Tuesday, August 11

ವಿದೇಶ

ವಕ್ಫ್ ವಿವಾದ ವಿರುದ್ದ ಬಿಜೆಪಿ ಪ್ರತಿಭಟನೆ; ವಕ್ಫ್‌ ಮಂಡಳಿ ಕಾಯ್ದೆಯಲ್ಲಿ ಬದಲಾವಣೆ ತರಲು ಆಗ್ರಹ

ವಕ್ಫ್ ವಿವಾದ ವಿರುದ್ದ ಬಿಜೆಪಿ ಪ್ರತಿಭಟನೆ; ವಕ್ಫ್‌ ಮಂಡಳಿ ಕಾಯ್ದೆಯಲ್ಲಿ ಬದಲಾವಣೆ ತರಲು ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಕ್ಫ್‌ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್‌ ಸರ್ಕಾರ ವಕ್ಫ್‌ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು ಬಿಜೆಪಿ ಆಗ್ರಹಿಸಿದೆ.ವಕ್ಫ್‌ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕೆ.ಆರ್‌.ಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕ ಆರ್.ಅಶೋಕ್ ,ಜಮೀನು ಕಬಳಿಸುವ ಮೂಲಕ ಅನ್ನದಾತರ ಕಣ್ಣಲ್ಲಿ ನೀರು ಬರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇವೆಲ್ಲಕ್ಕೂ ಸಚಿವ ಜಮೀರ್‌ ಅಹ್ಮದ್‌ ಕಾರಣ. ಹಿಂದೆ ಕೇಂದ್ರದ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರನ್ನು ಓಲೈಸಲು ವಕ್ಫ್‌ ಬೋರ್ಡ್‌ಗೆ ಹೆಚ್ಚು ಅಧಿಕಾರ ನೀಡಿತು. ಸಿಎಂ ಸಿದ್ದರಾಮಯ್ಯ ಅವರೇ ಭೂಮಿ ಪಡೆಯಿರಿ ಎಂದು ಹೇಳಿದ್ದು, ಈಗ ಇದು ಬಿಜೆಪಿ ಮಾಡುವ ರಾಜಕೀಯ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಟೋಪಿ ತೆಗೆದಿದ್ದಾರೆ. ಬಳಿಕ ಅವರೇ ರೈತರ ತಲೆ ಮೇಲೆ ಟೋಪಿ ಹಾಕುತ್ತಾರೆ. ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ನೀಡುತ್ತೇನೆಂದು ಹೇಳಿ ದಲಿತರ ಹಣ ಲೂಟಿ ಮಾಡಿದ...
ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ

ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪ್ರತಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್.ಅಶೋಕ್ ನವರಂಗಿ ಆಟ ಆಡುತ್ತಿದ್ದಾರೆ ಎಂದು ಮಾಜಿ ಶಾಸಕರೂ ಆದ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಟುವಾಗಿ ಟೀಕಿಸಿದ್ದಾರೆ.ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಆರ್ ಅಶೋಕ್ ರವರು ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿರುವ ರಮೇಶ್ ಬಾಬು, ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಗಳನ್ನು ದುರಾಡಳಿತದ ಮೇಲೆ ನಡೆಸುವ ಅವಶ್ಯಕತೆ ಇಲ್ಲ. ಅಂತಹ ಅವಶ್ಯಕತೆ ಏನಾದರೂ ಇದ್ದರೆ ಅದು ಭಾರತೀಯ ಜನತಾ ಪಕ್ಷದ ನಾಯಕರಿಗೆ ಮತ್ತು ಅವರ ಪಕ್ಷಕ್ಕೆ ಇರುತ್ತದೆ ಎಂದು ಎದಿರೇಟು ನೀಡಿದ್ದಾರೆ.ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಉಳಿಸಿಕೊಳ್ಳುವ ಹತಾಶ ಪ್ರಯತ್ನ. ಕರ್ನಾಟಕದ ನವರಂಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರವರು ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಕಾಂಗ್ರೆಸ್ ಪಕ್ಷದ ದುರಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎನ್ನುವ...
ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಚನ್ನಪಟ್ಟಣ: ಇದು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ, ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ ಎಂದು ಪ್ರತಿಪಕ್ಷ ‌ನಾಯಕ ಆರ್.ಅಶೋಕ ಹೇಳಿದರು.ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ವ್ಯಕ್ತಿ ಹೆಸರಲ್ಲಿ ಚುನಾವಣೆ ನಡೆಯುತ್ತಿಲ್ಲ. ಇದು ಎನ್‌ಡಿಎ ಹಾಗೂ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ. ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜನರ ಅನುಕಂಪವಿದೆ. ಅವರು ಈ ಹಿಂದೆ ಸೋತಿದ್ದರು. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳನ್ನು ಜನರು ಗುರುತಿಸಲಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಲೂಟಿ ಮಾಡುತ್ತಲೇ ಇದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದಲಿತರ ಹಣ ಕೊಳ್ಳೆ ಹೊಡೆಯಲಾಗಿದೆ ಎಂದು ದೂರಿದರು.ಗ್ಯಾರಂಟಿಗಳಿಂದಾಗಿ ಮಣ್ಣು ಎತ್ತಿ ಹಾಕಲು ‌ಕೂಡ ಹಣವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 16 ತಿಂಗಳಿಂದ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ವಕ್ಫ್ ಬೋರ್ಡ್ ಮುಸ್ಲಿಮ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸಹಿತ ಕರಾವಳಿ ಮಾಲೆನಾಡಿನ ಜಿಲ್ಲೆಗಳಲ್ಲಿ ನವೆಂಬರ್​ 6ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು, ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲೂ ಮಳೆಯಾ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಹಾಸನನಾಂಬ ದೇವಿ ಜಾತ್ರೆಗೆ ತೆರೆ; ಲಕ್ಷಾಂತರ ಭಕ್ತರಿಗೆ ಒಲಿದ ದೇವಿ ದರ್ಶನ

ಹಾಸನನಾಂಬ ದೇವಿ ಜಾತ್ರೆಗೆ ತೆರೆ; ಲಕ್ಷಾಂತರ ಭಕ್ತರಿಗೆ ಒಲಿದ ದೇವಿ ದರ್ಶನ

ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವಿಶೇಷ
ಹಾಸನ: ಹಾಸನದ ಅಧಿದೇವತೆ ಹಾಸನನಾಂಬ ದೇವಿ ಜಾತ್ರೆಗೆ ತೆರೆಬಿದ್ದಿದೆ. ಈ ಮೂಲಕ ವರ್ಷಕ್ಕೊಮ್ಮೆ ನಡೆಯುವ ದೇವಿದರ್ಶನವೂ ಅಂತ್ಯವಾಗಿದೆ. ಹಾಸನಾಂಬ ದೇವಸ್ಥಾನದ ಗರ್ಭಗುಡಿ ಬಾಗಿಲನ್ನು ಭಾನುವಾರ ಮುಚ್ಚಲಾಗುತ್ತದೆ. ​​ ಹಾಸನಾನೆಂಬ ದೇವಾಲಯದ ಗರ್ಭಗುಡಿಯನ್ನು ವರ್ಷಕ್ಕೊಮ್ಮೆ ತೆರೆಯಲಾಗುತ್ತದೆ. ಹಾಗಾಗಿ ವಾರ್ಷಿಕ ಜಾತ್ರೆವೈಭವ ಸಾಕ್ಷೀಕರಿಸಲು ಲಕ್ಷಾಂತರ ಜನರು ಹಾಸನಕ್ಕೆ ಆಗಮಿಸಿದ್ದರು. ಮಹೋತ್ಸವದ ಅಂತಿಮ ದಿನವಾದ ಇಂದು ಹಸನಾನೆಂಬ ದೇವಾಲಯದ ಆವರಣ ಭಕ್ತಸಾಗರದಿಂದ ತುಂಬಿತ್ತು.ಅಕ್ಟೋಬರ್​ 24 ರಂದು ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್​ 25 ರಿಂದ ನವೆಂಬರ್​ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಕಳೆದ ೯ ದಿನಗಳಲ್ಲಿ ಸುಮಾರು 20 ಲಕ್ಷ ಭಕ್ತರು ದೇವಿ ದರ್ಶನ ಪಡೆದು ಪುನೀತರಾಗಿದ್ದಾರೆ. ಇದೇ ವೇಳೆ ಈ ಬಾರಿ ಹಾಸನಾಂಬ ದೇಗುಲಕ್ಕೆ 9 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಹರಿದು ಬಂದಿದೆ ಎಂದು ಮೂಲಗಳು ತಿಳಿಸಿವೆ....
‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ಶಕ್ತಿ' ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಹಾಕಿರುವ ಪೋಸ್ಟ್ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಂಡಾ ಮಂಡಲರಾಗಿದ್ದಾರೆ.‌ ಅಶೋಕ್ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿರುವ ಸಚಿವ ರಾಮಲಿಂಗಾ ರೆಡ್ಡಿ, ಟ್ವೀಟ್ ಬಿಟ್ಟು ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ‌ಈ ಕುರಿತಂತೆ ರಾಮಲಿಂಗ ರೆಡ್ಡಿ ಸಾಮಾಜಿಕ ಜಾಲತಾಣ 'X'ನಲ್ಲಿ ಎದಿರೇಟು ಎಂಬಂತೆ ಹಾಕಿರುವ ಪೋಸ್ಟ್ ಗಮನಸೆಳೆದಿದೆ. 'ಶಕ್ತಿ' ಯೋಜನೆ ಕುರಿತಂತೆ ಅಂಕಿ ಅಂಶಗಳನ್ನು ಮುಂದಿಟ್ಟಿರುವ ಅವರು, ಮೊಣಚು ಮಾತುಗಳಿಂದ ತಿವಿದಿದ್ದಾರೆ.ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಎಳ್ಳಷ್...
‘ಶಕ್ತಿ’ ಮುನ್ನಡೆಸಲು ಕಷ್ಟವಾಗುತ್ತದೆ ಎಂದು ಯಾವ ಮಾಧ್ಯಮಗಳಿಗೂ ಹೇಳಿಕೆ ನೀಡಿಲ್ಲ; ರಾಮಲಿಂಗ ರೆಡ್ಡಿ

‘ಶಕ್ತಿ’ ಮುನ್ನಡೆಸಲು ಕಷ್ಟವಾಗುತ್ತದೆ ಎಂದು ಯಾವ ಮಾಧ್ಯಮಗಳಿಗೂ ಹೇಳಿಕೆ ನೀಡಿಲ್ಲ; ರಾಮಲಿಂಗ ರೆಡ್ಡಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಶಕ್ತಿ ಯೋಜನೆ ಮುನ್ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಕುರಿತಂತೆ ತಾವು ಹೇಳಿಕೆಯನ್ನೇ ನೀಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ರಾಮಲಿಂಗ ರೆಡ್ಡಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.‌ 'ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ. ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ' ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ತಾವು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ ನನ್ನನ್ನು ಖುದ್ದು ಸಂರ್ಪಕಿಸಬೇಕೆಂದು ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ...
ಮಾಡು ಇಲ್ಲವೇ ಮಡಿ..! ಪಂಚಮಸಾಲಿ ಮೀಸಲಾತಿಗಾಗಿ ಡಿ.9ರಂದು ಸುವರ್ಣ ಸೌಧಕ್ಕೆ ಮುತ್ತಿಗೆ

ಮಾಡು ಇಲ್ಲವೇ ಮಡಿ..! ಪಂಚಮಸಾಲಿ ಮೀಸಲಾತಿಗಾಗಿ ಡಿ.9ರಂದು ಸುವರ್ಣ ಸೌಧಕ್ಕೆ ಮುತ್ತಿಗೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟ ಇದೀಗ ನಿರ್ಣಾಯಕ ಹಂತ ತಲುಪಿದೆ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಡಿಸೆಂಬರ್ 9ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತಯಾರಿ ನಡೆದಿದೆ.ಡಿಸೆಂಬರ್ 9 ಕ್ಕೆ ಸುವರ್ಣ ವಿಧಾನ ಸೌಧಕ್ಕೆ ಲಕ್ಷಾಂತರ ಪಂಚಮಸಾಲಿಗಳಿಂದ ಪಂಚಮಸಾಲಿ ವಕೀಲರ ನೇತೃತ್ವದಲ್ಲಿ ಹಾಗೂ ಟ್ರ್ಯಾಕ್ಟರ್ ಮೂಲಕ ಮುತ್ತಿಗೆ ಹಾಕಲಾಗುವುದು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.ಪಂಚಮಸಾಲಿ 2a ಹಾಗೂ ಲಿಂಗಾಯತ ಉಪಸಮಾಜಗಳ OBC ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡದ ಕಾರಣ ಈ ಹೋರಾಟ ನಡೆಸಲಾಗುತ್ತಿದೆ ಎಂದು ಶ್ರೀಗಳು ತಿಳಿಸಿದ್ದಾರೆ.ಬೆಳಗಾವಿ ಸುವರ್ಣ ವಿಧಾನಸೌಧ ಅಧಿವೇಶನಕ್ಕೆ ಮುಂಚಿತವಾಗಿ ಪಂಚಮಸಾಲಿ ಮೀಸಲಾತಿ ಘೋಷಿಸಬೇಕೆಂದು ಹಕ್ಕೊತ್ತಾಯಿಸಿ ಡಿಸೆಂಬರ್ 9ರಂದು ಸೋಮವಾರ ಬೆಳಿಗ್ಗೆ 10 ಕ್ಕೆ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಮೆರವಣಿಗೆ ನಡೆಸಲಾಗುತ್ತದೆ. ವಕೀಲರ ನೇತೃತ್ವದಲ್ಲಿ ಪಂಚಮಸಾಲಿ-ಮಲೆಗೌಡ-ಗೌಡ ದೀಕ್ಷಾ ಲಿಂಗಾಯತರಿಂದ ಸುವರ್ಣ ವಿಧಾನ...
ದೊಡ್ಡಬಳ್ಳಾಪುರ:  ಹೊಂಗೆ ಮರ ಹತ್ತಿ ಕುಳಿತ ಚಿರತೆ ಮರಿ; ಕಾರ್ಯಾಚರಣೆಯಲ್ಲಿ ಸೆರೆ

ದೊಡ್ಡಬಳ್ಳಾಪುರ: ಹೊಂಗೆ ಮರ ಹತ್ತಿ ಕುಳಿತ ಚಿರತೆ ಮರಿ; ಕಾರ್ಯಾಚರಣೆಯಲ್ಲಿ ಸೆರೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಲಕ್ಕಸಂದ್ರ ಕ್ರಾಸ್ ಬಳಿಯಲ್ಲಿದ್ದ ಹೊಂಗೆ ಮರದಲ್ಲಿ ಚಿರತೆ ಮರಿಯೊಂದು ಕಾಣಿಸಿಕೊಂಡು ಆತಂಕಕ್ಕೀಡು ಮಾಡಿತ್ತು.ಸುದೀರ್ಘ ಕಾರ್ಯಾಚರಣೆ ನಂತರ ಚಿರತೆ ಮರಿಯನ್ನು ಸೆರೆಹಿಡಿಯಲಾಗಿದೆ. ಶುಕ್ರವಾರ ಸಂಜೆ 5 ಗಂಟೆ ಸುಮಾರಿನಲ್ಲಿ ಮರದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ರಾತ್ರಿ ಸುಮಾರು 10:30ರಲ್ಲಿ ಚಿರತೆ ಬಲೆಗೆ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಚಿರತೆ ಪ್ರತ್ಯಕ್ಷವಾದ ಸುದ್ದಿ ತಿಳಿದು ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಚಿರತೆ ಮರಿ ಕೂಡಾ ಭಯದಿಂದಾಗಿ ಮರದಿಂದ ಇಳಿಯದೇ ಅಲ್ಲೇ ಕುಳಿತಿತ್ತು.ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಚಿರತೆ ಮರಿಯನ್ನು ಸೆರೆಹಿಡಿದಿದ್ದಾರೆ ಎನ್ನಲಾಗಿದೆ....
KSRTC: ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಹುಮ್ನಾಬಾದ್‌‌ನಲ್ಲಿ ನ.7ರಿಂದ ಚಾಲನಾ ವೃತ್ತಿ ಪರೀಕ್ಷೆಯ ಅಂತಿಮ ಅವಕಾಶ

KSRTC: ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಹುಮ್ನಾಬಾದ್‌‌ನಲ್ಲಿ ನ.7ರಿಂದ ಚಾಲನಾ ವೃತ್ತಿ ಪರೀಕ್ಷೆಯ ಅಂತಿಮ ಅವಕಾಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್‌ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. 18-09-2024ರಿಂದ ಏರ್ಪಡಿಸಲಾಗಿದ್ದ ಪರೀಕ್ಷೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸಲು 07-11-2024 ರಿಂದ 11-11-2024 ರವರೆಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ನಿಗಮ ನಡೆಸಲಿದೆ.ಈ ಸಂಬಂಧ ನಿಗಮ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದೆ.ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್‌ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು 18-09-2024 ರಿಂದ ನಡೆಸಲಾಗುತ್ತದೆ. ಈ ಸಂಬಂಧ ಎಲ್ಲಾ ಅಭ್ಯರ್ಥಿಗಳಿಗೆ ಕರೆಪತ್ರ ಡೌನ್-ಲೋಡ್‌ ಮಾಡಿಕೊಂಡು ನಿಗದಿತ ದಿನಾಂಕದಂದು ಹಾಜರಾಗಲು ಎಸ್‌. ಎಂ.ಎಸ್‌ ಸಂದೇಶ / ಪತ್ರಿಕಾ ಪ್ರಕಟಣೆ ಹಾಗೂ ನಿಗಮದ ಅಧಿಕೃತ ವೆಬ್-ಸೈಟ್‌ನಲ್ಲಿ ಪ್ರಕಟಣೆ ನೀಡುವ ಮೂಲಕ ಮಾಹಿತಿ ನೀಡಲಾಗಿತ್ತು. ಆದರೆ, ಕೆಲವೊಂದು ಅಭ...