Tuesday, January 27

Focus

ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನಾಡಿನೆಲ್ಲೆಡೆ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತಿದೆ. ಉತ್ತರಾಯಣ ಪರ್ವಕಾಲದಲ್ಲಿ ಸಂಕ್ರಾಂತಿ ಸಡಗರ ಹೆಚ್ಚಿದೆ. ನಾಡಿನ ದೇವಾಲಯಗಳಲ್ಲಿ ಮನೆ-ಮನೆಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟ ಸಹೋದ್ಯೋಗಿ ಎಲ್. ಮುರುಗನ್ ಅವರ ನಿವಾಸದಲ್ಲಿ ಏರ್ಪಡಿಸಲಾದ ಸಂಕ್ರಾಂತಿ (ಪೊಂಗಲ್) ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡರು. ಸಾಂಪ್ರದಾಯಿಕ ಪೂಜೆ, ಆರತಿ ಮತ್ತು ಗೋಪೂಜೆ ನೆರವೇರಿಸಿ ಗಮನಸೆಳೆದರು. <blockquote class="twitter-tweet" data-media-max-width="560"><p lang="kn" dir="ltr">ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವರಾದ ಶ್ರೀ ಎಲ್. ಮುರುಗನ್ ಅವರ ನಿವಾಸದಲ್ಲಿ ಏರ್ಪಡಿಸಲಾದ ಸಂಕ್ರಾಂತಿ (ಪೊಂಗಲ್) ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡು ಸಾಂಪ್ರದಾಯಿಕ ಪೂಜೆ, ಆರತಿ ಮತ್ತು ಗೋಪೂಜೆ ನೆರವೇರಿಸಿದರು.<a href="https://twitter.com/hashtag/Sankranthi?src=hash&amp;ref_src=twsrc%5Etfw">#Sankranthi</a> <a href="https://t.co/QukIK4PMqJ">pic.twitter.com/Q...
ಸುರತ್ಕಲ್-ಬಿ.ಸಿ.ರೋಡ್ ಹೆದ್ದಾರಿ ಮೇಲ್ದರ್ಜೆಗೆ; ಡಿಪಿಆರ್‌ ಮಂಜೂರು

ಸುರತ್ಕಲ್-ಬಿ.ಸಿ.ರೋಡ್ ಹೆದ್ದಾರಿ ಮೇಲ್ದರ್ಜೆಗೆ; ಡಿಪಿಆರ್‌ ಮಂಜೂರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಮಂಗಳೂರು ಬೈಪಾಸ್ ಮತ್ತು ಸುರತ್ಕಲ್-ಬಿ.ಸಿ.ರೋಡ್ ಮೇಲ್ದರ್ಜೆಗೇರಿಸುವಿಕೆಗೆ ದೀರ್ಘಕಾಲದಿಂದ ಬಾಕಿ ಉಳಿದಿರುವ ಡಿಪಿಆರ್‌ಗಳು ಮಂಜೂರಾಗಿದ್ದು, ತಲಪಾಡಿಯಿಂದ ಕುಂದಾಪುರದವರೆಗಿನ ಎನ್‌ಎಚ್-66 ರ ಸರ್ವಿಸ್ ರಸ್ತೆಗಳಿಗೂ ಮಂಜೂರಾತಿ ನೀಡಲಾಗಿದೆ ಎಂದು ಮಂಗಳೂರು ಸಂಸದ ಬೃಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನ ಪ್ರಮುಖ ಪ್ರವೇಶ ಬಿಂದುವಾಗಿ ಮತ್ತು ಅತ್ಯಗತ್ಯ ಬಂದರು-ಪ್ರವೇಶ ಮಾರ್ಗವಾಗಿ ಕಾರ್ಯನಿರ್ವಹಿಸುವ ನಿರ್ಣಾಯಕ ಹೆದ್ದಾರಿ ಕಾರಿಡಾರ್ ಅನ್ನು ಪರಿಹರಿಸುತ್ತವೆ ಎಂದವರು ತಿಳಿಸಿದ್ದಾರೆ. ಪ್ರಯಾಣಿಕರು ಎದುರಿಸುತ್ತಿರುವ ದೈನಂದಿನ ತೊಂದರೆಗಳು ಮತ್ತು ನಮ್ಮ ಪ್ರದೇಶದ ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಮೂಲಸೌಕರ್ಯ ಅಡಚಣೆಗಳ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ಈ ಸಮಸ್ಯೆಗಳನ್ನು ನಿರಂತರವಾಗಿ ಅನುಸರಿಸುತ್ತಿದ್ದೇನೆ ಎಂದವರು ತಿಳಿಸಿದ್ದಾರೆ. ಈ ದೀರ್ಘಕಾಲದಿಂದ ಬಾಕಿ ಉಳಿದಿರುವ ಬೇಡಿಕೆಗಳ ಮೇಲೆ ಕ್ರಮ ಕೈಗೊಳ್ಳಲು ಮತ್ತು ಪ್ರಾದೇಶಿಕ ಬೆಳವಣಿಗೆಗೆ ಶಕ್ತಿ ನೀಡುವ ಮತ್ತು ಪ್ರಾದೇಶಿಕ ಬೆಳವಣಿಗೆಗೆ ಶಕ್ತಿ ನೀಡುವ ಹೆದ್ದಾರಿ ಪ್ರಗತಿಯನ್ನು ಬಲಪಡಿಸಿದ್ದಕ್ಕಾಗಿ ಮತ್ತು ಪ್ರಧಾನ...
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ; ಸಿಎಂ ತವರಿನಿಂದ ಬಿಜೆಪಿ ಅಭಿಯಾನ

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ; ಸಿಎಂ ತವರಿನಿಂದ ಬಿಜೆಪಿ ಅಭಿಯಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯುವಜನತೆಯ ಭವಿಷ್ಯ ಹಾಳು ಮಾಡುತ್ತಿರುವ ಡ್ರಗ್ಸ್‌ ಮಾಫಿಯಾ ತಡೆಗಟ್ಟಲು ಬಿಜೆಪಿಯು ಬೃಹತ್ ಜಾಗೃತಿ ಹೋರಾಟವನ್ನು ಸಿಎಂ ತವರು ಜಿಲ್ಲೆ ಮೈಸೂರಿನಿಂದ ಆರಂಭಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ. ಗಂಧದ ನಾಡು ಎಂದು ಖ್ಯಾತಿ ಹೊಂದಿದ್ದ ಕರುನಾಡು ಕಾಂಗ್ರೆಸ್ ಆಡಳಿತದಲ್ಲಿ ಡ್ರಗ್ಸ್ ಬೀಡಾಗಿದೆ. ನೆರೆ ರಾಜ್ಯದ ಪೊಲೀಸರು ಕರ್ನಾಟಕ ರಾಜ್ಯಕ್ಕೆ ಬಂದು ಡ್ರಗ್ಸ್‌ ಫ್ಯಾಕ್ಟರಿ ಮೇಲೆ ದಾಳಿ ಮಾಡುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ. ಡ್ರಗ್ಸ್ ಮಾಫಿಯಾ ಜೊತೆಗೆ ಸಚಿವರ ಆಪ್ತರ ನಂಟು ಬೆಳಕಿಗೆ ಬಂದಿದೆ ಎಂದವರು ಆರೋಪಿಸಿದ್ದಾರೆ. ಸಮಾಜಘಾತುಕರನ್ನು ಹಾಗೂ ಅಪರಾಧಿಗಳನ್ನು ಪೋಷಿಸುವ ಸಿದ್ದರಾಮಯ್ಯ ಸರ್ಕಾರದ ಆಡಳಿತ ವೈಖರಿಯಿಂದ ಇಂದು ರಾಜ್ಯದ ಮೂಲೆ ಮೂಲೆಗೂ ಡ್ರಗ್ಸ್ ಘಾಟು ಹಬ್ಬಿದೆ ಎಂದು ವಿಜಯೇಂದ್ರ ವ್ಯಾಖ್ಯಾನಿಸಿದ್ದಾರೆ. ಡ್ರಗ್ಸ್‌ ದಂಧೆಯನ್ನು ಮಟ್ಟ ಹಾಕಿ, ಯುವಜನತೆಯನ್ನು ಇವುಗಳಿಂದ ರಕ್ಷಿಸಲು ರಾಜ್ಯ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ, ಜವಾಬ್ದಾರಿಯುತ ಪ್ರತಿಪಕ್ಷವಾಗಿ, ರಾಜ್ಯದ ಜನತೆಯ ಧ್ವನಿಯಾಗಿ ಬಿಜೆಪಿಯು ಡ್ರಗ್ಸ್ ದಂಧೆ ವಿರುದ...
ಮನರೇಗಾ; ಬಹಿರಂಗ ಚರ್ಚೆಗೆ ಆಹ್ವಾನ ಮೂಲಕ ಬಿಜೆಪಿ-ಜೆಡಿಎಸ್ ನಾಯಕರ ಬೌದ್ಧಿಕ ದಿವಾಳಿತನ ಸಾಬೀತು ಎಂದ ರಮೇಶ್ ಬಾಬು

ಮನರೇಗಾ; ಬಹಿರಂಗ ಚರ್ಚೆಗೆ ಆಹ್ವಾನ ಮೂಲಕ ಬಿಜೆಪಿ-ಜೆಡಿಎಸ್ ನಾಯಕರ ಬೌದ್ಧಿಕ ದಿವಾಳಿತನ ಸಾಬೀತು ಎಂದ ರಮೇಶ್ ಬಾಬು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮನರೇಗಾ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕದ ಎನ್.ಡಿ.ಎ ನಾಯಕರು ಬಹಿರಂಗ ಚರ್ಚೆಗೆ ಸಿದ್ದ ಎಂದು ಹೇಳುವುದರ ಮೂಲಕ ತಮ್ಮ ಬೌದ್ಧಿಕ ದಿವಾಳಿತನವನ್ನು ಸಾಬೀತು ಪಡಿಸಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಜಂಟಿ ಪತ್ರಿಕಾ ಗೋಷ್ಠಿ ಮುಖಾಂತರ ಬಹಿರಂಗ ಚರ್ಚೆಗೆ ಕರೆ ನೀಡಿದ್ದಾರೆ. ಬಹಿರಂಗ ಚರ್ಚೆಗೆ ವಿಶೇಷ ವಿಧಾನ ಸಭೆಯ ಅಧಿವೇಶನ ಮೂಲಕ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರ ಈಗಾಗಲೇ ಅವರಿಗೆ ಮುಕ್ತ ಅವಕಾಶವನ್ನು ನೀಡಿದೆ. ಮನರೇಗಾ ಯೋಜನೆಗೆ ಸಂಬಂಧಪಟ್ಟಂತೆ ಲೋಕಸಭೆಯಲ್ಲಿ ಮತ್ತು ರಾಜ್ಯಸಭೆಯಲ್ಲಿ ವಿರೋಧಪಕ್ಷಗಳು ಚರ್ಚೆಗೆ ಮುಂದಾದಾಗ ಪಲಾಯನ ಮಾಡಿರುವ ಕೇಂದ್ರ ಸರ್ಕಾರಕ್ಕೆ ಬಹುಶಃ HD ಕುಮಾರಸ್ವಾಮಿ ಅವರ ಸಲಹೆ ಅವಶ್ಯಕತೆ ಇರುತ್ತದೆ! ಮನರೇಗಾ ಯೋಜನೆಯನ್ನು ಜನವಿರೋಧಿ ಯೋಜನೆ ಯಾಗಿ ರೂಪಿಸಿರುವ ಕೇಂದ್ರ ಸರ್ಕಾರದ ಕಾಯಿದೆಯನ್ನು ಬೆತ್ತಲೆ ಗೊಳಿಸಲು ಕರ್ನಾಟಕದಲ್ಲಿ ವ...
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರಾದ 2026-28ನೇ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಜಿ.ರಾಮಮೂರ್ತಿರವರು ಆಯ್ಕೆಯಾಗಿದ್ದಾರೆ. ಮುಖ್ಯ ಚುನಾವಣೆ ಅಧಿಕಾರಿಗಳು ಸಂಜೀವ್ ಸಹಾಯಕ ಚುನಾವಣೆ ಅಧಿಕಾರಿ ಶ್ರೀನಿವಾಸ್ ರವರು ಪ್ರಮಾಣಪತ್ರ ನೀಡಿದರು. ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ. ನಂದಿಯಾಳ್ ಎಸ್ ಜೆ. ಬಾಮ ಗಿರೀಶ್. ಆರ್ ಎಸ್ ಗೌಡ್ರು. ರಮೇಶ್ ಯಾದವ್ ರವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಂ.ಜಿ.ರಾಮಮೂರ್ತಿರವರು ಮಾತನಾಡಿ ಕನ್ನಡ ಚಲನಚಿತ್ರ ಮೇರುನಟ ಡಾ||ರಾಜ್ ಕುಮಾರ್ ರವರು ನಿರ್ಮಾಪಕರನ್ನ ಅನ್ನದಾತರು ಎಂದು ಕರೆಯುತ್ತಿದ್ದಾರೆ. ನಿರ್ಮಾಪಕ ಉಳಿದರೆ ಕನ್ನಡ ಚಿತ್ರರಂಗ ಉಳಿಯುತ್ತದೆ. ನಿರ್ಮಾಪಕ ಹಾಕಿದ ಹಣ ವಾಪಸ್ಸು ಬರಬೇಕು. ಕೆಲವು ನಿರ್ಮಾಪಕರು ಆರ್ಥಿಕವಾಗಿ ಸಂಕಷ್ಟದಲ್ಲಿ ಇದ್ದಾರೆ ಅವರನ್ನ ಗುರುತಿಸಿ ನಿರ್ಮಾಪಕರ ಸಂಘದಿಂದ ಆರ್ಥಿಕವಾಗಿ ಸಹಾಯ ಮಾಡಬೇಕು ಎಂಬ ಉದ್ದೇಶವಿದೆ ಎಂದರು. ಕನ್ನಡ ಚಲನಚಿತ್ರ ಅನ್ಯ ಭಾಷೆಗಳ ನಡುವೆ ಪೈಪೋಟಿ ಇದೆ, ಕನ್ನಡ ಚಿತ್ರಗಳಿಗೆ ಜನರು ಚಿತ್ರಮಂದಿರಕ್ಕೆ ಬಂದು ನೋಡಿ, ನಿರ್ಮಾಪಕ, ನಿರ್ದೇಶಕ ಮತ್ತು ನಟ, ನಟಿ ಕಲಾವಿದರಿಗೆ ಪ್ರ...
PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

PRCI ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾಗಿ ವಿನಯ ಕುಮಾರ್, ಉಪಾಧ್ಯಕ್ಷರಾಗಿ ಡಾ. ಟಿ.ಎಸ್.ಲತಾ ಪದಗ್ರಹಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಿದೆ. ಬೆಂಗಳೂರು ಜೆ.ಪಿ.ನಗರ ಸಾಂಸ್ಕೃತಿಕ ಸಂಘದಲ್ಲಿ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು. ಸಮಾರಂಭದಲ್ಲಿ ಡಾ. ದೇವಾನಂದ ಗೋಪಾಲ್ (ಡಿಆರ್‌ಡಿಒ ಮಾಜಿ ವಿಜ್ಞಾನಿ) ಮುಖ್ಯ ಅತಿಥಿಯಾಗಿ, ಎಂ.ಬಿ. ಜಯರಾಮ್ (ಚೇರ್ಮನ್ ಎಮೆರಿಟಸ್ ಮತ್ತು ಮುಖ್ಯ ಮಾರ್ಗದರ್ಶಕರು) ಹಾಗೂ ಶ್ರೀಮತಿ ಗೀತಾ ಶಂಕರ್ (ರಾಷ್ಟ್ರೀಯ ಅಧ್ಯಕ್ಷರು) ಭಾಗವಹಿಸಿದ್ದರು. ಅಧ್ಯಕ್ಷರಾಗಿ ಡಾ. ಟಿ. ವಿನಯ ಕುಮಾರ್ ಅವರು ಆಡಳಿತ ಮಂಡಳಿಯ (ಗವರ್ನಿಂಗ್ ಕೌನ್ಸಿಲ್) ಹಾಗೂ ಮಂಡಳಿಯ ಉಪಾಧ್ಯಕ್ಷರಾಗಿ ಕೆಎಸ್‌ಆರ್‌ಟಿಸಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್. ಅವರು ಆಡಳಿತ ಪದಗ್ರಹಣ ಮಾಡಿದರು. ಚಿನ್ಮಯೀ ಪ್ರವೀಣ್ ಅವರು ಕಾರ್ಯದರ್ಶಿಯಾಗಿ ಪದಗ್ರಹಣ ಮಾಡಿದರು ಆಡಳಿತ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ಡಾ. ಬಿ.ಕೆ. ರವಿ (ಉಪಕುಲಪತಿ, ಉತ್ತರ ಬೆಂಗಳೂರು ವಿಶ್ವವಿದ್ಯಾಲಯ), ರವೀಂದ್ರನ್, ಸಿ.ಜೆ. ಸಿಂಗ್, ಆರ್.ಎನ್. ಮಹಾಪಾತ್ರ ಹಾಗೂ ಅರಿಜಿತ್ ಸಿಂಗ್ ಅವರು ಜವಾಬ್ದಾರಿ ಸ್ವೀ...
ಚಿತ್ರದುರ್ಗ: ಕಾರು-ಲಾರಿ ಡಿಕ್ಕಿಯಾಗಿ ನಾಲ್ವರ ಸಾವು

ಚಿತ್ರದುರ್ಗ: ಕಾರು-ಲಾರಿ ಡಿಕ್ಕಿಯಾಗಿ ನಾಲ್ವರ ಸಾವು

Focus, ಪ್ರಮುಖ ಸುದ್ದಿ, ರಾಜ್ಯ
ಚಿತ್ರದುರ್ಗ: ಹಿರಿಯೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು 23 ವರ್ಷದ ರಾಹುಲ್, ನಂಜುಂಡಿ ಹಾಗೂ 22 ವರ್ಷದ ವಿಶ್ವನಾಥ್, ಯಶ್ವಂತ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹಿರಿಯೂರು ಸಮೀಪದ ನಂಜಯ್ಯನಕೊಟ್ಟಿಗೆ ಗ್ರಾಮದವರು ಎನ್ನಲಾಗಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
VB G-RAM-G ಬಗ್ಗೆ ಕೈ ನಾಯಕರಿಂದ ಅಪಪ್ರಚಾರ; ಮಿತ್ರಪಕ್ಷಗಳ ಆಕ್ರೋಶ

VB G-RAM-G ಬಗ್ಗೆ ಕೈ ನಾಯಕರಿಂದ ಅಪಪ್ರಚಾರ; ಮಿತ್ರಪಕ್ಷಗಳ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: VB G-RAM-G ಯೋಜನೆ ಕುರಿತು ಕಾಂಗ್ರೆಸ್ ಪಕ್ಷವು ಸುಳ್ಳು ಮಾಹಿತಿಯನ್ನು ಹರಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ಈ ಕುರಿತು ದಾಖಲೆಗಳೊಂದಿಗೆ ಬಹಿರಂಗ ಸಾರ್ವಜನಿಕ ಚರ್ಚೆಗೆ ಬರಲು ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಅವರು ಶನಿವಾರ ಸವಾಲು ಹಾಕಿದ್ದಾರೆ. MGNREGA ರದ್ದುಪಡಿಸಿ ಕೇಂದ್ರ ಸರ್ಕಾರ VB G-RAM-G ಜಾರಿಗೆ ತಂದಿದೆ ಎಂಬ ಆರೋಪವನ್ನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಡಿದ್ದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ಪ್ರತಿಕ್ರಿಯೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸಚಿವರ ಆಹ್ವಾನಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಗತ್ಯವಿದ್ದರೆ ಚರ್ಚೆಯ ಜೊತೆಗೆ ದೊಡ್ಡ ಆಂದೋಲನಕ್ಕೂ ಸಿದ್ಧ ಎಂದು ಹೇಳಿದ್ದರು. ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರೂಪಿಸಲಾದ ಯೋಜನೆ ಕುರಿತು ಕಾಂಗ್...
ಮೊದಲ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ಗುವಾಹಟಿ–ಕೋಲ್ಕತ್ತಾ ನಡುವೆ ಶೀಘ್ರ ಆರಂಭ

ಮೊದಲ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ಗುವಾಹಟಿ–ಕೋಲ್ಕತ್ತಾ ನಡುವೆ ಶೀಘ್ರ ಆರಂಭ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಗುವಾಹಟಿ: ಈಶಾನ್ಯ ಭಾರತ ಮತ್ತು ಪೂರ್ವ ಭಾರತದ ನಡುವಿನ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಗುವಾಹಟಿ–ಕೋಲ್ಕತ್ತಾ ನಡುವೆ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ಅನ್ನು ಶೀಘ್ರದಲ್ಲೇ ಆರಂಭಿಸಲು ಭಾರತೀಯ ರೈಲ್ವೆ ಸಜ್ಜಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹೊಸ ತಲೆಮಾರಿನ ರೈಲು 16 ಕೋಚ್‌ಗಳ ರೇಕ್ ಹೊಂದಿದ್ದು, ಒಟ್ಟು 823 ಪ್ರಯಾಣಿಕರನ್ನು ಸಾಗಿಸುವ ಸಾಮರ್ಥ್ಯ ಹೊಂದಿರಲಿದೆ ಎಂದು ಈಶಾನ್ಯ ಗಡಿನಾಡು ರೈಲ್ವೆಯ (ಎನ್‌ಎಫ್‌ಆರ್) ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕಪಿಂಜಲ್ ಕಿಶೋರ್ ಶರ್ಮಾ ತಿಳಿಸಿದ್ದಾರೆ. ರೈಲಿನಲ್ಲಿ 11 ಎಸಿ ತೃತೀಯ ದರ್ಜೆ, 4 ಎಸಿ ದ್ವಿತೀಯ ದರ್ಜೆ ಹಾಗೂ 1 ಪ್ರಥಮ ದರ್ಜೆ ಎಸಿ ಕೋಚ್‌ಗಳು ಇರಲಿವೆ. ಪ್ರಯಾಣಿಕರ ಆರಾಮಕ್ಕೆ ಹೆಚ್ಚಿನ ಒತ್ತು ನೀಡಿರುವ ಈ ರೈಲಿನಲ್ಲಿ ದಕ್ಷತಾಶಾಸ್ತ್ರೀಯವಾಗಿ ವಿನ್ಯಾಸಗೊಳಿಸಲಾದ ಮೃದು ಬರ್ತ್‌ಗಳು, ಸುಧಾರಿತ ಅಮಾನತು ವ್ಯವಸ್ಥೆ, ಶಬ್ದ ಕಡಿತ ತಂತ್ರಜ್ಞಾನ, ವೆಸ್ಟಿಬ್ಯೂಲ್‌ಗಳೊಂದಿಗೆ ಸ್ವಯಂಚಾಲಿತ ಬಾಗಿಲುಗಳು ಹಾಗೂ ಆಧುನಿಕ ಪ್ರಯಾಣಿಕ ಮಾಹಿತಿ ವ್ಯವಸ್ಥೆ ಅಳವಡಿಸಲಾಗುತ್ತದೆ. ದಿವ್ಯಾ...
ಮಲೆಯಾಳಿ ಭಾಷಾ ಮಸೂದೆ; ಪಿಣರಾಯಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಮಲೆಯಾಳಿ ಭಾಷಾ ಮಸೂದೆ; ಪಿಣರಾಯಿಗೆ ಸಿಎಂ ಸಿದ್ದರಾಮಯ್ಯ ಪತ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇರಳ ವಿಧಾನಸಭೆಯಲ್ಲಿ ಮಂಡನೆಯಾಗಿರುವ ಮಲೆಯಾಳಿ ಭಾಷಾ ಮಸೂದೆಯಿಂದ ಗಡಿಭಾಗದ ಜಿಲ್ಲೆಗಳಲ್ಲಿ, ವಿಶೇಷವಾಗಿ ಕಾಸರಗೋಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲಾಗುವ ದುಷ್ಪರಿಣಾಮಗಳ ಕುರಿತು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು, ಮಸೂದೆಯ ಪುನರ್ ಪರಿಶೀಲನೆಗೆ ಒತ್ತಾಯಿಸಿದ್ದಾರೆ. ಪರಸ್ಪರ ಗೌರವ, ಒಕ್ಕೂಟ ವ್ಯವಸ್ಥೆಯೊಳಗಿನ ಸಹಕಾರ ಮತ್ತು ಸಾಂವಿಧಾನಿಕ ಜವಾಬ್ದಾರಿಯ ಭಾವನೆಯಿಂದ ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಈ ಮೌಲ್ಯಗಳು ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಸಂಬಂಧವನ್ನು ದೀರ್ಘಕಾಲದಿಂದ ಮಾರ್ಗದರ್ಶನ ಮಾಡುತ್ತಿದೆ. ಈ ಎರಡು ರಾಜ್ಯಗಳು ಕೇವಲ ಭೌಗೋಳಿಕವಾಗಿ ಮಾತ್ರವಲ್ಲ, ಆಳವಾದ ಸಾಂಸ್ಕೃತಿಕ, ಸಾಮಾಜಿಕ ಮತ್ತು ಮಾನವೀಯ ಬಂಧಗಳಿಂದ ಬೆಸೆದುಕೊಂಡಿವೆ ಎಂದು ಸಿದ್ದರಾಮಯ್ಯ ಗಮನಸೆಳೆದಿದ್ದಾರೆ. ಈ ಸಂದರ್ಭದಲ್ಲಿ, ಪ್ರಸ್ತಾಪಿತ ಮಲಯಾಳಂ ಭಾಷಾ ಮಸೂದೆಯ ಬಗ್ಗೆ ನನಗಿರುವ ಗಂಭೀರ ಕಳವಳವನ್ನು ತಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಈ ಮಸೂದೆಯು ಕನ್ನಡ ಮಾಧ್ಯಮದ ಶಾಲೆಗಳಲ್ಲೂ, ವಿಶೇಷವಾಗಿ ಕಾಸರಗೋಡಿನಂತಹ ಗಡಿ ಜಿ...