
ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕಠಿಣ ಕ್ರಮ
ಬೆಂಗಳೂರು: 2026ರ ಮುಂಗಾರು ಹಂಗಾಮಿನ ರಸಗೊಬ್ಬರಗಳ ಸಮರ್ಪಕ ಪೂರೈಕೆ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಕೃಷಿ ಇಲಾಖೆಯು ಕ್ರಮಗಳನ್ನು ಜಾರಿಗೊಳಿಸಿದೆ.ಮಧ್ಯಪ್ರಾಚ್ಯ ಪ್ರದೇಶದ ಅಸ್ಥಿರತೆ ಹಿನ್ನಲೆ ಗೊಬ್ಬರ ಉತ್ಪಾದನೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಆಮದು ವ್ಯತ್ಯಯವಾಗುವ ಸಾಧ್ಯತೆ ಕಂಡುಬಂದಿದ್ದು,ರಾಜ್ಯದಲ್ಲಿ ಗೊಬ್ಬರ ಪೂರೈಕೆಗೆ ಅಡ್ಡಿಯಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನಲೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಉಸ್ತುವಾರಿಯಲ್ಲಿ ಕೃಷಿ ಇಲಾಖೆ ಬಹುಮುಖ ಕ್ರಮಗಳನ್ನು ಅನುಷ್ಠಾನಗೊಳಿಸಿದೆ.ಕೇಂದ್ರ ಸರ್ಕಾರವು ರಾಜ್ಯಕ್ಕೆ ಒಟ್ಟು 30.05 ಲಕ್ಷ ಮೆಟ್ರಿಕ್ ಟನ್ ವಿವಿಧ ಗೊಬ್ಬರಗಳನ್ನು ಹಂಚಿಕೆ ಮಾಡಿದ್ದು, ಏಪ್ರಿಲ್ 1ರ ವೇಳೆಗೆ 11.42 ಲಕ್ಷ ಮೆಟ್ರಿಕ್ ಟನ್ ಸಂಗ್ರಹ ಲಭ್ಯವಿದೆ.ರಾಜ್ಯವು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ (KSCMF) ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮ(KSSC) ಮುಖಾಂತರ ಕಾಪು ದಾಸ್ತಾನು ವ್ಯವಸ್ಥೆಯನ್ನು ಬಲಪಡಿಸಿದೆ. ಪ್ರಸ್ತುತ 28224 ಮೆಟ್ರಿಕ್ ಟನ್ ಗೊಬ್ಬರ ಕಾಪು ದಾಸ್ತಾನಿನಲ್ಲಿ ಲಭ್ಯವಿದ್ದು, ಯೂರಿಯಾ ಮತ್ತು ಡಿ.ಎ.ಪಿ ಗೊಬ್ಬರಗಳ 25% ಕಡ್ಡಾ...









