Wednesday, August 12

ವಿದೇಶ

ಸಿಎಂ ಸಿದ್ದರಾಮಯ್ಯ ಮನೆ ಬಾಗಿಲಿಗೆ ತಲುಪಿತೇ..? ಪೋಸ್ಟ್ ಹಾಕಿದ ಮಾಳವೀಯಗೆ ನೆಟ್ಟಿಗರ ಕ್ಲಾಸ್

ಸಿಎಂ ಸಿದ್ದರಾಮಯ್ಯ ಮನೆ ಬಾಗಿಲಿಗೆ ತಲುಪಿತೇ..? ಪೋಸ್ಟ್ ಹಾಕಿದ ಮಾಳವೀಯಗೆ ನೆಟ್ಟಿಗರ ಕ್ಲಾಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಟಿ ರನ್ಯಾ ರಾವ್ ಅಕ್ರಮ ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣ ರಾಜ್ಯ ರಾಜಕಾರಣದಲ್ಲೂ ತಲ್ಲಣ ಸೃಷ್ಟಿಸಿದೆ. ದುಬೈನಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹೊತ್ತು ತಂದ ಆರೋಪದಲ್ಲಿ ನಟಿ ರನ್ಯಾ ರಾವ್ ಬಂಧನವಾಗಿದೆ. ಈ ಸ್ಮಗ್ಲಿಂಗ್ ಕೇಸ್ ಕುರಿತಂತೆ DRI, CBI ತನಿಖೆ ನಡೆಸುತ್ತಿದ್ದು, ಪೊಲೀಸ್ ಅಧಿಕಾರಿಗಳ ಶಾಮೀಲು ಬಗ್ಗೆಯೂ ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ.ಇನ್ನೊಂದೆಡೆ ರಮ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್'ನಲ್ಲಿ ರಾಜ್ಯದ ಸಚಿವರಿಬ್ಬರ ಕೈವಾಡ ಇರುವ ಬಗ್ಗೆ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡುತ್ತಿದ್ದು ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕರ ನಡುವೆ ವಾಕ್ಸಮರ ನಡೆದಿದೆ. ಕೆಜಿಎಫ್..? ಈ ಮಧ್ಯೆ, ಕರ್ನಾಟಕದಲ್ಲಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಬಾಗಿಲಿಗೆ ತಲುಪಿದೆ ಎಂದು ಬಿಜೆಪಿ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ.'ಕಾಂಗ್ರೆಸ್ ಗೋಲ್ಡ್ ಫೀಲ್ಡ್' (#CongressGoldField) ಎಂಬ ಹ್ಯಾಷ್ ಟ್ಯಾಗ್ ಮೂಲಕ ಸಾಮಾಜಿಕ...
‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ

‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಬೆಂಗಳೂರು: ತನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ನಟ ಸರ್ಶನ್ ಬೇಸರ ವ್ಯಕ್ತಪಡಿಸಿದ್ಫ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ದರ್ಶನ್, ಇನ್ನೂ ಸಾಧನೆ ಮಾಡದ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ. View this post on Instagram  A post shared by Darshan Thoogudeepa Shrinivas (@darshanthoogudeepashrinivas)'ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಅದರಿಂದ ಡ...
2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಜ್ವಲ್ ದೇವರಾಜ್, ಅಕ್ಷತಾಗೆ ಅತ್ಯುತ್ತಮ ನಟ, ನಟಿ ಪುರಸ್ಕಾರ

2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಜ್ವಲ್ ದೇವರಾಜ್, ಅಕ್ಷತಾಗೆ ಅತ್ಯುತ್ತಮ ನಟ, ನಟಿ ಪುರಸ್ಕಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಪ್ರಜ್ವಲ್ ದೇವರಾಜ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾದರೆ, ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿಯಾಗಿ ಗುರುತಾಗಿದ್ದಾರೆ. ಪಿಂಕಿ ಎಲ್ಲಿ ಸಿನಿಮಾಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ. ಪ್ರಶಸ್ತಿ ಪಟ್ಟಿ ಹೀಗಿದೆ.ಅತ್ಯುತ್ತಮ ನಟ: ಪ್ರಜ್ವಲ್‍ ದೇವರಾಜ್‍ (ಚಿತ್ರ: ಜಂಟಲ್‌ಮನ್) ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಚಿತ್ರ: ಪಿಂಕಿ ಎಲ್ಲಿ) ಅತ್ಯುತ್ತಮ ಪೋಷಕ ನಟ: ರಮೇಶ್‍ ಪಂಡಿತ್‍, ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ, ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ 2ನೇ ಅತ್ಯುತ್ತಮ ಚಿತ್ರ: ವರ್ಣಪಟಲ 3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು ವಿಶೇಷ ಸಾಮಾಜಿಕ ಕಾಳಜಿ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಫೋರ್ ವಾಲ್ಸ್ ಅತ್ಯುತ್ತಮ ಮಕ್ಕಳ ಚಿತ್ರ: ಪದಕ ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ನೀಲಿ ಹಕ್ಕಿ ಅತ್ಯುತ್ತಮ ಪ್ರಾದೇಶಿಕ ಚಿತ್ರ: ಜೀಟಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ: ...
‘ಗ್ಯಾರಂಟಿ’ ಅವಾಂತರ: ಜನರ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ?

‘ಗ್ಯಾರಂಟಿ’ ಅವಾಂತರ: ಜನರ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.'UDAYA NEWS' ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ. ಆ ಹಣವನ್ನು ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುಖಂಡರನ್ನು ನೇಮಿಸಿ, 25,000 ರೂ. ಸಂಬಳ ನೀಡಿ, ಅವರಿಗೆ ಆಪ್ತ ಸಹಾಯಕರನ್ನು ನೇಮಿಸಲಾಗುತ್ತಿದೆ. 1,100 ರೂ. ಸಿಟ್ಟಿಂಗ್‌ ಫೀಸ್‌ ನಿಗದಿಪಡಿಸಲಾಗಿದೆ. ರಾಜ್ಯದ ಅಧ್ಯಕ್ಷನಿಗೆ 40,000 ರೂ. ಸಂಬಳ, ಉಪಾಧ್ಯಕ್ಷನಿಗೆ 25,000 ರೂ. ಸಂಬಳ ನೀಡಲಾಗುತ್ತಿದೆ. ಪ್ರತಿ ವರ್ಷ 15-20 ಕೋಟಿ ರೂ. ಲೂಟಿ...
‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ

‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ಯಾವ ಗ್ಯಾರಂಟಿ ಕೊಡದಿದ್ದರೂ ಸರ್ಕಾರ ರಾಜ್ಯದ ಜನರ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗೆ ಆದ್ಯತೆ ನೀಡಿ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರ ಕೈಗೊಳ್ಳುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ವಿಜಯೇಂದ್ರ, ಸರ್ಕಾರದ ತೀರ್ಮಾನಗಳ ಬಗ್ಗೆ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಶೈಕ್ಷಣಿಕ ಕ್ಷೇತ್ರಕ್ಕೆ ಪೆಟ್ಟು ಬೀಳಲಿದೆ ಎಂಬ ಮಾತು ಅಕ್ಷರಶಃ ಸತ್ಯ. 9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟು ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಒಂದೆಡೆಯಾದರೆ ಮತ್ತೊಂದೆಡೆ ಇರುವ ವಿಶ್ವವಿದ್ಯಾಲಯಗಳ ಪರಿಸ್ಥಿತಿ ಶೋಚನೀಯ ಹಂತ ತಲುಪಿರುವುದು ಆರ್ಥಿಕ ದಿವಾಳಿ ಅಂಚಿಗೆ ತಲುಪಿರುವ ಸರ್ಕಾರದ ದುಸ್ಥಿತಿಯನ್ನು ಸಾಕ್ಷೀಕರಿಸುತ್ತಿದೆ ಎಂದು ವಿಷಮೇಶಿಸಿದ್ದಾರೆ.ಶಿಕ್ಷಣದ ದೂರದೃಷ್ಟಿ ಹಾಗೂ ಉನ್ನತ ಶಿಕ್ಷಣದ ಹಕ್ಕು ಪ್ರತಿಯೊಬ್ಬ...
ಗೋಲ್ಡ್ ಸ್ಮಗ್ಲಿಂಗ್ ಕೇಸ್: ಡಿಜಿಪಿ ರಾಮಚಂದ್ರ ರಾವ್ ವಿರುದ್ಧವೂ ತನಿಖೆಗೆ ಆದೇಶ

ಗೋಲ್ಡ್ ಸ್ಮಗ್ಲಿಂಗ್ ಕೇಸ್: ಡಿಜಿಪಿ ರಾಮಚಂದ್ರ ರಾವ್ ವಿರುದ್ಧವೂ ತನಿಖೆಗೆ ಆದೇಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ರಾಜಕಾರಣದಲ್ಲೂ ತಲ್ಲಣ ಸೃಷ್ಟಿಸಿರುವ ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಹಠಾತ್ ತಿರುವು ಸಿಕ್ಕಿದೆ‌. ಈ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿರುದ್ಧವೂ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದಲ್ಲಿ ನಟಿ ರನ್ಯಾ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ನಟಿ ರನ್ಯಾ ಅವರು ವಿಮಾನ ನಿಲ್ದಾಣದಲ್ಲಿ ತಂದೆಯ ಹೆಸರು ಬಳಸಿ ಭದ್ರತಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ.ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ ಬಗ್ಗೆ ಈ ತನಿಖೆ ನಡೆಯಲಿದೆ. ಇದಕ್ಕಾಗಿ ಹಿರಿಯ ಐಪಿಎಸ್ ಅಧಿಕಾರಿ ಗೌರವ್ ಗುಪ್ತಾ ತನಿಖಾ ಅಧಿಕಾರಿಯಾಗಿ ಸರ್ಕಾರ ನೇಮಿಸಿದೆ....
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ Mo-Jo-Kit: ಅರ್ಜಿ ಆಹ್ವಾನ.

ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ Mo-Jo-Kit: ಅರ್ಜಿ ಆಹ್ವಾನ.

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ Mo-Jo-Kitಗಳನ್ನು ವಿತರಿಸಲು ಸರ್ಕಾರ ಅರ್ಜಿ ಆಹ್ವಾನಿಸಿದೆ.ಇಂಗ್ಲಿಷ್‌ನಲ್ಲೂ UdayaNews ಲಭ್ಯ ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು.ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬAಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮು...
ಅಮೆಜಾನ್, ಬಿಗ್ ಬ್ಯಾಸ್ಕೆಟ್, ಡಿ.ಮಾರ್ಟ್ ಸೇರಿದಂತೆ ಎಲ್ಲ ಇ–ಪ್ಲಾಟ್​ಫಾರ್ಮ್ ಎಪಿಎಂಸಿ ವ್ಯಾಪ್ತಿಗೆ

ಅಮೆಜಾನ್, ಬಿಗ್ ಬ್ಯಾಸ್ಕೆಟ್, ಡಿ.ಮಾರ್ಟ್ ಸೇರಿದಂತೆ ಎಲ್ಲ ಇ–ಪ್ಲಾಟ್​ಫಾರ್ಮ್ ಎಪಿಎಂಸಿ ವ್ಯಾಪ್ತಿಗೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅಮೆಜಾನ್, ಬಿಗ್ ಬ್ಯಾಸ್ಕೆಟ್, ಡಿ.ಮಾರ್ಟ್ ಸೇರಿದಂತೆ ಎಲ್ಲ ಇ–ಪ್ಲಾಟ್​ಫಾರ್ಮ್ ವೇದಿಕೆಗಳು ಇನ್ಮುಂದೆ ಎಪಿಎಂಸಿ ನಿಯಂತ್ರಣಕ್ಕೆ ಬರಲಿವೆ. ಈ ಸಂಬಂಧದ ವಿದೇಯಕವನ್ನು ವಿಧಾನಸಭೆ ಅಂಗೀಕರಿಸಿದೆ.ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಈ ವಿದೇಯಕ ಸೋಮವಾರ ಅಂಗೀಕಾರಗೊಂಡಿದೆ.ಮಸೂದೆ ಮಂಡಿಸಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಈ ಹಿಂದೆ ಸರ್ಕಾರ ಎಪಿಎಂಸಿ ಯಾರ್ಡ್‌ಗಳನ್ನು ಮಾತ್ರ ನಿಯಂತ್ರಿಸುತ್ತಿತ್ತು. ಆದರೆ ಈ ಕಾಮರ್ಸ್ ಕ್ಷೇತ್ರವನ್ನು ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ಇದೀಗ ಈ ಮಸೂದೆ ಕಾನೂನು ಆಗಿ ಜಾರಿಗೆ ಬಂದರೆ ಸೆಸ್ ಪಾವತಿಸದೆ ವ್ಯಾಪಾರ ಮಾಡುವುದನ್ನು ನಿಯಂತ್ರಿಸಲು ಈ ಕಾನೂನು ತರುತ್ತಿದ್ದೇವೆ ಎಂದು ತಿಳಿಸಿದರುಈ ಮಸೂದೆಯಿಂದಾಗಿ ಇ- ಪ್ಲಾಟ್ ಫಾರ್ಮ್'ಗಳಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಲೈಸನ್ಸ್, ಸೆಸ್ ನಿರ್ವಹಿಸುವ, ಅಮಾನತುಪಡಿಸುವ ಅಧಿಕಾರ ಎಪಿಎಂಸಿ ಅಧಿಕಾರಿಗಳಿಗೆ ಲಭಿಸಲಿದೆ....
ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಟಿ ಶಬಾನಾ ಆಜ್ಮಿ ಅವರಿಗೆ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಬಾನಾ ಆಜ್ಮಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಪತ್ರ ಮತ್ತು 10 ಲಕ್ಷದ ಚೆಕ್ ನೀಡಿ, ಗೌರವಿಸಿದರು.ವಿಶ್ವ ವಿಖ್ಯಾತ ಕವಿ, ಗೀತರಚನೆಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಸಿಎಂ ಜೊತೆಗಿದ್ದರು. ಈ ಸಂದರ್ಭದ ಫೋಟೋಗಳನ್ನು ಸಿಎಂ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.  https://x.com/siddaramaiah/status/1899024225031139447ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದರು....
ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ವೈದ್ಯರ ಕರ್ತವ್ಯ ನಿರ್ವಹಣೆ ಕಡ್ಡಾಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ವೈದ್ಯರ ಕರ್ತವ್ಯ ನಿರ್ವಹಣೆ ಕಡ್ಡಾಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟೀಸ್ ಮಾಡುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ವಿಧಾನಪರಿಷತ್‍ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ ಸಂಜೆ 4 ಗಂಟೆವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದರು.ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾ...