Wednesday, August 12

ವಿದೇಶ

‘ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡಿ’ ಎಂದ ಶಿವಕುಮಾರ್

‘ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡಿ’ ಎಂದ ಶಿವಕುಮಾರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯ್ತಿ, ವಿಧಾನ ಸಭೆ, ಸಂಸತ್ ಚುನಾವಣೆ ಎಲ್ಲದಕ್ಕೂ ಬೇಕು. ಅವರನ್ನು ಪಕ್ಷ ಎರಡು ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದು, ಅವರ ಹೆಸರು ಮಾಧ್ಯಮಗಳಿಗೆ ಆಹಾರವಾಗುವಂತೆ ಗೊಂದಲದ ಹೇಳಿಕೆ ಬೇಡ ಎಂದು ಡಿಕೆಶಿ ಹೇಳಿದರು.ಪಕ್ಷದಲ್ಲಿ ಗೊಂದಲದ ಹೇಳಿಕೆ ಯಾಕೆ ಎಂದು ಕೇಳಿದಾಗ, "ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷ ದಿನ ನಿತ್ಯ ಎಲ್ಲವನ್ನು ಗಮನಿಸುತ್ತಿದೆ" ಎಂದು ತಿಳಿಸಿದರು.ನೀರಾವರಿ ವಿಚಾರವಾಗಿ ಪಕ್ಷಾತೀತ ಹೋರಾಟ ಮಾಡಬೇಕು ಎಂಬ ದೇವೇಗೌಡರ ಹ...
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದರು."ಈ ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ಎಲ್ಲೆಲ್ಲಿ ನಾಯಕರ ಮಧ್ಯೆ ಹೊಂದಾಣಿಕೆ ಸಾಧಿಸಿ, 50% ಮ...
ಕಾಂಗ್ರೆಸ್‌ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ: ಬಿಜೆಪಿ ವ್ಯಂಗ್ಯ

ಕಾಂಗ್ರೆಸ್‌ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ: ಬಿಜೆಪಿ ವ್ಯಂಗ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ.ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುವ ಭಾಗ್ಯವನ್ನು ಕಾಂಗ್ರೆಸ್‌ ನೀಡಿದೆ. ಕಿಸಾನ್‌ ಸಮ್ಮಾನ್‌, ವಿದ್ಯಾನಿಧಿ ಸೇರಿದಂತೆ ಅನೇಕ ಯೋಜನೆಗಳನ್ನು ಮುಚ್ಚಿ ಹಾಕಲಾಗಿದೆ. ಈಗ ಮಾರಿ ಕಣ್ಣು ಹೋರಿ ಮೇಲೆ ಎಂಬಂತೆ, ಸಿಎಂ ಸಿದ್ದರಾಮಯ್ಯನವರ ಕಣ್ಣು ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುವಜನರು ಪದವೀಧರರಾಗುವುದನ್ನು ತಪ್ಪಿಸಲು ಈ ರೀತಿ ಮಾಡಲಾಗಿದೆ. ಯಾರೂ ಪದವೀಧರರಾಗದೇ ಇದ್ದಲ್ಲಿ ಯುವನಿಧಿ ಯೋಜನೆಯನ್ನು ನಿಲ್ಲಿಸಬಹುದು ಎಂಬುದು ಇವರ ಚಿಂತನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬೇರೆ ರಾಜ್ಯ, ದೇಶಗಳ ವಿದ್ಯಾರ್ಥಿಗಳು ನಮ್ಮ ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬರುತ್ತಿದ್ದಾರೆ. ಮಂಡ್ಯದ ವಿಶ್ವವಿದ್ಯಾಲಯವನ್ನು ಮುಚ್ಚಿ, ಅಮ್ಯೂಸ...
ಮಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘ಐಫೋನ್ ಎಸ್‌ಇ 4’;

ಮಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘ಐಫೋನ್ ಎಸ್‌ಇ 4’;

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ವೈವಿಧ್ಯ
ಆಪಲ್ ತನ್ನ ವರ್ಷದ ಮೊದಲ ಪ್ರಮುಖ ಉತ್ಪನ್ನ ಬಿಡುಗಡೆಗೆ ಸಜ್ಜಾಗಿದ್ದು, ಫೆಬ್ರವರಿ 19 ಬುಧವಾರದಂದು ಬಿಡುಗಡೆಯಾಗಲಿದೆ. ಸಿಇಒ ಟಿಮ್ ಕುಕ್ ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡುವ ಮೂಲಕ 'ಐಫೋನ್ ಎಸ್‌ಇ 4' ದಿನಾಂಕವನ್ನು ದೃಢಪಡಿಸಿದ್ದಾರೆ. 'ಕುಟುಂಬದ ಹೊಸ ಸದಸ್ಯರನ್ನು ಭೇಟಿಯಾಗಲು ಸಿದ್ಧರಾಗಿ' ಎಂಬ ಸಂದೇಶದೊಂದಿಗೆ ಅವರು ಮುಂಬರುವ ಸರಣಿ ಬಗ್ಗೆ ಕುತೂಹಲಕಾರಿ ಸಂಗತಿಯನ್ನು ತೆರೆದಿಟ್ಟಿದ್ದಾರೆ.ಜೊತೆಗೆ ಅನಿಮೇಟೆಡ್ ಆಪಲ್ ಲೋಗೋ ಕೂಡ ಇದೆ. ಆಪಲ್ ಅಧಿಕೃತವಾಗಿ ಏನನ್ನು ಸಂಗ್ರಹಿಸಿದೆ ಎಂಬುದನ್ನು ಬಹಿರಂಗಪಡಿಸಿಲ್ಲವಾದರೂ, ಮ್ಯಾಕ್‌ಬುಕ್ ಏರ್, ಐಪ್ಯಾಡ್ ಮತ್ತು ಬಹುಶಃ ವಿಷನ್ ಪ್ರೊ ಹೆಡ್‌ಸೆಟ್‌ಗೆ ನವೀಕರಣಗಳ ಜೊತೆಗೆ ಬಹುನಿರೀಕ್ಷಿತ ಐಫೋನ್ ಎಸ್‌ಇ 4 ಮೇಲೆ ಸ್ಪಾಟ್‌ಲೈಟ್ ಇರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಹೊಸ 'iPhone SE 4' ಹೇಗಿದೆ ಎಂಬ ಬಗ್ಗೆ ಎಲ್ಲರಲ್ಲೂ ಕುತೂಹಲ ಇದೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಗೆಬಗೆಯ ವೀಡಿಯೊಗಳು ಹರಿದಾಡುತ್ತಿವೆ. ಆದರೆ ಹೊಸ 'iPhone SE 4' ಇದೇ ರೀತಿಯಲ್ಲೇ ಇರಲಿದೆಯೇ ಎಂಬ ಬಗ್ಗೆ ಕಂಪನಿತು ತನ್ನ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ...
ಭಲೇ ಸಿಎಂ: ಉದಯಗಿರಿ ಗಲಭೆಕೋರರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಲು ತಾಕೀತು

ಭಲೇ ಸಿಎಂ: ಉದಯಗಿರಿ ಗಲಭೆಕೋರರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಲು ತಾಕೀತು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ಉದಯಗಿರಿ ಗಲಭೆಯಲ್ಲಿ ಕಲ್ಲುತೂರಿದವರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ತಾಕೀತು ಮಾಡಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಮ್, ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದ್ದಾಗಿ ತಿಳಿಸಿದ್ದಾರೆ.ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು. ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು, ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು ಎಂದವರು ಪ್ರತಿಪಾದಿಸಿದ್ದಾರೆ.ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕ...
AICCಯಲ್ಲಿ ಭಾರೀ ಬದಲಾವಣೆ: ಬಿ.ಕೆ. ಹರಿಪ್ರಸಾದ್’ಗೆ ಮಹತ್ವದ ಹೊಣೆ

AICCಯಲ್ಲಿ ಭಾರೀ ಬದಲಾವಣೆ: ಬಿ.ಕೆ. ಹರಿಪ್ರಸಾದ್’ಗೆ ಮಹತ್ವದ ಹೊಣೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಪ್ರದೇಶ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಹಲವು ರಾಜ್ಯಗಳಿಗೆ ಹೊಸಬರನ್ನು ಎಐಸಿಸಿ ನೇಮಕ ಮಾಡಿದೆ. ಇದೇ ವೇಳೆ, ಪ್ರದೇಶ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಕರ್ನಾಟಕದ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಹರಿಯಾಣಕ್ಕೆ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ತಮಿಳುನಾಡು ಮತ್ತು ಪುದುಚೇರಿಗೆ ಗಿರಿ ಚೋಡಂಕರ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ.ಶುಕ್ರವಾರ ನಡೆದ ಪ್ರಮುಖ ಪುನರ್ರಚನೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳನ್ನು AICC ನೇಮಿಸಿದೆ.  ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರನ್ನು ಪಂಜಾಬ್‌ಗೆ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ. ಮಧ್ಯಪ್ರದೇಶಕ್ಕೆ ವರ್ಗಾವಣೆಗೊಂಡಿರುವ ಹರೀಶ್ ಚೌಧರಿ ಅವರ ಬದಲಿಗೆ ಬಘೇಲ್ ನೇಮಕಗೊಂಡಿದ್ದಾರೆ.ಕರ್ನಾಟಕದ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ಗೆ ...
ಸಾರ್ವಜನಿಕರ ಆಕ್ರೋಶಕ್ಕೆ ಬೆಚ್ಚಿದ BMRCL; ನಮ್ಮ ಮೆಟ್ರೋ ಪ್ರಯಾಣ ದರದಲ್ಲಿ ಇಳಿಕೆ

ಸಾರ್ವಜನಿಕರ ಆಕ್ರೋಶಕ್ಕೆ ಬೆಚ್ಚಿದ BMRCL; ನಮ್ಮ ಮೆಟ್ರೋ ಪ್ರಯಾಣ ದರದಲ್ಲಿ ಇಳಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಮತ್ತೆ ಪರಿಷ್ಕರಿಸಲಾಗಿದೆ. ಸಾರ್ವಜನಿಕರ ಆಕ್ರೋಶಕ್ಕೆ ಮಣಿದಿರುವ 'ನಮ್ಮ ಮೆಟ್ರೋ' ಪ್ರಯಾಣ ದರವನ್ನು ಸ್ವಲ್ಪ ಮಟ್ಟಿಗೆ ಇಳಿಕೆ ಮಾಡಿದೆ.ಟಿಕೆಟ್ ದರ ಏರಿಕೆ ಬಗ್ಗೆ ಸಾರ್ವಜನಿಕ ವಲಯದಲ್ಲಿನ ಆಕ್ರೋಶ ಹಿನ್ನೆಲೆಯಲ್ಲಿ ದರ ಇಳಿಸುವಂತೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಬಿಎಂಆರ್​ಸಿಎಲ್, ಶೇ 90 ರಿಂದ 100 ರಷ್ಟು ದರ ಹೆಚ್ಚಳ ಮಾಡಿರುವ ನಿಲ್ದಾಣಗಳ ಮಧ್ಯೆ ತಲಾ 10 ರೂಪಾಯಿಗಳಷ್ಟು ಇಳಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.ಹೊಸ ದರ ಹೀಗಿದೆ: ಮೆಜೆಸ್ಟಿಕ್​​ನಿಂದ ವೈಟ್​ಫಿಲ್ಡ್​ಗೆ ಹಳೆಯ ದರ 90 ರೂ. ಹೊಸ ದರ 80 ರೂ. ಮೆಜೆಸ್ಟಿಕ್​​ನಿಂದ ಚಲ್ಲಘಟ್ಟಕ್ಕೆ ಹಳೆಯ 70 ರೂ. ಹೊಸ ದರ 60 ರೂ. ಮೆಜೆಸ್ಟಿಕ್​​ನಿಂದ ವಿಧಾನಸೌಧಕ್ಕೆ ಹಳೆಯ 20 ರೂ. ಹೊಸ ದರ 10 ರೂ. ಮೆಜೆಸ್ಟಿಕ್​​ನಿಂದ ಬೈಯಪ್ಪನಹಳ್ಳಿಗೆ ಹಳೆಯ 60 ಹೊಸ ದರ 50 ರೂ. ಮೆಜೆಸ್ಟಿಕ್​​ನಿಂದ ರೇಷ್ಮೆ ಸಂಸ್ಥೆಗೆ ಹಳೆಯ 70 ರೂ. ದರ ಈಗ 60 ರೂ. ಇದೇ ವೇಳೆ, ಕನಿಷ್ಠ, ಗರಿಷ್ಠ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಮೂಲಗಳು ತಿಳಿಸಿವೆ....
ಒಂದೆಡೆ KWIN City, ಗ್ಲೋಬಲ್ ಹಬ್ ಎಂದು ಬೊಬ್ಬಿಡುತ್ತಿರುವ ಸರ್ಕಾರ; ಮತ್ತೊಂದೆಡೆ ಯಮಕಿಂಕರರ ತಾಣದಂತಿರುವ ಆಸ್ಪತ್ರೆ!

ಒಂದೆಡೆ KWIN City, ಗ್ಲೋಬಲ್ ಹಬ್ ಎಂದು ಬೊಬ್ಬಿಡುತ್ತಿರುವ ಸರ್ಕಾರ; ಮತ್ತೊಂದೆಡೆ ಯಮಕಿಂಕರರ ತಾಣದಂತಿರುವ ಆಸ್ಪತ್ರೆ!

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: KWIN City, ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ, ಗ್ಲೋಬಲ್ ಹಬ್, ಪ್ರಗತಿಯಮರುಕಲ್ಪನೆ ಎಂದು ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ಬೊಬ್ಬೆ ಹೊಡೆಯುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಉತ್ತರ ಕರ್ನಾಟಕದ ಆಸ್ಪತ್ರೆಗಳ ದುಸ್ಥಿತಿ ಅನಾವರಣವಾಗಿದೆ.KWIN City, ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ, ಗ್ಲೋಬಲ್ ಹಬ್, #ಪ್ರಗತಿಯಮರುಕಲ್ಪನೆ ಎಂದು ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ಬೊಬ್ಬೆ ಹೊಡೆಯುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಉತ್ತರ ಕರ್ನಾಟಕದ ಆಸ್ಪತ್ರೆಗಳ ದುಸ್ಥಿತಿ ಇದು! ಈಗಾಗಲೇ ನೂರಾರು ಬಾಣಂತಿಯರು ಇದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೂ, ಇನ್ನೂ ಎಚ್ಚೆತ್ತಿಲ್ಲದಿರವುದು ನಮ್ಮ… pic.twitter.com/e885sKwlNj— Arvind Bellad (@BelladArvind) February 13, 2025   ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಅವರು ಈ ಕುರಿತಂತೆ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಮಾಡಿದ್ದು, ಆಸ್ಪತ್ರೆಗಳ ಅವ್ಯವಸ್ಥೆಗೆ ಹೊಣೆಗಾರರಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.ಈಗಾಗಲೇ ನೂರಾರು ಬಾಣಂತಿಯ...
ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ರಾಜ್ಯವು ಇಡೀ ವಿಶ್ವದಲ್ಲಿ ಅತಿ ಹೆಚ್ಚು ಕೌಶಲ್ಯಭರಿತವಾಗಿ ರಾಜ್ಯವಾಗಿದೆ. ತಾಂತ್ರಿಕವಾಗಿಯೂ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿಯೂ ನಮ್ಮ ಕರುನಾಡು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ರಾಜಧಾನಿ ಸಮೀಪ ತಲೆ ಎತ್ತುತ್ತಿರುವ ಕ್ವಿನ್ ಸಿಟಿಯು ಕೌಶಲ್ಯ ಹಾಗೂ ವೈದ್ಯಕೀಯ ಶಿಕ್ಷಣದ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಇಂಗ್ಲೀಷ್ ಭಾಷೆಯಲ್ಲೂ ಈ ಸುದ್ದಿ ಓದಿ.. KWIN City to Transform Karnataka into a Talent Hub: Dr. Sharan Prakash Patilಬೆಂಗಳೂರು ಅರಮನೆಯಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (ಇನ್ವೆಸ್ಟ್ ಕರ್ನಾಟಕ) ಮೂರನೇ ದಿನವಾದ ಗುರುವಾರ "ಕ್ವಿನ್ ಸಿಟಿಯಲ್ಲಿ ವೈದ್ಯಕೀಯ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಸಂಯೋಜಿಸುವುದು" ಎಂಬ ವಿಷಯದ ಕುರಿತ ನಡೆದ ದುಂಡು ಮೇಜಿನ ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ಮಂಡಿಸಿದರು.ಕ್ವಿನ್ ಸಿಟಿಯಲ್ಲಿ ಕ್ರಿಯಾಶೀಲತೆ ಹ...
ಮೈಕ್ರೋಫೈನಾನ್ಸ್‌ಗೆ ಅಂಕುಶ; ಸರ್ಕಾರದ ಪರಿಷ್ಕೃತ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಮೈಕ್ರೋಫೈನಾನ್ಸ್‌ಗೆ ಅಂಕುಶ; ಸರ್ಕಾರದ ಪರಿಷ್ಕೃತ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮೈಕ್ರೋ ಫೈನಾನ್ಸಿಂಗ್ ಸಂಸ್ಥೆಗಳ (MFI) ಹಾವಳಿ ನಿಯಂತ್ರಿಸುವ ಅಸ್ತ್ರಕ್ಕೆ ರಾಜ್ಯಪಾಲರು ಅಸ್ತು ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ಅನುಮೋದನೆ ನೀಡಿದ್ದಾರೆ.ಇದೀಗ ಇಂಗ್ಲೀಷ್ ಆವೃತ್ತಿಯಲ್ಲೂ 'ಉದಯ ನ್ಯೂಸ್' ಲಭ್ಯ..Karnataka Governor approves ordinance aimed to tackle microfinance menaceರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಮೈಕ್ರೋಫೈನಾನ್ಸ್‌ಗೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ಸರ್ಕಾರ ರಾಜಭವನಕ್ಕೆ ಕಳುಹಿಸಿದೆ. "ಈಗ, ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ" ಎಂದು ಮುಖ್ಯಮಂತ್ರಿಗಳ ಕಚೇರಿ (CMO) ತಿಳಿಸಿದೆ.ಇದರೊಂದಿಗೆ, ಕರ್ನಾಟಕ ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ತಡೆಗಟ್ಟುವಿಕೆ) ಸುಗ್ರೀವಾಜ್ಞೆ, 2025 ಜಾರಿಗೆ ಬರಲಿದೆ. ಈ ಸಂಬಂಧ ವಿವರಗಳನ್ನು ಇನ್ನೂ ಅಧಿಕೃತಗೊಳಿಸಬೇಕಾಗಿದೆ. ಆದಾಗ್ಯೂ, ಮೈಕ್ರೋಫೈನಾನ್ಸಿಂಗ್ ಪಿಡುಗನ್ನು ನಿಭಾಯಿಸುವಲ್ಲಿ ಕಾನೂನು ಎಷ್ಟು ಪರಿಣಾಮಕಾರಿಯಾಗಿದೆ ಎಂಬುದನ್ನು ನೋಡಬೇಕಾಗಿದೆ.ಈ ಹಿಂದೆ ಸುಗ...