Monday, September 8

Focus

GST ಪರಿಷ್ಕರಣೆ: ಹಲವು ವಸ್ತುಗಳ ಬೆಲೆ ಇಳಿಕೆ, ಈ ವಸ್ತುಗಳಿಗೆ ತೆರಿಗೆಯೇ ಇಲ್ಲ

GST ಪರಿಷ್ಕರಣೆ: ಹಲವು ವಸ್ತುಗಳ ಬೆಲೆ ಇಳಿಕೆ, ಈ ವಸ್ತುಗಳಿಗೆ ತೆರಿಗೆಯೇ ಇಲ್ಲ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಸ್ವಾತಂತ್ರೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಪರಿಷ್ಕರಣೆಯ ಭರವಸೆ ನೀಡಿದ್ದರು. ಅದರಂತೆಯೇ ಕೇಂದ್ರ ಸರ್ಕಾರ ಹಲವು ವಸ್ತುಗಳ ಜಿಎಸ್‌ಟಿ ದರ ಇಳಿಸುವ ಮೂಲಕ ದೇಶದ ಜನರಿಗೆ ಗುಡ್ ನ್ಯೂಸ್ ನೀಡಿದೆ. ದೀಪಾವಳಿ ಮುನ್ನ ಗಿಫ್ಟ್ ನೀಡುವುದಾಗಿ ಮೋದಿ ನೀಡಿರುವ ಭರವಸೆ ಇದೀಗ ಕಾರ್ಯರೂಪಕ್ಕೆ ಬಂದಿದೆ. ಜಿಎಸ್‌ಟಿ ಸ್ಲ್ಯಾಬ್‌ಗಳಲ್ಲಿ ದೊಡ್ಡ ಮಟ್ಟದ ಪರಿಷ್ಕರಣೆ ಮಾಡಲಾಗಿದ್ದು, ಶೇ 5 ಮತ್ತು ಶೇ 18ರ ತೆರಿಗೆ ಸ್ಲ್ಯಾಬ್‌ಗಳನ್ನು ಮಾತ್ರ ಉಳಿಸಿಕೊಂಡು ಶೇ 12 ಮತ್ತು ಶೇ 28ರ ಸ್ಲ್ಯಾಬ್​ಗಳನ್ನು ರದ್ದು ಮಾಡಲಾಗಿದೆ. ಕೇಂದ್ರದ ಈ ನಿರ್ಧಾರದಿಂದಾಗಿ ಹಾಲವು ವಸ್ತುಗಳ ಬೆಲೆ ಇಳಿಕೆಯಾಗಲಿದೆ.ಇದೇ ಸಂದರ್ಭದಲ್ಲಿ ಹಲವು ವಸ್ತುಗಳನ್ನು ತೆರಿಗೆ ಮುಕ್ತ ಗೊಳಿಸಲಾಗಿದೆ. ಈ ಕೆಲವು ವಸ್ತುಗಳಿಗೆ ಜಿಎಸ್​ಟಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಈ ವರೆಗೂ ಶೇ 5 ರ ಜಿಎಸ್​ಟಿ ಸ್ಲ್ಯಾಬ್​​ ಅಡಿ ಬರುತ್ತಿದ್ದ ಯುಎಚ್​ಟಿ ಮಿಲ್ಕ್, ಪ್ಯಾಕ್ ಮಾಡಿದ ಚೆನ್ನಾ, ಪನ್ನೀರ್, ಇಂಡಿಯನ್ ಬ್ರೆಡ್ಸ್, ರೋಟಿ, ಕಾಕ್ರಾ, ಚಪಾತಿ, ಪರೋಟ, ಪಿಜ್ಜಾ ಹಾಗೂ ಬ್ರ...
ಸೆಪ್ಟೆಂಬರ್ 28ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’; ಕಿಚ್ಚನ ಗರಡಿ ಸೇರುವ ಸ್ಪರ್ಧಿಗಳ ಬಗ್ಗೆ ಕುತೂಹಲ

ಸೆಪ್ಟೆಂಬರ್ 28ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’; ಕಿಚ್ಚನ ಗರಡಿ ಸೇರುವ ಸ್ಪರ್ಧಿಗಳ ಬಗ್ಗೆ ಕುತೂಹಲ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಅಭಿಮಾನಿಗಳಿಗೆ ಖುಷಿಯ ಸುದ್ದಿ. ಈಗಾಗಲೇ 11 ಸೀಸನ್‌ಗಳನ್ನು ಯಶಸ್ವಿಯಾಗಿ ಮುಗಿಸಿರುವ ಈ ಶೋ, ಶೀಘ್ರದಲ್ಲೇ 12ನೇ ಸೀಸನ್ ಪ್ರೇಕ್ಷಕರ ಮುಂದೆ ಬರಲಿದೆ. ಸೆಪ್ಟೆಂಬರ್ 28, ಭಾನುವಾರದಂದು ಗ್ರ್ಯಾಂಡ್ ಓಪನಿಂಗ್ ನಡೆಯಲಿದ್ದು, ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸುವ ಸ್ಪರ್ಧಿಗಳು ಯಾರು ಎಂಬ ಕುತೂಹಲ ಉಂಟಾಗಿದೆ. View this post on Instagram A post shared by Colors Kannada Official (@colorskannadaofficial) ಕಿಚ್ಚ ಸುದೀಪ್ ಅವರು ನಿರೂಪಣೆಗೆ ಸಜ್ಜಾಗಿದ್ದು, ಶೋವನ್ನು ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ. ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರೋಮೋ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಪ್ರೋಮೋದಲ್ಲಿ – “ರಿಯಾಲಿಟಿ ಶೋಗಳ ಬಾಸ್, ರಿಯಲ್ ಎಂಟರ್‌ಟೈನ್‌ಮೆಂಟ್‌ಗೆ ಒಂದೇ ಅಡ್ರೆಸ್. ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಓಪನಿಂಗ್ ಸೆಪ್ಟೆಂಬರ್ 28ಕ್ಕೆ” ಎಂದು ಘೋಷಿಸಲಾಗಿದೆ. ಅದರಲ್ಲೇ ಸುದೀಪ್ ಅವರು “ನನ್ನ...
ಗ್ರೇಟರ್ ಬೆಂಗಳೂರು ಅಥಾರಿಟಿ; ಐದು ಪಾಲಿಕೆಗಳ ವ್ಯಾಪ್ತಿಗಳಿಗೆ ವಿಧಾನಸಭಾ ಕ್ಷೇತ್ರಗಳ ಹಂಚಿಕೆ

ಗ್ರೇಟರ್ ಬೆಂಗಳೂರು ಅಥಾರಿಟಿ; ಐದು ಪಾಲಿಕೆಗಳ ವ್ಯಾಪ್ತಿಗಳಿಗೆ ವಿಧಾನಸಭಾ ಕ್ಷೇತ್ರಗಳ ಹಂಚಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಜಧಾನಿ ಬೆಂಗಳೂರಿನ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಜಾರಿಯಾಗಿದೆ. ರಾಜ್ಯ ಸರ್ಕಾರ ಬುಧವಾರದಿಂದಲೇ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಜಾರಿಗೆ ಬರುವಂತೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ, ಇನ್ನು ಮುಂದೆ ಬಿಬಿಎಂಪಿ ಬದಲು ಜಿಬಿಎ ನಗರದ ಆಡಳಿತವನ್ನು ನೋಡಿಕೊಳ್ಳಲಿದೆ. ಜಿಬಿಎ ಅಡಿಯಲ್ಲಿ . ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಹಾಗೂ ಕೇಂದ್ರ ಹೆಸರುಗಳಲ್ಲಿ ಐದು ಹೊಸ ನಗರ ಪಾಲಿಕೆಗಳು ಕಾರ್ಯನಿರ್ವಹಿಸಲಿವೆ. ಪ್ರಸ್ತುತ ಬಿಬಿಎಂಪಿಯ 198 ವಾರ್ಡ್‌ಗಳನ್ನು ಈ ಐದು ಪಾಲಿಕೆಗಳ ನಡುವೆ ಹಂಚಿಕೆ ಮಾಡಲಾಗಿದೆ. ಪ್ರತಿಯೊಂದು ಪಾಲಿಕೆಗೆ ಎರಡು ವಲಯಗಳಂತೆ ಒಟ್ಟು 10 ವಲಯಗಳನ್ನು ರಚಿಸಲಾಗಿದೆ. 'ಜಿಬಿಎ'ಗೆ ಸಿಎಂ ಸಿದ್ದರಾಮಯ್ಯ ಜಿಬಿಎ ಅಧ್ಯಕ್ಷರಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಉಪಾಧ್ಯಕ್ಷರಾಗಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬೆಂಗಳೂರಿನ ಮೂವರು ಸಂಸದರು, ಹಾಗೂ ನಗರದ ಶಾಸಕರನ್ನು ಒಳಗೊಂಡಂತೆ 73 ಪದನಿಮಿತ್ತ ಸದಸ್ಯರನ್ನು ನೇಮಿಸಲಾಗಿದೆ. ಪಾಲಿಕೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು: ಬೆಂಗಳೂರು ಕೇಂದ್ರ ನಗರ ಪಾಲಿಕೆ: ಸಿವಿರಾಮನ್‌ನಗರ...
ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ನೀಡಬೇಕು: ಚಿತ್ರರಂಗದ ಮನವಿ

ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ನೀಡಬೇಕು: ಚಿತ್ರರಂಗದ ಮನವಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ದಿವಂಗತ ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಉನ್ನತ ಗೌರವ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಚಿತ್ರೋದ್ಯಮದ ಗಣ್ಯರು ಒತ್ತಾಯಿಸಿದ್ದಾರೆ. ಮಂಗಳವಾರ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಅಲ್ಲದೇ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ.ಸರೋಜಾದೇವಿ ಅವರ ಹೆಸರನ್ನು, ಅವರು ವಾಸಿಸುತ್ತಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆ ಕೂಡ ಮನವಿ ಮಾಡಲಾಯಿತು. ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ… pic.twitter.com/n6sLjmSm0Z— Siddaramaiah (@siddaramaiah) September 2, 2025...
ಮುಡಿಪು ಬಳಿ ಬ್ರಹ್ಮಶ್ರೀ ನಿಲಯ ಉದ್ಘಾಟನೆ; ಆಮಂತ್ರಣ ಪತ್ರಿಕೆ ಬಿಡುಗಡೆ

ಮುಡಿಪು ಬಳಿ ಬ್ರಹ್ಮಶ್ರೀ ನಿಲಯ ಉದ್ಘಾಟನೆ; ಆಮಂತ್ರಣ ಪತ್ರಿಕೆ ಬಿಡುಗಡೆ

Focus, ಬೆಂಗಳೂರು, ರಾಜ್ಯ
ಬ್ರಹ್ಮಶ್ರೀ ಬಿಲ್ಲವ ವೇದಿಕೆ ಮುಡಿಪು ವಲಯ ವತಿಯಿಂದ ಅಕ್ಟೊಬರ್ 12, ಭಾನುವಾರದಂದು ನಡೆಯಲಿರುವ ಬ್ರಹ್ಮಶ್ರೀ ನಿಲಯ ಉದ್ಘಾಟನೆ ಹಿನ್ನೆಲೆಯಲ್ಲಿ, ಪ್ರತಿಭಾವಂತ ಸಾಧಕರಿಗೆ ಸನ್ಮಾನ, ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಸಲಾಗುತ್ತದೆ. ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಆಗಸ್ಟ್ 31 ರಂದು ಬಿಡುಗಡೆ ಮಾಡಲಾಯಿತು. ಮಂಗಳೂರು ಸಮೀಪದ ಹೂ ಹಾಕುವ ಕಲ್ಲು ಸನ್ನಿಧಿಯಲ್ಲಿ ಸಮಾರಂಭ ನೆರವೇರಿತು. ಸುಮಾರು 13 ವರ್ಷಗಳಿಂದ ಟಾರ್ಪಲ್ ಇನ್ ಹೊದಿಕೆಯ ಮನೆಯಲ್ಲಿ ಜೀವನ ನಡೆಸುತ್ತಿದ್ದ ಕಡುಕುಟುಂಬದ ಸಂಸಾರಕ್ಕೆ ಬಿಲ್ಲವ ವೇದಿಕೆ ಒಂದು ಸುಸಜ್ಜಿತ ಮನೆಯನ್ನು ನಿರ್ಮಾಣ ಮಾಡಿ ಕೊಟ್ಟಿತ್ತು. ಈ ಮನೆಯ ಹಸ್ತಾಂತರ ಕಾರ್ಯಕ್ರಮ ಕೂಡಾ12.10.2025 ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದಂತಹ ಬಿಕೆ ಹರಿಪ್ರಸಾದ್, ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶಾಸಕರಾದ ಸುನಿಲ್ ಕುಮಾರ್ ಕಾರ್ಕಳ ಹಾಗೂ ವಿಧಾನಸಭಾಧ್ಯಕ್ಷ ಯುಟಿ ಖಾದರ್, ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷ ಜಯ ರಾಜ ಕುದ್ರೋಳಿ, ಕೋಶಾಧಿಕಾರಿ ಪದ್ಮರಾಜ್ ಆರ್., ಬಿಜೆಪಿಯ ಜಿಲ್ಲ...
ಅಮಿತ್ ಶಾ ವಿರುದ್ಧ ನಿವೃತ್ತ ನ್ಯಾಯಮೂರ್ತಿಗಳ ಸಹಿ ಅಭಿಯಾನ ‘ಅನುಚಿತ’: ಕಿರಣ್ ರಿಜಿಜು

ಅಮಿತ್ ಶಾ ವಿರುದ್ಧ ನಿವೃತ್ತ ನ್ಯಾಯಮೂರ್ತಿಗಳ ಸಹಿ ಅಭಿಯಾನ ‘ಅನುಚಿತ’: ಕಿರಣ್ ರಿಜಿಜು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಆರಂಭಿಸಿದ ಸಹಿ ಅಭಿಯಾನವನ್ನು ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು “ಅನುಚಿತ, ಅಸಂವಿಧಾನಿಕ” ಎಂದು ಟೀಕಿಸಿದ್ದಾರೆ. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಸಂಸದೀಯ ವ್ಯವಸ್ಥೆ” ಎಂಬ ವಿಷಯದ ಕುರಿತಂತೆ ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಉಪರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಾರಂಭವಾದ ಸಹಿ ಅಭಿಯಾನವು ಸಂಪೂರ್ಣವಾಗಿ ರಾಜಕೀಯ ವಿಷಯವಾಗಿದ್ದು, ನಿವೃತ್ತ ನ್ಯಾಯಾಧೀಶರ ನಡೆ ದೇಶಕ್ಕೆ ತಪ್ಪು ಸಂದೇಶ ನೀಡುತ್ತದೆ ಎಂದು ರಿಜಿಜು ಅಭಿಪ್ರಾಯಪಟ್ಟರು. “ಅವರು ಹುದ್ದೆಯಲ್ಲಿ ಇದ್ದಾಗಲೂ ಸೈದ್ಧಾಂತಿಕವಾಗಿ ಪಕ್ಷಪಾತ ಹೊಂದಿದ್ದಿರಬಹುದು” ಎಂದು ವ್ಯಂಗ್ಯವಾಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿರುವುದನ್ನು ಖಂಡಿಸಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ಅವರು ತೆರೆದ ಟೀಕೆಗೆ ಒಳಪಡಿಸಿದರ...

ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡಾ. ಶರಣಪ್ರಕಾಶ್‌ ಪಾಟೀಲ್‌

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ ವಿಷಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಉತ್ತಮ ಯೋಜನೆ ರೂಪಿಸಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌ ಪಾಟೀಲ್ ತಿಳಿಸಿದ್ದಾರೆ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಆವರಣದಲ್ಲಿರುವ ಡಾ. ಎಸ್‌. ರಾಮಚಂದ್ರ ಆಡಿಟೋರಿಯಂನಲ್ಲಿ ಇಂಡಿಯನ್‌ ಡೆಂಟಲ್‌ ಅಸೋಸಿಯೇಷನ್‌ ಆಯೋಜಿಸಿದ ಡೆಂಟಿಸ್ಟ್‌ ಶೃಂಗಸಭೆ-2025 ರಲ್ಲಿ ಸಚಿವರು ಭಾಷಣ ಮಾಡಿದರು. ದಂತವೈದ್ಯಕೀಯ ಎನ್ನುವುದು ಅತ್ಯಂತ ಸೂಕ್ಷ್ಮ ಮತ್ತು ನಿಖರತೆ ಹೆಚ್ಚು ಕೋರುವ ವಿಷಯವಾಗಿದೆ. ದಂತ ಆರೋಗ್ಯದ ಬಗ್ಗೆ ಜನಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಹಲ್ಲು ನೋವು ಬಂದರೆ ಅದನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ಇದು ಎಲ್ಲರಿಗೂ ಅನುಭವಕ್ಕೆ ಬಂದಿರಬಹುದು. ಇದಕ್ಕೆ ಚಿಕಿತ್ಸೆ ನೀಡುವ ದಂತ...
ರಾಜ್ಯ ಡಿಜಿ-ಐಜಿಯಾಗಿ ಎಂ. ಸಲೀಂ ; ಸರ್ಕಾರದ ಆದೇಶ

ರಾಜ್ಯ ಡಿಜಿ-ಐಜಿಯಾಗಿ ಎಂ. ಸಲೀಂ ; ಸರ್ಕಾರದ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. 1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತಿಯಾದ ಬಳಿಕ ಡಿಜಿಪಿ ಹಾಗೂ ಐಜಿಪಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು. ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ಡಾ. ಸಲೀಂ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ, ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ತಕ್ಷಣ ನಿಯಮಿತ ಡಿಜಿಪಿ ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ....
ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ, ಕಾಂಗ್ರೆಸ್‌ಗೆ ನಾಡಹಬ್ಬ ಎಂದರೆ ವೋಟಿನ ಡಬ್ಬ ಬಿಜೆಪಿಯಿಂದ ಹೋರಾಟ

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ, ಕಾಂಗ್ರೆಸ್‌ಗೆ ನಾಡಹಬ್ಬ ಎಂದರೆ ವೋಟಿನ ಡಬ್ಬ ಬಿಜೆಪಿಯಿಂದ ಹೋರಾಟ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು,: ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈ ಕುರಿತು ಜನತೆಗೆ ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈಗ ಅವರೇ ಹೋರಾಟಕ್ಕೆ ಸೇರಿದ್ದಾರೆ. ಕಾಂಗ್ರೆಸ್‌ ಪರವಾಗಿ ಅವರು ಹೇಗೆ ಹೋರಾಡುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಇದರಿಂದಾಗಿ ಕಾಂಗ್ರೆಸ್‌ ಮಾಡುತ್ತಿರುವ ಹೋರಾಟ ಸುಳ್ಳು ಎಂದು ಸಾಬೀತಾಗಿದೆ. ಬಿಜೆಪಿ ಮೇಲೆ ಮಾಡಿರುವ ಸುಳ್ಳು ಎಂದು ಸಾಬೀತಾಗಿದೆ. ಮತಗಳ್ಳತನ ಕಾಂಗ್ರೆಸ್‌ನ ಸಂಸ್ಕೃತಿಯಾಗಿದೆ ಎಂದು ತಿಳಿದುಬಂದಿದೆ. ಸಿ.ಎಂ.ಇಬ್ರಾಹಿಂ ಬಾದಾಮಿ ಕ್ಷೇತ್ರದಲ್ಲಿ ಮತ ಖರೀದಿಸಿದ್ದೇನೆಂದು ಹೇಳಿದ್ದಾರೆ. ಈ ಬಗ್ಗೆ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್‌ ಒಬ್ಬಂಟಿಯಾಗಿ ಬಿಹಾರ ಚುನಾವಣೆಗೆ ಹೋದರೆ, ಸಿಎಂ ಸಿದ್ದರಾಮಯ್ಯ ತಂಡ ಬೇರೆ ಕಡೆ ಚುನಾವಣೆಗೆ ಹೋಗಿದೆ. ಡಿ.ಕೆ.ಶಿವಕುಮಾರ್‌ ಬಂಡೆಯಂತೆ ಆಗುತ್ತಿದ್ದಾರೆ. ...
ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಡಾ. ಶರಣಪ್ರಕಾಶ್‌ ಪಾಟೀಲ್

ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಡಾ. ಶರಣಪ್ರಕಾಶ್‌ ಪಾಟೀಲ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಕೊಚ್ಚಿ: ಬದುಕಿನಲ್ಲಿ ಯಶಸ್ಸು ಸಾಧಿಸಿಬೇಕಾದರೆ ನಿರಂತರ ಕಲಿಕೆ ಮುಖ್ಯ. ಇದರ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವೈಫಲ್ಯಕ್ಕೆ ಹೆದರಬಾರದು, ಕಲಿಕೆ ಮತ್ತು ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌ ಪಾಟೀಲ್ ತಿಳಿಸಿದ್ದಾರೆ. ಕೇರಳ ಸರ್ಕಾರ ಶುಕ್ರವಾರ ಆಯೋಜಿಸಿದ್ದ ಜಾಗತಿಕ ಕೌಶಲ್ಯ ಶೃಂಗಸಭೆಯಲ್ಲಿ ಡಾ. ಪಾಟೀಲ್ ಭಾಷಣ ಮಾಡಿದರು. ಪ್ರತಿಯೊಬ್ಬ ಉದ್ಯಮಿ, ಸಾಧಕ ಮತ್ತು ನಾಯಕ ಯಶಸ್ಸನ್ನು ಕಾಣುವ ಮೊದಲು ವೈಫಲ್ಯವನ್ನು ಕಂಡಿದ್ದಾರೆ. ಸೋಲೇ ಗೆಲುವಿನ ಮೆಟ್ಟಿಲು ಎಂಬುದನ್ನು ವಿದ್ಯಾರ್ಥಿಗಳು ಮರೆಯಬಾರದು ಎಂದರು. "ವೈಫಲ್ಯವು ಅಂತ್ಯವಲ್ಲ - ಇದು ಯಶಸ್ಸಿನ ಮೆಟ್ಟಿಲು. ಸರ್ಕಾರಗಳು, ಕೈಗಾರಿಕೆ ಮತ್ತು ಶೈಕ್ಷಣಿಕ ಸಂಸ್ಥೆಗಳು ನೀತಿಗಳು ಮತ್ತು ವಿಧಾನಗಳನ್ನು ರೂಪಿಸುತ್ತದೆ, ಆದರೆ ನಿಜವಾದ ಬದಲಾವಣೆಯು, ವಿಭಿನ್ನವಾಗಿ ಕನಸು ಕಾಣುವ, ಮತ್ತು ಕಾರ್ಯನಿರ್ವಹಿಸುವ ಧೈರ್ಯವನ್...