಶೀ ಪ್ರಾಣಿಗಳನ್ನು ಕೂಡ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ವಿಮಾನ ನಿಲ್ದಾಣದ ಮೂಲಕ ನಡೆಯುತ್ತಿರುವ ಅಕ್ರಮ ಸಾಗಾಣಿಕೆಗೆ ಈ ದಾಳಿ ಪರಿಣಾಮಕಾರಿಯಾಗಿ ಬ್ರೇಕ್ ಹಾಕಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ....
Indian Navy Day; ಸಮುದ್ರ ಗಡಿ–ಆರ್ಥಿಕ ಹಿತಾಸಕ್ತಿಗಳ ರಕ್ಷಣೆಯಲ್ಲಿ ನೌಕಾಪಡೆಯ ನಿರ್ಣಾಯಕ ಪಾತ್ರ

Indian Navy Day; ಸಮುದ್ರ ಗಡಿ–ಆರ್ಥಿಕ ಹಿತಾಸಕ್ತಿಗಳ ರಕ್ಷಣೆಯಲ್ಲಿ ನೌಕಾಪಡೆಯ ನಿರ್ಣಾಯಕ ಪಾತ್ರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ದೆಹಲಿ: ಭಾರತೀಯ ನೌಕಾಪಡೆಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಗುರುವಾರ ನೌಕಾಪಡೆಯ ಎಲ್ಲ ಅಧಿಕಾರಿಗಳು–ಸಿಬ್ಬಂದಿಗೆ ಶುಭಾಶಯ ತಿಳಿಸಿ, ದೇಶದ ಸಮುದ್ರ ಗಡಿಗಳ ರಕ್ಷಣೆಯಲ್ಲಿ ಪಡೆ ತೋರಿಸುತ್ತಿರುವ ಶೌರ್ಯ, ಸ್ವಾವಲಂಬನೆ ಮತ್ತು ಆಧುನೀಕರಣದ ಬದ್ಧತೆಯನ್ನು ಪ್ರಶಂಸಿಸಿದರು. ಡಿಸೆಂಬರ್ 4 ಅನ್ನು ಪ್ರತಿವರ್ಷ ನೌಕಾಪಡೆಯ ದಿನವಾಗಿ ಆಚರಿಸಲಾಗುತ್ತದೆ. 1971ರ ಯುದ್ಧದಲ್ಲಿ ‘ಆಪರೇಷನ್ ಟ್ರೈಡೆಂಟ್’ ಮೂಲಕ ಪಾಕಿಸ್ತಾನಿ ನೌಕಾಪಡೆಯ ಮೇಲೆ ಭಾರತ ಪಡೆದ ಐತಿಹಾಸಿಕ ಗೆಲುವಿಗೆ ಈ ದಿನಾಂಕ ಸ್ಮರಣಾರ್ಥವಾಗಿದೆ. Xನಲ್ಲಿ ಬರಹ ಹಂಚಿಕೊಂಡ ಪ್ರಧಾನಮಂತ್ರಿ' “ನಮ್ಮ ನೌಕಾಪಡೆ ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪಕ್ಕೆ ಹೆಸರಾಗಿದ್ದು, ದೇಶದ ತೀರಗಳನ್ನು ಕಾಪಾಡುತ್ತಾ ನಮ್ಮ ಕಡಲ ಹಿತಾಸಕ್ತಿಗಳನ್ನು ರಕ್ಷಿಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಸ್ವಾವಲಂಬನೆ ಮತ್ತು ಆಧುನೀಕರಣದತ್ತ ಪಡೆ ತೆಗೆದುಕೊಂಡ ಹೆಜ್ಜೆಗಳು ದೇಶದ ಭದ್ರತಾ ಸಾಮರ್ಥ್ಯವನ್ನು ಹೆಚ್ಚಿಸಿವೆ” ಎಂದಿದ್ದಾರೆ. ದೀಪಾವಳಿ ವೇಳೆ ಐಎನ್‌ಎಸ್ ವಿಕ್ರಾಂಟ್‌ನಲ್ಲಿ ನೌಕಾ ಸಿಬ್ಬಂದಿಯೊಂದಿಗೆ ಕಳೆದ ಕ್ಷಣಗಳನ್ನು ನೆನೆದು, ಅವು ಸದ...
ನ್ಯಾಯಾಲಯಗಲ್ಲಿನ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಪ್ರಿಯಾಂಕ್ ಮನವಿ; CSಗೆ ಪತ್ರ

ನ್ಯಾಯಾಲಯಗಲ್ಲಿನ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಪ್ರಿಯಾಂಕ್ ಮನವಿ; CSಗೆ ಪತ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದ ಸಮಗ್ರ ಏಳಿಗೆಗೆ “ಆರ್ಟಿಕಲ್ 371ಜೆ“ ವರದಾನವಾಗಿದ್ದರೂ, ಸಮರ್ಪಕ ಅನುಷ್ಠಾನದಲ್ಲಿ ನಿಷ್ಠೆ ಇದ್ದರೆ ಮಾತ್ರ ವಿಶೇಷ ಸ್ಥಾನಮಾನದ ಆಶಯಗಳು ಈಡೇರಲಿದೆ ಎಂದು ಅವರು ಹೇಳಿದ್ದಾರೆ. ನ್ಯಾಯಾಲಯದ ಮುಂದೆ ಹಲವು ವರ್ಷಗಳಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 47 ಪ್ರಕರಣಗಳು ಬಾಕಿ ಇರುವುದರಿಂದ ಆರ್ಟಿಕಲ್ 371ಜೆ ಅಡಿಯಲ್ಲಿನ ನೇಮಕಾತಿ, ಮುಂಬಡ್ತಿ ವಿಷಯಗಳಲ್ಲಿ ಹಿನ್ನೆಡೆ ಉಂಟಾಗಿದೆ. ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿರುತ್ತಾರೆ ಎಂದಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ವಿಭಾಗೀಯ ಪೀಠಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ, ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂ...
ಸಮಂತಾ ಜೊತೆ ಕೆಲಸ ಮಾಡುವ ಕಾಂತಾರ ನಟನ ಕನಸು ನನಸು!

ಸಮಂತಾ ಜೊತೆ ಕೆಲಸ ಮಾಡುವ ಕಾಂತಾರ ನಟನ ಕನಸು ನನಸು!

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಮುಂಬೈ: ಕನ್ನಡದ ಕಾಂತಾರ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ, ಬಳಿಕ ಆರ್.ಮಾಧವನ್ ಜೊತೆ ತಮಿಳು ವೆಬ್‌ಸೀರಿಸ್ ಲೆಗಸಿಗೆ ಸಜ್ಜಾಗಿರುವ ನಟ ಗುಲ್ಶನ್ ದೇವಯ್ಯ ಈಗ ತೆಲುಗು ಚಿತ್ರರಂಗಕ್ಕೂ ಕಾಲಿಡುತ್ತಿದ್ದಾರೆ. ಸಮಂತಾ ರುತ್‌ ಪ್ರಭು ಅಭಿನಯದ ಮಾ ಇಂತಿ ಬಂಗಾರಂ ಅವರ ಮೊದಲ ತೆಲುಗು ಚಿತ್ರ. ತ್ರಲಾಲಾ ಮೂವಿಂಗ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಪಾತ್ರವಹಿಸಿರುವುದಕ್ಕೆ ದೇವಯ್ಯ ಆನಂದ ವ್ಯಕ್ತಪಡಿಸಿದ್ದಾರೆ. “ಸಮಂತಾ ಜೊತೆ ಕೆಲಸ ಮಾಡುವ ಆಸೆ ನನಗಿನ್ನೂ ಹಲವು ವರ್ಷಗಳಿಂದಿತ್ತು. ಇದರೀಗ ಸರಿಯಾದ ಸಮಯದಲ್ಲಿ ನನಗೆ ಒದಗಿದೆ,” ಎಂದು ಅವರು ಮಾಧ್ಯಮ ಸಂದರ್ಶನದಲ್ಲಿ ಹೇಳಿದರು. ಚಿತ್ರದ ಮುಹೂರ್ತ ವಿಧಿ ಇತ್ತೀಚೆಗೆ ನೆರವೇರಿತು. ಗುಲ್ಶನ್ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಮುಹೂರ್ತ ಹಾಗೂ ಘೋಷಣೆ ವಿಡಿಯೊ ಹಂಚಿಕೊಂಡಿದ್ದು, ತೆಲುಗು ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿದೆ. “MIBಯಲ್ಲಿನ ನನ್ನ ಪಾತ್ರಕ್ಕಾಗಿ ತೀವ್ರವಾಗಿ ತಯಾರಿ ನಡೆಸುತ್ತಿದ್ದೇನೆ. ಈಗಲೇ ಹೆಚ್ಚಿನ ವಿವರ ಹಂಚಿಕೊಳ್ಳಲು ಸಾಧ್ಯವಿಲ್ಲ. ಆದರೆ ಪಾತ್ರವು ಸವಾಲಿನದು. ಅದನ್ನು ಸಮರ...
ಆಶಾ–ಅಂಗನವಾಡಿ ನೌಕರರ ಬೇಡಿಕೆಗಳಿಗೆ ಕೇಂದ್ರದಿಂದ ಹಸಿರು ನಿಶಾನೆ

ಆಶಾ–ಅಂಗನವಾಡಿ ನೌಕರರ ಬೇಡಿಕೆಗಳಿಗೆ ಕೇಂದ್ರದಿಂದ ಹಸಿರು ನಿಶಾನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಆರೋಗ್ಯ ಹಾಗೂ ಮಕ್ಕಳ ಪೋಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ, ಅಂಗನವಾಡಿ ಮತ್ತು ಅಕ್ಷರ ದಾಸೋಹಿ ನೌಕರರ ಬಹುಕಾಲದ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂಧಿಸಿದೆ. ಕೇಂದ್ರ ಸಚಿವರಾದ ಅನ್ನಪೂರ್ಣಾ ದೇವಿ ಮತ್ತು ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಬುಧವಾರ ಮಹತ್ವದ ಮಾತುಕತೆ ನಡೆಸಿದರು. ಹೋರಾಟ ನಿರತ ನೌಕರರನ್ನು ನವದೆಹಲಿಗೆ ಕರೆಸಿಕೊಂಡ ಕುಮಾರಸ್ವಾಮಿ, ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಶಾಸ್ತ್ರಿ ಭವನ ಕಚೇರಿಗೆ ಕರೆದುಕೊಂಡು ಹೋಗಿ, ಸಚಿವೆ ಅನ್ನಪೂರ್ಣಾ ದೇವಿ ಅವರನ್ನು ಭೇಟಿ ಮಾಡಿಸಿದರು. ಕರ್ನಾಟಕದ 12 ಮಂದಿ ನೌಕರರ ನಿಯೋಗ ಹಾಗೂ ಸಚಿವಾಲಯದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಮುಖ್ಯ ಬೇಡಿಕೆಗಳ ಚರ್ಚೆ: ಚರ್ಚೆಯಲ್ಲಿ ಎಫ್‌ಆರ್‌ಎಸ್ ನೀತಿ ಪರಿಷ್ಕರಣೆ, ಆಶಾ, ಅಂಗನವಾಡಿ ಕಾರ್ಯಕರ್ತೆಯರ ಚುನಾವಣಾ ಕರ್ತವ್ಯದಿಂದ ವಿನಾಯಿತಿ, ವಿಮಾ ಸೌಲಭ್ಯ, ವೇತನ ಹೆಚ್ಚಳ—ಇತ್ಯಾದಿ ಹಲವು ಸಮಸ್ಯೆಗಳು ಪ್ರಸ್ತಾಪಗೊಂಡವು. ಸಮಸ್ಯೆಯನ್ನು ಆಲಿಸಿದ ಸಚಿವೆ ಅನ್ನಪೂರ್ಣಾ ದೇವಿ,...
ಕರ್ನಾಟಕದಲ್ಲಿ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ; ಕೇಂದ್ರ ಸರ್ಕಾರದ ಗಮನಸೆಳೆದ ಕಾಂಗ್ರೆಸ್ ಸಂಸದೆ

ಕರ್ನಾಟಕದಲ್ಲಿ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ; ಕೇಂದ್ರ ಸರ್ಕಾರದ ಗಮನಸೆಳೆದ ಕಾಂಗ್ರೆಸ್ ಸಂಸದೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ದಾವಣಗೆರೆ ಸೇರಿದಂತೆ ಕರ್ನಾಟಕದಲ್ಲಿ ಪ್ರತಿಷ್ಠಿತ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ ಬಗ್ಗೆ ಸಂಸದೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಕೇಂದ್ರದ ಗಮನಸೆಳೆದಿದ್ದಾರೆ. ತಮ್ಮ ಕ್ಷೇತ್ರದಲ್ಲಿನ ಮೊಬೈಲ್ ಸಂಪರ್ಕ ಸಮಸ್ಯೆ ಹಾಗೂ ಅದರಿಂದ ರೈತರು, ವಿದ್ಯಾರ್ಥಿಗಳು ಸೇರಿದಂತೆ ಜನರು ಸಮಸ್ಯೆಗಳನ್ನು ಎದುರಿಸುತ್ತಿ ದ್ದಾರೆ. ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. I would like to raise a matter related to the installation of BSNL mobile tower in my constituency, Davanagere.Bridging the digital divide and ensuring last-mile connectivity are core pillars of the Digital India Mission. Yet, people in many villages in my Davanagere… pic.twitter.com/dwz20InyvR— Congress (@INCIndia) December 3, 2025...
“ಏಳು ವರ್ಷಗಳ ಹಿಂದೆ ಖರೀದಿಸಿದ ನನ್ನ ಸ್ವಂತ ವಾಚ್”; ದುಬಾರಿ ಕೈಗಡಿಯಾರ ಬಗ್ಗೆ ಡಿಕೆಶಿ ಸ್ಪಷ್ಟನೆ

“ಏಳು ವರ್ಷಗಳ ಹಿಂದೆ ಖರೀದಿಸಿದ ನನ್ನ ಸ್ವಂತ ವಾಚ್”; ದುಬಾರಿ ಕೈಗಡಿಯಾರ ಬಗ್ಗೆ ಡಿಕೆಶಿ ಸ್ಪಷ್ಟನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರಿಸಿರುವ ದುಬಾರಿ ಗಡಿಯಾರಗಳ ಕುರಿತು ಉಂಟಾಗಿರುವ ವಿವಾದಕ್ಕೆ ಡಿಕೇಶಿ ಮಂಗಳೂರಿನಲ್ಲಿ ಬುಧವಾರ ಸ್ಪಷ್ಟನೆ ನೀಡಿದರು. “ಇದು ನನ್ನ ಸ್ವಂತ ಕೈಗಡಿಯಾರ. ನಾನು ಅದನ್ನು ಏಳು ವರ್ಷಗಳ ಹಿಂದೆ ನನ್ನ ಕ್ರೆಡಿಟ್ ಕಾರ್ಡ್ ಮೂಲಕ 24 ಲಕ್ಷ ರೂ. ನೀಡಿ ಖರೀದಿಸಿದ್ದೇನೆ. ಬೇಕಿದ್ದರೆ ನೀವು ನನ್ನ ಕ್ರೆಡಿಟ್ ಕಾರ್ಡ್ ಬಿಲ್‌ಗಳನ್ನೇ ಪರಿಶೀಲಿಸಬಹುದು. ನನ್ನ ಚುನಾವಣಾ ಪ್ರಮಾಣ ಪತ್ರದಲ್ಲೂ ಈ ವಿವರವನ್ನು ತಿಳಿಸಿದ್ದೇನೆ” ಎಂದು ಉಪಮುಖ್ಯಮಂತ್ರಿ ಹೇಳಿದರು. ಸಮಾಜವಾದಿ ಮುಖ್ಯಮಂತ್ರಿಯೇ ದುಬಾರಿ ಗಡಿಯಾರ ಧರಿಸಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿಗಳಿಗೆ ತಮ್ಮ ಇಷ್ಟದ ಗಡಿಯಾರ ಧರಿಸುವ ಹಕ್ಕಿದೆ. ಅದನ್ನು ಖರೀದಿಸುವ ಸಾಮರ್ಥ್ಯವೂ ಅವರಿಗೆ ಇದೆ. ಜನರು ಗಡಿಯಾರಗಳ ಬಗ್ಗೆ ಅನವಶ್ಯಕ ಕುತೂಹಲ ತೋರಿಸುತ್ತಿದ್ದಾರೆ. ನನ್ನ ತಂದೆಗೆ ಏಳು ಗಡಿಯಾರಗಳಿದ್ದವು. ಅವರು ನಿಧನರಾದ ನಂತರ ಅವನ್ನು ಯಾರು ಧರಿಸಬೇಕು? ನಾನು ಅಥವಾ ನನ್ನ ಸಹೋದರ” ಎಂದು ಪ್ರತಿಕ್ರಿಯಿಸಿದರು....