Tuesday, January 27

Focus

ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಎಚ್ಚರಿಕೆ; ಆಯುಕ್ತಾಲಯದ ಸುತ್ತೋಲೆ ಹೀಗಿದೆ

ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಎಚ್ಚರಿಕೆ; ಆಯುಕ್ತಾಲಯದ ಸುತ್ತೋಲೆ ಹೀಗಿದೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸುದೀರ್ಘ ಕಾಲದ ಬೇಡಿಕೆಗಳನ್ನು ಮುಂದಿಟ್ಟು ಹೋರಾಟಕ್ಕಿಳಿದಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು 07.01.2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ಅನಿರ್ದಿಷ್ಟ ಹೋರಾಟಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯನ್ನು ರವಾನಿಸಿ, ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರ ಸೇವೆ ಅನಿವಾರ್ಯ.. ಸುತ್ತೋಲೆಯಲ್ಲಿ ಏನಿದೆ? ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ. ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನ...
HMPV ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ; ಅರೋಗ್ಯ ಸಚಿವರ ಸಲಹೆ

HMPV ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ; ಅರೋಗ್ಯ ಸಚಿವರ ಸಲಹೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಚೀನಾದಲ್ಲಿ ಭೀತಿಯ ಅಲೆ ಎಬ್ಬಿಸಿರುವ HMPV ಹೊಸ ವೈರಸ್ ಅಲ್ಲ, ಅನೇಕ ವರ್ಷಗಳ ಹಿಂದಿನಿಂದಲೂ ಈ ವೈರಸ್ ಹಾವಳಿ ಇದೆ. ಹಾಗಾಗಿ ಈ ಸೋಂಕಿನ ಬಗ್ಗೆ ಆಂತಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. VIDEO | Here's what Karnataka Health Minister Dinesh Gundu Rao (@dineshgrao) said on an 8-month-old baby suspected to be infected with HMPV in Bengaluru. "I don't think we should be pressing the panic button, because HMPV is not a new virus, it's an existing virus. The reports… pic.twitter.com/43xS94LUzT — Press Trust of India (@PTI_News) January 6, 2025 ಬೆಂಗಳೂರಿನಲ್ಲಿ ಮಕ್ಕಳಲ್ಲಿ HMPV ಸೋಂಕು ದೃಢಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ದೇಶದಲ್ಲಿ ಇದು ಮೊದಲ ಪ್ರಕರಣ ಎಂಬುದು ನಿಜವಲ್ಲ. HMPV ಅಸ್ತಿತ್ವದಲ್ಲಿರುವ ವೈರಸ್. ಈ ವೈರಸ್ ನಿಂದ ಉಸಿರಾಟದ ತೊಂದರೆ ಸಮಸ್ಯೆ ಸಾಧ್ಯತೆ ಇದೆ. ಈ ವೈರಸ್​ ಕಡಿಮೆ ಇಮ್ಯೂನಿಟಿ ಹೊಂದಿರುವವರಿಗೆ ಬರುತ್ತದೆ ಎಂದರ...
ರಾಗಿ ಹುಲ್ಲು ತುಂಬಿದ್ದ ವಾಹನಕ್ಕೆ ವಿದ್ಯುತ್ ಲೈನ್ ಸ್ಪರ್ಶ; ಕ್ಯಾಂಟರ್ ಅಗ್ನಿಗಾಹುತಿ

ರಾಗಿ ಹುಲ್ಲು ತುಂಬಿದ್ದ ವಾಹನಕ್ಕೆ ವಿದ್ಯುತ್ ಲೈನ್ ಸ್ಪರ್ಶ; ಕ್ಯಾಂಟರ್ ಅಗ್ನಿಗಾಹುತಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೊಡ್ಡಬಳ್ಳಾಪುರ: ರಾಗಿ ಹುಲ್ಲು ತುಂಬಿದ್ದ ಕ್ಯಾಂಟರ್ ಗೆ ವಿದ್ಯುತ್ ಲೈನ್ ಸ್ಪರ್ಶವಾಗಿದ್ದು, ವಿದ್ಯುತ್ ಲೈನ್ ತಗುಲಿದ ಹಿನ್ನೆಲೆ ರಾಗಿ ಹುಲ್ಲಿಗೆ ಬೆಂಕಿ ಆವರಿಸಿ ಹೊತ್ತಿ ಉರಿದಿದ ಘಟನೆ ದೊಡ್ಡಬಳ್ಳಾಪುರ ತಾಲೂಕು ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ. ಭಕ್ತರಹಳ್ಳಿಯಿಂದ ವಿಜಯಪುರಕ್ಕೆ ಲಾರಿಯಲ್ಲಿ ಹುಲ್ಲು ಸಾಗಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡಿದೆ. ಲಾರಿಯಲ್ಲಿದ್ದ 250 ಹೊರೆ ಹುಲ್ಲು ಭಸ್ಮವಾಗಿದೆ. ಪಕ್ಕದಲ್ಲೇ ಇದ್ದ ರೈತರ ಹುಲ್ಲಿನ ಬಣವೆಗೂ ಬೆಂಕಿ ಆವರಿಸಿದೆ. ಗ್ರಾಮಸ್ಥರಿಂದ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸುವಲ್ಲಿ ತಡವಾದ ಹಿನ್ನೆಲೆ ಗ್ರಾಮಸ್ಥರಿಂದಲೇ ಬೆಂಕಿ ನಂದಿಸುವ ಯತ್ನ ನಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೊಡ್ಡಬೆಳವಂಗಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ರಾಜ್ಯದಲ್ಲಿ HMP ಗುಮ್ಮ..! ಕ್ಷಿಪ್ರ ಕ್ರಮ ಸಂಬಂಧ ಅಧಿಕಾರಿಗಳ ತುರ್ತು ಸಭೆ..

ರಾಜ್ಯದಲ್ಲಿ HMP ಗುಮ್ಮ..! ಕ್ಷಿಪ್ರ ಕ್ರಮ ಸಂಬಂಧ ಅಧಿಕಾರಿಗಳ ತುರ್ತು ಸಭೆ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದಲ್ಲಿ ಎಚ್‌ಎಂಪಿ ಸೋಂಕಿನ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ಷಿಪ್ರ ಕ್ರಮಕ್ಕೆ ಮುಂದಾಗಿದೆ. ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಸೋಮವಾರ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರ ಸೂಚನೆ ಮೇರೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಮೊಹಮ್ಮದ್‌ ಮೊಹಸೀನ್‌, ನಿರ್ದೇಶಕರಾದ ಡಾ. ಬಿ.ಎಲ್‌. ಸುಜಾತಾ ರಾಥೋಡ್‌ ಅವರ ನೇತೃತ್ವದಲ್ಲಿ ಎಲ್ಲಾ ಜಿಲ್ಲಾ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಯಿತು. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ, ಚಿಕಿತ್ಸೆ ತಯಾರಿ ಹಾಗೂ ಇತರೆ ಪರಿಣಾಮಕಾರಿ ಕ್ರಮಗಳ ಬಗ್ಗೆ ವೀಡಿಯೋ ಕಾನ್ಸರೆನ್ಸ್‌ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ....
HMPV ಸೋಂಕು: ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ಪತ್ತೆ

HMPV ಸೋಂಕು: ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ಪತ್ತೆ

Focus, Update, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚೀನಾದಲ್ಲಿ ಭೀತಿಯ ಅಲೆ ಎಬ್ಬಿಸಿರುವ HMPV ಸೋಂಕು ಭಾರತಕ್ಕೂ ಕಾಲಿಟ್ಟಿದೆ. ಮೊದಲ ಪ್ರಕರಣ ಕರ್ನಾಟಕದಲ್ಲೇ ಪತ್ತೆಯಾಗಿದೆ. ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಮಗುವಿನಲ್ಲಿ HMPV ಸೋಂಕು ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಜ್ವರದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 8 ತಿಂಗಳ ಮಗುವಿಲ್ಲಿ ಈ ಸೋಂಕು ದೃಢಪಟ್ಟಿದೆ. ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲೂ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ....
KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ 'ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ - KSRTC ಆರೋಗ್ಯ ಕಾರ್ಯಕ್ರಮ' ಸೋಮಾವರ ಅನುಷ್ಠಾನಗೊಳ್ಳಲಿದೆ. ಸೋಮವಾರ (06.01.2025) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ಸಿಗಲಿದೆ. ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ವರ್ಗಕ್ಕೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ 'KSRTC ಆರೋಗ್ಯ' ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಸ್ಪತ್ರೆಗಳ ಮುಖ್ಯಸ್ಥ...
ವಿಪಕ್ಷ ನಾಯಕ ಅಶೋಕ್ ಅವರಿಗೆ ‘ವಿಶೇಷ ಸ್ಥಾನಮಾನದ ನಾಮಫಲಕ’ ಒದಗಿಸಿ; ಕಾಂಗ್ರೆಸ್ ವ್ಯಂಗ್ಯ

ವಿಪಕ್ಷ ನಾಯಕ ಅಶೋಕ್ ಅವರಿಗೆ ‘ವಿಶೇಷ ಸ್ಥಾನಮಾನದ ನಾಮಫಲಕ’ ಒದಗಿಸಿ; ಕಾಂಗ್ರೆಸ್ ವ್ಯಂಗ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತಮ್ಮ ಬಗ್ಗೆ ಕಾಂಗ್ರೆಸ್ ಪಕ್ಷ ಆಕ್ಷೇಪಾರ್ಹ ವೀಡಿಯೊ ವೈರಲ್ ಮಾಡಿದೆ ಎಂದು ಪೊಲೀಸರಿಗೆ ದೂರು ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್, ತಮ್ಮ ಸ್ಥಾನಮಾನಕ್ಕೆ ಕಾಂಗ್ರೆಸ್ ಚ್ಯುತಿ ತರುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ವಿಪಕ್ಷ ನಾಯಕ ಅಶೋಕ್ ಅವರಿಗೆ 'ವಿಶೇಷ ಸ್ಥಾನಮಾನದ ನಾಮಫಲಕ' ಒದಗಿಸಬೇಕಿದೆ ಎಂದು ವ್ಯಂಗ್ಯವಾಡಿದೆ. ಈ ಸಂಬಂಧ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸ್ಪೀಕರ್'ಗೆ ಬರೆದಿರುವ ಪತ್ರ ಗಮನಸೆಳೆದಿದೆ. ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅಲಿಯಾಸ್ ಸಾಮ್ರಾಟ್ ಅಶೋಕ್ ರವರಿಗೆ ವಿಶೇಷ ಸ್ಥಾನಮಾನ ಮತ್ತು ನಾಮಫಲಕ ಒದಗಿಸಬೇಕೆಂದು ಈ ಪತ್ರದಲ್ಲಿ ರಮೇಶ್ ಬಾಬು ಉಲ್ಲೇಖಿಸಿದ್ದಾರೆ. ಕರ್ನಾಟಕದ ವಿಧಾನಸಭೆಗೆ ತನ್ನದೇ ಆದ ವಿಶೇಷವಾದ ಗೌರವವಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಅನೇಕ ಹಿರಿಯರು ಇಲ್ಲಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವಿರೋಧ ಪಕ್ಷದ ನಾಯಕರ ಸ್ಥಾನದ ಕಾರ್ಯದ ಕಾರಣಕ್ಕಾಗಿ ಗೌರವವನ್ನೂ ಪಡೆದಿರುತ್ತಾರೆ. ಹಿರಿಯ ನಾಯಕರಾದ ಏಸ್ . ಶಿವಪ್ಪನವರು ಮೊದಲ...
ಬಿಡದಿ ಬಳಿ ಬಾಯ್ಲರ್ ಸ್ಫೋಟ; ಐವರು ಕಾರ್ಮಿಕರಿಗೆ ಗಾಯ

ಬಿಡದಿ ಬಳಿ ಬಾಯ್ಲರ್ ಸ್ಫೋಟ; ಐವರು ಕಾರ್ಮಿಕರಿಗೆ ಗಾಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ಬಿಡದಿ ಬಳಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಐವರು ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಬಿಡದಿಯ ಭೈರಮಂಗಲ ಕ್ರಾಸ್​ಬಳಿಯ ವಿಧ್ಯುತ್​​ ಉತ್ಪಾದನಾ ಘಟಕದಲ್ಲಿ ಬಾಯ್ಲರ್​ಸ್ಪೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಉತ್ತರ ಭಾರತದ ಐವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಅಮಲೇಶ್, ಸಂತೂನ್, ಉಮೇಶ್, ತರುಣ್, ಲಖನ್ ಎಂದು ಗುರುತಿಸಲಾಗಿದೆ. ಅವಘಡದ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
HMPV ಬಗ್ಗೆ ಆತಂಕವಿಲ್ಲ; ಇದು ಚಳಿಗಾಲದ ಸಾಮಾನ್ಯ ಕಾಯಿಲೆ ಎಂದ ಚೀನಾ

HMPV ಬಗ್ಗೆ ಆತಂಕವಿಲ್ಲ; ಇದು ಚಳಿಗಾಲದ ಸಾಮಾನ್ಯ ಕಾಯಿಲೆ ಎಂದ ಚೀನಾ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಬೀಜಿಂಗ್: ಪ್ರಸ್ತುತ ಚೀನಾದಲ್ಲಿ ಹರಡುತ್ತಿರುವ ಕೋವಿಡ್ ತರಹದ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್‌ಎಂಪಿವಿ) ಕೇವಲ 'ಚಳಿಗಾಲದ ಸಮಸ್ಯೆ' ಎಂದು ಚೀನಾ ಸರ್ಕಾರ ಹೇಳಿದೆ. ಎಚ್‌ಎಂಪಿವಿ ಸೋಂಕು ಸಣ್ಣ ಪ್ರಮಾಣದಲ್ಲಿ ಹರಡುತ್ತಿದೆ ಎಂದು ದೇಶದ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ. HMPV ಯ ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಚೀನಾದ ಆಸ್ಪತ್ರೆಗಳು ಜನರೊಂದಿಗೆ ತುಂಬಿರುವುದನ್ನು ತೋರಿಸುವ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಚಳಿಗಾಲದಲ್ಲಿ ಇದು ಸಾಮಾನ್ಯ ಘಟನೆಯಾಗಿದ್ದು, ದೇಶವು ಪ್ರವಾಸಿಗರಿಗೆ ಸುರಕ್ಷಿತವಾಗಿದೆ ಎಂದು ಭರವಸೆ ನೀಡಿದರು. ಇಂಗ್ಲಿಷ್ ಭಾಷೆಯಲ್ಲೂ 'ಉದಯ ನ್ಯೂಸ್' ಲಭ್ಯ..  HMPV A ‘WINTER OCCURRENCE,’ 'LESS SEVERE, SPREADING ON A SMALLER SCALE’: CHINA 'ಚಳಿಗಾಲದ ಅವಧಿಯಲ್ಲಿ ಉಸಿರಾಟದ ಸೋಂಕುಗಳು ಉತ್ತುಂಗಕ್ಕೇರುತ್ತವೆ. ಇತ್ತೀಚೆಗೆ, ಚೀನಾದ ರಾಷ್ಟ್ರೀಯ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಆಡಳಿತವು ಚಳಿಗಾಲದ ಸಮಯದಲ...