Sunday, August 9

ವಿದೇಶ

ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕಠಿಣ ಕ್ರಮ

ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕಠಿಣ ಕ್ರಮ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 2026ರ ಮುಂಗಾರು ಹಂಗಾಮಿನ ರಸಗೊಬ್ಬರಗಳ ಸಮರ್ಪಕ ಪೂರೈಕೆ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಕೃಷಿ ಇಲಾಖೆಯು ಕ್ರಮಗಳನ್ನು ಜಾರಿಗೊಳಿಸಿದೆ.ಮಧ್ಯಪ್ರಾಚ್ಯ ಪ್ರದೇಶದ ಅಸ್ಥಿರತೆ ಹಿನ್ನಲೆ ಗೊಬ್ಬರ ಉತ್ಪಾದನೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಆಮದು ವ್ಯತ್ಯಯವಾಗುವ ಸಾಧ್ಯತೆ ಕಂಡುಬಂದಿದ್ದು,ರಾಜ್ಯದಲ್ಲಿ ಗೊಬ್ಬರ ಪೂರೈಕೆಗೆ ಅಡ್ಡಿಯಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನಲೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಉಸ್ತುವಾರಿಯಲ್ಲಿ ಕೃಷಿ ಇಲಾಖೆ ಬಹುಮುಖ ಕ್ರಮಗಳನ್ನು ಅನುಷ್ಠಾನಗೊಳಿಸಿದೆ.ಕೇಂದ್ರ ಸರ್ಕಾರವು ರಾಜ್ಯಕ್ಕೆ ಒಟ್ಟು 30.05 ಲಕ್ಷ ಮೆಟ್ರಿಕ್ ಟನ್ ವಿವಿಧ ಗೊಬ್ಬರಗಳನ್ನು ಹಂಚಿಕೆ ಮಾಡಿದ್ದು, ಏಪ್ರಿಲ್ 1ರ ವೇಳೆಗೆ 11.42 ಲಕ್ಷ ಮೆಟ್ರಿಕ್ ಟನ್ ಸಂಗ್ರಹ ಲಭ್ಯವಿದೆ.ರಾಜ್ಯವು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ (KSCMF) ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮ(KSSC) ಮುಖಾಂತರ ಕಾಪು ದಾಸ್ತಾನು ವ್ಯವಸ್ಥೆಯನ್ನು ಬಲಪಡಿಸಿದೆ. ಪ್ರಸ್ತುತ 28224 ಮೆಟ್ರಿಕ್ ಟನ್ ಗೊಬ್ಬರ ಕಾಪು ದಾಸ್ತಾನಿನಲ್ಲಿ ಲಭ್ಯವಿದ್ದು, ಯೂರಿಯಾ ಮತ್ತು ಡಿ.ಎ.ಪಿ ಗೊಬ್ಬರಗಳ 25% ಕಡ್ಡಾ...
ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಕರ್ನಾಟಕ ಪೊಲೀಸರು ಪ್ರಮುಖ ಪಾತ್ರವಹಿಸಿದ್ದು, ದೇಶದ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.ಬೆಂಗಳೂರಿನ ಕೋರಮಂಗಲದಲ್ಲಿರುವ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯ ಸೇವೆಯನ್ನು ಶ್ಲಾಘಿಸಿದರು.1965ರ ಏಪ್ರಿಲ್ 2ರಂದು ಪೊಲೀಸ್ ಕಾಯ್ದೆ ಜಾರಿಗೆ ಬಂದ ದಿನವನ್ನು ಸ್ಮರಿಸಲು ಈ ದಿನಾಚರಣೆ ಆಚರಿಸಲಾಗುತ್ತದೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಅವಿರತವಾಗಿ ದುಡಿಯುತ್ತಿದ್ದಾರೆ ಎಂದು ಹೇಳಿದರು.ಇಂಡಿಯಾ ಜಸ್ಟೀಸ್ ರಿಪೋರ್ಟ್ ಪ್ರಕಾರ, ನ್ಯಾಯವನ್ನು ನಾಗರಿಕರಿಗೆ ತಲುಪಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ಇದರಲ್ಲಿ ಪೊಲೀಸ್ ಇಲಾಖೆಯ ಪಾತ್ರ ಮಹತ್ತರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆ ದೇಶದ ಮೂರನ...
ಜನಗಣತಿ–2027: ಸ್ವಯಂ-ಗಣತಿ ಪ್ರಾರಂಭ

ಜನಗಣತಿ–2027: ಸ್ವಯಂ-ಗಣತಿ ಪ್ರಾರಂಭ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಷ್ಟ್ರೀಯ ಜನಗಣತಿ–2027 ಹಿನ್ನೆಲೆಯಲ್ಲಿ ನಗರದ ವ್ಯಾಪ್ತಿಯಲ್ಲಿ ಮನೆಪಟ್ಟಿ ಮತ್ತು ಮನೆಗಣತಿ ಕಾರ್ಯಗಳು ಬುಧವಾರ ಆರಂಭಗೊಂಡಿವೆ. ಈ ಬಾರಿ ನಾಗರಿಕರಿಗೆ ಸ್ವಯಂ-ಗಣತಿಯ ಆಯ್ಕೆಯನ್ನು ನೀಡಲಾಗಿದ್ದು, ಮನೆಯ ವಿವರಗಳನ್ನು ಆನ್‌ಲೈನ್ ಮೂಲಕಲೇ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ.ಏಪ್ರಿಲ್ 1 ರಿಂದ 15ರವರೆಗೆ ಸ್ವಯಂ-ಗಣತಿ ನಡೆಸಲು https://se.census.gov.in ಪೋರ್ಟಲ್ ಸಕ್ರಿಯವಾಗಿದೆ. ಮನೆಯ ಯಾವುದೇ ಒಬ್ಬ ಸದಸ್ಯರು ಸುಮಾರು 15–20 ನಿಮಿಷಗಳಲ್ಲಿ ಮಾಹಿತಿಯನ್ನು ದಾಖಲು ಮಾಡಬಹುದು. ನೋಂದಣಿಯ ನಂತರ Self-Enumeration ID ಮೊಬೈಲ್ ಅಥವಾ ಇಮೇಲ್ ಮೂಲಕ ಕಳುಹಿಸಲಾಗುತ್ತದೆ.ಎರಡನೇ ಹಂತವಾಗಿ ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಮನೆ–ಮನೆಗೆ ಭೇಟಿ ನೀಡಿ ಸ್ಥಳೀಯ ಪರಿಶೀಲನೆ ನಡೆಸಲಿದ್ದಾರೆ. ಸ್ವಯಂ-ಗಣತಿ ಮಾಡಿದವರು ತಮ್ಮ Self-Enumeration ID ಅನ್ನು ಗಣತಿದಾರರಿಗೆ ನೀಡುವುದು ಅಗತ್ಯ.ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೇಳುವಂತೆ, ಜನಗಣತಿಯಲ್ಲಿ ಸಂಗ್ರಹವಾಗುವ ಮಾಹಿತಿ ಭವಿಷ್ಯದ ನಗರ ಯೋಜನೆ, ಸಾರಿಗೆ ವ್ಯವಸ್ಥೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರ್ವಜನಿಕ...
ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಾಲಗಾರರ ಕಾಟದಿಂದ ಬೇಸತ್ತ ಯುವಕನೊಬ್ಬ ತೀವ್ರ ಕ್ರಮಕ್ಕೆ ಮುಂದಾಗಿ, ಒಂದೇ ಕುಟುಂಬದ ಇಬ್ಬರು ಸಾವಿಗೀಡಾದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ.ಮೋಹನ್ ಗೌಡ ಆತ್ಮಹತ್ಯೆ ಮಾಡುವುದಾಗಿ ವಿಡಿಯೋ ದಾಖಲಿಸಿದ್ದಾನೆ. ಈ ವಿಡಿಯೋ ನೋಡಿ ಆತಂಕಗೊಂಡ ಸಂಬಂಧಿಕರು ಮನೆಗೆ ಧಾವಿಸಿದಾಗ ಹೃದಯವಿದ್ರಾವಕ ದೃಶ್ಯ ಎದುರಾಗಿದೆ.ಮೋಹನ್ ತನ್ನ ತಾಯಿ ಹಾಗೂ ಅಕ್ಕನ ಮೇಲೆ ದಾಳಿ ನಡೆಸಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ತಾಯಿ ಆಶಾ (55) ಮತ್ತು ಅಕ್ಕ ವರ್ಷಿತಾ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಗಂಭೀರವಾಗಿ ಗಾಯಗೊಂಡಿರುವ ಮೋಹನ್ ಗೌಡ (27) ಮತ್ತು ಅಕ್ಕನ ಮಗ ಮಯಾಂಕ್ (11) ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.ಪ್ರಾಥಮಿಕ ತನಿಖೆಯಲ್ಲಿ ಅತಿಯಾದ ಸಾಲದ ಒತ್ತಡವೇ ಈ ದುರ್ಘಟನೆಗೆ ಕಾರಣವ...
ಎಲ್ಲಾ ಜಿಲ್ಲೆಗಳಲ್ಲೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್‌ ಆಸ್ಪತ್ರೆ ಮತ್ತು ಟ್ರಾಮಾ ಕೇರ್‌ ಸೆಂಟರ್

ಎಲ್ಲಾ ಜಿಲ್ಲೆಗಳಲ್ಲೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್‌ ಆಸ್ಪತ್ರೆ ಮತ್ತು ಟ್ರಾಮಾ ಕೇರ್‌ ಸೆಂಟರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೇಶದಲ್ಲಿ ಆರೋಗ್ಯ ಸೇವೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್‌ ಸರ್ಕಾರ ಈಗ ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಬೃಹತ್‌, ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಯನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಾಣ ಮಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.ನೂತನ ಆಸ್ಪತ್ರೆ ಲೋಕಾರ್ಪಣೆ ಮಾಡಿದ ನಂತರ ಭಾಷಣ ಮಾಡಿದ ಸಚಿವ ಡಾ. ಪಾಟೀಲ್‌, ಮಕ್ಕಳಿಗೆ ಉತ್ತರ ಆರೈಕೆ, ಚಿಕಿತ್ಸೆ ಒದಗಿಸಲು ಈ ಆಸ್ಪತ್ರೆ ನಿರ್ಮಿಸಲಾಗಿದೆ. ಸರ್ಕಾರದಿಂದಲೇ ಇಷ್ಟೊಂದು ಬೃಹತ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಇಷ್ಟು ದೊಟ್ಟಮಟ್ಟದ ಕಾರ್ಯ ನಿರ್ವಹಿಸುತ್ತಿರುವುದು ದೇಶದಲ್ಲಿ ಮೊದಲ ಎಂದರು.ಬೇರೇ ಬೇರೆ ರಾಜ್ಯಗಳಿಂದ ಬರುವ ರೋಗಿಗಳಿಗೂ ಇಲ್ಲಿ ಒಂದೇ ತರನಾದ ಚಿಕಿತ್ಸೆ ಒದಗಿಸಲಾಗುತ್ತದೆ. ಶೇ. 100ರಷ್ಟು ಗುಣಮಟ್ಟದ ಆರೋಗ್ಯ ಚಿಕಿತ್ಸೆ ಕೊಡುವುದು ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ. ಸಾರ್ವಜನಿಕರು ಇದನ್ನು ಸದುಪಯೋಗ...
ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಅರಸೀಕೆರೆಗೆ ಮೆಮು ರೈಲು ಸೇವೆ

ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಅರಸೀಕೆರೆಗೆ ಮೆಮು ರೈಲು ಸೇವೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲಿನ ಸೇವೆಯನ್ನು ಒದಗಿಸಲಾಗಿದೆ. ಈ ಮೂಲಕ ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಕೇಂದ್ರ ರೈವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಹೊರಡುವ ಈ ಮೆಮು ರೈಲು ವಿದ್ಯಾರ್ಥಿಗಳು, ದಿನಗೂಲಿ ಕಾರ್ಮಿಕರು, ಉದ್ಯೋಗಿಗಳು, ರೈತರು, ವ್ಯಾಪಾರಿಗಳು ಸೇರಿದಂತೆ ಮುಂತಾದ ಪ್ರಯಾಣಿಕರಿಗೆ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಪ್ರಯಾಣದ ಆಯ್ಕೆಯನ್ನು ಒದಗಿಸಲಿದೆ ಎಂದವರು ಹೇಳಿದ್ದಾರೆ.ಈ ಭಾಗದ ಪ್ರಯಾಣಿಕರು ಈ ನೂತನ ಮೆಮು ರೈಲಿನ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಳ್ಳಲು ಅನುಕೂಲವಾಗಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ....
ಸುಗ್ರೀವಾಜ್ಞೆ ಮೂಲಕ  KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಜೆಟ್ ಅಧಿವೇಶನದ ಕೊನೆಯ ದಿನ ವಿಧಾನಸಭೆಯಲ್ಲಿ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಯನ್ನು ಸುಗ್ರೀವಾಜ್ಞೆಯ ಮೂಲಕ ಶೀಘ್ರದಲ್ಲಿ ಜಾರಿಗೊಳಿಸುವು ಡಿಸಿಎಂ ಡಿಕೆ ಶಿವಕುಮಾರ್‌ ಅವರ ಭರವಸೆಯನ್ನು ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಷನ್ (BAF) ಮುಕ್ತಕಂಠದಿಂದ ಸ್ವಾಗತಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಬಹುನಿರೀಕ್ಷಿತ ಈ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಕಾರಣೀಭೂತರಾಗಿರುವಂತಹ ಎಲ್ಲ ಪಕ್ಷದ ನಾಯಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದೆ."ಕರ್ನಾಟಕ ವಿಧಾನಸಭೆಯಲ್ಲಿ KAOMA ಚರ್ಚೆಯನ್ನು ಮುನ್ನೆಲೆಗೆ ತಂದಿದ್ದಕ್ಕಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಹಾಗೂ ಎಲ್ಲಾ ಪಕ್ಷಗಳ ನಾಯಕರಿಗೂ ನಾವು ಆಭಾರಿಯಾಗಿದ್ದೇವೆ. ಈ ಮಹತ್ವದ ಕಾಯ್ದೆಯನ್ನು ರೂಪಿಸುವಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳಿಗೆ, ನಗರಾಭಿವೃದ್ಧಿ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಯ ಅಧಿಕಾರಿಗಳಿಗೂ ನಾವು ನಮ್ಮ ಧನ್ಯವಾದಗಳನ...
ದಾವಣಗೆರೆ, ಬಾಗಲಕೋಟೆ ಕಾಂಗ್ರೆಸ್ ಗೆಲುವು ಖಚಿತ ಎಂದ ಸಿದ್ದರಾಮಯ್ಯ

ದಾವಣಗೆರೆ, ಬಾಗಲಕೋಟೆ ಕಾಂಗ್ರೆಸ್ ಗೆಲುವು ಖಚಿತ ಎಂದ ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ. ಅವರು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ. ಗುರುವಾರ 11 ಜನ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದರು.ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಹಿಂಪಡೆಯುವಂತೆ ಮನವೊಲಿಸಲು ಸಾಧ್ಯವಾಗಲಿಲ್ಲ. ವಿಧಾನಪರಿಷತ್ ನಲ್ಲಿ ಉತ್ತರ ನೀಡಬೇಕಿದ...
ಚರ್ಚ್ ಆವರಣದಲ್ಲೇ ಮದ್ಯದಂಗಡಿ? ಅಧಿಕಾರಿಗಳ ಕರ್ತವ್ಯಲೋಪ ವಿರುದ್ಧ ಲೋಕಾಯುಕ್ತಕ್ಕೆ ದೂರು

ಚರ್ಚ್ ಆವರಣದಲ್ಲೇ ಮದ್ಯದಂಗಡಿ? ಅಧಿಕಾರಿಗಳ ಕರ್ತವ್ಯಲೋಪ ವಿರುದ್ಧ ಲೋಕಾಯುಕ್ತಕ್ಕೆ ದೂರು

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರಿನ ಸಿಎಸ್ಐ ಟ್ರಿನಿಟಿ ಚರ್ಚ್ ಆವರಣದಲ್ಲಿ 'ಲುಮಾರಾ ಬಾರ್ ಮತ್ತು ಕಿಚನ್' ವಿವಾದ ಇದೀಗ ಲೋಕಾಯುಕ್ತ ಅಂಗಳ ಪ್ರವೇಶಿಸಿದೆ.ಚರ್ಚ್ ಆವರಣದಲ್ಲಿ ನಿಯಮ ಬಾಹಿರವಾಗಿ ಮದ್ಯದ ಬಾರ್ ತೆರೆಯಲಾಗಿದೆ. ಇದರಿಂದಾಗಿ ಧಾರ್ಮಿಕ ಭಾವನೆ, ಸಾರ್ವಜನಿಕ ನೈತಿಕತೆ ಮತ್ತು ಕೋಮು ಸಾಮರಸ್ಯಕ್ಕೆ ಅಡ್ಡಿಯಾಗುತ್ತಿದೆ ಎಂದು ಆರೋಪಿಸಿ ಗ್ನಾನ ರುಬಾನ್ ಎಂಬವರು ರಾಜ್ಯ ಸರ್ಕಾರ, ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದ್ದರು. ಆದರೂ ಸಕ್ಷಮ ಪ್ರಾಧಿಕಾರಗಳು ಕ್ರಮವಹಿಸದ ಹಿನ್ನೆಲೆಯಲ್ಲಿ ಮಾರ್ಚ್ 23ರಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.ಚರ್ಚ್ ಆವರಣದಲ್ಲಿ ನಿಯಮ ಉಲ್ಲಂಘಿಸಿ ಮದ್ಯದ ಬಾರ್ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಇಲಾಖೆಗಳ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ನ್ಯಾಯಾಲಯದ ಆದೇಶವನ್ನೂ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿಲ್ಲ. ಈ ಬಾರ್ ವಿವಾದ ಬಗ್ಗೆ ಅನೇಕ ಬಾರಿ ದೂರುಗಳು ಸಲ್ಲಿಕೆಯಾದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ದೂರುದಾರರು, ಈ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿರುವ ಶಂಕೆ ವ್ಯಕ...
60 ದಿನಗಳ ವಯೋಮಿತಿ ಸಡಿಲಿಕೆ LKG, UKG, 1ನೇ ತರಗತಿ ಪ್ರವೇಶಕ್ಕೂ ಅನ್ವಯ

60 ದಿನಗಳ ವಯೋಮಿತಿ ಸಡಿಲಿಕೆ LKG, UKG, 1ನೇ ತರಗತಿ ಪ್ರವೇಶಕ್ಕೂ ಅನ್ವಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 2026–27 ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆಯನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಪೋಷಕರಿಂದ ಹೆಚ್ಚುತ್ತಿರುವ ಕಳವಳದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ವಿಧಾನಸಭೆಯಲ್ಲಿ ಮಾತನಾಡಿದ ಅವರು, ಆರು ವರ್ಷಗಳ ವಯೋಮಿತಿಯಲ್ಲಿ ನಮ್ಯತೆ ಕೋರಿ ವಿಶೇಷವಾಗಿ ತಾಯಂದಿರಿಂದ ಅನೇಕ ಮನವಿಗಳು ಬಂದಿದ್ದವು ಎಂದು ಹೇಳಿದರು. ಕರ್ನಾಟಕ ಶಿಕ್ಷಣ ಕಾಯ್ದೆ, 1993ರ ಅಡಿಯಲ್ಲಿ 60 ದಿನಗಳ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.ಈ ಸಡಿಲಿಕೆ 2026–27 ಶೈಕ್ಷಣಿಕ ವರ್ಷದ ಪ್ರವೇಶಕ್ಕೆ ಅನ್ವಯವಾಗಲಿದ್ದು, ಜಾರಿಗೆ ತಾಂತ್ರಿಕ ತಿದ್ದುಪಡಿಗಳನ್ನು ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.ಇನ್ನೊಂದೆಡೆ, ಎಲ್‌ಕೆಜಿ ಮತ್ತು ಯುಕೆಜಿ ಪ್ರವೇಶದ ಬಗ್ಗೆ ಗೊಂದಲ ಮುಂದುವರೆದಿರುವುದನ್ನು ಅವರು ಒಪ್ಪಿಕೊಂಡರು. ಈ ತರಗತಿಗಳಿಗೆ ಸ್ಪಷ್ಟ ಕಾನೂನು ಚೌಕಟ್ಟು ಇಲ್ಲದಿರುವುದರಿಂದ ಸಮಸ್ಯೆಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಹೊಸ ಕಾನೂನು ತರಲು ಸರ್ಕಾರ ಯೋಜನೆ ರೂಪಿಸುತ್ತಿದೆ ...