HDK ಬೆಂಬಲಕ್ಕೆ ನಿಂತ BJP; ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ. ಈ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಈ ಹೋರಾಟ ನಿಲ್ಲಲ್ಲ. ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡು ರಾಜೀನಾಮೆ ನೀಡಿದರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದರು.ಚುನಾವಣಾ ಬಾಂಡ್ ಬಗ್ಗೆ ಕಾಂಗ್ರೆಸ್ ದೊಡ್ಡದಾಗಿ ಮಾತಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ *1,500 ಕೋಟಿ ರೂ.ಗೂ ಅಧಿಕ* ಹಣ ದೇಣಿಗೆ ಬಂದಿದೆ. ತೃಣಮೂಲ ಕಾಂಗ್ರೆಸ್ಗೆ 1,610 ಕೋಟಿ ರೂ. ಬಂದಿದೆ. ವಿರೋಧ ಪಕ್ಷಗಳ ಒಟ್ಟು ಹಣಕ್ಕೆ ಹೋಲಿಸಿದರೆ ಬಿಜೆಪಿಯದ್ದು ತೀರಾ ಕಡಿಮೆ....





