Wednesday, August 12

ವಿದೇಶ

ಪುನೀತ್ ಹುಟ್ಟುಹಬ್ಬದಂದು ‘ಅಪ್ಪು’ ಚಿತ್ರ ರೀ- ರೀಲಿಸ್

ಪುನೀತ್ ಹುಟ್ಟುಹಬ್ಬದಂದು ‘ಅಪ್ಪು’ ಚಿತ್ರ ರೀ- ರೀಲಿಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವಾದ ಮಾರ್ಚ್ 14ರಂದು ಅಪ್ಪು ಅವರ ಮೊದಲ ಚಿತ್ರ 'ಅಪ್ಪು' ರೀ- ರೀಲಿಸ್ ಆಗಲಿದೆ.ಪುನೀತ್ ರಾಜ್ ಕುಮಾರ್ ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ 'ಅಪ್ಪು' ಚಿತ್ರವನ್ನು PRK Productions ಮರು ಬಿಡುಗಡೆ ಮಾಡುವ ಕುರಿತು ಪಿಆರ್ ಕೆ ಪ್ರೊಢಕ್ಷನ್ ನ ಮಾಲೀಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಮಾಜಿಕ ಜಾಲತಾಣ 'X' ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. Misunderstanding ಬೇಡ! 💞Get ready to relieve the magic. #Appu returns to theaters in honor of Dr. Puneeth Rajkumar's 50th birthday. ▶️ In Cinemas on 14th March 2025A @PRK_Productions release#DrPuneethRajkumar @RakshithaPrem #PuriJagannadh #GuruKiran #Avinash… pic.twitter.com/at6OyDMf2q— Ashwini Puneeth Rajkumar (@Ashwini_PRK) February 26, 2025...
ಕ್ರಿಪ್ಟೊ ಕರೆನ್ಸಿ ಹಗರಣ: ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ

ಕ್ರಿಪ್ಟೊ ಕರೆನ್ಸಿ ಹಗರಣ: ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಸೇರಿ ದೇಶದ 60 ಕಡೆಗಳಲ್ಲಿ ಸಿಬಿಐ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಮಂಗಳವಾರ ಸಂಜೆಯವರೆಗೂ ಹಲವೆಡೆ ಶೋಧ ನಡೆದಿದೆ.ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಕೈಗೊಂಡಿದೆ. ಬಹುಕೋಟಿ ರೂಪಾಯಿ ಗೇನ್ ಬಿಟ್ ಕಾಯಿನ್ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ....
ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಂ ಎಕ್ಸಪೋ: ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್

ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಂ ಎಕ್ಸಪೋ: ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಹುಬ್ಬಳ್ಳಿ: ವಿಶ್ವಕ್ಕೆ ರಾಜ್ಯದ ಅದ್ಭುತ ಪ್ರವಾಸಿ ತಾಣಗಳ ಪರಿಚಯ ಮಾಡಿಸುವ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಮ್ ಸೊಸೈಟಿಯ ಸಹಯೋಗದೊಂದಿಗೆ ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಮ್ ಎಕ್ಸಪೋವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಕ್ಸಪೋವನ್ನು ಉದ್ಘಾಟಿಸುವರು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಹೇಳಿದ್ದಾರೆ.ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿ ಮಾಜಿ ಸಂಸದರಾದ ಎಂ.ಎಂ.ಹಿಂಡಸಗೇರಿ, ಮುಖಂಡರಾದ ಮಹೇಂದ್ರ ಸಿಂಘಿ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಕೆ.ಪಾಟೀಲ್, ಎಕ್ಸ್‌ಪೋ ಬಗ್ಗೆ ಮಾಹಿತಿ ಹಂಚಿಕೊಂಡರು, ಫೆಬ್ರವರಿ 27 ಮತ್ತು 28 ರಂದು 2 ದಿನಗಳ ಕಾಲ ವ್ಯವಹಾರಿಕ ಸಭೆಗಳು ನಡೆಯಲಿವೆ. ನಮ್ಮ ರಾಜ್ಯದಲ್ಲಿ ಅಸಂಖ್ಯಾತ ಪ್ರವಾಸಿ ತಾಣಗಳು, ಸ್ಮಾರಕಗಳು ಇವೆ. 25 ಸಾವಿರಕ್ಕೂ ಹೆಚ್ಚು ಅರಕ್ಷಿತ ಸ್ಮಾರಕಗಳಿದ್ದು, ಅವುಗಳಲ್ಲಿ 800 ಕ್ಕೂ ಹೆಚ್ಚು ಸ್ಮಾರಕಗಳನ್ನು ರಕ್ಷಿತ ಸ್ಮಾರಕಗಳಾಗಿ ಘೋಷಿಸಲಾಗಿದೆ....
ಮುಡಾ ಹಗರಣ: ಲೋಕಾಯುಕ್ತದ ಆತುರದ ನಡೆ ಯಾಕೆ?

ಮುಡಾ ಹಗರಣ: ಲೋಕಾಯುಕ್ತದ ಆತುರದ ನಡೆ ಯಾಕೆ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಮತ್ತು ಇತರರು ಭಾಗಿಯಾಗಿದ್ದಾರೆನ್ನಲಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣದ ಲೋಕಾಯುಕ್ತ ತನಿಖೆಯು ತನಿಖೆಯ ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.ಲೋಕಾಯುಕ್ತವು "B ರಿಪೋರ್ಟ್" ಸಲ್ಲಿಸುವ ಮೂಲಕ ತನಿಖೆಯನ್ನು ಹಠಾತ್ತನೆ ಮುಕ್ತಾಯಗೊಳಿಸುವ ಮೊದಲು ಸಿದ್ದರಾಮಯ್ಯ ಅವರಿಗೆ ಕೇವಲ 30 ಪ್ರಶ್ನೆಗಳನ್ನು ಕೇಳಲಾಗಿತ್ತು ಎನ್ನಲಾಗುತ್ತಿದೆ. ಈ ತ್ವರಿತ ತೀರ್ಮಾನವು ಅನೇಕ ಅನುಮಾನಗಳನ್ನು ಹುಟ್ಟುಹಾಕಿವೆ ಎಂದು ತಜ್ಞರು ಹೇಳುತ್ತಿದ್ದಾರೆ.ಕಳವಳಕಾರಿ ಸಂಗತಿಯೆಂದರೆ ಲೋಕಾಯುಕ್ತವು ಜಾರಿ ನಿರ್ದೇಶನಾಲಯದ (ED) ನಿರ್ಣಾಯಕ ನಡೆಯನ್ನು 'ಕಡೆಗಣಿಸಿದೆ'. ಈ ಹಗರಣ ಆರೋಪದಲ್ಲಿ ED ಅನೇಕರ ವಿಚಾರಣೆಗೆ ಸಿದ್ಧತೆ ನಡೆಸಿರುವ ವಿಚಾರ ಅದಾಗಲೇ ಬಹಿರಂಗವಾಗಿದ್ದರೂ ಈ ಗಂಭೀರತೆ ಬಗ್ಗೆ ಲೋಕಾಯುಕ್ತ ಪೊಲೀಸರು ಗಮನಹರಿಸದೇ ತನಿಖೆ ಪೂರ್ಣಗೊಳಿಸಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡುವ ಆತುರದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆಯೇ ಎಂಬ ಅನುಮಾನ ಪ್ರತಿಪಕ್ಷಗಳದ್ದು....
ವಿಜಯೇಂದ್ರ-ಕಾಂಗ್ರೆಸ್ ನಾಯಕರ ಒಳ ಒಪ್ಪಂದ? ಆರೋಪ ತಳ್ಳಿಹಾಕಿದ ಪ್ರಿಯಾಂಕ್

ವಿಜಯೇಂದ್ರ-ಕಾಂಗ್ರೆಸ್ ನಾಯಕರ ಒಳ ಒಪ್ಪಂದ? ಆರೋಪ ತಳ್ಳಿಹಾಕಿದ ಪ್ರಿಯಾಂಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕಲಬುರಗಿ: ಬಿಜೆಪಿ ರಾಜ್ಯಅಧ್ಯಕ್ಷ ಬಿ.ವೈ.ರಾಜ್ಯಾಧ್ಯಕ್ಷ ಕಾಂಗ್ರೆಸ್ ನಾಯಕರ ಒಳ ಒಪ್ಪಂದವಿದೆ ಎಂಬ ಆರೋಪವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಳ್ಳಿ ಹಾಕಿದ್ದಾರೆ.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ವಿಜಯೇಂದ್ರ ಅವರ ವಿರೋಧಿಯಾಗಿದ್ದೇವೆ. ವೈಹಾಗಾಗಿ ಅವರು ಯಾವಾಗಲೂ ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಟೀಕಿಸುತ್ತಾರೆ ಎಂದರು.ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂಬ ವಿಜಯೇಂದ್ರರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಸರ್ಕಾರ ದಿವಾಳಿಯಾಗಿಲ್ಲ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರೇ ದಿವಾಳಿಯಾಗಿದ್ದಾರೆಂದು ಎದಿರೇಟು ನೀಡಿದರು.ವಿಜಯೇಂದ್ರ ಅವರು ಮೊದಲು ತಮ್ಮ ಪಕ್ಷದ ದಿವಾಳಿತನ ಬಗ್ಗೆ ಮಾತನಾಡಲಿ ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು....
BBMP ಚುನಾವಣಾ: ಸುಪ್ರೀಂ ಮೊರೆಹೋದ ಬಿಜೆಪಿ

BBMP ಚುನಾವಣಾ: ಸುಪ್ರೀಂ ಮೊರೆಹೋದ ಬಿಜೆಪಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಯನ್ನು ಮತ್ತಷ್ಟು ವಿಳಂಬ ಮಾಡದೆ ತಕ್ಷಣವೇ ನಡೆಸಲು ನಿರ್ದೇಶನಗಳನ್ನು ಕೋರಿ ಕರ್ನಾಟಕ ಬಿಜೆಪಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.ಮಾಜಿ ಮೇಯರ್‌ಗಳಾದ ಗೌತಮ್ ಮತ್ತು ನಾರಾಯಣಸ್ವಾಮಿ, ಮಾಜಿ ಉಪಮೇಯರ್‌ಗಳು ಮತ್ತು ಜಿಲ್ಲಾಧ್ಯಕ್ಷ ಹರೀಶ್ ಅವರು ಅರ್ಜಿಗೆ ಸಹಿ ಹಾಕಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ್ ಸೋಮವಾರ ತಿಳಿಸಿದ್ದಾರೆ.ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಈ ವಿಷಯದ ಬಗ್ಗೆ ಸಮಿತಿಯನ್ನು ರಚಿಸಿದ್ದರು. ಹಿರಿಯ ವಕೀಲ ಸಂದೀಪ್ ಪಾಟೀಲ್ ಮೂಲಕ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಬೆಂಗಳೂರಿನಲ್ಲಿ ಆದಷ್ಟು ಬೇಗ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದೆ ಎಂದು ಅವರು ಹೇಳಿದರು.ಬಿಬಿಎಂಪಿಗೆ ಚುನಾವಣೆ ನಡೆಸುವ ವಿಷಯವನ್ನು ಫೆಬ್ರವರಿ 25 ರ ಮಂಗಳವಾರ ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಅಂಗೀಕಾರದ ನಂತರ ಬೆಂಗಳೂರಿನಲ್ಲಿ ಹೊಸದಾಗಿ ರಚನೆಯಾದ ಪುರಸಭೆಗಳಿಗೆ ಚುನಾವಣೆಗಳು ಆಗಸ್ಟ್ 15, 2025 ರ ನಂತ...
ಬೆಂಗಳೂರು: ರೌಡಿ ಶೀಟರ್ ಹೈದರ್ ಅಲಿ ಭೀಕರ ಹತ್ಯೆ

ಬೆಂಗಳೂರು: ರೌಡಿ ಶೀಟರ್ ಹೈದರ್ ಅಲಿ ಭೀಕರ ಹತ್ಯೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಧ್ಯರಾತ್ರಿ ಭೀಕರ ಕೊಲೆ ನಡೆದಿದೆ. ರೌಡಿಶೀಟರ್ ಹೈದರ್ ಅಲಿ ಎಂಬಾತನನ್ನು ಗರುಡ ಮಾಲ್ ಬಳಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ.ಹೈದರ್ ಅಲಿ ಮಧ್ಯರಾತ್ರಿ ಕಾರ್ಯಕ್ರಮ ಮುಗಿಸಿ ಸ್ನೇಹಿತನ ಜೊತೆ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಅಶೋಕನಗರ ಠಾಣಾ ವ್ಯಾಪ್ತಿಯ ಗರುಡಾ ಮಾಲ್ ಬಳಿ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಹೈದರ್ ಮಾತ್ರವಲ್ಲ ಸ್ನೇಹಿತನ ಮೇಲೂ ಹಲ್ಲೆ ನಡೆದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹೈದರ್ ನನ್ನು ಬೌರಿಂಗ್ ಆಸ್ಪತ್ರೆಗೆ ಸ್ಥಳಾಂತರಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು.ಈ ನಡುವೆ, ಕೊಲೆಯಾದ ಹೈದರ್ ಆಲಿ ಶಾಸಕ ಎನ್.ಎ.ಹ್ಯಾರಿಸ್ ಅವರ ನಿಕಟವರ್ತಿಯಾಗಿದ್ದ ಎಂದು ಆತನ ಸಹಚರರು ಹೇಳಿಕೊಂಡಿದ್ದಾರೆ. ಮೃತದೇಹ ಬೌರಿಂಗ್ ಆಸ್ಪತ್ರೆಯಲ್ಲಿದ್ದ ಸುದ್ದಿ ತಿಳಿದು ಬೆಂಬಲಿಗರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಹೈದರ್ ಆಲಿ ಕೊಲೆ ಘಟನೆ ಬಗ್ಗೆ ಕೆಲವರು ಆಕ್ರೋಶ ಹೊರಹಾಕ...
ಅಂದು ‘ಬ್ರ್ಯಾಂಡ್ ಬೆಂಗಳೂರು’, ಇದೀಗ ‘ಗ್ರೇಟರ್ ಬೆಂಗಳೂರು’?; ಬೆಂಗಳೂರು ವಿಭಜನೆಗೆ ಬಿಜೆಪಿ ವಿರೋಧ

ಅಂದು ‘ಬ್ರ್ಯಾಂಡ್ ಬೆಂಗಳೂರು’, ಇದೀಗ ‘ಗ್ರೇಟರ್ ಬೆಂಗಳೂರು’?; ಬೆಂಗಳೂರು ವಿಭಜನೆಗೆ ಬಿಜೆಪಿ ವಿರೋಧ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಗ್ರೇಟರ್ ಬೆಂಗಳೂರು ನೆಪದಲ್ಲಿ ಕೆಂಪೇಗೌಡರು ಕಟ್ಟಿದ ನಾಡನ್ನು ವಿಭಜಿಸುವುದಕ್ಕೆ ನಮ್ಮ ಆಕ್ಷೇಪ ಇದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಯಯನ ಸ್ವಾಮಿ, ಅಂದು 'ಬ್ರ್ಯಾಂಡ್ ಬೆಂಗಳೂರು' ಹೇಳುತ್ತಿದ್ದವರು ಇದೀಗ 'ಗ್ರೇಟರ್ ಬೆಂಗಳೂರು' ಎನ್ನುತ್ತಾ ಕೆಂಪೇಗೌಡರು ನಿರ್ಮಿಸಿದ ಬೆಂಗಳೂರನ್ನು ಕೆಡವಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡರು.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಯನ್ನು ನಿರಂತರವಾಗಿ ಮುಂದೂಡುವುದನ್ನು ಆಕ್ಷೇಪಿಸಿದ ನಾರಾಯಣಸ್ವಾಮಿ, ಇದು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ದುರ್ಬಲಗೊಳಿಸುತ್ತದೆ ಎಂದರು. "ಅವರು ಒಮ್ಮೆ 'ಬ್ರ್ಯಾಂಡ್ ಬೆಂಗಳೂರು' ಬಗ್ಗೆ ಮಾತನಾಡಿದ್ದರು. ಈಗ ಅವರು 'ಗ್ರೇಟರ್ ಬೆಂಗಳೂರು' ಬಗ್ಗೆ ಮಾತನಾಡುತ್ತಿದ್ದಾರೆ. ಅವರು 'ಬ್ರ್ಯಾಂಡ್ ಬೆಂಗಳೂರು' ಅನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗದಿದ್ದರೆ, ಅವರು 'ಗ್ರೇಟರ್ ಬೆಂಗಳೂರು' ಅನ್ನು ಹೇಗೆ ರಚಿಸುತ್ತಾರೆ?" ಎಂದು ಪ್ರಶ್ನಿಸಿದರು.ಬೆಂಗಳೂರನ್ನು ಏಳು ...
ಕಂಡಕ್ಟರ್ ವಿರುದ್ಧ ಸುಳ್ಳು ಪೋಕ್ಸೋ ಕೇಸ್: ಸಚಿವ ರಾಮಲಿಂಗ ರೆಡ್ಡಿ ಗರಂ; KSRTC ಸಿಬ್ಬಂದಿ ರಕ್ಷಣೆಗೆ ನಾನಿದ್ದೇನೆ ಎಂದ ಸಾರಿಗೆ ಮಂತ್ರಿ..

ಕಂಡಕ್ಟರ್ ವಿರುದ್ಧ ಸುಳ್ಳು ಪೋಕ್ಸೋ ಕೇಸ್: ಸಚಿವ ರಾಮಲಿಂಗ ರೆಡ್ಡಿ ಗರಂ; KSRTC ಸಿಬ್ಬಂದಿ ರಕ್ಷಣೆಗೆ ನಾನಿದ್ದೇನೆ ಎಂದ ಸಾರಿಗೆ ಮಂತ್ರಿ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಕಂಡಕ್ಟರ್ ವಿರುದ್ಧ ವಿರುದ್ಧ ದಾಖಲಾಗಿರುವ ಪ್ರಕರಣ ಸತ್ಯಕ್ಕೆ ದೂರವಾದದ್ದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. KSRTC ನೌಕರರ ಪರವಾಗಿ ನಿಂತಿರುವ ಸಚಿವರು, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.ಬೆಳಗಾವಿಯಲ್ಲಿ KSRTC ಸಿಬ್ಬಂದಿ ಮೇಲಿನ ದಾಳಿ ಹಾಗೂ ನಿರ್ವಾಹಕರ ವಿರುದ್ಧ ದಾಖಲಾಗಿರುವ ಪ್ರಕರಣ ಬಗ್ಗೆ ಕಳವಳ ವ್ಯಕತಪಡಿಸಿರುವ ಸಚಿವ ರಾಮಲಿಂಗ ರೆಡ್ಡಿ. ಕಂಡಕ್ಟರ್ ವಿರುದ್ಧದ ಪೋಕ್ಸೊ ಆರೋಪಗಳು ಸುಳ್ಳು ಎಂದು ಹೇಳಿದರು.ಈ ಸುದ್ದಿಯನ್ನು 'UDAYA NEWS -ಇಂಗ್ಲೀಷ್' ಆವೃತ್ತಿಯಲ್ಲೂ ಓದಿ.. Case against RTC conductor is bogus: K’taka Transport Ministerಪ್ರಯಾಣಿಕರ ಗುಂಪೊಂದು ಕನ್ನಡದಲ್ಲಿ ಮಾತನಾಡಲು ಕೇಳಿದ್ದಕ್ಕಾಗಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿತ್ತು. ಘಟನೆಗೆ ಸಂಬಂಧಿಸಿದಂತೆ ಕಂಡಕ್ಟರ್ ಪೊಲೀಸ್ ದೂರು ದಾಖಲಿಸಿದ್ದರೆ, ಅಪ್ರಾಪ್ತ ಬಾಲಕಿ ಕಂಡಕ್ಟರ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದರು. ಘಟನೆಯ ನಂತರ, ಅವರು...
ಮೂಡಾ ಹಗರಣದಲ್ಲಿ ಸಿದ್ದರಾಮಯ್ಯ ಜೈಲು ಸೇರೋದು ಖಚಿತ: ಛಲವಾದಿ

ಮೂಡಾ ಹಗರಣದಲ್ಲಿ ಸಿದ್ದರಾಮಯ್ಯ ಜೈಲು ಸೇರೋದು ಖಚಿತ: ಛಲವಾದಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ನಿವೇಶನ ಹಂಚಿಕೆ ಅಕ್ರಮ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೈಲಿಗೆ ಹೋಗುವುದು ಖಚಿತ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.ಬಿಜೆಪಿ ರಾಜ್ಯ ಕಚೇರಿ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, “ಸಿಎಂ ಅವರ ಮನಸ್ಥಿತಿ ಇನ್ನೂ ಬದಲಾಗಿಲ್ಲ, ಮತ್ತು MUDA ಸಮಸ್ಯೆ ಅವರನ್ನು ಕಾಡುತ್ತಲೇ ಇದೆ. ಈ ವಿಷಯ ಇಲ್ಲಿಗೆ ಮುಗಿಯುವುದಿಲ್ಲ. ನೀವು ಯಾರಿಂದ ಬೇಕಾದರೂ ಪ್ರಮಾಣಪತ್ರ ಪಡೆಯಬಹುದು, ಆದರೆ ಈ ದೇಶದ ಕಾನೂನು ಇನ್ನೂ ಜೀವಂತವಾಗಿದೆ. ನ್ಯಾಯಾಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಮತ್ತು ನ್ಯಾಯವನ್ನು ಖಚಿತಪಡಿಸುತ್ತವೆ. ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ - MUDA ಪ್ರಕರಣದಲ್ಲಿ ನೀವು ಖಂಡಿತವಾಗಿಯೂ ಜೈಲಿಗೆ ಹೋಗುತ್ತೀರಿ” ಎಂದು ಹೇಳಿದರು....