Friday, June 19

Focus

ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಹಿನ್ನೆಲೆಯಲ್ಲಿ ಮೂರು ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಒಂದು ಸ್ಥಾನವನ್ನು ಬಿಜೆಪಿ ಪಡೆದುಕೊಂಡಿದೆ.ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಾಮಪತ್ರ ಹಿಂಪಡೆಯುವ ಅವಧಿ ಮುಕ್ತಾಯಗೊಂಡ ಬಳಿಕ ಯಾವುದೇ ಅಭ್ಯರ್ಥಿ ಎದುರಾಳಿಯಾಗಿ ಉಳಿಯದ ಕಾರಣ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ಘೋಷಿಸಿದರು.ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಅವರು ಈ ಕುರಿತು ಅಧಿಕೃತ ಘೋಷಣೆ ಮಾಡಿದರು.ರಾಜ್ಯಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಮೂರು ಸ್ಥಾನಗಳು ಲಭಿಸಿರುವುದು ಹಾಗೂ ಬಿಜೆಪಿ ಒಂದು ಸ್ಥಾನ ಪಡೆದಿರುವುದು ವಿಧಾನಸಭೆಯಲ್ಲಿನ ಪಕ್ಷಗಳ ಸಂಖ್ಯಾಬಲದ ಆಧಾರದಲ್ಲಿ ನಡೆದಿದೆ....
ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ.ರವಿ ಪ್ರಶ್ನೆ

ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ.ರವಿ ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ? ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕೇಳಿದ್ದಾರೆ. ಆಗ ಇಲ್ಲದ ಕಂಡಿಷನ್ ಈಗ ಯಾಕೆ ಎಂದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಕಾ ಪಾಟೀಲ್ ನಿಂಗೂ ಫ್ರೀ, ಜಮೀರ್ ಅಹ್ಮದ್, ಮಹದೇವಪ್ಪ ನಿಂಗೂ ಫ್ರೀ ಎಂದು ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯನವರು ತಿಳಿಸಿದ್ದರು ಎಂದು ಗಮನ ಸೆಳೆದರು. 10 ಕೆಜಿ ಅಕ್ಕಿ ಕೊಟ್ಟಿದ್ದೀರಾ? ಮೋದಿಯವರು 5 ಕೆಜಿ ಅಕ್ಕಿ ಕೊಡದೇ ಇದ್ದರೆ, ನಿಮ್ಮನ್ನೇ ನಂಬಿದ್ದರೆ ಜನರು ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಮಲಗಬೇಕಿತ್ತು ಎಂದು ತಿಳಿಸಿದರು. ನಿಮ್ಮ ಕಂಡಿಷನ್ ಯಾಕೆ, ಖಜಾನೆ ಖಾಲಿ ಎಂಬುದು ಜನರಿಗೆ ಗೊತ್ತಿದೆ ಎಂದು ತಿಳಿಸಿದರು.ಫಲಾನುಭವಿ ಜನರನ್ನು ಕಡಿಮೆ ಮಾಡಲು ಕಂಡಿಷನ್ ಹಾಕುತ್ತೀರಿ. ನಿಮ್ಮ ಹಳೆ ಭಾಷಣವನ್ನು ಜನರು ಕೇಳಿಸಿಕೊಳ್ಳುತ್ತಾರೆ ಎಂದರು. ಇದಕ್ಕೆ ಸೂಕ್ತ ಸಮಯದಲ್ಲಿ ಜನರು ಉತ್ತರ ಕೊಡುತ್ತಾರೆ ಎಂದು ಹೇಳಿದರು. ನಮಗೂ ಗ್ಯಾರಂಟಿ ಯೋಜನೆಗಳಿಗೂ ಸಂಬಂಧ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದರೆ, ನಾವು ಪ್ರಶ್ನ...
ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೆಲೂನ್‌ಗಳು, ಸ್ಪಾ/ಮಸಾಜ್ ಕೇಂದ್ರಗಳು, ಬ್ಯೂಟಿ ಪಾರ್ಲರ್‌ಗಳು, ಯುನಿಸೆಕ್ಸ್ ಸಲೂನ್‌ಗಳು ಹಾಗೂ ಜಿಮ್ನೇಷಿಯಂಗಳ ನಿಯಂತ್ರಣಕ್ಕಾಗಿ ಪ್ರತ್ಯೇಕ ಕಾನೂನು ಜಾರಿಗೆ ತರಲು ಕರ್ನಾಟಕ ಕಾನೂನು ಆಯೋಗ ಸರ್ಕಾರಕ್ಕೆ ಮಹತ್ವದ ಶಿಫಾರಸು ಮಾಡಿದೆ. ಮಂಗಳೂರಿನ ಮಾಜಿ ಸರ್ಕಾರಿ ವಕೀಲ ಮನೋರಾಜ್ ರಾಜೀವ ಅವರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಆಯೋಗ ತನ್ನ 76ನೇ ವರದಿಯಲ್ಲಿ ಈ ಶಿಫಾರಸುಗಳನ್ನು ನೀಡಿದೆ.ಪ್ರಸ್ತುತ ರಾಜ್ಯದಲ್ಲಿ ಸ್ಪಾ ಮತ್ತು ಮಸಾಜ್ ಕೇಂದ್ರಗಳ ಕಾರ್ಯನಿರ್ವಹಣೆಯನ್ನು ನೇರವಾಗಿ ನಿಯಂತ್ರಿಸುವ ಸ್ಪಷ್ಟ ಕಾನೂನು ಇಲ್ಲ. ಈ ಹಿನ್ನೆಲೆಯಲ್ಲಿ ಆಯೋಗವು ದೇಶ-ವಿದೇಶಗಳ ಕಾನೂನು ಮಾದರಿಗಳನ್ನು ಅಧ್ಯಯನ ನಡೆಸಿದ್ದು, ವಿಶೇಷವಾಗಿ ಸಿಂಗಾಪುರ್, ಅಮೆರಿಕದ ಹಲವು ರಾಜ್ಯಗಳು ಹಾಗೂ ಫಿಲಿಪ್ಪೀನ್ಸ್‌ನಲ್ಲಿ ಜಾರಿಯಲ್ಲಿರುವ ನಿಯಮಾವಳಿಗಳನ್ನು ಪರಿಶೀಲಿಸಿದೆ.ಕಾನೂನು ಆಯೋಗವು ಗ್ರೇಟರ್ ಬೆಂಗಳೂರು ಗವರ್ನನ್ಸ್ ಕಾಯ್ದೆ-2024ಕ್ಕೆ ತಿದ್ದುಪಡಿ ತಂದು, ಆಯುರ್ವೇದ ಆರೋಗ್ಯ ಕೇಂದ್ರಗಳು, ಸ್ಪಾ, ಯುನಿಸೆಕ್ಸ್ ಸಲೂನ್‌ಗಳು, ಬ್ಯೂಟಿ ಪಾರ್ಲರ್‌ಗಳು ಮತ್ತ...
ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ/ಬೆಂಗಳೂರು: ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಭವಿಷ್ಯದ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರದ ಮುಂದೆ ಹಲವು ಮಹತ್ವದ ಯೋಜನೆಗಳಿಗೆ ತ್ವರಿತ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಡಿ.ಕೆ. ಶಿವಕುಮಾರ್, ಬೆಂಗಳೂರು ಮೆಟ್ರೋ ವಿಸ್ತರಣೆ, ಡಬಲ್ ಡೆಕ್ಕರ್ ಕಾರಿಡಾರ್, ಮೆಟ್ರೋ ಹಂತ-2ರ ಪರಿಷ್ಕೃತ ವೆಚ್ಚಗಳಿಗೆ ಅನುಮೋದನೆ, ಹಂತ-3ಎ ಯೋಜನೆ ಹಾಗೂ ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ (RRTS) ಸೇರಿದಂತೆ ಹಲವು ಬಾಕಿ ಪ್ರಸ್ತಾವನೆಗಳ ಕುರಿತು ಚರ್ಚೆ ನಡೆಸಿದರು.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅರ್ಬನ್ ಚಾಲೆಂಜ್ ಫಂಡ್ ಅಡಿಯಲ್ಲಿ ಬಾಕಿ ಇರುವ ಯೋಜನೆಗಳಿಗೂ ಶೀಘ್ರ ಅನುಮೋದನೆ ನೀಡುವಂತೆ ಕೇಂದ್ರವನ್ನು ಕೋರಿರುವುದಾಗಿ ತಿಳಿಸಿದ್ದಾರೆ.ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಬೆಳವಣಿಗೆ ಕೇಂದ್ರಗಳನ್ನು ...
MFIಗಳಿಗೆ ಕ್ರೆಡಿಟ್ ಗ್ಯಾರಂಟಿ ಯೋಜನೆ ವಿಸ್ತರಣೆ; ಸಾಲ ಮಿತಿ ₹1,000 ಕೋಟಿಗೆ ಏರಿಕೆ

MFIಗಳಿಗೆ ಕ್ರೆಡಿಟ್ ಗ್ಯಾರಂಟಿ ಯೋಜನೆ ವಿಸ್ತರಣೆ; ಸಾಲ ಮಿತಿ ₹1,000 ಕೋಟಿಗೆ ಏರಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಕೇಂದ್ರ ಸರ್ಕಾರವು ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ (MFI) ನೆರವಾಗುವ ಕ್ರೆಡಿಟ್ ಗ್ಯಾರಂಟಿ ಯೋಜನೆ-2.0 (CGSMFI-2.0) ಅವಧಿಯನ್ನು 2026ರ ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಅಥವಾ ₹20,000 ಕೋಟಿ ಮೌಲ್ಯದ ಗ್ಯಾರಂಟಿ ಮಿತಿಯನ್ನು ತಲುಪುವವರೆಗೆ ಯೋಜನೆ ಜಾರಿಯಲ್ಲಿರಲಿದೆ.ಇದರ ಜೊತೆಗೆ, ದೊಡ್ಡ NBFC-MFIಗಳು ಮತ್ತು MFIಗಳಿಗೆ ನೀಡಲಾಗುವ ಗರಿಷ್ಠ ಸಾಲ ಮಿತಿಯನ್ನು ₹300 ಕೋಟಿಯಿಂದ ₹1,000 ಕೋಟಿಗೆ ಹೆಚ್ಚಿಸಲಾಗಿದೆ. ಈ ಕ್ರಮದಿಂದ ಮೈಕ್ರೋಫೈನಾನ್ಸ್ ಕ್ಷೇತ್ರಕ್ಕೆ ಹೆಚ್ಚಿನ ಸಾಲ ಹರಿವು ದೊರೆಯುವ ನಿರೀಕ್ಷೆಯಿದೆ.2026ರ ಮಾರ್ಚ್‌ನಲ್ಲಿ ಆರಂಭವಾದ ಈ ಯೋಜನೆಯಡಿ, ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು MFIಗಳಿಗೆ ನೀಡುವ ಸಾಲಗಳಿಗೆ ನ್ಯಾಷನಲ್ ಕ್ರೆಡಿಟ್ ಗ್ಯಾರಂಟಿ ಟ್ರಸ್ಟಿ ಕಂಪನಿ ಲಿಮಿಟೆಡ್ (NCGTC) ಮೂಲಕ ಗ್ಯಾರಂಟಿ ಸೌಲಭ್ಯ ಒದಗಿಸಲಾಗುತ್ತದೆ. ಈ ಸಂಸ್ಥೆಗಳು ನಂತರ ಕಡಿಮೆ ಆದಾಯದ ವರ್ಗದ ಸಣ್ಣ ಸಾಲಗಾರರಿಗೆ ಸಾಲ ವಿತರಿಸುತ್ತವೆ.ಸರ್ಕಾರದ ಮಾಹಿತಿ ಪ್ರಕಾರ, ಯೋಜನೆಯಡಿ ಈಗಾಗಲೇ ₹770 ಕೋಟಿ ಮೌಲ್ಯದ ಸಾಲಗಳಿಗೆ ಅನುಮೋದನೆ ನೀಡಲಾಗಿದೆ.ಯೋಜನೆಯಡಿಯಲ್ಲಿ ಸ...
ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೇಶೀಯ ಕೈಗಾರಿಕೆಗಳು ಹಾಗೂ ಭಾರತೀಯ ರಫ್ತುದಾರರನ್ನು ಅನ್ಯಾಯದ ವ್ಯಾಪಾರ ಪದ್ಧತಿಗಳಿಂದ ರಕ್ಷಿಸಲು ಪಾರದರ್ಶಕ ಮತ್ತು ನಿಯಮಾಧಾರಿತ ವ್ಯಾಪಾರ ಪರಿಹಾರ ಕ್ರಮಗಳನ್ನು ಮುಂದುವರಿಸಲಾಗುತ್ತಿದೆ ಎಂದು ವ್ಯಾಪಾರ ಪರಿಹಾರಗಳ ಮಹಾನಿರ್ದೇಶನಾಲಯ (DGTR) ತಿಳಿಸಿದೆ.ನವದೆಹಲಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ DGTR ಹೆಚ್ಚುವರಿ ಕಾರ್ಯದರ್ಶಿ ಹಾಗೂ ಮಹಾನಿರ್ದೇಶಕ ಅಮಿತಾಭ್ ಕುಮಾರ್, ಡಂಪಿಂಗ್ ವಿರೋಧಿ, ಸಬ್ಸಿಡಿ ವಿರೋಧಿ ಮತ್ತು ಸುರಕ್ಷತಾ ತನಿಖೆಗಳನ್ನು ಭಾರತೀಯ ಕಾನೂನುಗಳು ಹಾಗೂ WTO ನಿಯಮಾವಳಿಗಳ ಪ್ರಕಾರ ನಡೆಸಲಾಗುತ್ತಿದೆ ಎಂದು ಹೇಳಿದರು.ಈ ಕ್ರಮಗಳ ಉದ್ದೇಶ ಆಮದುಗಳನ್ನು ತಡೆಯುವುದಲ್ಲ, ಬದಲಾಗಿ ದೇಶೀಯ ಕೈಗಾರಿಕೆಗಳಿಗೆ ನ್ಯಾಯಯುತ ಸ್ಪರ್ಧಾತ್ಮಕ ವಾತಾವರಣ ಕಲ್ಪಿಸುವುದಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಡಂಪ್ ಮಾಡಿದ ಸರಕುಗಳು, ಸಬ್ಸಿಡಿ ಪಡೆದ ಆಮದುಗಳು ಮತ್ತು ಆಮದುಗಳ ಹಠಾತ್ ಏರಿಕೆಯಿಂದ ಉಂಟಾಗುವ ಪರಿಣಾಮಗಳನ್ನು ನಿಯಂತ್ರಿಸಲು ಈ ವ್ಯವಸ್ಥೆ ನೆರವಾಗುತ್ತದೆ ಎಂದರು.DGTR ತನಿಖೆಗಳು ದತ್ತಾಂಶ ಪರಿಶೀಲನೆ, ಪಾಲುದಾರರ ಸಮಾಲೋಚನೆ, ಸಾರ್ವಜನಿಕ ವಿಚಾರಣ...
ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

Focus, ಪ್ರಮುಖ ಸುದ್ದಿ, ರಾಜ್ಯ
​ಮಂಗಳೂರು : ತುಳುನಾಡು ಶಾಂತಿ, ಸಹಬಾಳ್ವೆ ಮತ್ತು ಭ್ರಾತೃತ್ವದ ನೆಲೆವೀಡು. ನಮ್ಮ ಈ ಪುಣ್ಯಭೂಮಿಯ ಪರಂಪರೆ ಮತ್ತು ಸಂಸ್ಕೃತಿ ನಮಗೆ ಹೆಮ್ಮೆಯ ವಿಷಯ. ಆದರೆ, ಇತ್ತೀಚೆಗೆ 'ಅನಿತಾ ಕಾಸರಗೋಡು' ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಅತ್ಯಂತ ಆಕ್ಷೇಪಾರ್ಹವಾಗಿದ್ದು, ನಮ್ಮ ಸುಂದರ ಸಮಾಜದ ಸೌಹಾರ್ದತೆಯನ್ನು ಹಾಳುಮಾಡುವ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುವಂತಿದೆ. ಇಂತಹ ಅಮಾನವೀಯ ಕೃತ್ಯವು ಪ್ರತಿಯೊಬ್ಬ ಶಾಂತಿಪ್ರಿಯ ನಾಗರಿಕನಿಗೂ ನೋವನ್ನುಂಟು ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಮಂಗಳೂರು ನಗರ ಪೊಲೀಸ್ ಆಯುಕ್ತರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅವರು ಕೂಡಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಆರೋಗ್ಯ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಕೂಡಲೇ ಮಧ್ಯಪ್ರವೇಶಿಸಿ, ದ್ವೇಷ ಭಾಷಣ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂ...
ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ದೆಹಲಿಯ 10 ಜನಪಥ್‌ನಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು.ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಶಿವಕುಮಾರ್ ಅವರನ್ನು ಗಾಂಧಿ ಕುಟುಂಬದ ನಾಯಕರು ಆತ್ಮೀಯವಾಗಿ ಸ್ವಾಗತಿಸಿ ಶುಭಾಶಯ ಕೋರಿದರು. ರಾಜ್ಯದ ರಾಜಕೀಯ ಬೆಳವಣಿಗೆಗಳು, ಸರ್ಕಾರದ ಮುಂದಿನ ಆದ್ಯತೆಗಳು ಹಾಗೂ ಸಂಘಟನಾ ವಿಚಾರಗಳ ಕುರಿತು ಚರ್ಚೆ ನಡೆದಿರುವ ಸಾಧ್ಯತೆ ಇದೆ. ಸಿಎಂ @DKShivakumar ಅವರು ನವದೆಹಲಿಯ 10, ಜನಪತ್ ನಿವಾಸದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭಾ ವಿರೋಧ ಪಕ್ಷದ ನಾಯಕರಾದ @RahulGandhi , ಎಐಸಿಸಿ ಪ್ರಧಾನ ಕಾರ್ಯದರ್ಶಿ @priyankagandhi ಅವರನ್ನು...
PoKನಲ್ಲಿ ಪಾಕಿಸ್ತಾನ ಸೇನಾ ಹೆಲಿಕಾಪ್ಟರ್ ಪತನ; ಸಿಬ್ಬಂದಿ ದುರ್ಮರಣ

PoKನಲ್ಲಿ ಪಾಕಿಸ್ತಾನ ಸೇನಾ ಹೆಲಿಕಾಪ್ಟರ್ ಪತನ; ಸಿಬ್ಬಂದಿ ದುರ್ಮರಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಇಸ್ಲಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಮುಜಾಫರಾಬಾದ್ ಸಮೀಪ ಪಾಕಿಸ್ತಾನ ಸೇನೆಗೆ ಸೇರಿದ ಯುದ್ಧ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಪತನಗೊಂಡು, ಅದರಲ್ಲಿದ್ದ ಎಲ್ಲಾ ಸಿಬ್ಬಂದಿ ಮೃತಪಟ್ಟಿದ್ದಾರೆ.ಐಎಸ್‌ಪಿಆರ್‌ ನೀಡಿರುವ ಮಾಹಿತಿ ಪ್ರಕಾರ, ತುರ್ತು ಕಾರ್ಯಾಚರಣೆಗಾಗಿ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ವೈಫಲ್ಯ ಕಾಣಿಸಿಕೊಂಡಿದ್ದು, ನಿಯಂತ್ರಣ ತಪ್ಪಿ ನೆಲಕ್ಕೆ ಅಪ್ಪಳಿಸಿದೆ. ಅಪಘಾತದ ಬಳಿಕ ಇಂಧನ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ.ದುರಂತದಲ್ಲಿ ಇಬ್ಬರು ಪೈಲಟ್‌ಗಳು ಸೇರಿದಂತೆ ನಾಲ್ಕು ರಿಂದ ಐದು ಮಂದಿ ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಇತ್ತೀಚೆಗೆ PoKಯ ರಾವಲಕೋಟ್ ಮತ್ತು ಮೀರ್‌ಪುರ ಪ್ರದೇಶಗಳಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೇನೆಯು ಕಣ್ಗಾವಲು ಮತ್ತು ಕಾರ್ಯಾಚರಣೆಗಳಿಗೆ ಹೆಲಿಕಾಪ್ಟರ್‌ಗಳನ್ನು ಬಳಸುತ್ತಿತ್ತು. ಈ ಸಂದರ್ಭದಲ್ಲೇ ಸಂಭವಿಸಿದ ಅಪಘಾತವು ಪಾಕಿಸ್ತಾನ ಸೇನೆಗೆ ಹಿನ್ನಡೆಯಾಗಿ ಪರಿಣಮಿಸಿದೆ.21 Pakista...
NCR ನಲ್ಲಿ ರಸ್ತೆ ಧೂಳು ಮಾಲಿನ್ಯ ನಿಯಂತ್ರಣಕ್ಕೆ CSIR-CRRI, ಹರಿಯಾಣ ಸರ್ಕಾರ ಒಪ್ಪಂದ

NCR ನಲ್ಲಿ ರಸ್ತೆ ಧೂಳು ಮಾಲಿನ್ಯ ನಿಯಂತ್ರಣಕ್ಕೆ CSIR-CRRI, ಹರಿಯಾಣ ಸರ್ಕಾರ ಒಪ್ಪಂದ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (NCR) ರಸ್ತೆ ಧೂಳು ಮಾಲಿನ್ಯವನ್ನು ಕಡಿಮೆ ಮಾಡಿ ಗಾಳಿಯ ಗುಣಮಟ್ಟ ಸುಧಾರಿಸುವ ಉದ್ದೇಶದಿಂದ CSIR-ಕೇಂದ್ರ ರಸ್ತೆ ಸಂಶೋಧನಾ ಸಂಸ್ಥೆ (CSIR-CRRI) ಹರಿಯಾಣ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ.“ನಗರ ರಸ್ತೆಗಳ ನೆಲಗಟ್ಟು ಮತ್ತು ಹಸಿರುೀಕರಣಕ್ಕಾಗಿ ಪ್ರಮಾಣಿತ ಚೌಕಟ್ಟಿನ ಅನುಷ್ಠಾನ” ಯೋಜನೆಯನ್ನು CSIR-CRRI ಮತ್ತು ನವದೆಹಲಿಯ ಯೋಜನಾ ಮತ್ತು ವಾಸ್ತುಶಿಲ್ಪ ಶಾಲೆ (SPA), ವಾಯು ಗುಣಮಟ್ಟ ನಿರ್ವಹಣಾ ಆಯೋಗದ (CAQM) ಮಾರ್ಗದರ್ಶನದಲ್ಲಿ ಜಾರಿಗೊಳಿಸಲಿವೆ.NCR ಪ್ರದೇಶದಲ್ಲಿ ಕಣ ಮಾಲಿನ್ಯಕ್ಕೆ ರಸ್ತೆ ಧೂಳು ಪ್ರಮುಖ ಕಾರಣವಾಗಿದ್ದು, ವೈಜ್ಞಾನಿಕ ರಸ್ತೆ ವಿನ್ಯಾಸ, ಉತ್ತಮ ನಿರ್ವಹಣೆ ಮತ್ತು ಹಸಿರು ಮೂಲಸೌಕರ್ಯಗಳ ಮೂಲಕ ಧೂಳಿನ ಹೊರಸೂಸುವಿಕೆ ಕಡಿಮೆ ಮಾಡುವ ಗುರಿಯನ್ನು ಯೋಜನೆ ಹೊಂದಿದೆ.ಯೋಜನೆಯಡಿ ಉತ್ತಮ ರಸ್ತೆ ವಿನ್ಯಾಸ ಮಾನದಂಡಗಳು, ರಸ್ತೆ ಬದಿಗಳಲ್ಲಿ ಹಸಿರು ವಲಯ ಅಭಿವೃದ್ಧಿ, ರಸ್ತೆ ಆಸ್ತಿ ನಿರ್ವಹಣಾ ವ್ಯವಸ್ಥೆ (RAMS) ಬಲಪಡಿಸುವುದು ಹಾಗೂ ಆಧುನಿಕ ನಿರ್ಮಾಣ ತಂತ್ರಜ್ಞಾನಗಳ ಬಳಕೆಗೆ ಒತ್ತು ನೀಡಲಾಗುವುದು.CSIR-...