Monday, August 10

ವಿದೇಶ

ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ

ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: "ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸ ಬೇಕು ಹಾಗೂ ವಿಧಾನಸಭಾ ಸ್ಪೀಕರ್ ಅವರು ಶಾಸಕ ಸ್ಥಾನದಿಂದ ವಜಾ ಮಾಡಬೇಕು" ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, "ಮುನಿರತ್ನ ಅವರಂತ ನಾಯಕರು ರಾಜ್ಯದಲ್ಲಿ ಇದ್ದರೆ ಜಾತಿ ಸಂಘರ್ಷಗಳು ಹೆಚ್ಚಾಗುತ್ತವೆ. ಆದ ಕಾರಣಕ್ಕೆ ಇವರ ಮೇಲೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿ ಕೇಂದ್ರ ನಾಯಕರಿಗೆ ಕಿವಿ ಕೇಳಿಸುತ್ತಿದ್ದರೆ, ಕೀಳು ಮಟ್ಟದ ಪದ ಬಳಕೆ ಮಾಡಿರುವ ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ" ಎಂದರು."ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರೇ ಸಮುದಾಯದ ತಾಯಂದಿರನ್ನು ಅವಮಾನಿಸಿದ್ದಾರೆ. ಇದಕ್ಕೆ ನೀವೇ ಉತ್ತರಿಸಬೇಕು. ವಿಜಯೇಂದ್ರ, ಛಲವಾದಿ ನಾರಾಯಣ ಸ್ವಾಮಿ ಅವರು ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಇದರ ಬಗ್ಗೆ ಉತ್ತರಿಸಬೇಕು" ಎಂದರು."ಒಂದು ಕಡೆ ರಾಮನ, ಸ...
ಕಾಂಗ್ರೆಸ್ ಸರ್ಕಾರದಿಂದ ಧ್ವೇಷದ ರಾಜಕಾರಣ; ಶಾಸಕ ಮುನಿರತ್ನ ಬಂಧನಕ್ಕೆ ಬಿಜೆಪಿ ಆಕ್ರೋಶ 

ಕಾಂಗ್ರೆಸ್ ಸರ್ಕಾರದಿಂದ ಧ್ವೇಷದ ರಾಜಕಾರಣ; ಶಾಸಕ ಮುನಿರತ್ನ ಬಂಧನಕ್ಕೆ ಬಿಜೆಪಿ ಆಕ್ರೋಶ 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧ್ವನಿ ಮುದ್ರಣ ಶಾಸಕರದ್ದೇ ಎಂದು ಸಾಬೀತಾದ ಬಳಿಕ ಬಂಧಿಸಬೇಕಿತ್ತು. ಕಾನೂನಿಗೆ ಯಾರೂ ಅತೀತರಲ್ಲ ಎಂದರು. ಟಿ.ಜೆ.ಅಬ್ರಹಾಂ ದೂರಿನ ಆಧಾರದ ಮೇಲೆ ರಾಜ್ಯಪಾಲರು ತಕ್ಷಣ ಕ್ರಮ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದರು.‌ ಆದರೂ ಅದು ಈಗ ನ್ಯಾಯಾಲಯದಲ್ಲಿದ್ದು, ಅದಕ್ಕೆ ನಾವ್ಯಾರೂ ಆಕ್ಷೇಪ ಮಾಡಿಲ್ಲ. ಆದರೆ ಇಲ್ಲಿ ದೂರು ನೀಡಿದ ಕೂಡಲೇ ವಿಚಾರಣೆ ಮಾಡದೆ‌ ನೋಟಿಸ್‌ ನೀಡದೆ ಬಂಧಿಸಲಾಗಿದೆ. ಇಲ್ಲಿ ಆತುರದ‌ ಕ್ರಮವಾಗಿದ್ದು, ಏಕಾಏಕಿ ಬಂಧನವಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಲೀಡ್ ಬಂದಿರುವುದು ಕೂಡ ಇದಕ್ಕೆ ಕಾರಣ. ಧ್ವನಿ ಮುದ್ರಣವನ್ನು ಎಫ್ಎಸ್ಎಲ್ ಗೆ ಕಳುಹಿಸಿ,‌ ತನಿಖೆ ಮಾಡಿ ಬಳಿಕ ಕ್ರಮ ಕೈಗೊಂಡಿದ್ದರೆ ನಾವ್ಯಾರೂ ಮಾತಾಡುತ್ತಿರಲಿಲ್ಲ. ಯಾವುದೇ ಪ್...
ಗುತ್ತಿಗೆದಾರನಿಗೆ ಬೆದರಿಕೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಬಂಧನ

ಗುತ್ತಿಗೆದಾರನಿಗೆ ಬೆದರಿಕೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಬಂಧನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶಾಸಕ ಮುನಿರತ್ನ ಅವರನ್ನು ಶನಿವಾರ ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮುನಿರತ್ನ ಅವರು ತಮಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ದೂರು ನೀಡಿದ್ದರು. ಅದರಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.ಪ್ರಕರಣ ದಾಖಲಾಗುತ್ತಿದ್ದಂತೆಯೇ ಮುನಿರತ್ನ ತಲೆಮರೆಸಿಕೊಂಡಿದ್ದಾರೆ ಎಂದೂ ಹೇಳಲಾಗುತ್ತಿತ್ತು. ಈ ನಡುವೆಯೇ ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪ ಪೊಲೀಸರು ಮುನಿರತ್ನ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ....
ವನಿತೆಯರ ಪರ ಧ್ವನಿಯಾದ ಸೌಮ್ಯ ರೆಡ್ಡಿ; ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಸೈನ್ಯ ಕಟ್ಟುವುದಾಗಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಣ

ವನಿತೆಯರ ಪರ ಧ್ವನಿಯಾದ ಸೌಮ್ಯ ರೆಡ್ಡಿ; ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಸೈನ್ಯ ಕಟ್ಟುವುದಾಗಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು; ವನಿತೆಯರ ಪರ ಧ್ವನಿಯಾದ ಮಾಜಿ ಶಾಸಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ, ಇದೀಗ ರಾಜ್ಯದ ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಮಹಿಳೆಯರ ಸೈನ್ಯ ಕಟ್ಟುವುದಾಗಿ ಘೋಷಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೌಮ್ಯ ರೆಡ್ಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆ ಮಾಡಿ ಸೆಪ್ಟೆಂಬರ್ 15ಕ್ಕೆ 40 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಾವು ಮಹಿಳಾ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿಗಳ ಮಟ್ಟದಲ್ಲಿ ಈ ಅಭಿಯಾನ ಮಾಡಲು ತೀರ್ಮಾನಿಸಿದ್ದೇವೆ. ರಾಜ್ಯಾದ್ಯಂತ ಮಹಿಳೆಯರು ಮಹಿಳಾ ಕಾಂಗ್ರೆಸ್ ಸೇರಿ ಕೈ ಜೋಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದ ಅವರು, ಕರ್ನಾಟಕ ರಾಜ್ಯದಲ್ಲಿ ಮಹಿಳೆಯರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಗೃಹಲಕ್ಷ್ಮೀ ಯೋಜನೆ 1.21 ಕೋಟಿ ಮಹಿಳೆಯರಿಗೆ ತಲುಪಿದೆ. ಗೃಹಜ್ಯೋತಿ 1.60 ಕೋಟಿ ಮನೆಗಳನ್ನು ತಲುಪಿದೆ. ಶಕ್ತಿ ಯೋಜನೆಯಲ್ಲಿ ಮಹಿಳೆಯರು 283 ಕೋ...
ಬಾರಾಮುಲ್ಲಾ ಜಿಲ್ಲೆಯಲ್ಲಿ ಎನ್’ಕೌಂಟರ್; ಮೂವರು ಉಗ್ರರ ಹತ್ಯೆ

ಬಾರಾಮುಲ್ಲಾ ಜಿಲ್ಲೆಯಲ್ಲಿ ಎನ್’ಕೌಂಟರ್; ಮೂವರು ಉಗ್ರರ ಹತ್ಯೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ನಡೆದ ಭದ್ರತಾ ಪಡೆಗಳೊಂದಿಗಿನ ಎನ್'ಕೌಂಟರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.ಶನಿವಾರ ನಸುಕಿನ ಜಾವ ಮೂವರು ಉಗ್ರರನ್ನು ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಲಂಡನ್​​ನ ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕಕ್ಕೆ ದಶಮಾನೋತ್ಸವ ಸಡಗರ; ಮೋದಿ ಆಹ್ವಾನಕ್ಕೆ ತೀರ್ಮಾನ

ಲಂಡನ್​​ನ ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕಕ್ಕೆ ದಶಮಾನೋತ್ಸವ ಸಡಗರ; ಮೋದಿ ಆಹ್ವಾನಕ್ಕೆ ತೀರ್ಮಾನ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಲಂಡನ್​​: ಲಂಡನ್​​ನಲ್ಲಿರುವ ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕ ದಶಮಾನೋತ್ಸವ ಸಂಭ್ರಮದಲ್ಲಿದೆ. ಈ ದಶಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ.ಲಂಡಲ್‌ನ ಥೇಮ್ಸ್ ನದಿ ತೀರದಲ್ಲಿ2015ರಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದರು. ಇದೀಗ ಹತ್ತನೇ ವರ್ಷದ ಸಮಾರಂಭದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನಿಸಲು ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕ ಸಂಸ್ಥೆ ಚಿಂತನೆ ನಡೆಸಿದೆ.ಈ ನಡುವೆ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಲಂಡನ್ ಪ್ರವಾಸದ ಸಂದರ್ಭದಲ್ಲಿ ಲಂಡಲ್‌ನ ಥೇಮ್ಸ್ ನದಿ ತೀರದ ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ್ದಾರೆ. ಆ ವೇಳೆ ಬಸವರಾಜ್ ಬೊಮ್ಮಾಯಿ ಜೊತೆ ಚರ್ಚಿಸಿರುವ ಲಂಡನ್ ಮಾಜಿ ಮೇಯರ್ ನೀರಜ್ ಪಾಟೀಲ್ ಅವರು ದಶಮಾನೋತ್ಸವ ಸಮಾರಂಭಕ್ಕೆ ಮೋದಿಯವರನ್ನು ಆಹ್ವಾನಿಸುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.ಇದೇ ವೇಳೆ, ತಮ್ಮ ಲಂಡನ್ ಪ್ರವಾಸ ಬಗ್ಗೆ ಸಾಮಾಜಿಕ ಜಾಲತಾಣ 'X'ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂ...
ಗುತ್ತಿಗೆದಾರನಿಗೆ ಜೀವ ಬೆದರಿಕೆ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​

ಗುತ್ತಿಗೆದಾರನಿಗೆ ಜೀವ ಬೆದರಿಕೆ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪ ಸಂಬಂಧದ ಸಂಬಂಧಿಸಿದಂತೆ ಆರ್​.ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಈ ಪ್ರಕರಣ ಬಗ್ಗೆ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಎನ್ನಲಾಗಿದೆ.ಶಾಸಕ ಮುನಿರತ್ನ, ಆಪ್ತ ಸಹಾಯಕ ವಿಜಯ್ ಕುಮರ್, ಸೆಕ್ಯೂರಿಟಿ ಅಭಿಷೇಕ್ ಮತ್ತು ಆಪ್ತ ವಸಂತ್ ಕುಮಾರ್ ಅವರನ್ನು ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ....
ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ ಕೃತಕ ಬುದ್ಧಿಮತ್ತೆ ಭದ್ರತಾ ವ್ಯವಸ್ಥೆ

ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ ಕೃತಕ ಬುದ್ಧಿಮತ್ತೆ ಭದ್ರತಾ ವ್ಯವಸ್ಥೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ವಿಕಾಸಸೌಧದಲ್ಲಿ ಶುಕ್ರವಾರ ಉನ್ನತಮಟ್ಟದ ಸಭೆ ನಡೆಸಿದ ಸಚಿವರು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ಭದ್ರತೆಯನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಪ್ರಸ್ತುತ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಮತ್ತು ಇತರೆ ಕ್ರಮಗಳನ್ನು ಪ್ರಸ್ತಾಪಿಸುವ ಕುರಿತು ಈ ಹಿಂದೆ ಸಚಿವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಅದರ ಮುಂದಿನ ಭಾಗ ಇದಾಗಿದೆ.ಮಹಿಳಾ ಆರೋಗ್ಯ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರ ಪ್ರತಿಕ್ರಿಯೆಯನ್ನು ಪಡೆಯುವ ಬಗ್ಗೆ ಡಾ.ಪಾಟೀಲ್ ಸೂಚನೆ ನೀಡಿದರು. "ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಬರವಣಿಗೆಯಲ್ಲಿ ಪ್ರತಿಕ್ರಿಯೆಯನ್ನು ಸಂಗ್ರಹಿಸಬೇಕು ಮತ್ತು ಅಗತ್ಯ ಕ್ರಮಗಳನ್ನು ಜಾರಿಗೆ ತರಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುರಕ್ಷತಾ ಶಿಷ್ಟಾಚಾರ ಕ್ರಮಗಳನ್ನು ಪರಿ...
ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತದಳದ ಮುಖ್ಯಸ್ಥರ ಬದಲಾವಣೆ

ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತದಳದ ಮುಖ್ಯಸ್ಥರ ಬದಲಾವಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ನೋಟ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ಸರ್ಕಾರ ನೇಮಕ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೆಚ್ಚುವರಿ ಹೊಣೆಯನ್ನೂ ನಿಂಬಾಳ್ಕರ್ ಅವರಿಗೆ ವಹಿಸಲಾಗಿದೆ.ಈವರೆಗೂ ಗುಪ್ತದಳದ ಮುಖ್ಯಸ್ಥರಾಗಿದ್ದ ಕೆ.ವಿ.ಶರತ್ ಚಂದ್ರ ಅವರನ್ನು ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾಯಿಸಲಾಗಿದ್ದು, ಸಂಚಾರ ಮತ್ತು ರಸ್ತೆ ಸುರಕ್ಷತಾ ಆಯುಕ್ತರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ....
ನಾಗಮಂಗಲ ಗಲಭೆ; ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ

ನಾಗಮಂಗಲ ಗಲಭೆ; ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಾಗಮಂಗಲ ಗಲಭೆಯನ್ನು ಖಂಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಕರ್ನಾಟಕಕ್ಕೂ ಬುಲ್ಡೋಜರ್ ಕಾರ್ಯಾಚರಣೆ ಬೇಕಿದೆ ಎಂದು ಪ್ರತಿಪಾದಿಸಿದ್ದಾರೆ.ನಾಗಮಂಗಲ ಗಲಭೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು ರಾಜ್ಯ ಸರ್ಕಾರದ ನಡೆ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿದ ಕೋಮುದಳ್ಳುರಿಯಲ್ಲಿ ಅಂಗಡಿ, ಮುಂಗಟ್ಟು, ಸರಕು-ಸರಂಜಾಮು ಸೇರಿದಂತೆ ಒಟ್ಟು ಸುಮಾರು 25 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿದ ಪುಂಡರನ್ನು ಪತ್ತೆ ಹಚ್ಚಿ, ಉತ್ತರ ಪ್ರದೇಶದ ಮಾದರಿಯಲ್ಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಇಂತಹವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ. ಇಂತಹ ವಿಕೃತ ಮನಸ್ಥಿತಿಗೆ ಪೂರ್ಣವಿರಾಮ ಇಡಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ನಾಗರಿಕರನ್ನು ರಕ್ಷಿಸಬೇಕಾದ ಸರ್ಕಾರವೇ ಪೂರ್ವ ನಿಯೋಜ...