
182 ಕೋಮು ದ್ವೇಷದ ಕೇಸ್ ವಾಪಸ್ ಪಡೆದಿದ್ದ ಬಿಜೆಪಿ; PFI ಮೇಲಿನ ಕೇಸ್ ವಾಪಸ್ ಪಡೆದಿದ್ದೂ BJP; ರಾಮಲಿಂಗಾ ರೆಡ್ಡಿ
ಬೆಂಗಳೂರು: ಗಲಭೆ ಹಾಗೂ ರೈತ ರ ಮೇಲಿನ ಪ್ರಕರಣಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಟೀಕಿಸುವತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಉತ್ತರ ನೀಡಿದ್ದಾರೆ. 182 ಕೋಮು ದ್ವೇಷದ ಪ್ರಕರಣಗಳನ್ನು ವಾಪಸ್ ಪಡೆದಿದ್ದ ಬಿಜೆಪಿ PFI ಮೇಲಿನ ಕೇಸ್ ವಾಪಸ್ ಪಡೆದಿತ್ತು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಇತ್ತೀಚೆಗೆ ನಡೆದ ಸಚಿವ ಸಂಪುಟಸಭೆಯಲ್ಲಿ 43 ಕೇಸ್ ಗಳನ್ನು ಹಿಂಪಡೆಯಲಾಗಿದೆ. ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಡಾ.ಎಂ.ಸಿ.ಸುಧಾಕರ್ ಅವರ ಮನವಿ ಮೇರೆಗೆ ಹಿಂಪಡೆಯಲಾಗಿದೆ. ಸಂವಿಧಾನಕ್ಕೆ ಅಪಮಾನ ಮಾಡಿದವರ ವಿರುದ್ಧ ಹೋರಾಟ ಮಾಡಿದ ಎನ್.ಭಾಸ್ಕರ್, ಕರವೇಯ ನಾರಾಯಣ ಗೌಡ, ಗಣರಾಜ್ಯ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಇರುವ ಕಾರಣಕ್ಕೆ ನಡೆದ ಪ್ರತಿಭಟನೆ, ಪೇಸಿಎಂ ಅಭಿಯಾನದಲ್ಲಿ ಪೋಸ್ಟರ್ ಅಂಟಿಸಿದವರ ವಿರುದ್ದ ಹೀಗೆ ಒಂದಷ್ಟು ಜನಪರ ಹೋರಾಟಗಳನ್ನು ನಡೆಸುವಾಗ ದಾಖಲಾದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆ ಎಂದರು.ಇದರಲ್ಲಿ ಹಳೇ ಹುಬ್...





