Wednesday, August 12

ವಿದೇಶ

ಪ್ರಾಧ್ಯಾಪಕಿ ‘ಲವೀನಾ ಮಾರಿಯೆಟ್ ವೇಗಸ್’ ಅವರಿಗೆ PhD ಪದವಿ

ಪ್ರಾಧ್ಯಾಪಕಿ ‘ಲವೀನಾ ಮಾರಿಯೆಟ್ ವೇಗಸ್’ ಅವರಿಗೆ PhD ಪದವಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಂಗಳೂರು ಮೂಲದ ಪ್ರಾಧ್ಯಾಪಕಿ ಲವೀನಾ ಮಾರಿಯೆಟ್ ವೇಗಸ್ ಅವರು ಯಶೋಗಾಥೆ ಬರೆದಿದ್ದಾರೆ. ಅವರ ಸುದೀರ್ಘ ಸಂಶೋಧನೆ ಹಾಗೂ ಮಹಾ ಪ್ರಬಂಧಕ್ಕೆ ಪ್ರತಿಷ್ಠಿತ ಕ್ರೈಸ್ಟ್ ವಿಶ್ವವಿದ್ಯಾಲಯವು ಸಂತ ಜೋಸೆಫ್ ವಿಶ್ವ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲವೀನಾ ಮಾರಿಯೆಟ್ ವೇಗಸ್ ಅವರಿಗೆ ಪಿಎಚ್.ಡಿ. ಪದವಿ ಪ್ರಕಟಿಸಿದೆ.ಅಪರೂಪದಲ್ಲಿ ಅಪರೂಪದ ಸಂಶೋಧನೆ ಎಂಬ ಹೆಗ್ಗಳಿಕೆಗೆ ಲವೀನಾ ಮಾರಿಯೆಟ್ ವೇಗಸ್ ಪಾತ್ರರಾಗಿದ್ದಾರೆ. 'ಮೋಡಿಫೈಡ್ ಮಲ್ಟಿ ವಾಲ್ಡ್ ಕಾರ್ಬನ್ ನಾನೊಟ್ಯೂಬ್ ಬೇಸ್ಡ್ ಸಿಸ್ಟಮ್ಸ್ ಫಾರ್ ಕ್ಯಾಟಲಿಸ್ಟ್ ಅಂಡ್ ಟ್ರಾನ್ಸ್ಪರೆಂಟ್ ಕಂಡಕ್ಟಿಂಗ್ ಎಲೆಕ್ಟ್ರೋಡ್ ಅಪ್ಲಿಕೇಶನ್ ' (MODIFIED MULTIWALLED CARBON NANOTUBE BASED SYSTEMS FOR CATALYTIC AND TRANSPARENT CONDUCTING ELECTRODE APPLICATIONS) ಎಂಬ ವಿಷಯದಲ್ಲಿ ಇತ್ತೀಚೆಗಷ್ಟೇ ಮಂಡಿಸಿರುವ ಸಂಶೋಧನಾ ಮಹಾ ಪ್ರಬಂಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮಸೆಳೆದಿದೆ. ರಾಷ್ಟ್ರೀಯ ವಿಜ್ಞಾನ ತಂತ್ರಜ್ಞಾನ ಪರಿಣಿತ ಶಿಕ್ಷಣ ತಜ್ಞರು ಈ ಮಹಾಪ್ರಬಂಧವನ್ನು ಶ್ಲಾಘಿಸಿ, ತತ್ವಜ್ಞಾನಿಗಳ ಸಾಲಿಗೆ ಲವೀನಾ ಮಾರಿಯೆಟ್ ವೇಗಸ್ ಅವ...
ಮುಸ್ಲಿಮರ ಬಗ್ಗೆ ‘ಲೆಹರ್ ಸಿಂಗ್’ ಅನುಕಂಪದ ಲಹರಿ? ಕೆಪಿಸಿಸಿ ರಮೇಶ್ ಬಾಬು ವ್ಯಂಗ್ಯ

ಮುಸ್ಲಿಮರ ಬಗ್ಗೆ ‘ಲೆಹರ್ ಸಿಂಗ್’ ಅನುಕಂಪದ ಲಹರಿ? ಕೆಪಿಸಿಸಿ ರಮೇಶ್ ಬಾಬು ವ್ಯಂಗ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅಲ್ಪಸಂಖ್ಯಾತ ಮಾರ್ವಾಡಿ ಸಮುದಾಯದವರೆಂದು ಹೇಳಿಕೊಂಡಿರುವ ಲೆಹರ್ ಸಿಂಗ್ ಅವರು ಮುಸಲ್ಮಾನ್ ಸಮುದಾಯದ ಬಗ್ಗೆ ವಿಶೇಷ ಕಾಳಜಿಯನ್ನು ವ್ಯಕ್ತಪಡಿಸುತ್ತಿರುವುದು ಅಚ್ಚರಿಯ ಸಂಗತಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ. ಜಸ್ಟಿಸ್ ಆನಂದ್ ಅವರ ವರದಿಯನ್ನು ಇಟ್ಟುಕೊಂಡು ಲೆಹರ್ ಸಿಂಗ್ ದೊಡ್ಡಮಟ್ಟದ ನಾಟಕ ಆಡಲು ಪ್ರಯತ್ನ ಪಡುತ್ತಿದ್ದಾರೆ ಎಂದೂ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ.ಲೆಹರ್ ಸಿಂಗ್ ಅವರು ರಾಜ್ಯ ಬಜೆಟ್ ಬಗ್ಗೆ ಟೀಕಿರುವ ವೈಖರಿ ಬಗ್ಗೆ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ರಾಜ್ಯಸಭಾ ಸದಸ್ಯರಾದ ರಾಜಸ್ಥಾನಿ ಲೆಹರ್ ಸಿಂಗ್ ರವರು ಕಾಂಗ್ರೆಸ್ ಸರ್ಕಾರದ ಮೇಲೆ ಅನೇಕ ಆರೋಪಗಳನ್ನು ಮಾಡಿರುತ್ತಾರೆ. ತಾವೇ ಸ್ವತಃ ಅಲ್ಪಸಂಖ್ಯಾತ ಮಾರ್ವಾಡಿ ಸಮುದಾಯದವರೆಂದು ಹೇಳಿಕೊಂಡಿರುವ ಲೆಹರ್ ರವರು ಮುಸಲ್ಮಾನ್ ಸಮುದಾಯದ ಬಗ್ಗೆ ವಿಶೇಷವಾದ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಸ್ಟಿಸ್ ಆನಂದ್ ಆಯೋಗದ ವಖ್ಫ್ ಆಸ್ತಿಗೆ ಸಂಬಂಧಪಟ್ಟಂತಹ ವರದಿಯನ್ನು ನಿಷ್ಕ್ರಿಯ ಗೊಳಿಸಿದೆ ಎಂದ...
‘ನಟಿ ರಶ್ಮಿಕಾಗೆ ರಕ್ಷಣೆ ಕೊಡಿ’: ಕೊಡವ ರಾಷ್ಟ್ರೀಯ ಮಂಡಳಿಆಗ್ರಹ

‘ನಟಿ ರಶ್ಮಿಕಾಗೆ ರಕ್ಷಣೆ ಕೊಡಿ’: ಕೊಡವ ರಾಷ್ಟ್ರೀಯ ಮಂಡಳಿಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರು ರಾಜ್ಯದ ಬಗ್ಗೆ ಅಗೌರವ ತೋರಿದ್ದಾರೆ ಎಂಬ ಆರೋಪದ ಮೇಲೆ ಕರ್ನಾಟಕದ ಕನ್ನಡ ಸಂಘಟನೆಗಳು ಮತ್ತು ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಕೊಡವ ರಾಷ್ಟ್ರೀಯ ಮಂಡಳಿ ಅವರಿಗೆ ರಕ್ಷಣೆ ನೀಡುವಂತೆ ಕೋರಿದೆ.ಪರಿಷತ್ತಿನ ಅಧ್ಯಕ್ಷ ಎನ್.ಯು. ನಾಚಪ್ಪ ಅವರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕರ್ನಾಟಕದ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಈ ವಿಷಯದ ಕುರಿತು ಪತ್ರ ಬರೆದಿದ್ದಾರೆ.ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಾಣಿಗ ಅವರು ರಶ್ಮಿಕಾ ಅವರನ್ನು ಟೀಕಿಸಿದ್ದರು. ಕರ್ನಾಟಕ ಸರ್ಕಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಶ್ಮಿಕಾ ಆಹ್ವಾನವನ್ನು ನಿರಾಕರಿಸಿದ್ದಾರೆ ಎಂದು ಶಾಸಕರು ಆರೋಪಿಸಿದ್ದರು. ರಶ್ಮಿಕಾ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದಾರೆ ಮತ್ತು ಕರ್ನಾಟಕ ಎಲ್ಲಿದೆ ಎಂದು ತಿಳಿದಿಲ್ಲ ಎಂದು ಹೇಳಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದರು.ಈ ಬೆಳವಣಿಗೆಗಳ ನಂತರ, ಅನೇಕ ಕನ್ನಡ ಸಂಘಟನೆಗಳು ಮತ್ತು ಕಾರ್ಯಕರ್ತರು ರಶ್ಮಿಕಾ ಅವರನ್ನು ಟೀಕಿಸಿದ್ದಾರೆ ಮತ್ತು ಅವರಿಂದ ಕ್ಷಮೆಯಾಚಿಸಬೇಕೆಂದು ಒತ...
ಸರ್ವರ ಹಿತ ಕಾಂಗ್ರೆಸ್‌ ಸರ್ಕಾರದ ಪಥ: ರಣದೀಪ್‌ ಸುರ್ಜೇವಾಲ

ಸರ್ವರ ಹಿತ ಕಾಂಗ್ರೆಸ್‌ ಸರ್ಕಾರದ ಪಥ: ರಣದೀಪ್‌ ಸುರ್ಜೇವಾಲ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ʻʻನನ್ನ ದೃಷ್ಟಿಯಲ್ಲಿ ಹೆಣ್ಣು ಕೇವಲ ಮಾನುಷಿಯಲ್ಲ, ಅಬಲೆಯೂ ಅಲ್ಲ. ಅವಳೊಂದು ಮಹಾಶಕ್ತಿʼʼ ಎಂಬುದಾಗಿ ನಮ್ಮ ರಾಷ್ಟ್ರಕವಿ ಕುವೆಂಪು ಅವರು ಹೇಳಿದ್ದು ಅಕ್ಷರಶಃ ಸತ್ಯ. ಈ ವಾಕ್ಯದಂತೆ ಕರ್ನಾಟಕದ ನಮ್ಮ ಕಾಂಗ್ರೆಸ್‌ ಸರ್ಕಾರ ನಡೆಯುತ್ತಿದೆ. ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಕಾಂಗ್ರೆಸ್‌ ಸರ್ಕಾರದ ಸಂಕಲ್ಪವಾಗಿದೆ. ಅಲ್ಲದೆ, ʻಸರ್ವರ ಹಿತ - ಕಾಂಗ್ರೆಸ್ ಸರ್ಕಾರದ ಫಥʼ ಎಂಬುದು ನಮ್ಮ ಧ್ಯೇಯವಾಕ್ಯವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.ರಾಜ್ಯ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಬಜೆಟ್ 4.09 ಲಕ್ಷ ಕೋಟಿ ರೂ.ಗಳನ್ನು ಒಳಗೊಂಡಿದೆ. ಕಳೆದ ವರ್ಷದ ಬಜೆಟ್ ಅಂದಾಜುಗಳಿಗಿಂತ ಶೇ. 10.3ರಷ್ಟು ಬೆಳವಣಿಗೆ ಕಂಡುಬಂದಿದೆ. ಕರ್ನಾಟಕ ರಾಜ್ಯದ ಜಿಡಿಪಿ 7.4% ರಷ್ಟು ಬೆಳೆದಿದೆ ಅದರೊಂದಿಗೆ ಕೃಷಿ ಕ್ಷೇತ್ರದಲ್ಲಿ ಕೂಡ ಶೇ. 4ರಷ್ಟು ಬೆಳವಣಿಗೆಯನ್ನು ಕಂಡಿದೆ. ಕರ್ನಾಟಕ ರಾಜ್ಯದ ಜಿಡಿಪಿ ರಾಷ್ಟ್ರೀಯ ಬೆಳವಣಿಗೆಯನ್ನು ಶೇ. 6.2% ರಷ್ಟು ಮೀರಿಸಿದೆ. ಇದು ಕರ್ನಾಟಕ ರಾಜ್ಯದ ಅಭಿವೃದ್ಧಿಯಲ್ಲಿ ನಮ್ಮ ಕಾಂಗ್ರೆಸ್...
ಬಹುಭಾಷಾ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಬಹುಭಾಷಾ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನೀಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಬಹುಭಾಷಾ ನಟಿ ಶಬಾನಾ ಆಜ್ಮಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ಈ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗುತ್ತಿರುವ ಶಬಾನಾ ಆಜ್ಮಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಸ್ದದಾರೇ.70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ‌ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಅವರ ಕಲಾಸೇವೆಗೆ ಸಂದ ಈ ಗೌರವವು...
ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ..! ಹಿಂದೂ ವಿದ್ಯಾರ್ಥಿಗಳಿಗೆ ಯಾಕಿಲ್ಲ? ವಿಜಯೇಂದ್ರ ಪ್ರಶ್ನೆ

ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ..! ಹಿಂದೂ ವಿದ್ಯಾರ್ಥಿಗಳಿಗೆ ಯಾಕಿಲ್ಲ? ವಿಜಯೇಂದ್ರ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ‌ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ ದುಸ್ಸಾಹಸಕ್ಕೆ ಸಿದ್ದರಾಮಯ್ಯರವರು ಕೈ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಸ್ಲಿಮ್ ಮಹಿಳೆಯರಿಗೆ ಸ್ವಯಂರಕ್ಷಣೆಗಾಗಿ ತರಬೇತಿ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಹಿಂದೂ ಮಹಿಳೆಯರಿಗೆ ಯಾಕಿಲ್ಲ? ಮುಸ್ಲಿಂ ಬಡ ಮಹಿಳೆಯರ ಸರಳ ವಿವಾಹಕ್ಕೆ ರೂ. 50,000 ಪ್ರೋತ್ಸಾಹ ಧನ ಘೋಷಣೆ ಮಾಡಿದ್ದಾರೆ. ಹಿಂದೂಗಳಲ್ಲಿ ಬಡ ಮಹಿಳೆಯರು ಇಲ್ಲವೇ? ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ಕಲಿಕೆಗಾಗಿ ಪ್ರೋತ್ಸಾಹಧನ ರೂ. 20 ಲಕ್ಷ ಇದ್ದದ್ದನ್ನು ರೂ. 30 ಲಕ್ಷಕ್ಕೆ ಏರಿಸಲಾಗಿದೆ. ಯಾಕೆ ಈ ರೀತಿಯ ಯೋಜನೆಗಳು ಹಿಂದೂ ವಿದ್ಯಾರ್ಥಿಗಳಿಗಿಲ್ಲ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನಿರಾಸಾದಾಯಕವಾಗಿದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿ‌ ಪಡಿಸಲು ಧರ್ಮ-ಧರ್ಮಗಳ ನಡುವೆ ವಿಭಜಿಸುವ ದುಸ್ಸಾಹ...
ಮತ್ತೆ ಎತ್ತಿನಹೊಳೆ ಸದ್ದು; ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ

ಮತ್ತೆ ಎತ್ತಿನಹೊಳೆ ಸದ್ದು; ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಎತ್ತಿನ ಹೊಳೆ ಇದೀಗ ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ ತೆರಳಲಿದೆ.ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾ.18 ರಂದು ತಾವು ದೆಹಲಿಗೆ ತೆರಳಿ ಕೇಂದ್ರದ ನಾಯಕರ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟ. 508 ಎಕರೆ 1 ಗುಂಟೆ ವಿಸ್ತೀರ್ಣದ ಅರಣ್ಯ ಭೂಮಿ ಬಳಕೆಗೆ ದೆಹಲಿಗೆ ತೆರಳಿ ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.ಎಲ್ಲಾ ಅಡೆತಡೆಗಳನ್ನು ನಿವಾರಿಸಿ ತುಮಕೂರಿಗೆ ನೀರು ತಂದು, ಚಿಕ್ಕಬಳ್ಳಾಪುರಕ್ಕೆ ನೀರು ತರಲಾಗುವುದು ಎಂದು ಡಿಕೆಶಿ ಭರವಸೆ ನೀಡಿದರು....
ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ: ಆರ್‌.ಅಶೋಕ ಖಾರ ಪ್ರತಿಕ್ರಿಯೆ

ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ: ಆರ್‌.ಅಶೋಕ ಖಾರ ಪ್ರತಿಕ್ರಿಯೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು, ಮಾರ್ಚ್‌: ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಜೆಟ್‌ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊನೆಯ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ ತಿಪ್ಪೆ ಸಾರಿಸುವಂತೆ ಹಿಂದಿನ ಕಾರ್ಯಕ್ರಮಗಳನ್ನು ಮುಂದುವರಿಸಲಾಗಿದೆ. ಹಳೆ ಮೈಸೂರು ಅಥವಾ ಉತ್ತರ ಕರ್ನಾಟಕಕ್ಕೆ ನೀರಾವರಿ ಯೋಜನೆಗಳನ್ನು ಕೇಂದ್ರ ಸರ್ಕಾರದ ಅನುಮತಿ ಬಳಿಕ ಮುಂದುವರಿಸುತ್ತೇವೆ ಎಂದು ತಿಳಿಸಲಾಗಿದೆ. ಇದನ್ನು ಓದಿ ಪುಟಗಳನ್ನು ವ್ಯರ್ಥ ಮಾಡಲಾಗಿದೆ ಎಂದರು.ಕರ್ನಾಟಕದ ಇತಿಹಾಸದಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಅಂದರೆ 1,16,170 ಕೋಟಿ ರೂ. ಸಾಲ ಮಾಡಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಾಖಲೆಯಾಗಿದೆ. ಒಟ್ಟು ಸಾಲದ ಪ್ರಮಾಣ 7,81,095 ಕೋಟಿ ರೂ. ಗೆ ಏರಿದೆ. ಅಬಕಾರಿ ಇಲಾಖೆಗೆ 60,000 ಕೋಟಿ ರೂ. ಗುರಿ ನೀಡಿ, ...
ರಾಜ್ಯ ಬಜೆಟ್: ಕೌಶಲ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ನೀಡಿರುವ ಕೊಡುಗೆಗಳು ಅಮೂಲ್ಯ ಎಂದ ಶರಣ್‌ ಪ್ರಕಾಶ್‌ ಪಾಟೀಲ್‌

ರಾಜ್ಯ ಬಜೆಟ್: ಕೌಶಲ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ನೀಡಿರುವ ಕೊಡುಗೆಗಳು ಅಮೂಲ್ಯ ಎಂದ ಶರಣ್‌ ಪ್ರಕಾಶ್‌ ಪಾಟೀಲ್‌

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಸವಾಲು ಒಡ್ಡುವ ರೀತಿಯಲ್ಲಿ ನಮ್ಮ ಕರುನಾಡಿನ ಯುವ ಸಮೂಹವನ್ನು ತಯಾರು ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೌಶಲ್ಯಾಭಿವೃದ್ಧಿ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್* ತಿಳಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ ಹದಿನಾರನೇ ಬಜೆಟ್‌ ಮಂಡಿಸಿದ ನಂತರ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮ ಪಡೆದವರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲು ನಮ್ಮ ಸರ್ಕಾರವು ʻಯುವನಿಧಿʼ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈಗಾಗಲೇ ಸುಮಾರು 2.58 ಲಕ್ಷ ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, 286 ಕೋಟಿ ರೂ. ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ In...
ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮ: ಶರಣ್ ಪ್ರಕಾಶ್ ಪಾಟೀಲ್

ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮ: ಶರಣ್ ಪ್ರಕಾಶ್ ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿನ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅತಿ ಶೀಘ್ರವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.ಗುರುವಾರ ನಡೆದ ವಿಧಾನ ಸಭೆ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ.ತಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು, ಮಲೆನಾಡು ಭಾಗದ ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ತೆರೆದ ಬಾವಿ ನಿರ್ಮಿಸಲು ಚಿಂತನೆ ನಡೆದಿದೆ ಎಂದು ತಿಳಿಸಿದರು.ಕಳೆದ ಬಿಜೆಪಿ ಸರ್ಕಾರ ಚಿಕ್ಕಮಗಳೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿ, ಶಂಕುಸ್ಥಾಪನೆ ನೇರವೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ 100 ಕೋಟಿ ರೂ. ಹಣ ನೀಡಿದೆ. ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. 10 ಬೋರ್ ವೆಲ್ ಕೊರೆದರೂ ನೀರು ಸಿಗ...