
ಹಾಲಿನ ದರ ಏರಿಕೆ ಬದಲು ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದು ಮಾಡಿದ್ದರೆ 150 ಕೋಟಿ ರೂ ಉಳಿಸಬಹುದು
ಬೆಂಗಳೂರು,: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಹಿಡನ್ ಅಜೆಂಡಾ ಮಾಡಿ ಬಳಿಕ ತೆರಿಗೆ/ ದರ ಏರಿಕೆ ಮಾಡಲಾಗಿದೆ. ಪಾಪರ್ ಆಗಿಲ್ಲವೆಂದರೆ ಯಾಕಿಷ್ಟು ದರ ಏರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ. ಬಜೆಟ್ನಲ್ಲೇ ತೆರಿಗೆಗಳನ್ನು ಹಾಕಬೇಕಿತ್ತು. ಆದರೆ ಬಜೆಟ್ ಮುಗಿದ ನಂತರ ತೆರಿಗೆ, ದರ ಏರಿಕೆ ಮಾಡಿದ್ದಾರೆ. ಬಜೆಟ್ ನಂತರ ಎಲ್ಲಾ ಮಾಧ್ಯಮಗಳಲ್ಲಿ ಶಹಭಾಸ್ಗಿರಿ ಬರಬೇಕೆಂದು ಈ ರೀತಿ ಮೋಸ ಮಾಡಿದ್ದಾರೆ. ಮೋಸ ಮಾಡುವುದರಲ್ಲಿ ಸಿದ್ದರಾಮಯ್ಯ ನಂ.1 ಆಗಿದ್ದಾರೆ. ಧೈರ್ಯ ಇದ್ದಿದ್ದರೆ ತೆರಿಗೆ ಹೆಚ್ಚಳ ಕುರಿತು ಬಜೆಟ್ನಲ್ಲೇ ಘೋಷಿಸಬೇಕಿತ್ತು ಎಂದರು.ಇಡೀ ಆರ್ಥಿಕತೆ ವಿದ್ಯುತ್ ಹಾಗೂ ಪೆಟ್ರೋಲ್ ಮೇಲೆ ಅವಲಂಬಿತವಾಗಿದೆ. ಇದರ ದರ ಏರಿಕೆಯಾದರೆ ಎಲ್ಲ ವಸ್ತುಗಳ ದರ ಹೆಚ್ಚಾಗುತ...








