Wednesday, August 12

ವಿದೇಶ

ಕಾಂಗ್ರೆಸ್‌ ಹೈಕಮಾಂಡ್‌ಗೆ ಧಮ್‌ ಇದ್ದರೆ ಡಿ.ಕೆ.ಶಿವಕುಮಾರ್‌ ಅವರನ್ನು ಅಮಾನತು ಮಾಡಲಿ: ಅಶೋಕ್

ಕಾಂಗ್ರೆಸ್‌ ಹೈಕಮಾಂಡ್‌ಗೆ ಧಮ್‌ ಇದ್ದರೆ ಡಿ.ಕೆ.ಶಿವಕುಮಾರ್‌ ಅವರನ್ನು ಅಮಾನತು ಮಾಡಲಿ: ಅಶೋಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಈಶ ಫೌಂಡೇಶನ್‌ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್‌ ಭಾಗವಹಿಸಿರುವ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಕಂಡುಬಂದಿದೆ. ಡಿಕೆಶಿ ನಡೆಯನ್ನು ಬಿಜೆಪಿ ನಾಯಕರು ಸ್ವಾಗತಿಸಿದರೆ, ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ.ಕಾಂಗ್ರೆಸ್ ನಾಯಕರ ನಿಲುವಿನ ಬಗ್ಗೆ ಟೀಕಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್‌ ಹೈಕಮಾಂಡ್‌ಗೆ ಧಮ್‌ ಇದ್ದರೆ ಡಿ.ಕೆ.ಶಿವಕುಮಾರ್‌ ಅವರನ್ನು ಅಮಾನತು ಮಾಡಲಿ ಎಂದು ಸವಾಲು ಹಾಕಿದ್ದಾರೆ.ಮಂಡ್ಯದಲ್ಲಿ ಪ್ರತಿಕ್ರಿಯಿಸಿರುವ ಅವರು, ಡಿ.ಕೆ.ಶಿವಕುಮಾರ್‌ ಕುಂಭಮೇಳಕ್ಕೆ ಹೋದಾಗ ಕಾಂಗ್ರೆಸ್‌ ಹೈಕಮಾಂಡ್‌ ಏನೂ ಮಾಡಲಿಲ್ಲ. ಪ್ರಧಾನಿಯನ್ನು ಭೇಟಿ ಮಾಡಿದಾಗಲೂ ಏನೂ ಮಾಡಲಿಲ್ಲ. ಉತ್ತರಪ್ರದೇಶದ ಮುಖ್ಯಮಂತ್ರಿಯನ್ನು ಹಾಡಿ ಹೊಗಳಿದರೂ ಸುಮ್ಮನಿದ್ದರು. ಇತ್ತೀಚೆಗೆ ಈಶ ಫೌಂಡೇಶನ್‌ಗೆ ಹೋಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ಗೆ ಧಮ್‌ ಇದ್ದರೆ ಡಿ.ಕೆ.ಶಿವಕುಮಾರ್‌ ಅವರನ್ನು ಅಮಾನತು ಮಾಡಲಿ ಎಂದರು. ನಾವ್ಯಾರೂ ಡಿ.ಕೆ.ಶಿವಕುಮಾರ್‌ ಅವರನ್ನು ಪಕ್ಷಕ್ಕೆ ಆಹ್ವಾನಿಸಿಲ್ಲ ಎಂದು ಅಶೋಕ್ ಹೇಳಿದರು. ...
‘ಶಿಕ್ಷಣ ಎಂದರೆ ವ್ಯಾಪಾರವಲ್ಲ’: ವಿವಿ ಮುಚ್ಚುವ ನಿರ್ಧಾರಕ್ಕೆ ಆಕ್ಷೇಪ

‘ಶಿಕ್ಷಣ ಎಂದರೆ ವ್ಯಾಪಾರವಲ್ಲ’: ವಿವಿ ಮುಚ್ಚುವ ನಿರ್ಧಾರಕ್ಕೆ ಆಕ್ಷೇಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಡ್ಯ: ವಿಶ್ವವಿದ್ಯಾಲಯಗಳಿಂದ ಲಾಭ ಬರುತ್ತಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚಲಾಗಿದೆ. ಕಾಂಗ್ರೆಸ್‌ ಸರ್ಕಾರ ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಶಿಕ್ಷಣದಲ್ಲಿ ಹಿಂದುಳಿದಿದೆ. ಇದಕ್ಕಾಗಿ ಬಿಜೆಪಿ ಸರ್ಕಾರ ಹೊಸ 9 ವಿಶ್ವವಿದ್ಯಾಲಯಗಳನ್ನು ನೀಡಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಅದನ್ನು ಕಿತ್ತುಕೊಂಡಿದೆ. ವಿವಿಗಳನ್ನು ಮುಚ್ಚಲು ರೂಪಿಸಿದ ವರದಿಯಲ್ಲಿ ವಿವಿಗಳು ಲಾಭದಾಯಕವಾಗಿಲ್ಲ ಎಂದು ಉಲ್ಲೇಖಿಸಲಾಗಿದೆ. ಶಿಕ್ಷಣ ಸಂಸ್ಥೆಗಳಿಂದಲೂ ಆದಾಯ ಬರಬೇಕು ಎಂಬುದು ಸರ್ಕಾರ ಉದ್ದೇಶ. ಏಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಭಿಕ್ಷೆ ಬೇಡುತ್ತಿದ್ದಾರೆ. ಈ ಬಾರಿ 1 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಹಿಂದಿನ ಎಲ್ಲ ಮುಖ್ಯಮಂತ್ರಿಗಳಿಗೆ ಹೋಲಿಸಿದರೆ ಸಿದ್ದರಾಮಯ್ಯ ಅವರೇ ಅತ್ಯಧಿಕ ಸಾಲ ಮಾಡಿದ್ದಾರೆ ಎಂದು ದೂರಿದರು.ಒಂದು ಜಿಲ್ಲೆಯಲ್ಲಿ ಒಂದು ವಿಶ್ವವಿದ್ಯಾಲಯವಿದ್ದರೆ ಆ ಜಿಲ್ಲೆ ಶಿಕ್ಷಣದಲ್ಲಿ ಸ್ವಾವಲಂಬಿಯಾಗುತ್...
ಕರ್ನಾಟಕದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳು ಇನ್ನು ‘ಕನ್ನಡಮಯ’

ಕರ್ನಾಟಕದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳು ಇನ್ನು ‘ಕನ್ನಡಮಯ’

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳು ತಮ್ಮ ಕಂಪನಿಯ ಹೆಸರು ಮತ್ತು ಬಳಕೆಯ ಸೂಚನೆಗಳನ್ನು ಕನ್ನಡ ಭಾಷೆಯಲ್ಲಿ ಮುದ್ರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.ಸಿಎಂ ಆದೇಶದ ಹಿನ್ನೆಲೆಯಲ್ಲಿ ಫೆಬ್ರವರಿ 15 ರಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ (ಸೇವೆಗಳು ಮತ್ತು ಸಮನ್ವಯ) ಅಧೀನ ಕಾರ್ಯದರ್ಶಿ ಕೆ. ಉಮಾದೇವಿ ಅವರು ಸುತ್ತೋಲೆಯನ್ನು ಹೊರಡಿಸಿದ್ದಾರೆ.ಸುತ್ತೋಲೆಯಲ್ಲಿ, ಕರ್ನಾಟಕ ಸರ್ಕಾರವು ಮಾರ್ಚ್ 12, 2024 ರಂದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ, 2022 ನ್ನು ಅನಿಷ್ಠಾನಕ್ಕೆ ತಂದಿದೆ. ಅದರಂತೆ ಭಾಷೆಯ ಬೆಳವಣಿಗೆಗೆ ಉತ್ಪಾದನೆ, ಮಾರುಕಟ್ಟೆ ಮತ್ತು ವಹಿವಾಟುಗಳನ್ನು ಸ್ಥಳೀಯ ಭಾಷೆಯಲ್ಲಿ ನಡೆಸುವುದು ಅತ್ಯಗತ್ಯ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.ಕಾಯ್ದೆಯ ಸೆಕ್ಷನ್ 17 (7) ರ ಅಡಿಯಲ್ಲಿ ರಾಜ್ಯದೊಳಗೆ ಉತ್ಪಾದಿಸುವ ಮತ್ತು ಮಾರಾಟ ಮಾಡುವ ಎಲ್ಲಾ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳು ಇತರ ಭಾಷೆಗಳೊಂದಿಗೆ ತಮ್ಮ ಹೆಸರು ಮತ್ತು ಬಳಕೆದಾರ ಸೂಚನೆಗಳನ್ನು ಕನ್ನಡದಲ್ಲಿ ಮುದ್ರಿಸಬೇಕು ಎಂದು ಸುತ್ತೋಲೆಯಲ್ಲಿ ಹೇಳಲ...
KSRTCಗೆ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ‘Governance now 11th PSU ರಾಷ್ಟ್ರೀಯ ಪ್ರಶಸ್ತಿ’ ಮತ್ತು ‘PSU ನಾಯಕತ್ವ ಪ್ರಶಸ್ತಿ -2025’

KSRTCಗೆ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ‘Governance now 11th PSU ರಾಷ್ಟ್ರೀಯ ಪ್ರಶಸ್ತಿ’ ಮತ್ತು ‘PSU ನಾಯಕತ್ವ ಪ್ರಶಸ್ತಿ -2025’

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ದೇಶದಲ್ಲೇ ಅತ್ಯುತ್ತಮ ಸಾರಿಗೆ ಸೇವೆ ಮೂಲಕ ಜನಪ್ರಿಯತೆ ಗಳಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದುಕೊಂಡಿದೆ. 'Governance now 11th PSU ರಾಷ್ಟ್ರೀಯ ಪ್ರಶಸ್ತಿ' ಮತ್ತು 'PSU ನಾಯಕತ್ವ ಪ್ರಶಸ್ತಿ -2025' ಯನ್ನು KSRTC ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಸ್ವೀಕರಿಸಿದ್ದಾರೆ.'Governance Now' ರವರು ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿಗಮಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ PSU ಆತ್ಮ‌ನಿರ್ಭರ್ ನಾಯಕತ್ವ ಪ್ರಶಸ್ತಿಯನ್ನು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ರಾಜ್ಯ ಸಚಿವ ಸತೀಶ್ ಚಂದ್ರ ದುಬೆ ಮತ್ತು ಮಾಜಿ ಕೇಂದ್ರ ಸಚಿವ ಸತ್ಯಪಾಲ್ ಸಿಂಗ್ ಅವರು ಪ್ರದಾನ‌ ಮಾಡಿದರು.KSRTC ನಿಗಮದಲ್ಲಿ 1314 ಬಸ್ಸುಗಳು ಪುನಶ್ಚೇತನಗೊಂಡಿದ್ದು, ಕರ್ನಾಟಕ ಸಾರಿಗೆ 1184 , ನಗರ ಸಾರಿಗೆ 115, ಐರಾವತ ಕ್ಲಬ್ ಕ್ಲಾಸ್ 15 ಬಸ್ಸುಗಳನ್ನು ಸಹ ಪುನಶ್ಚೇತನಗೊಳಿಸಲಾಗಿದೆ. ಈ ಮೂಲಕ ರೂ.250 ಕೋಟಿಗೂ ಹೆಚ್ಚು ಹಣ ನಿಗಮಕ್ಕೆ ಉಳಿತಾಯವಾಗಿದ್ದು, ಈ ಉಪಕ್ರ...
ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ತನಿಖೆಯ ಅಖಾಡಕ್ಕೆ ಧುಮುಕಿದ ಸಿಬಿಐ

ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ತನಿಖೆಯ ಅಖಾಡಕ್ಕೆ ಧುಮುಕಿದ ಸಿಬಿಐ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೊಳಗಾಗಿದ್ದು, ಇದೀಗ ಸಿಬಿಸಿ ಕೂಡಾ ಪ್ರತನಿಖೆಯ ಅಖಾಡಕ್ಕೆ ಧುಮುಕಿದೆ.ನಟಿ ರನ್ಯಾ ರಾವ್ ವಿರುದ್ಧ ಡಿಆರ್​ಐ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎನ್ನಲಾಗಿದೆ. ಸಿಬಿಐ ಮುಂಬೈ ಹಾಗೂ ಬೆಂಗಳೂರಿನಲ್ಲಿ ಪರಿಶೀಲನೆಯಲ್ಲಿ ತೊಡಗಿರುವ ಸಿಬಿಐ ಇದೀಗ ತಾನು ಕೂಡಾ ತನಿಖೆಗೆ ಮುಂದಾಗಿದೆ.ವಿದೇಶದಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಬಂಧಿಸಲಾಗಿತ್ತು. ಆಕೆಯಿಂದ ಸುಮಾರು 14.20 ಕೆಜಿ ಚಿನ್ನ ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಡಿಆರ್​ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗಂಭೀರ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. #WATCH | Bengaluru | Kannada actor Ranya Rao, arrested by DRI for allegedly smuggling gold from Dubai, brought to a special court hearing cases of economic offences pic.twitter.com/7w3E38qYwV— ANI (@ANI)...
ಕನ್ನಡಿಗರ ಮೇಲಿನ ದಾಳಿ ಖಂಡಿಸಿ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಕರೆ

ಕನ್ನಡಿಗರ ಮೇಲಿನ ದಾಳಿ ಖಂಡಿಸಿ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಕರೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕನ್ನಡಿಗರ ಮೇಲೆ ಮರಾಠಿಗರು ನಡೆಸಿರುವ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘನೆಗಳು ಸರಣಿ ಪ್ರತಿಭಟನೆ ಹಾಗೂ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕೆಎಸ್ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳ ಮೇಲಿನ ಮರಾಠಿಗರ ದಾಳಿ ಖಂಡಿಸಿ ಶುಕ್ರವಾರ ಸರಣಿ ಪ್ರತಿಭಟನೆಗಳನ್ನು ನಡೆಸಲಾಗುವುದು ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಆಚರಿಸಲಾಗುವುದು ಎಂದು ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.ಈ ಸಂಬಂಧ ಬೆಂಗಳೂರಿನಲ್ಲಿ ಶುಕ್ರವಾರ ಕನ್ನಡ ಪರ ಸಂಘಟನೆಗಳ ಸಭೆ ನಡೆಯಿತು. ಈ ಸಭೆಯಲ್ಲಿ ಸರಣಿ ಹೋರಾಟ ಹಾಗೂ ಕರ್ನಾಟಕ ಬಂದ್ ಆಚರಿಸಲು ನಿರ್ಧರಿಸಲಾಯಿತು. ಈ ಬಗ್ಗೆ ಸುದ್ದಿಗಾರರಿಗೆ ವಿವರ ಒದಗಿಸಿದ ವಾಟಾಳ್ ನಾಗರಾಜ್, ಶುಕ್ರವಾರ ಸರಣಿ ಪ್ರತಿಭಟನೆಗಳನ್ನು ನಡೆಸಲಾಗುವುದು, ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಆಚರಿಸಲಾಗುವುದು ಎಂದು ತಿಳಿಸಿದರು.ಈ ನಡುವೆ, ಮಾರ್ಚ್ 7 ರಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದ್ದು, ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ...
ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ? ಯುಪಿ, ಬಿಹಾರಎಂಪಿ ರಾಜ್ಯಗಳಲ್ಲಿ ಹೆಚ್ಚಾಗಲಿವೆಯೇ?

ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ? ಯುಪಿ, ಬಿಹಾರಎಂಪಿ ರಾಜ್ಯಗಳಲ್ಲಿ ಹೆಚ್ಚಾಗಲಿವೆಯೇ?

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದಿದ್ದಾರೆ.ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ, ಇಲ್ಲವಾದರೆ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದು ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದಾರೆ.ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಮಾಡಬಾರದೆಂಬ ಸದುದ್ದೇಶ ಕೇಂದ್ರ ಸರ್ಕಾರ ಹೊಂದಿರುವುದಾಗಿದ್ದರೆ ಕ್ಷೇತ್ರ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಇಲ್ಲವೇ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ. ಎಂದಿರುವ ಸಿದ್ದರಾಮಯ್ಯ, ಇತ್ತೀಚಿನ ಜನಸಂಖ್ಯೆಯ ಅನುಪ...
ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಹರಿಸಿತೇ ರಾಜ್ಯದ ಕಾಂಗ್ರೆಸ್‌ ಸರ್ಕಾರ?

ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಹರಿಸಿತೇ ರಾಜ್ಯದ ಕಾಂಗ್ರೆಸ್‌ ಸರ್ಕಾರ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಕಾಂಗ್ರೆಸ್‌ ಸರ್ಕಾರ ಹರಿಸಿದೆ. ಅಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ತೃಪ್ತಿಪಡಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಕನ್ನಡಿಗರ ಹಿತವನ್ನು ಕಡೆಗಣಿಸಿದ್ದಾರೆ. ಸಚಿವ ಪ್ರಿಯಾಂಕ್‌ ಖರ್ಗೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ಮಾಡುತ್ತಿದ್ದಾರೆ. ಈಗ ಅದೇ ಸರ್ಕಾರದ ಸಚಿವರು ನೀರು ಹರಿಸಿರುವುದು ಜನರಿಗೆ ಮಾಡಿರುವ ದ್ರೋಹ. ಮೀರ್‌ ಸಾಧಿಕ್‌ನಂತೆ ಸರ್ಕಾರ ವರ್ತಿಸಿರುವುದನ್ನು ರೈತರು ಕ್ಷಮಿಸುವುದಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಾಗ ನೀರು ಹರಿಸಿರುವುದರಿಂದ ಜನರಿಗೆ ತೊಂದರೆಯಾಗಲಿದೆ. ಒಬ್ಬೊಬ್ಬ ಸಚಿವರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಿಬ್ಬಂದಿಗೆ ಸರ...
‘ಶಕ್ತಿ’ ಯಶೋಗಾಥೆ: 400 ಕೋಟಿ ಬಾರಿ ಮಹಿಳೆಯರ ಉಚಿತ ಪ್ರಯಾಣ

‘ಶಕ್ತಿ’ ಯಶೋಗಾಥೆ: 400 ಕೋಟಿ ಬಾರಿ ಮಹಿಳೆಯರ ಉಚಿತ ಪ್ರಯಾಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಶಕ್ತಿ ಯೋಜನೆಯು ಕರುನಾಡಿನಲ್ಲಿ ಶಕ್ತಿ ಸಂಚಾರವನ್ನೇ ಸೃಷ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಕ್ತಿ ಯೋಜನೆ ಜಾರಿಗೊಂಡ ನಂತರದಿಂದ 400 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದು ಸ್ವಾವಲಂಬಿ ಬದುಕಿನೆಡೆಗೆ ಮುಂದಡಿಯಿಟ್ಟಿದ್ದಾರೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ.'ಶಕ್ತಿ' ಗ್ಯಾರೆಂಟಿ ಯೋಜನೆಯ ಯಶಸ್ಸಿನ ಕುರಿತಂತೆ ಸಾಮಾಜಿಕ ಜಾಲತಾಣ 'X'ನಲ್ಲಿ ಸಿದ್ದರಾಮಯ್ಯ ಅವರು ಪೋಸ್ಟ್ ಹಾಕಿದ್ದಾರೆ. ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿರುವುದು ಯೋಜನೆಯ ಯಶಸ್ಸಿಗೆ ಹಿಡಿದಿರುವ ಕೈಗನ್ನಡಿ ಎಂದವರು ಬರೆದುಕೊಂಡಿದ್ದಾರೆ.ಶಕ್ತಿ ಯೋಜನೆ ಜಾರಿಗೊಂಡ ನಂತರದಿಂದ 400 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದು ಸ್ವಾವಲಂಬಿ ಬದುಕಿನೆಡೆಗೆ ಮುಂದಡಿಯಿಟ್ಟಿದ್ದಾರೆ. ಈವರೆಗಿನ ಒಟ್ಟು ಟಿಕೆಟ್‌ ಮೌಲ್ಯ ರೂ.9,803 ಕೋಟಿ ಆಗಿದ್ದು, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಶಕ್ತಿ ನವ ಇತಿಹಾಸ ಸೃಷ್ಟಿಸಿದೆ ಎಂದವರು ಹೇಳಿದ್ದಾರೆ.ಶ...
ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ; ರಾಜ್ಯಕ್ಕೆ ಕೇಂದ್ರದ ಭರವಸೆ

ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ; ರಾಜ್ಯಕ್ಕೆ ಕೇಂದ್ರದ ಭರವಸೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಭಾರಿ ಹಾಗೂ ಮಧ್ಯಮ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಭಾರಿ ಹಾಗೂ ಮಧ್ಯಮ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ನೀರಾವರಿ ಯೋಜನೆಗಳ ಕುರಿತ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಟ್ಟಾಗಿ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. - @DKShivakumar pic.twitter.com/yPgqOHXRu0— Karnataka Congress (@INCKarnataka) February 26, 2025ಜಲಾಶಕ್ತಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಡಿಕೆಶಿ, ನಮ್ಮ ನೀರಾವರಿ ಯೋಜನೆಗಳ ಕುರಿತ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಟ್ಟಾಗಿ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.ರಾಜ್ಯದ ನೀರಾವರಿ ಯೋಜನ...