Sunday, August 9

ವಿದೇಶ

ಹೈಕೋರ್ಟ್ ಮಹತ್ವದ ತೀರ್ಪು; KIADB ಭೂಸ್ವಾಧೀನ ರದ್ದು, ದಯಾನಂದ್ ಪೈಗೆ ಭಾರೀ ದಂಡ, ಸಿಬಿಐ ತನಿಖೆಗೆ ನಿರ್ದೇಶನ

ಹೈಕೋರ್ಟ್ ಮಹತ್ವದ ತೀರ್ಪು; KIADB ಭೂಸ್ವಾಧೀನ ರದ್ದು, ದಯಾನಂದ್ ಪೈಗೆ ಭಾರೀ ದಂಡ, ಸಿಬಿಐ ತನಿಖೆಗೆ ನಿರ್ದೇಶನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೈಗಾರಿಕೆ ಹೆಸರಲ್ಲಿ ಭೂಸವಾಧೀನ ಮಾಡಿಸಿ ವೈಯಕ್ತಿಕ ಬ್ಯುಸಿನೆಸ್ ನಡೆಸುವ ರಿಯಲ್ ಎಸ್ಟೇಟ್ ಉದ್ಯಮಿ ದಯಾನಂದ್ ಪೈ ಪ್ರಯತ್ನಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಮಹತ್ವದ ಆದೇಶವೊಂದರಲ್ಲಿ ಬೆಂಗಳೂರಿನ ಹೆಬ್ಬಾಳ ಬಳಿ ಲೇಕ್ ವ್ಯೂ ಪ್ರವಾಸೋದ್ಯಮ ನಿಗಮಕ್ಕೆ ನೂರಾರು ಕೋಟಿ ಬೆಲೆಬಾಳುವ ಜಾಮೀನು ಸ್ವಾಧೀನ ಅಧಿಸೂಚನೆಯನ್ನೇ ಹೈಕೋರ್ಟ್ ರದ್ದುಪಡಿಸಿದೆ. ಅಷ್ಟೇ ಅಲ್ಲ ಉದ್ಯಮಿ ದಯಾನಂದ್ ಪೈ ಅವರಿಗೆ ಬರೋಬ್ಬರಿ 10 ಲಕ್ಷ ರೂಪಾಯಿ ದಂಡ ವಿಧಿಸಿದ್ದಲ್ಲದೆ, ಸಿಬಿಐ ತನಿಖೆಗೂ ಆದೇಶಿಸಿ ಶುಕ್ರವಾರ ತೀರ್ಪು ಪ್ರಕಟಿಸಿದೆ.ಹೆಬ್ಬಾಳದಲ್ಲಿ ಸ್ಥಳೀಯರ ಆಕ್ಷೇಪದ ನಡುವೆಯೂ ಕೈಗಾರಿಕೆಗಳ ಸ್ಥಾಪನೆ ಮತ್ತು ಅಭಿವೃದ್ಧಿಗಾಗಿ 63.33 ಎಕರೆ ಭೂಮಿಯನ್ನು ಸ್ವಾಧೀನ ಕುರಿತು KIADBಯು 2002ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಅದೇ ಜಮೀನನ್ನು ಬಿಡಿಡಿಎಯು 2004ರಲ್ಲಿ ಅರ್ಕಾವತಿ ಲೇಔಟ್ ನಿರ್ಮಾಣಕ್ಕೂ ಅಧಿಸೂಚನೆ ಹೊರಡಿಸಿದೆ. ಅದಾಗಿಯೂ KIADBಯು ಕಾಯ್ದೆಯ ಸೆಕ್ಷನ್ 28 (ಎ) ರ ಅಡಿಯಲ್ಲಿ 63.33 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಈ ಪೈಕಿ ಹೆಬ್ಬಾಳದ ಅಮಾನಿಖಾನೆ ಬಿಟೆಲಿ ಬಳಿಯ...
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ

ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದಾವಣಗೆರೆ ಕ್ಷೇತ್ರದ ಉಪಚುನಾವಣೆಯಲ್ಲಿ ನೀಡದ ವಿಚಾರ ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ ಸೃಷ್ಟಿಸಿದೆ. ಅದರಲ್ಲೂ ಮುಸ್ಲಿಂ ನಾಯಕರು ಪಕ್ಷದ ಪ್ರಚಾರದಿಂದ ಉಳಿದಿರುವ ಬೆಳವಣಿಗೆ ಪಕ್ಷದ ವರಿಷ್ಠರಿಗೆ ಮುಜುಗರ ತಂದಿದೆ.ಈ ಬೆಳವಣಿಗೆಯ ನಡುವೆಯೇ, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ."ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ."ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ" ಎಂದು ಶಿವಕುಮಾರ್ ತಿಳಿಸಿದ್ದಾರೆ....
ಯೂತ್ ಕಾಂಗ್ರೆಸ್ ನಾಯಕ ಫೈರೋಜ್ ಪಠಾಣ್ ಹತ್ಯೆ

ಯೂತ್ ಕಾಂಗ್ರೆಸ್ ನಾಯಕ ಫೈರೋಜ್ ಪಠಾಣ್ ಹತ್ಯೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಮುಗಿದಿದ್ದು,ರಾಜಕೀಯ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಇದ್ದಾರೆ. ರಾಜ್ಯದ ಜನರು ಕೂಡಾ ಕುತೂಹಲದಿಂದ ಫಲಿತಾಂಶವನ್ನು ಎದುರು ನೋಡುತ್ತಿದ್ದಾರೆ. ಆದರೆ, ಅಷ್ಟರಲ್ಲೇ, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಯ ಸುದ್ದಿ ರಾಜ್ಯದ ಜನರನ್ನು ಬೆಚ್ಚಿ ಬೆಳಿಸಿದೆ. ಧಾರವಾಡ: ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಶುಕ್ರವಾರ ರಾತ್ರಿ ನಗರದ ಹಾಶ್ಮಿ ನಗರದಲ್ಲಿರುವ ಮನೆಗೆ ನುಗ್ಗಿದ ಆರು ಜನರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಸಂಚು ರೂಪಿಸಿದ್ದ ಆರೋಪದಲ್ಲಿ ಅರ್ಬಾಜ್ ಪಠಾಣ್ ಮತ್ತು ಗುಲಾಬ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 2025-26 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ವಿದ್ಯಾರ್ಥಿಗಳು ದಾಖಲೆ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಒಟ್ಟು ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷದಿಗಿಂತ ಗಮನಾರ್ಹ ಏರಿಕೆ ಕಂಡಿದೆ.ರಾಜ್ಯಾದ್ಯಂತ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದರು.ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡು ವಿಶೇಷ ಸಾಧನೆ ಮಾಡಿದ್ದಾರೆ.ಈ ವರ್ಷದ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯದ 1217 ಕೇಂದ್ರಗಳಲ್ಲಿ ನಡೆದಿದ್ದು, 5174 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸೈನ್ಸ್ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಮತ್ತು ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರ...
ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕಲಬುರಗಿ: ಎಐಸಿಸಿ ಅಧ್ಯಕ್ಷರೂ, ದೇಶದ ಅನುಭವಿ ಹಿರಿಯ ರಾಜಕಾರಣಿಗಳಾದ ಮಲ್ಲಿಕಾರ್ಜುನ ಖರ್ಗೆ ಅವರಾಗಲಿ, ಪ್ರಿಯಾಂಕ್ ಖರ್ಗೆ ಅವರಾಗಲಿ ಅಪರಾಧ ಕೆಲಸ ಮಾಡಿಲ್ಲ, ಸಮಾಜವನ್ನು ಕಟ್ಟುವ ಕೆಲಸ ಮಾಡಿದ್ದಾರೆ. ಹೊರತು ಒಡೆಯುವ ಕೆಲಸ ಎಂದೂ ಮಾಡಿಲ್ಲ‌ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಹೇಳಿದ್ದಾರೆ.ಕಲಬರಗಿ ನಗರದ ತಮ್ಮ‌ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಇಲ್ಲಿಯವರೆಗೂ ವೈಯಕ್ತಿಕವಾಗಿ ಯಾರನ್ನೂ ಟೀಕೆ ಮಾಡಿಲ್ಲ, ಸಂಘಟನೆ ಬಗ್ಗೆ ಹೇಳಿದ್ದಾರೆ ಎಂದರು. ವಿಷ ಸರ್ಪವನ್ನು ಹೊಡಿಬೇಕು ಎಂದರೆ ಸೈದ್ದಾಂತಿಕವಾಗಿ ಸಂಘಟನೆಯ ಸಿದ್ಧಾಂತವನ್ನು ವಿರೋಧಿಸಬೇಕನ್ನುವ ಅರ್ಥವಿದೆ. ಯಾರನ್ನು ಯಾರೂ ಸಹ ಹೊಡೆಯುವ ಹಕ್ಕಿಲ್ಲ, ಸಮಾಜಕ್ಕೆ ಮಾರಕವಾದ ಸಿದ್ಧಾಂತಗಳನ್ನು ಸೂಕ್ಷ್ಮವಾಗಿ ಗ್ರಹಿಸಿ ಹೊಡೆದಾಗಬೇಕೆನ್ನುವ ಅರ್ಥದಲ್ಲಿ ಖರ್ಗೆ ಅವರು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪಾರದರ್ಶಕ ವ...
ಬಾಗಲಕೋಟೆ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಸಂಘ ಸಂಸ್ಥೆಗಳ ಮೊರೆ ಹೋದ ಸಿಎಂ

ಬಾಗಲಕೋಟೆ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಸಂಘ ಸಂಸ್ಥೆಗಳ ಮೊರೆ ಹೋದ ಸಿಎಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬಾಗಲಕೋಟೆ: ಬಡವರಿಗೆ ಶಕ್ತಿ ತುಂಬುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಆಯೋಜಿಸಿದ್ದ ವಿವಿಧ ಸಂಘ ಸಂಸ್ಥೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಹೆಚ್.ವೈ. ಮೇಟಿಯವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿಯವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಆರಿಸಿ ಕಳುಹಿಸಬೇಕು ಎಂದು ಮನವಿ ಮಾಡಿದರು.'ನಮ್ಮ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಿಂದ ಎಲ್ಲಾ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದೆ. ಇದುವರೆಗೆ 1.31 ಲಕ್ಷ ಕೋಟಿಯನ್...
ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದ್ದು, ಏಪ್ರಿಲ್ 6ರವರೆಗೆ ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಏಪ್ರಿಲ್ 6ರವರೆಗೆ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಶನಿವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯೂ ಇದೆ.ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಕೂಡ ಗುಡುಗು-ಸಿಡಿಲಿನೊಂದಿಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ....
ಉಪಚುನಾವಣೆ ಅಖಾಡದಲ್ಲಿ ‘ಕುಟುಂಬ ರಾಜಕೀಯ’; ಬಿಜೆಪಿ ಆರೋಪಕ್ಕೆ ಶಿವಕುಮಾರ್ ತಿರುಗೇಟು

ಉಪಚುನಾವಣೆ ಅಖಾಡದಲ್ಲಿ ‘ಕುಟುಂಬ ರಾಜಕೀಯ’; ಬಿಜೆಪಿ ಆರೋಪಕ್ಕೆ ಶಿವಕುಮಾರ್ ತಿರುಗೇಟು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದಾವಣಗೆರೆ: ಉಪಚುನಾವಣೆ ರಾಜಕೀಯ ತೀವ್ರಗೊಳ್ಳುತ್ತಿರುವ ನಡುವೆ ಕುಟುಂಬ ರಾಜಕೀಯ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದು, ಭಾರತೀಯ ಜನತಾ ಪಕ್ಷ ಹಾಗೂ ಜನತಾ ದಳ (Secular) ಪಕ್ಷಗಳಲ್ಲೂ ಇದೇ ರೀತಿಯ ರಾಜಕೀಯ ನಡೆಯುತ್ತಿದೆ ಎಂದು ಪ್ರಶ್ನಿಸಿದ್ದಾರೆ.ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಒಂದೇ ಕುಟುಂಬ ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿದೆ ಎನ್ನುವುದು ತಪ್ಪು. ಶಿವಶಂಕರಪ್ಪ ಹಾಗೂ ಅವರ ಕುಟುಂಬ ಹಲವು ವರ್ಷಗಳಿಂದ ಜನಸೇವೆ ಮಾಡುತ್ತಿದೆ. ಇದು ಎಲ್ಲಾ ಪಕ್ಷಗಳಲ್ಲಿಯೂ ಸಾಮಾನ್ಯ” ಎಂದು ಹೇಳಿದ್ದಾರೆ.ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ದಾವಣಗೆರೆಯಲ್ಲಿ ದಿವಂಗತ ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಅವರನ್ನು ಕಣಕ್ಕಿಳಿಸಿದ್ದು, ಅವರ ತಂದೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ತಾಯಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಆಗಿದ್ದಾರೆ.“ಹಾಗಾದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರರು ರಾಜಕೀಯದಲ್ಲಿಲ್ಲವೇ? ಜೆಡಿಎಸ್‌ನಲ್ಲಿ ಒಂದೇ ಕುಟುಂಬದ ಹಲವು ಮಂದಿ ಇಲ್ಲವೇ?” ಎಂದು ಡಿಕೆಶಿ ಪ್ರಶ್ನಿಸಿದರ...
ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಸೋಲಿನ ಭಯ; ಶ್ರೀರಾಮುಲು

ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಸೋಲಿನ ಭಯ; ಶ್ರೀರಾಮುಲು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರನ್ನು ‘ಬೀದಿ ಹೋರಿಗಳು’ ಎಂದು ಹೋಲಿಸಿದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ಹಿರಿಯ ನಾಯಕ ಬಿ. ಶ್ರೀರಾಮುಲು ಕಿಡಿಕಾರಿದ್ದಾರೆ.ದಾವಣಗೆರೆಯಲ್ಲಿ ಮಾತನಾಡಿದ ಶ್ರೀರಾಮುಲು, “ಬಿಜೆಪಿ ನಾಯಕರು ಹೋರಿಗಳಾದರೆ, ಕಾಂಗ್ರೆಸ್ ನಾಯಕರು ಇಲಿಗಳಂತಿದ್ದಾರೆ” ಎಂದು ತಿರುಗೇಟು ನೀಡಿದರು. ಸಿದ್ದರಾಮಯ್ಯ ಸುತ್ತ ಜನರ ವಿಶ್ವಾಸ ಕಳೆದುಕೊಂಡವರೇ ಇದ್ದಾರೆ ಎಂದು ಅವರು ಆರೋಪಿಸಿದರು.ಉಪಚುನಾವಣೆಯ ಭಯದಿಂದ ಕಾಂಗ್ರೆಸ್ ಈ ರೀತಿಯ ಹೇಳಿಕೆಗಳನ್ನು ಮಾಡುತ್ತಿದೆ ಎಂದು ಟೀಕಿಸಿದ ಅವರು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ ಎಂದರು.ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಶ್ರೀರಾಮುಲು, ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ಹಲವು ನಿಗಮಗಳಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ ಎಂದು ಹೇಳಿದರು. ಸರ್ಕಾರದ ಸಚಿವರು ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ಅವರು ದೂರಿದರು.ಖಾತರಿ ಯೋಜನೆಗಳ ಕುರಿತು ಸಿಎಂ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರ...
ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕಠಿಣ ಕ್ರಮ

ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕಠಿಣ ಕ್ರಮ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 2026ರ ಮುಂಗಾರು ಹಂಗಾಮಿನ ರಸಗೊಬ್ಬರಗಳ ಸಮರ್ಪಕ ಪೂರೈಕೆ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಕೃಷಿ ಇಲಾಖೆಯು ಕ್ರಮಗಳನ್ನು ಜಾರಿಗೊಳಿಸಿದೆ.ಮಧ್ಯಪ್ರಾಚ್ಯ ಪ್ರದೇಶದ ಅಸ್ಥಿರತೆ ಹಿನ್ನಲೆ ಗೊಬ್ಬರ ಉತ್ಪಾದನೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಆಮದು ವ್ಯತ್ಯಯವಾಗುವ ಸಾಧ್ಯತೆ ಕಂಡುಬಂದಿದ್ದು,ರಾಜ್ಯದಲ್ಲಿ ಗೊಬ್ಬರ ಪೂರೈಕೆಗೆ ಅಡ್ಡಿಯಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನಲೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಉಸ್ತುವಾರಿಯಲ್ಲಿ ಕೃಷಿ ಇಲಾಖೆ ಬಹುಮುಖ ಕ್ರಮಗಳನ್ನು ಅನುಷ್ಠಾನಗೊಳಿಸಿದೆ.ಕೇಂದ್ರ ಸರ್ಕಾರವು ರಾಜ್ಯಕ್ಕೆ ಒಟ್ಟು 30.05 ಲಕ್ಷ ಮೆಟ್ರಿಕ್ ಟನ್ ವಿವಿಧ ಗೊಬ್ಬರಗಳನ್ನು ಹಂಚಿಕೆ ಮಾಡಿದ್ದು, ಏಪ್ರಿಲ್ 1ರ ವೇಳೆಗೆ 11.42 ಲಕ್ಷ ಮೆಟ್ರಿಕ್ ಟನ್ ಸಂಗ್ರಹ ಲಭ್ಯವಿದೆ.ರಾಜ್ಯವು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ (KSCMF) ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮ(KSSC) ಮುಖಾಂತರ ಕಾಪು ದಾಸ್ತಾನು ವ್ಯವಸ್ಥೆಯನ್ನು ಬಲಪಡಿಸಿದೆ. ಪ್ರಸ್ತುತ 28224 ಮೆಟ್ರಿಕ್ ಟನ್ ಗೊಬ್ಬರ ಕಾಪು ದಾಸ್ತಾನಿನಲ್ಲಿ ಲಭ್ಯವಿದ್ದು, ಯೂರಿಯಾ ಮತ್ತು ಡಿ.ಎ.ಪಿ ಗೊಬ್ಬರಗಳ 25% ಕಡ್ಡಾ...