
‘ಕ್ಯಾನ್ಸರ್ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ’: ಐಐಐಟಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಡಾ. ಪದ್ಮಿನಿ ಪ್ರಸಾದ್ ಕರೆ
ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರೀ ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮಗಳು ರಾಜ್ಯದಾದ್ಯಂತ ಜೋರಾಗಿ ನಡೆಯುತ್ತಿವೆ. ಈ ಹಿನ್ನೆಲೆ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ (Dr. Padmini Prasad) ಅವರ ಆರೋಗ್ಯ ಜಾಗೃತಿ ಅಭಿಯಾನ ವಿಶೇಷ ಗಮನಸೆಳೆದಿದೆ.ವರ್ಷಗಳಿನಿಂದ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಡಾ. ಪದ್ಮಿನಿ ಪ್ರಸಾದ್, ಈ ಬಾರಿ ಗರ್ಭಕಂಠ ಕ್ಯಾನ್ಸರ್ (Cervical Cancer) ಕುರಿತ ಕಾರ್ಯಕ್ರಮಗಳ ಸರಣಿಯನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಐಐಐಟಿ ಬೆಂಗಳೂರು (IIIT Bangalore), ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ಮೂರನೇ ಹಂತದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ದೇಹದ ಬೆಳವಣಿಗೆ, ದೈಹಿಕ-ಮಾನಸಿಕ ಆರೋಗ್ಯ, ಲೈಂಗಿಕ ಬೆಳವಣಿಗೆ, ಲೈಂಗಿಕ ಕಿರುಕುಳ ಮತ್ತು ರಕ್ಷಣೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.“ಪ್ರಸ್ತುತ ಜೀವನಶೈಲಿ ಹಲವು ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಯುವಕರು ಮುನ್ನೆಚ್ಚರ...









