Monday, August 10

ವಿದೇಶ

‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಮಾರ್ಗಸೂಚಿ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 2022-23ನೇ ಸಾಲಿನ “ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಮತ್ತು ರಾಜ್ಯ ಸರ್ಕಾರದ ಲೆಕ್ಕ ಶೀರ್ಷಿಕೆ 3054ರಡಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.ಈ ಹಿಂದೆ ನರೇಗಾ ಯೋಜನೆಯಡಿ ಗ್ರಾಮೀಣ ಸರ್ವಋತು ಸಂಪರ್ಕ ರಸ್ತೆ ಕಾಮಗಾರಿಗಳಿಗೆ ಶೇ.10ರ ಮಿತಿಯಲ್ಲಿ ಮಾತ್ರ ಅವಕಾಶ ಇತ್ತು. ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸಲು ವ್ಯಾಪಕ ಕ್ರಮ ಕೈಗೊಳ್ಳುವ ಅಗತ್ಯತೆ ಹಿನ್ನೆಲೆಯಲ್ಲಿ 2022-23ರ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದರು.ಆ ಘೋಷಣೆಯ ಅನ್ವಯ, ರೈತರ ಹೊಲ/ಗದ್ದೆ/ತೋಟ/ಜಮೀನುಗಳಿಗೆ ಸಂಪರ್ಕ ರಸ್ತೆ ಕಾಮಗಾರಿಗಳನ್ನು ನರೇಗಾ ಯೋಜನೆಯ ಒಟ್ಟು ಕಾರ್ಮಿಕ ವೆಚ್ಚದ ಶೇ.25ರ ಮಿತಿಯಲ್ಲಿ ಕೈಗೊಳ್ಳಲು ತೀರ್ಮಾನಿಸಲಾಗಿದೆ.ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 30 ಕಿಮೀ ನಂತೆ ಒಟ್ಟು 5,670 ಕಿಮೀ ರಸ್ತೆ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಪ್ರತಿ ಕಿಮೀಗೆ ₹12.50 ಲಕ್ಷವೆಂಬ ಅಂದಾಜು ವೆಚ್ಚದಂತೆ ಒಟ್ಟು ₹708.75 ಕೋಟಿ ವೆಚ್ಚ...
ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್‌’ಗೆ ಸುನಿಲ್ ಜೋಶಿ ಹೆಸರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ರಾಜ್ಯ ಮತ್ತು ರಾಷ್ಟ್ರೀಯ ತಂಡಗಳಿಗೆ ನೀಡಿದ ಸೇವೆಯನ್ನು ಗುರುತಿಸಿ, ಭಾರತದ ಮಾಜಿ ಎಡಗೈ ಸ್ಪಿನ್ನರ್ ಸುನಿಲ್ ಜೋಶಿ ಅವರ ಹೆಸರನ್ನು ಹುಬ್ಬಳ್ಳಿಯ ರಾಜನಗರ ಮೈದಾನದ ಪೆವಿಲಿಯನ್ ಬ್ಲಾಕ್‌ಗೆ ಇಡುವುದಾಗಿ ಪ್ರಕಟಿಸಿದೆ.ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು–ಕಾಶ್ಮೀರ ತಂಡಗಳು ಮುಖಾಮುಖಿಯಾಗಲಿರುವ ಮೊದಲ ದಿನ ಮಧ್ಯಾಹ್ನ 12 ಗಂಟೆಗೆ ನಾಮಕರಣ ಸಮಾರಂಭ ನಡೆಯಲಿದೆ. ಉತ್ತರ ಕರ್ನಾಟಕದ ಗದಗ ಜಿಲ್ಲೆಯವರಾದ ಜೋಶಿ ಅವರು ಹುಬ್ಬಳ್ಳಿಯಲ್ಲಿ ತಮ್ಮ ಕ್ರಿಕೆಟ್ ಪಯಣವನ್ನು ರೂಪಿಸಿಕೊಂಡಿದ್ದು, ರಾಜ್ಯದ ಪ್ರಮುಖ ಕ್ರಿಕೆಟ್ ರಾಯಭಾರಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಕೆಎಸ್‌ಸಿಎ ತಿಳಿಸಿದೆ.“ಪೆವಿಲಿಯನ್‌ಗೆ ಅವರ ಹೆಸರಿಡುವುದು ಅವರ ಸಾಧನೆಗಳಿಗೆ ಶಾಶ್ವತ ಗೌರವ ಸಲ್ಲಿಸುವುದರ ಜೊತೆಗೆ, ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಆಡುವ ಯುವಕರಿಗೆ ಸ್ಫೂರ್ತಿಯಾಗಲಿದೆ,” ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.ಕಾರ್ಯಕ್ರಮದಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮ...
‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ‌ ಸಿಕ್ಕಿಬಿದ್ದಿದ್ದಾರೆ. ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದರೆಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಶಾಸಕರನ್ನು ವಶಕ್ಕೆ ಪಡೆದಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು ಎಂದಿದ್ದಾರೆ.ಲೋಕಾಯುಕ್ತರ ತನಿಖೆ ನಡೆದು ಪೂರ್ಣ ಸತ್ಯಾಸತ್ಯತೆ ಹೊರಬರಲಿ. ನಾವ್ಯಾರು ಅದಕ್ಕೆ ಅಡ್ಡಿಮಾಡಲ್ಲ ಎಂದವರು ತಿಳಿಸಿದ್ದಾರೆ. ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ‌ ಸಿಕ್ಕಿಬಿದ್ದಿದ್ದಾರೆ. ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು. ಲೋಕಾಯುಕ್ತರ ತನಿಖೆ ನಡೆದು ಪೂರ್ಣ ಸತ್ಯಾಸತ್ಯತೆ ಹೊರಬರಲಿ.… pic.twitter.com/9igAeHXMx3&mda...
CT, MRI ಸ್ಕ್ಯಾನಿಂಗ್ ರದ್ದು ವಿಚಾರ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

CT, MRI ಸ್ಕ್ಯಾನಿಂಗ್ ರದ್ದು ವಿಚಾರ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸರ್ಕಾರದ ಹಣದ ಸರಿಯಾದ ಸದ್ಬಳಕೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಬದ್ಧತೆ. CT ಮತ್ತು MRI ಸ್ಕ್ಯಾನಿಂಗ್ ಸೇವೆ ಪಡೆಯಲು ಜನರಿಗೆ ಯಾವುದೇ ಅಡಚಣೆ ಆಗಬಾರದು ಎಂಬ ಉದ್ದೇಶದಿಂದ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸಲಾಗಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.CT ಮತ್ತು MRI ಸೇವೆ ನೀಡುತ್ತಿದ್ದ Krsnaa Diagnostics Ltd ಸಂಸ್ಥೆ ಸರಿಯಾದ ದಾಖಲೆ ಹಾಗೂ ದೃಢೀಕರಣ ಪದ್ಧತಿಗಳನ್ನು ಪಾಲಿಸದ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರ ಸ್ಕ್ಯಾನಿಂಗ್ ಪ್ರಕ್ರಿಯೆಗೆ ವ್ಯವಸ್ಥಿತ ನಿಯಮಾವಳಿ ಮತ್ತು ಪರಿಶೀಲನಾ ಕ್ರಮಗಳನ್ನು ಆಗಸ್ಟ್ 30, 2024ರಂದು ಜಾರಿಗೆ ತಂದಿತು. ಇದರ ಪರಿಣಾಮವಾಗಿ 2024ರ ಏಪ್ರಿಲ್‌ನಿಂದ 2025ರ ಡಿಸೆಂಬರ್ ತನಕ ಅಗತ್ಯವಿರುವಷ್ಟೇ ಸಿಟಿ ಸ್ಕ್ಯಾನಿಂಗ್ ನಡೆಯಿತು. ಏಪ್ರಿಲ್‌ 2024 ರಿಂದ ಜುಲೈ 2024ರ ಅವಧಿಯಲ್ಲಿ ಒಟ್ಟು 98,311 ಸ್ಕ್ಯಾನಿಂಗ್ ನಡೆದು, ಅದಕ್ಕೆ 15.24 ಕೋಟಿ ರೂ. ವೆಚ್ಚವಾಗಿತ್ತು. ಆಗಸ್ಟ್ 2024ರಿಂದ ನವೆಂಬರ್ 2024ರ ಅವಧಿಯಲ್ಲಿ ಈ ಪ್ರಮಾಣ 76,217ಕ್ಕೆ ಇಳಿದು 11.81 ಕ...
ಜವಾಬ್ದಾರಿಯುತ AI ಬಳಕೆಯಲ್ಲಿ ಕರ್ನಾಟಕ ಮುಂಚೂಣಿ

ಜವಾಬ್ದಾರಿಯುತ AI ಬಳಕೆಯಲ್ಲಿ ಕರ್ನಾಟಕ ಮುಂಚೂಣಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಕೃತಕ ಬುದ್ಧಿಮತ್ತೆ (AI) ಮತ್ತು ಆಳವಾದ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವು ರಾಷ್ಟ್ರೀಯ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಜವಾಬ್ದಾರಿಯುತ AI ಬಳಕೆಯಲ್ಲಿ ಮಾದರಿ ರಾಜ್ಯವಾಗುವ ಗುರಿ ಹೊಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ದೆಹಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಮಾತನಾಡಿದ ಐಟಿ–ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಾಗತಿಕ ತಾಂತ್ರಿಕ ಅಡಚಣೆಗಳನ್ನು ಅವಕಾಶವನ್ನಾಗಿ ಬಳಸಿಕೊಳ್ಳಲು ಭಾರತಕ್ಕೆ, ವಿಶೇಷವಾಗಿ ಕರ್ನಾಟಕಕ್ಕೆ ಅಪಾರ ಸಾಮರ್ಥ್ಯವಿದೆ ಎಂದು ಹೇಳಿದರು.“ರಾಜ್ಯದಲ್ಲಿ ಕೌಶಲ್ಯ ಇನ್ಕ್ಯುಬೇಷನ್‌ ಹಾಗೂ ಸ್ಟಾರ್ಟ್‌ಅಪ್‌ಗಳಿಗೆ ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಜಾಗತಿಕ ನಾಯಕರೊಂದಿಗೆ ಚರ್ಚೆ ನಡೆಯುತ್ತಿದೆ. ಇ-ಆಡಳಿತ ಕ್ಷೇತ್ರದಲ್ಲಿ ಜವಾಬ್ದಾರಿಯುತ AI ಬಳಕೆಯಲ್ಲಿ ಮುಂಚೂಣಿಯಲ್ಲಿರಲು ಸರ್ಕಾರ ಬದ್ಧವಾಗಿದೆ,” ಎಂದು ಅವರು ಹೇಳಿದರು. ಕರ್ನಾಟಕದಲ್ಲಿ ದೇಶದ ಅತಿದೊಡ್ಡ AI ಪ್ರತಿಭಾ ಸಂಪನ್ಮೂಲಗಳಲ್ಲೊಂದು ಲಭ್ಯವಿದೆ ಎಂದು ಅವರು ಗಮನಿಸಿದರು.ನಾವೀನ್ಯತೆಯಲ್ಲಿ ನೈತಿಕತೆ ಅವಶ್ಯಕವೆಂದು ಒತ್ತಿಹೇಳಿದ ...
ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭ; ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಎಂದ ರೈತರು

ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭ; ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಎಂದ ರೈತರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭಿಸಲು ಸರ್ಕಾರ ನೀಡಿರುವ ಅನುಮತಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಂಡವಾಳಶಾಹಿ ರೆಸಾರ್ಟ್ ಮಾಲೀಕರ ಒತ್ತಡಕ್ಕೆ ಮಣಿದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಘಟನೆ ಆರೋಪಿಸಿದೆ.ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಪ್ರಕಟಣೆಯಲ್ಲಿ, “ಅರಣ್ಯದ ಅಂಚಿನಲ್ಲಿ ವಾಸಿಸುವ ಗ್ರಾಮಗಳ ರೈತರ ಕಷ್ಟ ಅರಿಯದೆ, ಕಾಡು ಪ್ರಾಣಿಗಳ ದಾಳಿಯಿಂದಾಗುತ್ತಿರುವ ಪ್ರಾಣಹಾನಿ ಹಾಗೂ ಬೆಳೆ ನಷ್ಟವನ್ನು ಲೆಕ್ಕಿಸದೆ ಸರ್ಕಾರ ಸಫಾರಿಗೆ ಅನುಮತಿ ನೀಡಿದೆ. ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಇಲ್ಲದಿದ್ದರೆ ರೈತ ಸಂಘಟನೆಗಳು ಬೀದಿಗಿಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.ಸಫಾರಿ ಕಾರ್ಯಾಚರಣೆಗಳಿಂದ ಕಾಡು ಪ್ರಾಣಿಗಳು ಭಯಭೀತಗೊಂಡು ಕಾಡಿನ ಹೊರಗೆ ಬರುತ್ತಿವೆ. ಇದರಿಂದ ಮನುಷ್ಯರ ಮೇಲೆ ದಾಳಿ ಹಾಗೂ ಬೆಳೆ ಹಾನಿ ಪ್ರಕರಣಗಳು ಹೆಚ್ಚುತ್ತಿವೆ ಎಂಬುದು ಸರ್ಕಾರಕ್ಕೂ ತಿಳಿದಿದೆ. ಆದರೂ ಆದಾಯದ ಲೆಕ್ಕಾಚಾರಕ್ಕೆ ಮಣಿದು ಅನುಮತಿ ನೀಡಿರುವುದು ಖಂಡನೀಯ ಎಂದು ಅವರು ಆರೋಪಿ...
ಸಾರಿಗೆ ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ಏಪ್ರಿಲ್ 2025ರಿಂದ ವೇತನ ಪರಿಷ್ಕರಣೆಗೂ ಒಪ್ಪಿಗೆ

ಸಾರಿಗೆ ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ಏಪ್ರಿಲ್ 2025ರಿಂದ ವೇತನ ಪರಿಷ್ಕರಣೆಗೂ ಒಪ್ಪಿಗೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಷ್ಕರದ ಎಚ್ಚರಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಸಾರಿಗೆ ನೌಕರರ ಪ್ರಮುಖ ಬೇಡಿಕೆಯಾಗಿದ್ದ ವೇತನ ಬಾಕಿ ಪಾವತಿಗೆ ಕ್ರಮ ಕೈಗೊಂಡಿದೆ.ಸಾರಿಗೆ ನೌಕರರಿಗೆ ಒಟ್ಟು 38 ತಿಂಗಳ ವೇತನ ಹಿಂಬಾಕಿ ಪಾವತಿಸ ಬೇಕಿರುವುದರಿಂದ, ಪ್ರಥಮ ಹಂತದಲ್ಲಿ 26 ತಿಂಗಳ ಅರಿಯರ್ಸ್‌ ಪಾವತಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1-1-2021ರಿಂದ 28-03-2023ರವರೆಗೆ ಬಾಕಿ ಇರುವ 26 ತಿಂಗಳ ಮೊತ್ತವನ್ನು ನೌಕರರಿಗೆ ನೀಡಲಾಗುತ್ತದೆ.ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ KSRTC, BMTC, NWKRTC ಹಾಗೂ KKRTC ನೌಕರರು ವೇತನ ಬಾಕಿ ಪಾವತಿಗೆ ಒತ್ತಾಯಿಸುತ್ತಿದ್ದರು.ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಪ್ರಕಟಿಸಲಾಗಿದೆ. ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ, ಹಂತ ಹಂತವಾಗಿ ಬಾಕಿ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.ಇದೇ ವೇಳೆ, 2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಸಾರಿಗೆ ನೌಕರರ ವೇತನ ಪರಿಷ್ಕರಣೆಗೂ ಸರ್ಕಾರ...
ತಂದೆಯ ಸಹಿಯನ್ನೇ ನಕಲು ಮಾಡಿದ್ದ ಆರೋಪ ಬಗ್ಗೆ ಮೊದಲು ಉತ್ತರಿಸಿ; ಪ್ರಿಯಾಂಕ್ ಬಗ್ಗೆ ಟೀಕಿಸಿದ  ವಿಜಯೇಂದ್ರಗೆ ರಮೇಶ್ ಬಾಬು ಸವಾಲು

ತಂದೆಯ ಸಹಿಯನ್ನೇ ನಕಲು ಮಾಡಿದ್ದ ಆರೋಪ ಬಗ್ಗೆ ಮೊದಲು ಉತ್ತರಿಸಿ; ಪ್ರಿಯಾಂಕ್ ಬಗ್ಗೆ ಟೀಕಿಸಿದ ವಿಜಯೇಂದ್ರಗೆ ರಮೇಶ್ ಬಾಬು ಸವಾಲು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಬಿಜೆಪಿ ಬಾಲ ಭವನದ ನಾಯಕ ವಿಜಯೇಂದ್ರರವರು ತನ್ನ ಪಟಾಲಾಂ ಜೊತೆ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಖರ್ಗೆ ಮತ್ತು ಅವರ ಕುಟುಂಬದ ಮೇಲೆ ಅವಲತ್ತುಕೊಂಡಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ. ಬಿಜೆಪಿಗೆ ಮತ್ತು ಸಂಘ ಪರಿವಾರದವರಿಗೆ ತಮ್ಮ ಸಮರ್ಥನೆಗೆ ಇಂತಹ ಬಾಲಂಗೋಚಿ ನಾಯಕರ ಅವಶ್ಯಕತೆ ಬಂದಿರುವುದು ವ್ಯವಸ್ಥೆಯ ದೌರ್ಬಲ್ಯ ಎಂದು ಶಾಸಕರೂ ಆದ ರಮೇಶ್ ಬಾಬು ಹೇಳಿದ್ದಾರೆ.ಪ್ರಿಯಾಂಕ ಖರ್ಗೆರವರನ್ನು ಟೀಕಿಸಲು ವಿಜಯೇಂದ್ರ ಮಾಡಿರುವ ಆಲಾಪ ನಗೆ ಪಾಟಲಿನ ಪರಮಾವಧಿ ಆಗಿರುತ್ತದೆ. ತಮ್ಮ ರಾಜಕೀಯ ಅಧಿಕಾರ ಸ್ಥಾನವನ್ನು, ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ಪದೇ ಪದೇ ದೆಹಲಿಗೆ ದಂಡೆಯಾತ್ರೆ ಮಾಡುತ್ತಿರುವ ವಿಜಯೇಂದ್ರರವರಿಗೆ, ಆರ್.ಎಸ್.ಎಸ್ ಸಮರ್ಥಿಸುವ ಅನಿವಾರ್ಯತೆ ಸೃಷ್ಟಿ ಆಗಿರುವುದು ದೊಡ್ಡ ವಿಪರ್ಯಾಸ. ಮೊದಲು ಆರ್‌.ಎಸ್‌.ಎಸ್ ನವರು ಇವರ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಸಮರ್ಥಿಸಲಿ! ನಂತರ ಅವರು ಆರೆಸ್ಸೆಸ್ ಪರವಾದ ಹೇಳಿಕೆಯನ್ನು ನೀಡಲಿ ಎಂದ...
ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಅವರ 2023ರ ವಿಧಾನಸಭಾ ಚುನಾವಣೆಯ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ.ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.ಅರ್ಜಿಯಲ್ಲಿ, ಸುಬ್ಬಾರೆಡ್ಡಿ ಅವರು ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಸಂಪೂರ್ಣವಾಗಿ ಪ್ರಕಟಿಸದೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ರದ್ದುಪಡಿಸಬೇಕೆಂದು ಮನವಿ ಮಾಡಲಾಗಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ಆಯ್ಕೆಯನ್ನು ಅಸಿಂಧುಗೊಳಿಸುವಂತೆ ತೀರ್ಮಾನಿಸಿದೆ.ಆದರೆ, ಅರ್ಜಿದಾರರಾದ ಸಿ. ಮುನಿರಾಜು ಅವರನ್ನು ನೇರವಾಗಿ ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ.ಇದರ ನಡುವೆ, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುವಂತೆ ಸುಬ್ಬಾರೆಡ್ಡಿ ಪರ ಹಿರಿಯ ವಕೀಲರು ಮನವಿ ಮಾಡಿದ್ದು, ನ್ಯಾಯಾಲಯ ತನ್ನ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಹೀಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗ...
RSS ಬಗ್ಗೆ ಗೇಲಿ ಮಾಡಿದರೆ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆ? ಸಚಿವ ಪ್ರಿಯಾಂಕ್ ಬಗ್ಗೆ ಅಶೋಕ್ ವ್ಯಂಗ್ಯ

RSS ಬಗ್ಗೆ ಗೇಲಿ ಮಾಡಿದರೆ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆ? ಸಚಿವ ಪ್ರಿಯಾಂಕ್ ಬಗ್ಗೆ ಅಶೋಕ್ ವ್ಯಂಗ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಆರ್ ಎಸ್ಎಸ್ ಸಂಘಟನೆ ಬಗ್ಗೆ ಮುನಿಸಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.ಆರ್ ಎಸ್ಎಸ್ ಸಂಘಟನೆಯನ್ನು ವಾಚಾಮಗೋಚರವಾಗಿ ಬೈದರೆ, ನಿರಂತರವಾಗಿ ನಿಂದಿಸಿದರೆ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಪಕ್ಷದಲ್ಲಿ ಏನಾದರೂ ಸ್ಥಾನಮಾನ ಪಡೆಯಬಹುದು, ಇನ್ನೂ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆಯಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಅದನ್ನೇ ನಿತ್ಯ ಚಾಳಿ ಮಾಡಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.4 ದಶಕಗಳಿಂದ ಕಲ್ಯಾಣ ಕರ್ನಾಟಕದ ಜನರ ಕೃಪಾಕಟಾಕ್ಷದಿಂದ ಅಧಿಕಾರ ಅನುಭವಿಸಿ, ಅಭಿವೃದ್ಧಿಗೆ ಮಾತ್ರ "ನಾಳೆ ಬಾ" ಎಂಬ ಶಾಶ್ವತವಾದ ಬೋರ್ಡು ಹಾಕಿಕೊಂಡು ಕಲ್ಯಾಣ ಕರ್ನಾಟಕದ ಜನತೆಗೆ ನಂಬಿಕೆ ದ್ರೋಹ ಮಾಡುತ್ತಿರುವ ದೆವ್ವಗಳನ್ನ ಓಡಿಸುವ ದಿನ ಬಹಳ ದೂರವಿಲ್ಲ ಎಂದಿದ್ದಾರೆ.ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಆರ್ ಎಸ್ಎಸ್ ಸಂಘಟನೆಯನ್ನು ವಾಚಾಮಗೋಚರವಾಗಿ ಬೈದರೆ, ನಿರಂತರವಾಗಿ ನಿ...