Tuesday, August 11

ವಿದೇಶ

ಕಾಂಗ್ರೆಸ್‌ಗೆ ಇದೀಗ ಯಡಿಯೂರಪ್ಪ ಟಾರ್ಗೆಟ್..!?

ಕಾಂಗ್ರೆಸ್‌ಗೆ ಇದೀಗ ಯಡಿಯೂರಪ್ಪ ಟಾರ್ಗೆಟ್..!?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೀಗ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರೇ ಟಾರ್ಗೆಟ್. ಕೆಲವು ದಿನಗಳಿಂದ ಕಾಂಗ್ರೆಸ್ ನಾಯಕರು ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣವನ್ನು ಮುಂದಿಟ್ಟು ನೀಡುತ್ತಿರುವ ಹೇಳಿಕೆಗಳು ಕುತೂಹಲಕ್ಕೆ ಕಾರಣವಾಗುತ್ತಿದೆ. ಅದರಲ್ಲೂ ಬಿಎಸ್‌ವೈ ವಿರುದ್ದ ಪ್ರಕರಣ ದಾಖಲಾದ ಸಂದರ್ಭದಲ್ಲಿ ದೂರುದಾರರ ಮಾನಸಿಕ ಸ್ಥಿರತೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರೇ ಅನುಮಾನ ವ್ಯಕ್ತಪಡಿಸಿದ್ದಾರೆ. ನಂತರ ತಿಂಗಳುಗಟ್ಟಲೆ ಮೌನವಿದ್ದ ಕಾಂಗ್ರೆಸ್ ನಾಯಕರು ಇದೀಗ ತಡವಾಗಿ ಬಿಎಸ್‌ವೈ ಪ್ರಕರಣವನ್ನು ಕೆದಕುತ್ತಿರುವ ವೈಖರಿ ಗಮನಿಸಿದರೆ ಮುಂದಿನ ಬೆಳವಣಿಗೆ ಕುತೂಹಲ ಮೂಡುವಂತಿದೆ.ಈ ನಡುವೆ, ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಪೋಕ್ಸೋ ಕಾಯ್ದೆಯಡಿ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೃತ್ಯ ನಿರ್ದೇಶಕರಾದ ಜಾನಿ ಮಾಸ್ಟರ್ ಅವರಿಗೆ ನೀಡಲಾಗಿದ್ದ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಜಾನಿ ಮಾಸ್ಟರ್ ವಿಚಾರದಲ್ಲಿ ಕಠಿಣ ನಿಲುವು ತಾಳಿರುವ ಬಿಜೆಪಿ ನಾಯಕರು ವಿಚಾರದಲ್ಲಿ ಬಿಜೆಪಿ ಸ್ಪಷ್ಟ ನಿಲುವು ತೋರುತ್ತಿಲ್ಲ ಯಾಕೆ? ಎಂದು...
ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ; ಪ್ರಧಾನಿ ಜೊತೆ ಸೋಮಣ್ಣ ಚರ್ಚೆ

ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ; ಪ್ರಧಾನಿ ಜೊತೆ ಸೋಮಣ್ಣ ಚರ್ಚೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ ಸಹಿತ ಕರ್ನಾಟಕದ ಹಲವು ಯೋಜನೆಗಳ ತ್ವರಿತ ಅನುಷ್ಠಾನ ಸಂಬಂಧ ಪ್ರಧಾನಿ ಜೊತೆ ಕೇಂದ್ರ ರೇಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಮಂಗಳವಾರ ಚರ್ಚೆ ನಡೆಸಿದರು.ನವದೆಹಲಿಯಲ್ಲಿ  ಪ್ರಧಾನ ಮಂತ್ರಿಗಳನ್ನು ಬೇಟಿ ಮಾಡಿದ ಸಚಿವ ವಿ ಸೋಮಣ್ಣ ಸುಮಾರು 30 ನಿಮಿಷಗಳ ಕಾಲ ಚರ್ಚಿಸಿದರು.ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ್ ರೇಲ್ವೆ ಇತ್ಯಾದಿಗಳ ಬಗ್ಗೆ ೨ ಸುತ್ತಿನ ಸಭೆ ನಡೆಸಿರುವ ಬಗ್ಗೆ  ಸೋಮಣ್ಣ ಪ್ರಧಾನ ಮಂತ್ರಿಗಳಿಗೆ ವಿವರಿಸಿದರು. ಕಳೆದ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ತುಮಕೂರು ರಾಯದುರ್ಗ ರೇಲ್ವೆ ಮಾರ್ಗ ಭೂಸ್ವಾಧಿನ ಪ್ರಕ್ರಿಯೆಯನ್ನು ಕೇವಲ 3 ತಿಂಗಳ ಅವಧಿಯಲ್ಲಿ 90% ಕ್ಕಿಂತಲೂ ಮಿಗಲಾಗಿ ಮುಗಿಸಿರುವ ಬಗ್ಗೆ ಪ್ರಧಾನ ಮಂತ್ರಿಗಳಿಗೆ ವಿವರಿಸಿದ್ದಾರೆ.ರೇಲ್ವೆ ಅಧಿಕಾರಿ ಮತ್ತು ಜಿಲ್ಲಾಡಳಿತದ ಉತ್ತಮ ಕಾರ್ಯವೈಖರಿಯ ಬಗ್ಗೆಯೂ ಮಾನ್ಯ ಪ್ರದಾನ ಮಂತ್ರಿಗಳ ಗಮನ ಸೆಳೆದಿದ್ದು , ಪ್ರಧಾನಮಂತ್ರಿಗಳು ಅತ್ಯಂತ ಹರ್ಷ ವ್ಯಕ್ತಪಡಿಸಿದ ಬಗ್ಗೆ ಕೇಂದ್ರ ಸಚಿವ ಸೋಮಣ್ಣ ತಿಳಿಸಿದ್ದಾರೆ.ಇದಲ್ಲದೆ ಕಳೆದ 3 ...
‘ಸಿಎಂ ಬದಲಾವಣೆ ಸನ್ನಿವೇಶ ಬಂದಿಲ್ಲ, ಸಿದ್ದರಾಮಯ್ಯ ರಾಜೀನಾಮೆ ಅಗತ್ಯವೂ ಇಲ್ಲ’

‘ಸಿಎಂ ಬದಲಾವಣೆ ಸನ್ನಿವೇಶ ಬಂದಿಲ್ಲ, ಸಿದ್ದರಾಮಯ್ಯ ರಾಜೀನಾಮೆ ಅಗತ್ಯವೂ ಇಲ್ಲ’

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸನ್ನಿವೇಶ ಬಂದಿಲ್ಲ, ಸಿದ್ದರಾಮಯ್ಯ ರಾಜೀನಾಮೆ ಅಗತ್ಯವೂ ಇಲ್ಲ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿರುವ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಚರ್ಚೆಗಳಾದರೆ ಆದರೆ ಒಳ್ಳೆಯದಲ್ಲವೇ. ಚಾಯ್ ಪೇ ಚರ್ಚೆ ಅಂತ ಕಾರ್ಯಕ್ರಮ ಇದೆಯಲ್ಲ. ಅದೇರೀತಿ ಕಾಫಿ ಪೇ‌ ಚರ್ಚೆ. ನಾವಿಬ್ಬರು ಕುಳಿತುಕೊಂಡು ಎರಡು ಲೋಟ ಕಾಫಿ ಕುಡಿದರೆ ಮುಖ್ಯಮಂತ್ರಿ ಮಾಡಿಬಿಡುತ್ತಾರೆ ಎನ್ನುವುದಾದರೆ ಬಹಳ ಚರ್ಚೆಗಳಾಗುತ್ತಿದ್ದವು. ಬಹಳಷ್ಟು ಕಾಫಿ ಖರ್ಚಾಗುತ್ತಿತ್ತು ಎಂದರು.ನಾವು ಮಾತನಾಡುವುದರಿಂದ ಏನು ಆಗುವುದಿಲ್ಲ. ನಿರ್ಧಾರ ಎಲ್ಲ ಹೈಕಮಾಂಡ್ ಮಾಡುತ್ತದೆ. ಅಂತಹ ಸನ್ನಿವೇಶ ಈಗ ಬಂದಿಲ್ಲ. ಸನ್ನಿವೇಶ ಬಂದಾಗ ಚರ್ಚೆ ಮಾಡೋಣ, ಅದರ ಬಗ್ಗೆ ಕೂಗು ಹಾಕೋಣ, ಬೇಡಿಕೆ‌ ಇಡೋಣ. ಬೇಕಾದದ್ದು ಮಾಡೋಣ. ಆದರೆ ಈಗ ಸನ್ನಿವೇಶ ಬಂದಿಲ್ಲವಲ್ಲ. ಮುಖ್ಯಮಂತ್ರಿ ರಾಜೀನಾಮೆ ಕೊಡುವ ಅಗತ್ಯವು ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.ಬಿಟ್‌ಕಾಯಿನ್ ಪ್ರಕರಣಕ್ಕೆ...
ಅಕ್ಕ ಕೆಫೆ ಗ್ರಾಮೀಣ ಮಹಿಳಾ ಉದ್ಯಮಿಗಳ ಬದುಕು ಪರಿವರ್ತಿಸುವುದು ಪಕ್ಕಾ: ಸಚಿವ ಡಾ. ಪಾಟೀಲ್

ಅಕ್ಕ ಕೆಫೆ ಗ್ರಾಮೀಣ ಮಹಿಳಾ ಉದ್ಯಮಿಗಳ ಬದುಕು ಪರಿವರ್ತಿಸುವುದು ಪಕ್ಕಾ: ಸಚಿವ ಡಾ. ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದೇವನಹಳ್ಳಿ: ರಾಜ್ಯ ಸರ್ಕಾರದ ವತಿಯಿಂದ ಜಾರಿಗೆ ತಂದಿರುವ “ಅಕ್ಕ ಕೆಫೆ” ಯೋಜನೆ ಕರ್ನಾಟಕದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯಲ್ಲಿ ಮಹಿಳಾ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ.ಮಂಗಳವಾರ ದೇವನಹಳ್ಳಿಯಲ್ಲಿ “ಅಕ್ಕ ಕೆಫೆ” ಉದ್ಘಾಟಿಸಿದ ಸಚಿವ ಡಾ.ಪಾಟೀಲ್, ನಗರ ಮತ್ತು ಗ್ರಾಮೀಣ ಪ್ರದೇಶಗಳ ಮಹಿಳೆಯರಿಗೆ ಸ್ವಾವಲಂಬನೆ ಮತ್ತು ಉದ್ಯಮಶೀಲತೆ ಉತ್ತೇಜಿಸುವ ಯೋಜನೆ ಇದಾಗಿದೆ. ಇದು ಪರಿವರ್ತನೆಯ ಸಾಮರ್ಥ್ಯವನ್ನು ಹೊಂದಿದೆ. "ಅಕ್ಕ ಕೆಫೆ ಮಹಿಳೆಯರನ್ನು ಸಬಲೀಕರಣಗೊಳಿಸುವ ಮೂಲಕ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಉದ್ಯಮಶೀಲತೆಗೆ ಆದ್ಯತೆ ನೀಡಲಿದೆ. ಕರ್ನಾಟಕದ ಸಾಮಾಜಿಕ-ಆರ್ಥಿಕ ಕ್ಷೇತ್ರದ ಮೇಲೆ ಶಾಶ್ವತವಾದ ಪರಿಣಾಮವನ್ನು ಬೀರುತ್ತದೆ" ಎಂದು ಸಚಿವರು ಹೇಳಿದರು.2024-25ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಚಯಿಸಿದ ಅಕ್ಕ ಕೆಫೆಯು ಮಹಿಳೆಯರಿಗೆ ಸುಸ್ಥಿರ ಜೀವನೋಪಾಯವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಇದು ನಿರ್ದಿಷ...
ಜಾತಿಗಣತಿ ವರದಿ ಜಾರಿಯಾದರೆ ಯೋಜನೆಗಳನ್ನು ರೂಪಿಸಲು ಸಹಾಯ; ಪರಮೇಶ್ವರ್

ಜಾತಿಗಣತಿ ವರದಿ ಜಾರಿಯಾದರೆ ಯೋಜನೆಗಳನ್ನು ರೂಪಿಸಲು ಸಹಾಯ; ಪರಮೇಶ್ವರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಾತಿಗಣತಿ ವರದಿಯನ್ನು ಜಾರಿಗೊಳಿಸಲು ಮುಂದಾಗಿರುವುದು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ ‌ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಜಾತಿಗಣತಿಯ ವರದಿಯನ್ನು ತರದೇ ಇದ್ದಾಗ ಕೋಲ್ಡ್ ಸ್ಟೋರೆಜ್‌ನಲ್ಲಿಟ್ಟುಬಿಟ್ಟರು ಎಂದು ಟೀಕಿಸುತ್ತಿದ್ದರು. ಯಾಕೆ ಅಷ್ಟೊಂದು ಹಣ ಖರ್ಚು ಮಾಡಿದರು. ಯಾಕೆ ಪೆಟ್ಟಿಗೆಯೊಳಗೆ ಇಡಬೇಕಿತ್ತು ಎಂದೆಲ್ಲ‌ ಪ್ರಶ್ನಿಸಿದರು. ಜನಸಮುದಾಯಕ್ಕೆ ಜಾರಿಗೊಳಿಸುತ್ತೇವೆ ಎಂದಾಗ ನುಂಗಲಾರದ ತುತ್ತಾಗಿದೆ. ರಾಜ್ಯದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತ ಸಮುದಾಯದ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.ಜಾತಿಗಣತಿ ವರದಿಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸಹಾಯವಾಗುತ್ತದೆ ಎಂದು ಎಲ್ಲರು ಹೇಳುತ್ತಿದ್ದಾರೆ. ಸಮುದಾಯಗಳಿಗೆ ಯೋಜನೆಗಳನ್ನು ನೀಡಬಾರದೇ? ಎಂದು ಅವರು ಪ್ರಶ್ನಿಸಿದರು.ಯಾವ ಆಧಾರದ ಮೇಲೆ ಯೋಜನೆಗಳನ್ನು ಕೊಡಬೇಕು ಎಂಬ ಪ್ರಶ್ನೆ ಬಂದಾಗ ಸ್ವಾಭಾವಿಕವಾಗಿ ನಾವು ಜನಸಂಖ್ಯೆ ಆಧಾರವಾಗಿ...
KSRTC: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

KSRTC: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಆರಾಮದಾಯಕ, ಸುರಕ್ಷಿತ ಮತ್ತು ಬೇಡಿಕೆಯನುಸಾರ ತ್ವರಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗಿಳಿಸಿದೆ.ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ದಸರಾ ವಿಶೇಷ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ಸೋಮವಾರ ಚಾಲನೆ ನೀಡಲಾಯಿತು. ಮುಂದಿನ 10 ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲದೆ.ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು‌ ನಡುವೆ ಕಾರ್ಯಾಚರಣೆ ಮಾಡಲಾಗುತ್ತದೆ. ಇದರೊಂದಿಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳಿಗೆ 2000 ವಿಶೇಷ ಬಸ್ಸುಗಳ ಕಾರ್ಯಾಚರಣೆ‌ ನಡೆಯಲಿದೆ ಕೆಎಸ್ಸಾರ್ಟಿಸಿ ಮಾಹಿತಿ ಒದಗಿಸಿದೆ....
KSRTC ಪ್ರಯಾಣಕ್ಕೆ ಹೈಟೆಕ್ ಸ್ಪರ್ಶ:  ಐರಾವತ ಕ್ಲಬ್ ಕ್ಲಾಸ್ 2.0 ಬಸ್ ವಿಶೇಷತೆ ಹೀಗಿದೆ..

KSRTC ಪ್ರಯಾಣಕ್ಕೆ ಹೈಟೆಕ್ ಸ್ಪರ್ಶ:  ಐರಾವತ ಕ್ಲಬ್ ಕ್ಲಾಸ್ 2.0 ಬಸ್ ವಿಶೇಷತೆ ಹೀಗಿದೆ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರದ ನಿಗಮ KSRTCಯಲ್ಲಿನ ಪ್ರಯಾಕ್ಕೆ ಹೈಟೆಕ್ ಸ್ಪರ್ಶ  ಐರಾವತ ಕ್ಲಬ್ ಕ್ಲಾಸ್ 2.0 ವಿಶೇಷ ಬಸ್‌ಗಳು ಸದ್ಯವೇ ಸೇರ್ಪಡೆಯಾಗಲಿವೆ.ಬೆಂಗಳೂರು ಹೊರವಲಯದ ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ನೂತನ ವೋಲ್ವೋ (9600 ಮಾದರಿ) ಬಸ್ಸನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪರಿಶೀಲಿಸಿದರು. KSRTC ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ (ವಾಸು), ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಮತ್ತು ವ್ಯವಸ್ಥಾಪಕ ನಿರ್ದೇಶಕರು ವಿ.ಅನ್ಬುಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.'ಐರಾವತ ಕ್ಲಬ್ ಕ್ಲಾಸ್ 2.0' ಮಾದರಿಯ 20 ಬಸ್ಸುಗಳನ್ನು ಕೆ ಎಸ್ ಆರ್ ಟಿ ಸಿ ಯು ಈ ತಿಂಗಳ ಕೊನೆಯ ವಾರದಲ್ಲಿ ತನ್ನ ವಾಹನಗಳ ಸಮೂಹಕ್ಕೆ ಸೇರ್ಪಡೆ ಗೊಳಿಸಲಿದೆ. ಒಂದು ಬಸ್ಸಿನ ದರ ರೂ.1.78 ಕೋಟಿಗಳು. ನಿಗಮದಲ್ಲಿ ಒಟ್ಟು 443 ಐಷಾರಾಮಿ ಬಸ್ಸುಗಳ ಜೊತೆ ಈ ಹೈಟೆಕ್ ಬಸ್‌ಗಳೂ ಸೇರ್ಪಡೆಯಾಗಲಿವೆ.'ಐರಾವತ ಕ್ಲಬ್ ಕ್ಲಾಸ್ 2.0' ಬಸ್ಸಿನ ವಿಶೇಷತೆಗಳು: ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟ...
ಜಾತಿ ಗಣತಿ ವರದಿ ಬಹಿರಂಗ: ಅ.18 ರಂದು ಮುಹೂರ್ತ ಫಿಕ್ಸ್

ಜಾತಿ ಗಣತಿ ವರದಿ ಬಹಿರಂಗ: ಅ.18 ರಂದು ಮುಹೂರ್ತ ಫಿಕ್ಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಾತಿ ಗಣತಿ ವರದಿ ಬಹಿರಂಗ ಸಂಬಂಧ ಅ.18 ರಂದು ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ಈ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.2013 - 18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗ...
ಬೆಸ್ಕಾಂ ಅವಾಂತರ; ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

ಬೆಸ್ಕಾಂ ಅವಾಂತರ; ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ರಾಜಧಾನಿ ಹೊರವಲಯದ ಚಿಕ್ಕನಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ಮಹಿಳೆಯರು ನಿಂತಿದ್ದ ಸ್ಥಳದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅವಘಡ ಸಂಭವಿಸಿದೆ.ಮೃತ ಮಹಿಳೆಯನ್ನು ಮಂಜಮ್ಮ ಎಂದು ಗುರುತಿಸಲಾಗಿದೆ. ಮೃತರ ಸಂಬಂಧಿಯ ದೂರು ಆಧರಿಸಿ ತಾವರೆಕೆರೆ ಠಾಣೆ ಪೊಲೀಸರು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ....
ಸಿದ್ದರಾಮಯ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು; ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು; ವಿಜಯೇಂದ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಇದೀಗ ರಾಜಕೀಯ ವಿದ್ಯಮಾನಗಳ ಕೇಂದ್ರಬಿಂದುವಾಗಿದೆ. ಖರ್ಗೆಯವರನ್ನು ಕಾಂಗ್ರೆಸ್ ನಾಯಕರು ಭೇಟಿಯಾಗಿ ಮಾತಿಕತೆ ನಡೆಸಿದ್ದಾರೆಂಬ ಬೆಳವಣಿಗೆಯ ಬೆನ್ನಲ್ಲೇ ಡಿ.ಕೆ. ಸುರೇಶ್ ಸೇರಿದಂತೆ ಹಲವು ರಾಜಕೀಯ ನಾಯಕರು ಸೋಮವಾರ ಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಕಾಂಗ್ರೆಸ್ ಪಕ್ಷದಲ್ಲಿನ ಈ ಬೆಳವಣಿಗೆಯ ನಡುವೆಯೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡಾ ಸತೀಶ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಯನ್ನು ಗಮನಿಸಿದರೆ ಸಿದ್ದರಾಮಯ್ಯ ಸರ್ಕಾರವು ಯಾವುದೇ ಕ್ಷಣದಲ್ಲೂ ಬೀಳಬಹುದು ಎಂದು ವಿಶ್ಲೇಷಿಸಿದರು.ನಮ್ಮ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮುಖಂಡರೊಂದಿಗೆ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಶಿಕಾರಿಪುರದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ನಂ-57 ಶಿವಮೊಗ್ಗ- ಶಿಕಾರಿಪುರ -ಹಾನಗಲ್ -ತಡಸ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ಕ...