Monday, August 10

ವಿದೇಶ

ಮುಂದಿನ ಒಂದು ವಾರವೂ ಬಿಸಿಲಿನ ತೀವ್ರತೆ; ಹವಾಮಾನ ತಜ್ಞರ ಮುನ್ಸೂಚನೆ

ಮುಂದಿನ ಒಂದು ವಾರವೂ ಬಿಸಿಲಿನ ತೀವ್ರತೆ; ಹವಾಮಾನ ತಜ್ಞರ ಮುನ್ಸೂಚನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮುಂದಿನ ಒಂದು ವಾರವೂ ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.ಕರ್ನಾಟಕದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನ ಸುಮಾರು 34°C ವರೆಗೆ ಏರಬಹುದು. ಕನಿಷ್ಠ ತಾಪಮಾನ ಸರಾಸರಿ 22°C ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 32°C ತಲುಪುವ ಸಾಧ್ಯತೆ ಇದೆ.ಉತ್ತರ ಕರ್ನಾಟಕ ಭಾಗ:ಕಲಬುರಗಿ, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಹೆಚ್ಚು ಅನುಭವವಾಗಲಿದೆ. ಬೆಳಗಾವಿಯಲ್ಲಿ ಬೆಳಿಗ್ಗೆ ಮತ್ತು ರಾತ್ರಿ ತಂಪಾದ ವಾತಾವರಣ ಇರಲಿದ್ದು, ಮಧ್ಯಾಹ್ನ ವೇಳೆ ತಾಪಮಾನ ಏರಿಕೆಯಾಗಲಿದೆ.ಕರಾವಳಿ ಭಾಗ:ಮಂಗಳೂರು ಮತ್ತು ಉಡುಪಿ ಪ್ರದೇಶಗಳಲ್ಲಿ ಆರ್ದ್ರತೆ (Humidity) ಹೆಚ್ಚಿರುವುದರಿಂದ ಹೆಚ್ಚು ಸೆಖೆ ಅನುಭವವಾಗಲಿದೆ.ಬಿಸಿಲಿನ ತೀವ್ರತೆಯಿಂದ ತಪ್ಪಿಸಿಕೊಳ್ಳಲು ಹೆಚ್ಚು ನೀರು ಕುಡಿಯುವುದು, ಮಧ್ಯಾಹ್ನ ಹೊರಗಡೆ ಹೋಗುವುದನ್ನು ತಪ್ಪಿಸುವುದು ಹಾಗೂ ಲಘು ಬಟ್ಟೆ ಧರಿಸುವುದು ಸೂಕ್ತ....
ಗರ್ಭಕಂಠ ಕ್ಯಾನ್ಸರ್‌: 14 ವರ್ಷ ಮೇಲ್ಪಟ್ಟ ಬಾಲಕಿಯರಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಲು ತಯಾರಿ

ಗರ್ಭಕಂಠ ಕ್ಯಾನ್ಸರ್‌: 14 ವರ್ಷ ಮೇಲ್ಪಟ್ಟ ಬಾಲಕಿಯರಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಲು ತಯಾರಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೇಶದಲ್ಲಿ ಬಾಲಕಿಯರ ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲು ಮುಂದಾಗಿರುವ ಸರ್ಕಾರ ಈಗ ಗರ್ಭಕಂಠ ಕ್ಯಾನ್ಸರ್‌ ತಡೆಗೆ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ.ಕೇಂದ್ರ ಸರ್ಕಾರದ ಆಶಯದಂತೆ ರಾಜ್ಯದಲ್ಲಿಯೂ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಬೆಂಗಳೂರಿನ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ವೆಬ್‌ಕ್ಯಾಸ್ಟ್‌ ಮೂಲಕ ಕಾರ್ಯಕ್ರಮ ವೀಕ್ಷಿಸಲಾಯಿತು.ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ವೈಧ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್, ರಾಷ್ಟ್ರೀಯ ಆರೋಗ್ಯ ಮಿಷನ್‌ ವ್ಯವಸ್ಥಾಪಕ ನಿರ್ದೇಶಕರಾದ ಅವಿನಾಶ್‌ ಮೆನನ್‌, ಬೆಂಗಳೂರು ಮೆಡಿಕಲ್‌ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್‌, ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕರು ಹಾಗೂ ಇತರೆ ಹಿರಿಯ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಹಾಜರಿದ್ದರು.14 ವರ್ಷ ಮೇಲ್ಪಟ್ಟ ವಯಸ್ಸಿನ ಸುಮಾರು 1.15 ಕೋಟಿ ಹುಡುಗಿಯರಿಗೆ ಸರ್ಕಾರಿ ಆರೋಗ್ಯ ಸೌಲಭ್ಯಗಳಲ್ಲಿ, ಆಯುಷ್ಮಾನ್ ಆರೋಗ್ಯ ...
ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಧಾವಿಸಲು ಕೇಂದ್ರಕ್ಕೆ ಡಿಕೆಶಿ ಮನವಿ

ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಧಾವಿಸಲು ಕೇಂದ್ರಕ್ಕೆ ಡಿಕೆಶಿ ಮನವಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಇಸ್ರೇಲ್–ಇರಾನ್ ಸಂಘರ್ಷದ ನಡುವೆಯೇ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾರತೀಯರ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.“ಈ ದೇಶದ ಎಲ್ಲಾ ಜನರಿಗೆ, ವಿಶೇಷವಾಗಿ ದಕ್ಷಿಣ ಭಾರತದವರಿಗೆ ನಾನು ಮನವಿ ಮಾಡುತ್ತೇನೆ. ಆ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ನಮ್ಮ ಜನರಿಗೆ ನಾವು ಧೈರ್ಯ ಮತ್ತು ಶಕ್ತಿ ನೀಡಲು ಪ್ರಯತ್ನಿಸಬೇಕು,” ಎಂದು ಅವರು ಹೇಳಿದ್ದಾರೆ.ವಿದೇಶಗಳಲ್ಲಿ ಇರುವ ಭಾರತೀಯರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಹೇಳಿದ ಅವರು, “ಭಾರತದ ಎಲ್ಲಾ ನಾಗರಿಕರನ್ನು ರಕ್ಷಿಸಬೇಕು. ಈ ಜಗತ್ತಿನಲ್ಲಿ ಯಾರನ್ನೂ, ವಿಶೇಷವಾಗಿ ಮಕ್ಕಳನ್ನು ಈ ರೀತಿ ನಿರ್ದಯವಾಗಿ ಕೊಲ್ಲಬಾರದು,” ಎಂದು ಅಭಿಪ್ರಾಯಪಟ್ಟರು.ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿದೇಶಗಳಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗರು ಮತ್ತು ಇತರ ಭಾರತೀಯರ ಸುರಕ್ಷತೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಅವರ ಮನವಿಯಾಗಿದೆ. Bengaluru | On Israel-Iran Conflict, Karnataka Dy CM DK Shivakumar says, "I appeal to all pe...
ರಾಯಚೂರಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ರಾಯಚೂರಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬೈಕ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮೊಹಮ್ಮದ್ ಅಲಿ (24), ನೂರ್ ಮೊಹಮ್ಮದ್ (19) ಮತ್ತು ಫಯಾಜ್ (26) ಎಂದು ಗುರುತಿಸಲಾಗಿದೆ. ಇವರು ನಗರದ ಸುಖಾಣಿ ಕಾಲೋನಿಯ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ಸಾಗುತ್ತಿದ್ದ ಬೈಕ್‌ಗೆ ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆ ತೆರಳುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮೂವರೂ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ಬಳಿಕ ಟ್ರಕ್ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ....
‘ಯುವಕರ ಸಮಸ್ಯೆಗಳನ್ನು ಕೇಳಲು ಸಿಎಂ-ಡಿಸಿಎಂಗೆ ಸಮಯವಿಲ್ಲ’: ವಿಜಯೇಂದ್ರ

‘ಯುವಕರ ಸಮಸ್ಯೆಗಳನ್ನು ಕೇಳಲು ಸಿಎಂ-ಡಿಸಿಎಂಗೆ ಸಮಯವಿಲ್ಲ’: ವಿಜಯೇಂದ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದು, ಯುವಜನರ ಬದುಕಿನ ಪ್ರಶ್ನೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಬಿಜೆಪಿ ಹಾಗೂ ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಉಲ್ಲೇಖಿಸಿದರು. ಕಳೆದ ಎರಡೂವರೆ ವರ್ಷಗಳಿಂದ ಯುವಕರು ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದರು.“ಯುವಕರು ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಆದರೆ ಸರ್ಕಾರ ಅವರ ಕಳವಳಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬೆಳಗಾವಿ ವಿಧಾನಸಭಾ ಅಧಿವೇಶನದ ವೇಳೆ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಗೆ ಲಾಠಿ ಪ್ರಹಾರ ನಡೆಸಲಾಯಿತು. ಮುಖ್ಯಮಂತ್ರಿಯವರೊಂದಿಗೆ ಸಭೆ ನಡೆಸಲು ಕರ್ನಾಟಕ ಹೈಕೋರ್ಟ್ ಮಧ್ಯಪ್ರವೇಶಿಸಬೇಕಾಯಿತು,” ಎಂದು ಹೇಳಿದರು.ಮುಖ್ಯಮಂತ್ರಿ ಮತ...
‘ಯುವಜನರ  ಆತಂಕ – ಅಹವಾಲುಗಳು ನನ್ನನ್ನು ತಲುಪಿದೆ’: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಬಗ್ಗೆ ಸಿಎಂ ಪ್ರತಿಕ್ರಿಯೆ

‘ಯುವಜನರ ಆತಂಕ – ಅಹವಾಲುಗಳು ನನ್ನನ್ನು ತಲುಪಿದೆ’: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಬಗ್ಗೆ ಸಿಎಂ ಪ್ರತಿಕ್ರಿಯೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರತಿ ಅರ್ಹ ವ್ಯಕ್ತಿಗೆ ಸೂಕ್ತ ಉದ್ಯೋಗವನ್ನು ಖಚಿತಪಡಿಸಲು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿರುವ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ ನಿರೀಕ್ಷೆ, ವರ್ಷಗಳ ಕಠಿಣ ಪರಿಶ್ರಮ ಮತ್ತು ನಾಡಿಗಾಗಿ ಸೇವೆ ಸಲ್ಲಿಸುವ ಆಕಾಂಕ್ಷೆ ಇರುತ್ತದೆ. ಯುವಜನರ ಆತಂಕ - ಅಹವಾಲುಗಳು ನನ್ನನ್ನು ತಲುಪಿದೆ. ಅವರ ಭವಿಷ್ಯ ನಮಗೂ ಅತ್ಯಂತ ಮಹತ್ವದ್ದಾಗಿದೆ ಎಂದಿದ್ದಾರೆ.ನಾವು ಅಧಿಕಾರಕ್ಕೆ ಬಂದಾಗ, 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿದ್ದವು. ಇದು ಒಂದೆರೆಡು ದಿನಗಳಲ್ಲಿ ಸೃಷ್ಟಿಯಾದುದಲ್ಲ; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಕಾಲದಲ್ಲಿ ನೇಮಕಾತಿಗಳನ...
#UGCET-26: ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ

#UGCET-26: ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
UGCET-26: ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ-2026) ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.ಅರ್ಜಿ ಸಲ್ಲಿಸಲು ಸದ್ಯ ಫೆ.27 ಕೊನೆ ದಿನ. ಶುಲ್ಕ ಪಾವತಿಗೆ ಮಾರ್ಚ್ 3 ಕೊನೆ ದಿನ. ಈ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದವರು ಅಗತ್ಯ ಇದ್ದರೆ ತಿದ್ದುಪಡಿ ಮಾಡಿಕೊಳ್ಳಬಹುದು. ಆದರೆ, ಅರ್ಜಿ ಸಲ್ಲಿಕೆಯ ದಿನಾಂಕದಲ್ಲಿ ಯಾವುದೇ ವಿಸ್ತರಣೆ ಇರುವುದಿಲ್ಲ ಎಂದವರ ಹೇಳಿಕೆಯನ್ನು KEA ತನ್ನ X ಖಾತೆಯಲ್ಲಿ ಹಂಚಿಕೊಂಡಿದೆ.ಎಸ್ ಸಿ ಒಳಮೀಸಲಾತಿ RD ಕಡ್ಡಾಯ:ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಆರ್ ಡಿ ಸಂಖ್ಯೆ ಇರುವ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ಮುದ್ರಿತವಾಗಿರುವ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದು ಅರ್ಜಿಯ ಪೋರ್ಟಲ್ ನಲ್ಲಿ ಎಡಿಟಿಂಗ್ ಮಾಡುವ ಮೂಲಕ ಆರ್ ಡಿ ಸಂಖ್ಯೆಯನ್ನು ದಾಖಲಿಸಬೇಕು. ಇದಕ್ಕಾಗಿ ಎಡಿಟಿಂಗ್ ಅರ್ಜಿ ಪೋರ್ಟಲ್ ಅನ್ನು ಮಾರ್ಚ್ 30ರವ...
‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಸಿಎಂ ಬಸವರಾಜ ಬೊಮ್ಮಾಯಿ ಅರೆಒಪಿಸಿದ್ದಾರೆ.ಲಂಚ ಆರೋಪದಲ್ಲಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ಲಂಚ ನೀಡುವುದೂ ಹಾಗೂ ಲಂಚ ಸ್ವೀಕರಿಸಲು ಒತ್ತಾಯಿಸುವುದೂ ತಪ್ಪಾಗಿದೆ. ಆದ್ದರಿಂದ ಎಲ್ಲ ಆಯಾಮಗಳಲ್ಲಿ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ.ಶಾಸಕ ಚಂದ್ರು ಲಮಾಣಿ ಅವರ ಆಸ್ಪತ್ರೆಯಲ್ಲಿ ನಾನಾ ವರ್ಗದ ಜನರು ಭೇಟಿ ನೀಡುತ್ತಾರೆ. ಹೀಗಾಗಿ ಈ ಪ್ರಕರಣದ ಕುರಿತು ಇನ್ನೂ ಸ್ಪಷ್ಟತೆ ಇಲ್ಲ. ಲೋಕಾಯುಕ್ತರು ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಬಳಿಕ ಸತ್ಯಾಸತ್ಯತೆ ಬಹಿರಂಗವಾಗಲಿದೆ. ಒಬ್ಬ ಯುವ ವೈದ್ಯರು ಉತ್ತಮ ಸೇವೆ ಸಲ್ಲಿಸುತ್ತಿರುವ ಈ ಸಂದರ್ಭದಲ್ಲಿ, ಇಂತಹ ಕರಿ ನೆರಳು ಅವರ ಸೇವೆಗೆ ಅಡ್ಡಿಯಾಗಬಾರದು. ಲಂಚ ನೀಡಲು ಒತ್ತಾಯಿಸುವುದೂ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಅಪರಾಧವಾಗಿರುವುದರಿಂದ, ಎಲ್ಲಾ ದೃಷ್...
“Karnataka Bharat Gaurav Train – Journey of a Thousand Shrines” ಎಂಬ ಕಾಫಿ ಟೇಬಲ್ ಪುಸ್ತಕ

“Karnataka Bharat Gaurav Train – Journey of a Thousand Shrines” ಎಂಬ ಕಾಫಿ ಟೇಬಲ್ ಪುಸ್ತಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಭಾರತೀಯ ರೈಲ್ವೆಯ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪ್ರವಾಸೋದ್ಯಮ ಉಪಕ್ರಮವನ್ನು ಪರಿಚಯಿಸುವ “Karnataka Bharat Gaurav Train – Journey of a Thousand Shrines” ಎಂಬ ಕಾಫಿ ಟೇಬಲ್ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ.ಈ ಪುಸ್ತಕವು ಕೇವಲ ರೈಲು ಸೇವೆಯ ದಾಖಲೆಯಲ್ಲ; ನಂಬಿಕೆ, ಸಂಸ್ಕೃತಿ, ಪರಂಪರೆ ಹಾಗೂ ಆಧುನಿಕ ರೈಲ್ವೆ ಮೂಲಸೌಕರ್ಯಗಳ ಸಮನ್ವಯದ ಹಿಂದೆ ಇರುವ ದೃಷ್ಟಿ ಮತ್ತು ಸಾಮೂಹಿಕ ಪ್ರಯತ್ನಗಳನ್ನು ಚಿತ್ರಿಸುತ್ತದೆ.ಐಆರ್‌ಟಿಎಸ್ (ನಿವೃತ್ತ) ಡಾ. ಅನುಪ್ ದಯಾನಂದ ಅವರ ಪರಿಕಲ್ಪನೆಯಲ್ಲಿ ಪುಸ್ತಕ ಮೂಡಿ ಬಂದಿದೆ. ಬಿಡುಗಡೆ ಕಾರ್ಯಕ್ರಮದಲ್ಲಿ ರೈಲ್ವೆಯ ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ ಸಮಿತಿಯ ಸದಸ್ಯ ಹರಿಶಂಕರ್ ವರ್ಮಾ, ಎನ್‌ಎಚ್‌ಎಂ ಹೆಚ್ಚುವರಿ ಸದಸ್ಯ ಕೆ.ಎಸ್. ಜೈನ್, ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಸಿಎಂಡಿ ಎಸ್.ಕೆ. ಜೈನ್ ಹಾಗೂ ಪ್ರವಾಸೋದ್ಯಮ ನಿರ್ದೇಶಕ ರಾಹುಲ್ ಹಿಮಾಲಯನ್ ಉಪಸ್ಥಿತರಿದ್ದರು.ಭಾರತೀಯ ರೈಲ್ವೆ ‘ಭಾರತ್ ಗೌರವ್’ ಯೋಜನೆಯಡಿ ಕರ್ನಾಟಕದ 30,000ಕ್ಕೂ ಹೆಚ್ಚು ಭಕ್ತರು ಕಾಶಿ ಸೇರ...
ಜೂನ್ ಮುನ್ನ ಸ್ಥಳೀಯ ಸಂಸ್ಥೆ ಚುನಾವಣೆ:ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದ ಸಿಎಂ

ಜೂನ್ ಮುನ್ನ ಸ್ಥಳೀಯ ಸಂಸ್ಥೆ ಚುನಾವಣೆ:ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದ ಸಿಎಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕಾರವಾರ: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾವಣೆಗಳನ್ನು ಮುಂದಿನ ಜೂನ್ ತಿಂಗಳೊಳಗೆ ನಡೆಸಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿ–ಗಂಗಾವಳಿ ಸೇತುವೆ ಉದ್ಘಾಟನೆ ಬಳಿಕ ಅವರು ಮಾತನಾಡಿದರು. ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ಬೇಡಿಕೆ ಇದ್ದು, ಚುನಾವಣೆಗಳ ಬಳಿಕ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು. ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದರಿಂದ ಪುನಃ ಪ್ರಸ್ತಾವ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂದೂ ತಿಳಿಸಿದರು.ಈ ವೇಳೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು ಹಾಗೂ ಶಾಸಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು....