Wednesday, May 13

Focus

ಕರ್ನಾಟಕದಲ್ಲಿ 2024-25ರ ಹಿಂಗಾರು ಬೆಳೆ ಕಡಲೆಗೆ ಬೆಂಬಲ ಬೆಲೆ; ಕೇಂದ್ರದ ಅನುಮತಿ

ಕರ್ನಾಟಕದಲ್ಲಿ 2024-25ರ ಹಿಂಗಾರು ಬೆಳೆ ಕಡಲೆಗೆ ಬೆಂಬಲ ಬೆಲೆ; ಕೇಂದ್ರದ ಅನುಮತಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಕರ್ನಾಟಕ ಸರ್ಕಾರದ ಪ್ರಸ್ತಾವನೆಯಂತೆ ಕರ್ನಾಟಕದಲ್ಲಿ 2024-25 ರ ರಾಬಿ ಋತುವಿನಲ್ಲಿ ( ಹಿಂಗಾರು ಬೆಳೆ) ಬೆಳೆದ ಕಡಲೆಯನ್ನು ಬೆಂಬಲ ಬೆಲೆ ಯೋಜನೆಯಡಿ Price Support Scheme (PSS) ಖರೀದಿಗೆ ಕೇಂದ್ರ ಸರ್ಕಾರದ ಕೃಷಿ ಸಚಿವಾಲಯ ಅನುಮತಿ ನೀಡಿದೆ.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದಲ್ಲಿ ಕಡಲೆ ಬೆಳೆದ ರೈತರ ಪರಿಸ್ಥಿತಿ ಅರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ರೈತರ ಹಿತ ದೃಷ್ಟಿಯಿಂದ ರೈತಪರ ನಿರ್ಣಯ ತೆಗೆದುಕೊಂಡಿದೆ ಎಂದು ತಿಳಿಸಿದ್ಫ್ದಾರೆ.ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ msp ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಂಡಿದ್ದು ರಾಜ್ಯ ಸರ್ಕಾರ ತನ್ನ ಪ್ರಸ್ತಾವನೆಯಲ್ಲಿ ನಮೂದಿಸಿದಂತೆ 96,498 ಮೆಟ್ರಿಕ್ ಟನ್ ಗುಣಮಟ್ಟದ ಕಡಲೆ ಕಾಳನ್ನು ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದವರು ತಿಳಿಸಿದ್ದಾರೆ.ಈಗ ಜಿಲ್ಲಾವಾರು 90 ದಿನದೊಳಗಾಗಿ‌ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ರೈತರಿಂದ ಖರೀದಿ ಮಾಡಿ, ರೈತರ...
ಮೈಸೂರು: ಕಾಲೇಜು ಕಟ್ಟಡ ದುರಸ್ತಿ ವೇಳೆ ಅವಘಡ; ಕಾರ್ಮಿಕ ಸಾವು

ಮೈಸೂರು: ಕಾಲೇಜು ಕಟ್ಟಡ ದುರಸ್ತಿ ವೇಳೆ ಅವಘಡ; ಕಾರ್ಮಿಕ ಸಾವು

Focus, ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಘೋರ ಅನಾಹುತ ಸಂಭವಿಸಿದೆ. ಕಾಲೇಜಿನ ಕಟ್ಟಡದ ಮೇಲ್ಛಾವಣಿ ಕುಸಿದು ಸಂಭವಿಸಿದ ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.ಮೃತನನ್ನು 32 ವರ್ಷದ ಕಾರ್ಮಿಕ, ಮೊಹಮ್ಮದ್ ಸದ್ದಾಂ ಎಂದು ಗುರ್ತಿಸಲಾಗಿದೆ. ಈತ ಮೈಸೂರಿನ ಗೌಸಿಯಾ ನಗರದ ನಿವಾಸಿ ಎನ್ನಲಾಗಿದೆ. ಸುಮಾರು 80 ವರ್ಷಗಳ ಹಳೆಯ ಕಟ್ಟಡದ ದುರಸ್ಥಿ ಕಾರ್ಯ ನಡೆಯುತ್ತಿರುವಾಗ ಮಂಗಳವಾರ ಸಂಜೆ ಕಟ್ಟಡದ ಮೇಲ್ಛಾವಣಿ ಕುಸಿದಿದೆ. ಆ ಸಂದರ್ಭದಲ್ಲಿ ಕಟ್ಟಡದಲ್ಲಿ 15 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನನ್ನ ರಕ್ಷಿಸಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸುದೀರ್ಘ ಕಾರ್ಯಾಚರಣೆ ನಡೆಸಿದ್ದರು....
ಮಹಾಕುಂಭಮೇಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ; ಮಲ್ಲಿಕಾರ್ಜುನ ಖರ್ಗೆ ವಿರುದ್ದ ಕೇಸ್

ಮಹಾಕುಂಭಮೇಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ; ಮಲ್ಲಿಕಾರ್ಜುನ ಖರ್ಗೆ ವಿರುದ್ದ ಕೇಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಪಾಟ್ನಾ: ಮಹಾಕುಂಭದ ಕುರಿತು ವಿವಾದಾತ್ಮಕ ಹೇಳಿಜೆ ನೀಡಿರುವ ಆರೋಪ ಕುರಿತಂತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಪ್ರಕರಣ ದಾಖಲಾಗಿದೆ. ಬಿಹಾರದ ಮುಜಾಫರ್‌ಪುರ ಜಿಲ್ಲಾ ನ್ಯಾಯಾಲಯದ ವಕೀಲ ಸುಧೀರ್ ಕುಮಾರ್ ಓಜಾ ಅವರು ದೂರು ದಾಖಲಿಸಿದ್ದಾರೆ.ಖರ್ಗೆ ಅವರು ಉದ್ದೇಶಪೂರ್ವಕವಾಗಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಮಧ್ಯಪ್ರದೇಶದ ಮ್ಹೋ ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಖರ್ಗೆ ಅವರು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ದೂರು ನೀಡಲಾಗಿದೆ. ಇದು ಸನಾತನ ಧರ್ಮವನ್ನು ಅವಮಾನಿಸುವ ಉದ್ದೇಶವನ್ನು ಹೊಂದಿದೆ ಮತ್ತು ಗಂಗಾ ಮೈಯಾ (ಗಂಗಾ ನದಿ) ಮತ್ತು ಕುಂಭಮೇಳದ ಭಕ್ತರನ್ನು ಅಪರಾಧ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಓಜಾ ಆರೋಪಿಸಿದ್ದಾರೆ.“ಪವಿತ್ರ ಗಂಗೆಯನ್ನು ಪೂಜಿಸುವ ಮತ್ತು ಕುಂಭದಲ್ಲಿ ಭಾಗವಹಿಸುವ ಹಿಂದೂಗಳ ಭಾವನೆಗಳಿಗೆ ಅವರು ನೋವುಂಟು ಮಾಡಿದ್ದಾರೆ. ಅವರ ಹೇಳಿಕೆಯನ್ನು ಸಾರ್ವಜನಿಕವಾಗಿ ರಾಜಕೀಯ ಗಮನ ಸೆಳೆಯಲು ಮತ್ತು ಅವರ ಪಕ್ಷಕ್ಕೆ ಲಾಭ ಪಡೆಯಲು ಮಾ...
MCC ಹಗರಣ ತನಿಖೆಗೆ ರೋಚಕ ತಿರುವು; 33 ಬ್ಯಾಂಕ್ ಸದಸ್ಯರ ದೂರಿನ ಹಿನ್ನೆಲೆ ತನಿಖೆ ಪ್ರಕ್ರಿಯೆಗೆ ಸರ್ಕಾರದ ಮುನ್ನುಡಿ!

MCC ಹಗರಣ ತನಿಖೆಗೆ ರೋಚಕ ತಿರುವು; 33 ಬ್ಯಾಂಕ್ ಸದಸ್ಯರ ದೂರಿನ ಹಿನ್ನೆಲೆ ತನಿಖೆ ಪ್ರಕ್ರಿಯೆಗೆ ಸರ್ಕಾರದ ಮುನ್ನುಡಿ!

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಎಂಸಿಸಿ ಬ್ಯಾಂಕ್ ಹಗರಣಕ್ಕೆ ರೋಚಕ ತಿರುವು ಸಿಕ್ಕಿದೆ. ಹಲವಾರು ಅಕ್ರಮ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಹಾಗೂ ಅಕ್ರಮಗಳಿಂದ ರೋಸಿಹೋದ ಸದಸ್ಯರೊಬ್ಬರು ಸಾವಿಗೆ ಶರಣಾದ ಪ್ರಕರಣ ಹಿನ್ನೆಲೆಯಲ್ಲಿ ಎಂಸಿಸಿ ಬ್ಯಾಂಕ್ ಸೂಪರ್‌ಸೀಡ್ ಮಾಡಬೇಕೆಂಬ ಆಗ್ರಹ ಹೆಚ್ಚಾಗಿದೆ. ಈ ಕುರಿತಂತೆ ಎಂಸಿಸಿ ಬ್ಯಾಂಕಿನ ಸುಮಾರು 33 ಸದಸ್ಯರು ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಕಾರ್ಯದರ್ಶಿ ಸಹಿತ ಸರ್ಕಾರದ ಪ್ರಮುಖರಿಗೆ ದೂರು ಸಲ್ಲಿಸಿದ್ದಾರೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಎಂಸಿಸಿ ಬ್ಯಾಂಕಿನ ವಿರುದ್ದದ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸಹಕಾರ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಇಲಾಖಾ ಅಧಿಕಾರಿಗಳ ಪರಿಶೀಲನಾ ವರದಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಏನಿದು ಹಠಾತ್ ಬೆಳವಣಿಗೆ? 'ಮಂಗಳೂರು ಕೆಥೋಲಿಕ್ ಸಹಕಾರ ಬ್ಯಾಂಕ್ (MCC Bank) ಬಹುಕೋಟಿ ರೂಪಾಯಿ ಅವ್ಯವಹಾರ ಆರೋಪ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಸಾಲ ವಸೂಲಾತಿ ನೆಪದಲ್ಲಿ ಜನ...
ಮುಡಾ ಹಗರಣ: ಜಿಟಿ ದೇವೇಗೌಡ ವಿರುದ್ಧವೂ ಲೋಕಾಯುಕ್ತಕ್ಕೆ ದೂರು

ಮುಡಾ ಹಗರಣ: ಜಿಟಿ ದೇವೇಗೌಡ ವಿರುದ್ಧವೂ ಲೋಕಾಯುಕ್ತಕ್ಕೆ ದೂರು

Focus, ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ಮುಡಾ ಹಗರಣ ಆರೋಪದಲ್ಲಿ ಇದೀಗ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ವಿರುದ್ದವೂ ದೂರು ದಾಖಲಾಗಿದೆ. ಶಾಸಕ ಜಿಟಿ ದೇವೇಗೌಡ ಹಾಗೂ ಪುತ್ರ ಹರೀಶ್ ಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.ಸರ್ವೇ ನಂಬರ್ 81/2 ರಲ್ಲಿ 2.22 ಎಕರೆ ಜಮೀನಿಗೆ ಪರಿಹಾರ ನೀಡಿಲ್ಲ ಎಂದು 19 ನಿವೇಶನ ಪಡೆದಿರುವ ಬಗ್ಗೆ ಜಿ.ಟಿ.ದೇವೇಗೌಡ ಬಗ್ಗೆ ಆರೋಪ ಕೇಳಿಬಂದಿದೆ. ಶಾಸಕ ಜಿಟಿ ದೇವೇಗೌಡರಿಂದ ಅಧಿಕಾರ ದುರುಪಯೋಗವಾಗಿದೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಮಂಗಳವಾರ ಮೈಸೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಅವರು ದೂರು ಸಲ್ಲಿಸಿದ್ದಾರೆ....
ತುಮಕೂರು: ಅಂತಸರನಹಳ್ಳಿಯ ಕಾರ್ಖಾನೆಯಲ್ಲಿ ಅವಘಡ: ಇಬ್ಬರು ಕಾರ್ಮಿಕರು ಸಾವು

ತುಮಕೂರು: ಅಂತಸರನಹಳ್ಳಿಯ ಕಾರ್ಖಾನೆಯಲ್ಲಿ ಅವಘಡ: ಇಬ್ಬರು ಕಾರ್ಮಿಕರು ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ತುಮಕೂರು: ಅಂತಸರನಹಳ್ಳಿಯಲ್ಲಿರುವ ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವಗೀಡಾಗಿದ್ದಾರೆ.ಮಂಗಳವಾರ ಸಂಜೆ 5.30ರ ಸುಮಾರಿಗೆ ತುಮಕೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿರುವ ಕಾರ್ಖಾನಿಯಲ್ಲಿ ಈ ಘಟನೆ ಸಂಭವಿಸಿದ್ದು, ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ.ಮೃತರನ್ನು ಬಿಹಾರ ಮೂಲದ ಸಂತೋಷ್, ಹಾಗೂ ಚಂದನ್ ಶರ್ಮ ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಮುಡಾ ಕೇಸ್: ಸಿಎಂ ಪತ್ನಿಗೆ ED ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ

ಮುಡಾ ಕೇಸ್: ಸಿಎಂ ಪತ್ನಿಗೆ ED ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಅಕ್ರಮ ಹಂಚಿಕೆ ಹಗರಣ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ)ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್‌ಗೆ ನೀಡಿದ್ದ ನೋಟಿಸ್​‌ಗೆ ಹೈಕೋರ್ಟ್ ತಡೆ ನೀಡಿದೆ.ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ED ನೊಟೀಸ್ ನೀಡಿತ್ತು. ಇದಕ್ಕೆ ತಡೆ ಕೋರಿ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಇಡಿ ನೀಡಿದ್ದ ಸಮನ್ಸ್‌ಗೆ ತಾತ್ಕಾಲಿಕ ತಡೆ ನೀಡಿದೆ....
ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ ಘೋಷಣೆ

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್: ಸಿ.ಎಂ ಘೋಷಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದ್ಸಾರೆ.ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ ಎಂದು ಸ್ಪಷ್ಟಪಡಿಸಿದರು.ಕನ್ನಡ ಭಾಷೆ, ಸಂಸ್ಕೃತಿ, ಕಲೆಯನ್ನು ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮ‌ಭಾಷೆಯಾಗುತ್ತದೆ ಎಂದರು.ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್...
ವಿಧಾನಸೌಧದ ಆವರಣದಲ್ಲಿ  ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಆವರಣದಲ್ಲಿ ನಿರ್ಮಿಸಲಾದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗಳಿಸಿದರು.ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್, ವಿಧಾನ ಪರಿಷತ್ ನ‌ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಶಿವಾಜಿನಗರ ವಿಧಾನಸಭಾ ಕ್ಷೇತ್ರ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು....
ಸರ್ಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್‌ನ ಮೊರೆ ಹೋದ ಜನ, ಆತ್ಮಹತ್ಯೆಗೆ ಶರಣು?

ಸರ್ಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್‌ನ ಮೊರೆ ಹೋದ ಜನ, ಆತ್ಮಹತ್ಯೆಗೆ ಶರಣು?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ನೀಡಿದೆ. ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ ಕಾಂಗ್ರೆಸ್‌ 60 ಕೋಟಿ ರೂ. ನೀಡಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದಿಂದ ಹಣ ಫ್ರೀಜ್ ಆ...