Saturday, March 21

Focus

“Karnataka Bharat Gaurav Train – Journey of a Thousand Shrines” ಎಂಬ ಕಾಫಿ ಟೇಬಲ್ ಪುಸ್ತಕ

“Karnataka Bharat Gaurav Train – Journey of a Thousand Shrines” ಎಂಬ ಕಾಫಿ ಟೇಬಲ್ ಪುಸ್ತಕ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಭಾರತೀಯ ರೈಲ್ವೆಯ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪ್ರವಾಸೋದ್ಯಮ ಉಪಕ್ರಮವನ್ನು ಪರಿಚಯಿಸುವ “Karnataka Bharat Gaurav Train – Journey of a Thousand Shrines” ಎಂಬ ಕಾಫಿ ಟೇಬಲ್ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ.ಈ ಪುಸ್ತಕವು ಕೇವಲ ರೈಲು ಸೇವೆಯ ದಾಖಲೆಯಲ್ಲ; ನಂಬಿಕೆ, ಸಂಸ್ಕೃತಿ, ಪರಂಪರೆ ಹಾಗೂ ಆಧುನಿಕ ರೈಲ್ವೆ ಮೂಲಸೌಕರ್ಯಗಳ ಸಮನ್ವಯದ ಹಿಂದೆ ಇರುವ ದೃಷ್ಟಿ ಮತ್ತು ಸಾಮೂಹಿಕ ಪ್ರಯತ್ನಗಳನ್ನು ಚಿತ್ರಿಸುತ್ತದೆ.ಐಆರ್‌ಟಿಎಸ್ (ನಿವೃತ್ತ) ಡಾ. ಅನುಪ್ ದಯಾನಂದ ಅವರ ಪರಿಕಲ್ಪನೆಯಲ್ಲಿ ಪುಸ್ತಕ ಮೂಡಿ ಬಂದಿದೆ. ಬಿಡುಗಡೆ ಕಾರ್ಯಕ್ರಮದಲ್ಲಿ ರೈಲ್ವೆಯ ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ ಸಮಿತಿಯ ಸದಸ್ಯ ಹರಿಶಂಕರ್ ವರ್ಮಾ, ಎನ್‌ಎಚ್‌ಎಂ ಹೆಚ್ಚುವರಿ ಸದಸ್ಯ ಕೆ.ಎಸ್. ಜೈನ್, ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಸಿಎಂಡಿ ಎಸ್.ಕೆ. ಜೈನ್ ಹಾಗೂ ಪ್ರವಾಸೋದ್ಯಮ ನಿರ್ದೇಶಕ ರಾಹುಲ್ ಹಿಮಾಲಯನ್ ಉಪಸ್ಥಿತರಿದ್ದರು.ಭಾರತೀಯ ರೈಲ್ವೆ ‘ಭಾರತ್ ಗೌರವ್’ ಯೋಜನೆಯಡಿ ಕರ್ನಾಟಕದ 30,000ಕ್ಕೂ ಹೆಚ್ಚು ಭಕ್ತರು ಕಾಶಿ ಸೇರ...
ಜೂನ್ ಮುನ್ನ ಸ್ಥಳೀಯ ಸಂಸ್ಥೆ ಚುನಾವಣೆ:ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದ ಸಿಎಂ

ಜೂನ್ ಮುನ್ನ ಸ್ಥಳೀಯ ಸಂಸ್ಥೆ ಚುನಾವಣೆ:ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದ ಸಿಎಂ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕಾರವಾರ: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾವಣೆಗಳನ್ನು ಮುಂದಿನ ಜೂನ್ ತಿಂಗಳೊಳಗೆ ನಡೆಸಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿ–ಗಂಗಾವಳಿ ಸೇತುವೆ ಉದ್ಘಾಟನೆ ಬಳಿಕ ಅವರು ಮಾತನಾಡಿದರು. ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ಬೇಡಿಕೆ ಇದ್ದು, ಚುನಾವಣೆಗಳ ಬಳಿಕ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು. ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದರಿಂದ ಪುನಃ ಪ್ರಸ್ತಾವ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂದೂ ತಿಳಿಸಿದರು.ಈ ವೇಳೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು ಹಾಗೂ ಶಾಸಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು....
‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 2022-23ನೇ ಸಾಲಿನ “ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಮತ್ತು ರಾಜ್ಯ ಸರ್ಕಾರದ ಲೆಕ್ಕ ಶೀರ್ಷಿಕೆ 3054ರಡಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.ಈ ಹಿಂದೆ ನರೇಗಾ ಯೋಜನೆಯಡಿ ಗ್ರಾಮೀಣ ಸರ್ವಋತು ಸಂಪರ್ಕ ರಸ್ತೆ ಕಾಮಗಾರಿಗಳಿಗೆ ಶೇ.10ರ ಮಿತಿಯಲ್ಲಿ ಮಾತ್ರ ಅವಕಾಶ ಇತ್ತು. ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸಲು ವ್ಯಾಪಕ ಕ್ರಮ ಕೈಗೊಳ್ಳುವ ಅಗತ್ಯತೆ ಹಿನ್ನೆಲೆಯಲ್ಲಿ 2022-23ರ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದರು.ಆ ಘೋಷಣೆಯ ಅನ್ವಯ, ರೈತರ ಹೊಲ/ಗದ್ದೆ/ತೋಟ/ಜಮೀನುಗಳಿಗೆ ಸಂಪರ್ಕ ರಸ್ತೆ ಕಾಮಗಾರಿಗಳನ್ನು ನರೇಗಾ ಯೋಜನೆಯ ಒಟ್ಟು ಕಾರ್ಮಿಕ ವೆಚ್ಚದ ಶೇ.25ರ ಮಿತಿಯಲ್ಲಿ ಕೈಗೊಳ್ಳಲು ತೀರ್ಮಾನಿಸಲಾಗಿದೆ.ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 30 ಕಿಮೀ ನಂತೆ ಒಟ್ಟು 5,670 ಕಿಮೀ ರಸ್ತೆ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಪ್ರತಿ ಕಿಮೀಗೆ ₹12.50 ಲಕ್ಷವೆಂಬ ಅಂದಾಜು ವೆಚ್ಚದಂತೆ ಒಟ್ಟು ₹708.75 ಕೋಟಿ ವೆಚ್ಚ...
ಚಿಲಕೂರು ಸುರಂಗ: ಚಿತ್ತ ಸೆಳೆವ ‘ಶ್ರೀ ನಾರಾಯಣ ಗುರು’ ದೃಶ್ಯ ರೂಪ

ಚಿಲಕೂರು ಸುರಂಗ: ಚಿತ್ತ ಸೆಳೆವ ‘ಶ್ರೀ ನಾರಾಯಣ ಗುರು’ ದೃಶ್ಯ ರೂಪ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ತಿರುವನಂತಪುರಂ: ಒಳನಾಡಿನ ಸಂಚರಣೆಯನ್ನು ಪುನರುಜ್ಜೀವನಗೊಳಿಸುವ ಹಾಗೂ ಜಲಆಧಾರಿತ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ವರ್ಕಲಾದ ಐತಿಹಾಸಿಕ ಚಿಲಕೂರು ಸುರಂಗ ಮಾರ್ಗ ನವೀಕರಿಸಲಾಗಿದೆ. ಅಕ್ಕುಳಮ್–ಚೆಟ್ಟುವ ಜಲಮಾರ್ಗ ಯೋಜನೆಯ ಭಾಗವಾದ ಈ ಸುರಂಗ ಮಾರ್ಗ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ.ಇದು ಕೇರಳದ ಒಳನಾಡಿನ ಜಲಮಾರ್ಗಗಳ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಸರ್ಕಾರ ತಿಳಿಸಿದೆ.ಹಿಂದಿನ ತಿರುವಾಂಕೂರು ಕಾಲಘಟ್ಟದಲ್ಲಿ ನಿರ್ಮಿಸಲಾದ ಸುಮಾರು 350 ಮೀಟರ್ ಉದ್ದದ ಈ ಸುರಂಗ ಮಾರ್ಗ ದಕ್ಷಿಣ ಕೇರಳದ ಭಾಗಗಳಲ್ಲಿ ಪ್ರಯಾಣಿಕರು ಹಾಗೂ ಸರಕು ಸಾಗಣೆಗೆ ಪ್ರಮುಖ ಒಳನಾಡು ಮಾರ್ಗವಾಗಿತ್ತು. ಈಗ ಅದನ್ನು ಪುನಃ ಸಂಚಾರಯೋಗ್ಯ ಸ್ಥಿತಿಗೆ ತರಲಾಗಿದ್ದು, ಕಾರ್ಯನಿರ್ವಹಣೆಯ ಜಲಮಾರ್ಗ ಹಾಗೂ ಪ್ರವಾಸೋದ್ಯಮ ಆಕರ್ಷಣೆಯಾಗಿ ಗಮನಸೆಳೆದಿದೆ.ನವೀಕರಣ ಕಾಮಗಾರಿಯನ್ನು ಕೇರಳ ಸರ್ಕಾರ ಮತ್ತು ಕೊಚ್ಚಿನ್ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (CIAL) ಸಂಯುಕ್ತ ಸಂಸ್ಥೆಯಾದ ಕೇರಳ ವಾಟರ್ವೇಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಕೈಗೊಂಡಿದೆ. ಸುರಂಗದ ಐತಿಹಾಸಿಕ ಸ್ವರೂಪವನ್ನು ಕಾಪಾ...
ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ರಾಜ್ಯ ಮತ್ತು ರಾಷ್ಟ್ರೀಯ ತಂಡಗಳಿಗೆ ನೀಡಿದ ಸೇವೆಯನ್ನು ಗುರುತಿಸಿ, ಭಾರತದ ಮಾಜಿ ಎಡಗೈ ಸ್ಪಿನ್ನರ್ ಸುನಿಲ್ ಜೋಶಿ ಅವರ ಹೆಸರನ್ನು ಹುಬ್ಬಳ್ಳಿಯ ರಾಜನಗರ ಮೈದಾನದ ಪೆವಿಲಿಯನ್ ಬ್ಲಾಕ್‌ಗೆ ಇಡುವುದಾಗಿ ಪ್ರಕಟಿಸಿದೆ.ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು–ಕಾಶ್ಮೀರ ತಂಡಗಳು ಮುಖಾಮುಖಿಯಾಗಲಿರುವ ಮೊದಲ ದಿನ ಮಧ್ಯಾಹ್ನ 12 ಗಂಟೆಗೆ ನಾಮಕರಣ ಸಮಾರಂಭ ನಡೆಯಲಿದೆ. ಉತ್ತರ ಕರ್ನಾಟಕದ ಗದಗ ಜಿಲ್ಲೆಯವರಾದ ಜೋಶಿ ಅವರು ಹುಬ್ಬಳ್ಳಿಯಲ್ಲಿ ತಮ್ಮ ಕ್ರಿಕೆಟ್ ಪಯಣವನ್ನು ರೂಪಿಸಿಕೊಂಡಿದ್ದು, ರಾಜ್ಯದ ಪ್ರಮುಖ ಕ್ರಿಕೆಟ್ ರಾಯಭಾರಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಕೆಎಸ್‌ಸಿಎ ತಿಳಿಸಿದೆ.“ಪೆವಿಲಿಯನ್‌ಗೆ ಅವರ ಹೆಸರಿಡುವುದು ಅವರ ಸಾಧನೆಗಳಿಗೆ ಶಾಶ್ವತ ಗೌರವ ಸಲ್ಲಿಸುವುದರ ಜೊತೆಗೆ, ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಆಡುವ ಯುವಕರಿಗೆ ಸ್ಫೂರ್ತಿಯಾಗಲಿದೆ,” ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.ಕಾರ್ಯಕ್ರಮದಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮ...
‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ‌ ಸಿಕ್ಕಿಬಿದ್ದಿದ್ದಾರೆ. ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದರೆಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಶಾಸಕರನ್ನು ವಶಕ್ಕೆ ಪಡೆದಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು ಎಂದಿದ್ದಾರೆ.ಲೋಕಾಯುಕ್ತರ ತನಿಖೆ ನಡೆದು ಪೂರ್ಣ ಸತ್ಯಾಸತ್ಯತೆ ಹೊರಬರಲಿ. ನಾವ್ಯಾರು ಅದಕ್ಕೆ ಅಡ್ಡಿಮಾಡಲ್ಲ ಎಂದವರು ತಿಳಿಸಿದ್ದಾರೆ. ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ‌ ಸಿಕ್ಕಿಬಿದ್ದಿದ್ದಾರೆ. ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು. ಲೋಕಾಯುಕ್ತರ ತನಿಖೆ ನಡೆದು ಪೂರ್ಣ ಸತ್ಯಾಸತ್ಯತೆ ಹೊರಬರಲಿ.… pic.twitter.com/9igAeHXMx3&mda...
ಬಾಗಲಕೋಟೆ ಸಮೀಪ ಭೀಕರ ಅಪಘಾತ: ಎರಡು ವರ್ಷದ ಮಗು ಸೇರಿ ನಾಲ್ವರು ಸಾವು

ಬಾಗಲಕೋಟೆ ಸಮೀಪ ಭೀಕರ ಅಪಘಾತ: ಎರಡು ವರ್ಷದ ಮಗು ಸೇರಿ ನಾಲ್ವರು ಸಾವು

Focus, ಪ್ರಮುಖ ಸುದ್ದಿ, ರಾಜ್ಯ
ಬಾಗಲಕೋಟೆ: ಜಮಖಂಡಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿದ್ದಾರೆ. ಬಾಗಲಕೋಟೆ ತಾಲೂಕಿನ ಕಟ್ಟೆಕೆರೆ ಸಮೀಪ ಶನಿವಾರ ಮುಂಜಾನೆ ಈ ಘಟನೆ ನಡೆದಿದೆ.ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಹಾಗೂ ರೇಖಾ ಭೂಕೆ ಎಂದು ಗುರುತಿಸಲಾಗಿದೆ.ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆಯ ಬೂಸಾ ತಾಲ್ಲೂಕಿನ ಗುಪವಾಡಿ ಗ್ರಾಮದ ನಿವಾಸಿಗಳಾಗಿದ್ದು, ಕಬ್ಬಿನ ಕಟಾವು ಕೆಲಸಕ್ಕಾಗಿ ಜಮಖಂಡಿ ಭಾಗಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ.ಕಬ್ಬಿನ ಕಟಾವು ಕಾರ್ಯಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ ಟ್ರ್ಯಾಲಿ ಏಕಾಏಕಿ ಕಟ್‌ ಆಗಿ ಪಲ್ಟಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ. ಮಧ್ಯರಾತ್ರಿ ಸುಮಾರು 2 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದಿನ ತನಿಖೆ ಮುಂದುವರಿದಿದೆ....
CT, MRI ಸ್ಕ್ಯಾನಿಂಗ್ ರದ್ದು ವಿಚಾರ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

CT, MRI ಸ್ಕ್ಯಾನಿಂಗ್ ರದ್ದು ವಿಚಾರ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸರ್ಕಾರದ ಹಣದ ಸರಿಯಾದ ಸದ್ಬಳಕೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಬದ್ಧತೆ. CT ಮತ್ತು MRI ಸ್ಕ್ಯಾನಿಂಗ್ ಸೇವೆ ಪಡೆಯಲು ಜನರಿಗೆ ಯಾವುದೇ ಅಡಚಣೆ ಆಗಬಾರದು ಎಂಬ ಉದ್ದೇಶದಿಂದ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸಲಾಗಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.CT ಮತ್ತು MRI ಸೇವೆ ನೀಡುತ್ತಿದ್ದ Krsnaa Diagnostics Ltd ಸಂಸ್ಥೆ ಸರಿಯಾದ ದಾಖಲೆ ಹಾಗೂ ದೃಢೀಕರಣ ಪದ್ಧತಿಗಳನ್ನು ಪಾಲಿಸದ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರ ಸ್ಕ್ಯಾನಿಂಗ್ ಪ್ರಕ್ರಿಯೆಗೆ ವ್ಯವಸ್ಥಿತ ನಿಯಮಾವಳಿ ಮತ್ತು ಪರಿಶೀಲನಾ ಕ್ರಮಗಳನ್ನು ಆಗಸ್ಟ್ 30, 2024ರಂದು ಜಾರಿಗೆ ತಂದಿತು. ಇದರ ಪರಿಣಾಮವಾಗಿ 2024ರ ಏಪ್ರಿಲ್‌ನಿಂದ 2025ರ ಡಿಸೆಂಬರ್ ತನಕ ಅಗತ್ಯವಿರುವಷ್ಟೇ ಸಿಟಿ ಸ್ಕ್ಯಾನಿಂಗ್ ನಡೆಯಿತು. ಏಪ್ರಿಲ್‌ 2024 ರಿಂದ ಜುಲೈ 2024ರ ಅವಧಿಯಲ್ಲಿ ಒಟ್ಟು 98,311 ಸ್ಕ್ಯಾನಿಂಗ್ ನಡೆದು, ಅದಕ್ಕೆ 15.24 ಕೋಟಿ ರೂ. ವೆಚ್ಚವಾಗಿತ್ತು. ಆಗಸ್ಟ್ 2024ರಿಂದ ನವೆಂಬರ್ 2024ರ ಅವಧಿಯಲ್ಲಿ ಈ ಪ್ರಮಾಣ 76,217ಕ್ಕೆ ಇಳಿದು 11.81 ಕ...
ಜವಾಬ್ದಾರಿಯುತ AI ಬಳಕೆಯಲ್ಲಿ ಕರ್ನಾಟಕ ಮುಂಚೂಣಿ

ಜವಾಬ್ದಾರಿಯುತ AI ಬಳಕೆಯಲ್ಲಿ ಕರ್ನಾಟಕ ಮುಂಚೂಣಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಕೃತಕ ಬುದ್ಧಿಮತ್ತೆ (AI) ಮತ್ತು ಆಳವಾದ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವು ರಾಷ್ಟ್ರೀಯ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಜವಾಬ್ದಾರಿಯುತ AI ಬಳಕೆಯಲ್ಲಿ ಮಾದರಿ ರಾಜ್ಯವಾಗುವ ಗುರಿ ಹೊಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ದೆಹಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಮಾತನಾಡಿದ ಐಟಿ–ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಾಗತಿಕ ತಾಂತ್ರಿಕ ಅಡಚಣೆಗಳನ್ನು ಅವಕಾಶವನ್ನಾಗಿ ಬಳಸಿಕೊಳ್ಳಲು ಭಾರತಕ್ಕೆ, ವಿಶೇಷವಾಗಿ ಕರ್ನಾಟಕಕ್ಕೆ ಅಪಾರ ಸಾಮರ್ಥ್ಯವಿದೆ ಎಂದು ಹೇಳಿದರು.“ರಾಜ್ಯದಲ್ಲಿ ಕೌಶಲ್ಯ ಇನ್ಕ್ಯುಬೇಷನ್‌ ಹಾಗೂ ಸ್ಟಾರ್ಟ್‌ಅಪ್‌ಗಳಿಗೆ ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಜಾಗತಿಕ ನಾಯಕರೊಂದಿಗೆ ಚರ್ಚೆ ನಡೆಯುತ್ತಿದೆ. ಇ-ಆಡಳಿತ ಕ್ಷೇತ್ರದಲ್ಲಿ ಜವಾಬ್ದಾರಿಯುತ AI ಬಳಕೆಯಲ್ಲಿ ಮುಂಚೂಣಿಯಲ್ಲಿರಲು ಸರ್ಕಾರ ಬದ್ಧವಾಗಿದೆ,” ಎಂದು ಅವರು ಹೇಳಿದರು. ಕರ್ನಾಟಕದಲ್ಲಿ ದೇಶದ ಅತಿದೊಡ್ಡ AI ಪ್ರತಿಭಾ ಸಂಪನ್ಮೂಲಗಳಲ್ಲೊಂದು ಲಭ್ಯವಿದೆ ಎಂದು ಅವರು ಗಮನಿಸಿದರು.ನಾವೀನ್ಯತೆಯಲ್ಲಿ ನೈತಿಕತೆ ಅವಶ್ಯಕವೆಂದು ಒತ್ತಿಹೇಳಿದ ...
ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭ; ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಎಂದ ರೈತರು

ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭ; ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಎಂದ ರೈತರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭಿಸಲು ಸರ್ಕಾರ ನೀಡಿರುವ ಅನುಮತಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಂಡವಾಳಶಾಹಿ ರೆಸಾರ್ಟ್ ಮಾಲೀಕರ ಒತ್ತಡಕ್ಕೆ ಮಣಿದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಘಟನೆ ಆರೋಪಿಸಿದೆ.ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಪ್ರಕಟಣೆಯಲ್ಲಿ, “ಅರಣ್ಯದ ಅಂಚಿನಲ್ಲಿ ವಾಸಿಸುವ ಗ್ರಾಮಗಳ ರೈತರ ಕಷ್ಟ ಅರಿಯದೆ, ಕಾಡು ಪ್ರಾಣಿಗಳ ದಾಳಿಯಿಂದಾಗುತ್ತಿರುವ ಪ್ರಾಣಹಾನಿ ಹಾಗೂ ಬೆಳೆ ನಷ್ಟವನ್ನು ಲೆಕ್ಕಿಸದೆ ಸರ್ಕಾರ ಸಫಾರಿಗೆ ಅನುಮತಿ ನೀಡಿದೆ. ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಇಲ್ಲದಿದ್ದರೆ ರೈತ ಸಂಘಟನೆಗಳು ಬೀದಿಗಿಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.ಸಫಾರಿ ಕಾರ್ಯಾಚರಣೆಗಳಿಂದ ಕಾಡು ಪ್ರಾಣಿಗಳು ಭಯಭೀತಗೊಂಡು ಕಾಡಿನ ಹೊರಗೆ ಬರುತ್ತಿವೆ. ಇದರಿಂದ ಮನುಷ್ಯರ ಮೇಲೆ ದಾಳಿ ಹಾಗೂ ಬೆಳೆ ಹಾನಿ ಪ್ರಕರಣಗಳು ಹೆಚ್ಚುತ್ತಿವೆ ಎಂಬುದು ಸರ್ಕಾರಕ್ಕೂ ತಿಳಿದಿದೆ. ಆದರೂ ಆದಾಯದ ಲೆಕ್ಕಾಚಾರಕ್ಕೆ ಮಣಿದು ಅನುಮತಿ ನೀಡಿರುವುದು ಖಂಡನೀಯ ಎಂದು ಅವರು ಆರೋಪಿ...