Monday, August 10

ವಿದೇಶ

ಬೆಂಗಳೂರು: ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಜಿಡಿಸಿಆರ್‌ಐ)ಯ ಆಧುನೀಕರಣಕ್ಕೆ

ಬೆಂಗಳೂರು: ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಜಿಡಿಸಿಆರ್‌ಐ)ಯ ಆಧುನೀಕರಣಕ್ಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದಲ್ಲಿ ಸುವರ್ಣ ಮಹೋತ್ಸವ ಆಚರಿಸಿರುವ ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಜಿಡಿಸಿಆರ್‌ಐ)ಯ ಆಧುನೀಕರಣಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಶಿಲಾನ್ಯಾಸ ನೆರವೇರಿಸಿದರು.ರಾಜ್ಯ ಸಚಿವ ಸಂಪುಟದಿಂದ ಮಂಜೂರಾದ ರೂ. 40 ಕೋಟಿ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.ನಂತರ ಮಾತನಾಡಿದ ಡಾ. ಶರಣಪ್ರಕಾಶ್ ಆರ್. ಪಾಟೀಲ್, "ಈ ಆಧುನೀಕರಣವು ಪ್ರತಿಷ್ಠಿತ ದಂತ ಕಾಲೇಜಿನ ಶ್ರೀಮಂತ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದು, ವಿಶ್ವ ದರ್ಜೆ ಸೌಲಭ್ಯಗಳನ್ನು ಒದಗಿಸುವುದು, ಕರ್ನಾಟಕದ ಎಲ್ಲಾ ನಾಗರಿಕರಿಗೆ ಉನ್ನತ ಮಟ್ಟದ ದಂತ ಆರೋಗ್ಯವನ್ನು ಒದಗಿಸುವುದು ನಮ್ಮ ಸರ್ಕಾರದ ಮುಖ್ಯ ಗುರಿ ಎಂದರು.ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮಾತನಾಡಿ, "ಇಂತಹ ಯೋಜನೆಗಳಿಗೆ ಹೂಡಿಕೆ ಮಾಡುವ ಮೂಲಕ, ವೈದ್ಯಕೀಯ ಶ್ರೇಷ್ಠತೆ ಮತ್ತು ಕೌಶಲ್ಯ ಅಭಿವೃದ್ಧಿಯ ಕೇಂದ್ರವಾಗಿ ಬೆಂಗಳೂರಿನ ಸ್ಥಾನವನ್ನು ನಾವು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುತ್ತೇವ...
‘ಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ವ್ಯರ್ಥ ಪ್ರಯತ್ನ ಬಿಡಿ’: ಬಿಜೆಪಿಗೆ ದಿನೇಶ್ ಕಿವಿಮಾತು

‘ಸಲ್ಲದ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುವ ವ್ಯರ್ಥ ಪ್ರಯತ್ನ ಬಿಡಿ’: ಬಿಜೆಪಿಗೆ ದಿನೇಶ್ ಕಿವಿಮಾತು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜನತೆಯ ಎದುರು ಸುಳ್ಳಿನ ಸರಮಾಲೆಗಳೆನ್ನೇ ಹಣೆದು, ಬಿಬಿಎಂಪಿ ಆಸ್ತಿಗಳನ್ನೇ ಅಡವಿಟ್ಟು ಆಡಳಿತ ನಡೆಸಿದ್ದು ನಿಮ್ಮ ಜಾಯಮಾನ. 2008- 2013ರ ನಿಮ್ಮ ಅವಧಿಯಲ್ಲಿ ಅದೆಷ್ಟು ಆಸ್ತಿಗಳನ್ನು ಅಡವಿಟ್ಟಿದ್ರಿ ಎನ್ನೋದನ್ನು ಒಮ್ಮೆ ಜ್ಞಾಪಿಸಿಕೊಳ್ಳಿ. ಆ ಆಸ್ತಿಗಳನ್ನು ಸಾಲಮುಕ್ತಗೊಳಿಸಿದ್ದು ನಮ್ಮ ಕಾಂಗ್ರೆಸ್ ಸರ್ಕಾರ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಆಸ್ಪತ್ರೆಗಳ ಅವ್ಯವಸ್ಥೆ ಕುರಿತ ಬಿಜೆಪಿ ಟೀಕೆಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ದಿನೇಶ್ ಗುಂಡೂರಾವ್, ಯುಪಿಎ ಸರ್ಕಾರ ಇದ್ದಾಗ 2014ರಲ್ಲಿ ಭಾರತದ ಸರ್ಕಾರದ ಸಾಲ ₹55 ಲಕ್ಷ ಕೋಟಿ ಇತ್ತು. ನಿಮ್ಮ ಆಡಳಿತದ ಹತ್ತು ವರ್ಷದ ಅದು ಬರೋಬ್ಬರಿ ₹200 ಲಕ್ಷ ಕೋಟಿಗೂ ಅಧಿಕವಾಗಿದೆ. ನಿಮ್ಮದೇ ಕೇಂದ್ರ ಸರ್ಕಾರ ಮಾಡಿರುವ ಈ ಬೆಟ್ಟದಷ್ಟು ಸಾಲ ಎಲ್ಲೆಲ್ಲಿ ವಿನಿಯೋಗವಾಗಿದೆ ಎನ್ನುವ ಲೆಕ್ಕ ಕೊಡ್ತೀರಾ? ಎಂದು ಪ್ರಶ್ನಿಸಿದ್ದಾರೆ.ಜನರಿಗೆ ನಾವು ನೀಡಿದ ಭರವಸೆಯಂತೆ ನಮ್ಮ ಸರ್ಕಾರ ನುಡಿದಂತೆ ನಡೆದುಕೊಂಡು ಬಂದಿದೆ. ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಿದ್ದು ಸ್ವಾವಲಂಬಿ ಬದುಕು ಕಲ್ಪಿಸಿಕೊಟ್ಟಿದ್ದೇವೆ. ...
“ಸಂಸತ್ತಿನಲ್ಲಿ ಪ್ರತಿದಿನ ಫೈಲ್‌ಗಳನ್ನು ಬೀಸಿ ಗಂಭೀರ ಆರೋಪ ಮಾಡುವ ರಾಹುಲ್ ಗಾಂಧಿ, ಕರ್ನಾಟಕದ ವಿಚಾರ ಬಂದಾಗ ಮೌನ

“ಸಂಸತ್ತಿನಲ್ಲಿ ಪ್ರತಿದಿನ ಫೈಲ್‌ಗಳನ್ನು ಬೀಸಿ ಗಂಭೀರ ಆರೋಪ ಮಾಡುವ ರಾಹುಲ್ ಗಾಂಧಿ, ಕರ್ನಾಟಕದ ವಿಚಾರ ಬಂದಾಗ ಮೌನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ನಡೆದಿದೆ ಎನ್ನಲಾದ ₹2,500 ಕೋಟಿ ಮೊತ್ತದ ಅಬಕಾರಿ ಹಗರಣ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೌನವನ್ನು ಕರ್ನಾಟಕ ಬಿಜೆಪಿ ಪ್ರಶ್ನಿಸಿದೆ.ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಶುಕ್ರವಾರ ಹೇಳಿಕೆ ನೀಡಿದ್ದು, “ಸಂಸತ್ತಿನಲ್ಲಿ ಪ್ರತಿದಿನ ಫೈಲ್‌ಗಳನ್ನು ಬೀಸಿ ಗಂಭೀರ ಆರೋಪ ಮಾಡುವ ರಾಹುಲ್ ಗಾಂಧಿ, ಕರ್ನಾಟಕದ ವಿಚಾರ ಬಂದಾಗ ಮೌನವಾಗಿರುವುದು ಅರ್ಥವಾಗುತ್ತಿಲ್ಲ” ಎಂದು ಟೀಕಿಸಿದರು.ರಾಜ್ಯ ಅಬಕಾರಿ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಗಂಭೀರ ಆರೋಪಗಳು ಹೊರಬಂದಿದ್ದರೂ, ಕಾಂಗ್ರೆಸ್ ನೇತೃತ್ವದ ಸರ್ಕಾರ ತನಿಖೆಗೆ ಅವಕಾಶ ನೀಡಿಲ್ಲ. ಈ ಕುರಿತು ರಾಹುಲ್ ಗಾಂಧಿ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ ಎಂದು ಅಶೋಕ ಆರೋಪಿಸಿದರು.“ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ಆದಾಯ ಕೇಂದ್ರವನ್ನಾಗಿ ಮಾಡಿಕೊಂಡಿರುವರೇ? ಅಬಕಾರಿ ನೀತಿಗಳನ್ನು ಸಾರ್ವಜನಿಕ ಹಿತಕ್ಕಾಗಿ ರೂಪಿಸಲಾಗಿದೆಯೇ ಅಥವಾ ರಾಜಕೀಯ ನಿಧಿ ಸಂಗ್ರಹಕ್ಕಾಗಿಯೇ?” ಎಂದು ಅಶೋಕ ಪ್ರಶ್ನಿಸ...
ಎಂ.ಸತ್ಯವರ ಬಳಿ ಬೈಕ್,ಕ್ಯಾಂಟರ್, ಎಕ್ಸ್‌ಯುವಿ ಕಾರಿನ ನಡುವೆ ಅಪಘಾತ: ಏಳು ಮಂದಿ ದುರ್ಮರಣ

ಎಂ.ಸತ್ಯವರ ಬಳಿ ಬೈಕ್,ಕ್ಯಾಂಟರ್, ಎಕ್ಸ್‌ಯುವಿ ಕಾರಿನ ನಡುವೆ ಅಪಘಾತ: ಏಳು ಮಂದಿ ದುರ್ಮರಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಸಮೀಪ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ.ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್‌ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಬೈಕ್‌ಗೆ ಎಕ್ಸ್‌ಯುವಿ ಕಾರು ಮೊದಲು ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಮೃತರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ನಿವಾಸಿಗಳೆಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ....
ಸಾವಿರಾರು ಕೋಟಿ ಬಾಕಿ; ಮಾರ್ಚ್ 5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ

ಸಾವಿರಾರು ಕೋಟಿ ಬಾಕಿ; ಮಾರ್ಚ್ 5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಡ್ಯ: ರಾಜ್ಯ ಸರ್ಕಾರದಿಂದ ಬಾಕಿ ಬಿಲ್ ಬಿಡುಗಡೆ ಆಗದಿರುವುದನ್ನು ವಿರೋಧಿಸಿ ಗುತ್ತಿಗೆದಾರರು ಮಾರ್ಚ್ 5ರಂದು ಬೃಹತ್ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಈ ಸಂಬಂಧ ಮಂಡ್ಯದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್. ಮಂಜುನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಕಿ ಹಣ ತಕ್ಷಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುವ ತೀರ್ಮಾನ ಕೈಗೊಳ್ಳಲಾಯಿತು.ಸಭೆ ಬಳಿಕ ಮಾತನಾಡಿದ ಮಂಜುನಾಥ್, “ರಾಜ್ಯ ಮಟ್ಟದಲ್ಲಿ ಗುತ್ತಿಗೆದಾರರ ಸುಮಾರು ₹37,000 ಕೋಟಿ ಬಾಕಿ ಉಳಿದಿದೆ. ಮಂಡ್ಯ ಜಿಲ್ಲೆಯಲ್ಲಿ ಮಾತ್ರವೇ ₹950 ಕೋಟಿ ಹಣ ಬಾಕಿಯಾಗಿದೆ. ಸಾಲ ಮಾಡಿ ಕೆಲಸ ನಿರ್ವಹಿಸಿದ್ದೇವೆ. ಆದರೆ ಹಣ ಬಿಡುಗಡೆ ಆಗದ ಕಾರಣ ಬಡ್ಡಿ ಕಟ್ಟಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ” ಎಂದು ಹೇಳಿದರು.ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದನೆ ದೊರಕಿಲ್ಲ ಎಂದು ಆರೋಪಿಸಿದ ಅವರು, “ಹಿಂದಿನ ಸರ್ಕಾರದ ಅವಧಿಗಿಂತಲೂ ಈಗ ಕಮಿಷನ್ ಸಮಸ್ಯೆ ಹೆಚ್ಚಾಗಿದೆ” ಎಂದು ದೂರಿದರು.ಬಾಕಿ ಹಣ ತಕ್ಷಣ ಬಿಡ...
‘ಟಾಕ್ಸಿಕ್’ ಟೀಸರ್ ವಿವಾದ: ಮಹಿಳಾ ಆಯೋಗ ಮತ್ತು ಸೆನ್ಸಾರ್ ಮಂಡಳಿಗೆ ದೂರು

‘ಟಾಕ್ಸಿಕ್’ ಟೀಸರ್ ವಿವಾದ: ಮಹಿಳಾ ಆಯೋಗ ಮತ್ತು ಸೆನ್ಸಾರ್ ಮಂಡಳಿಗೆ ದೂರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆಯಾದ ಬಳಿಕ ಮಹಿಳಾ ಆಯೋಗ ಮತ್ತು ಸೆನ್ಸಾರ್ ಮಂಡಳಿಗೆ ದೂರುಗಳು ಸಲ್ಲಿಕೆಯಾಗಿರುವ ನಡುವೆಯೇ, ರಾಷ್ಟ್ರೀಯ ಕ್ರೈಸ್ತರ ಒಕ್ಕೂಟವೂ ಚಿತ್ರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದೆ. ಟೀಸರ್‌ನಲ್ಲಿ ದೇವದೂತ ಸಂತ ಮಿಕಯೇಲ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಒಕ್ಕೂಟ ಆರೋಪಿಸಿದೆ.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಕರ್ನಾಟಕ ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲಾ, ಟೀಸರ್ ಆಧರಿಸಿ ಸಂಪೂರ್ಣ ಸಿನಿಮಾವನ್ನು ನಿರ್ಧರಿಸುವುದು ಸರಿಯಲ್ಲ ಎಂದು ಹೇಳಿದರು.“ಒಂದು ಟೀಸರ್ ನೋಡಿ ಇಡೀ ಸಿನಿಮಾ ಹೀಗೆಯೇ ಇರಲಿದೆ ಎಂದು ಮುಂಚಿತವಾಗಿ ತೀರ್ಮಾನಿಸುವುದು ತಪ್ಪು. ಪ್ರತಿಭಟನೆ ಮಾಡುವ ಮನಸ್ಸಿದ್ದರೆ ಮೊದಲು ಸಿನಿಮಾ ನೋಡಿ ನಂತರ ಅಭಿಪ್ರಾಯ ವ್ಯಕ್ತಪಡಿಸಲಿ. ಕನ್ನಡ ಚಿತ್ರರಂಗಕ್ಕೆ 93 ವರ್ಷಗಳ ಇತಿಹಾಸವಿದೆ. ಈ ಅವಧಿಯಲ್ಲಿ ಯಾವುದೇ ಧರ್ಮವನ್ನು ಅವಹೇಳನ ಮಾಡುವ ರೀತಿಯಲ್ಲಿ ಚಿತ್ರರಂಗ ನಡೆದುಕೊಂಡಿಲ್ಲ. ಸರ್ವಧರ್ಮ ಸಹಿಷ್ಣುತೆಯನ್ನೇ ಪಾಲಿಸಿಕೊಂಡು ಬಂದಿದೆ” ಎಂದು ಅವರು ಹೇಳಿದರು.ಚಿತ್ರ ಇನ್ನೂ ಸೆನ್ಸಾರ್ ಆಗಿಲ್ಲ. ಸೆನ್ಸಾರ್ ಮಂಡಳಿ ಸ...
ಫೆ.14ರಂದು ಲೋಕನಾಯಕ ಶತಾಯುಷಿ ಡಾ||ಭೀಮಣ್ಣ ಖಂಡ್ರೆ ನುಡಿನಮನ ಕಾರ್ಯಕ್ರಮ

ಫೆ.14ರಂದು ಲೋಕನಾಯಕ ಶತಾಯುಷಿ ಡಾ||ಭೀಮಣ್ಣ ಖಂಡ್ರೆ ನುಡಿನಮನ ಕಾರ್ಯಕ್ರಮ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು:ಹೋಟೆಲ್ ಮೌರ್ಯ ಸಭಾಂಗಣದಲ್ಲಿ ಲೋಕನಾಯಕ ಶತಾಯುಷಿ ಡಾ||ಭೀಮಣ್ಣ ಖಂಡ್ರೆ ರವರ ನುಡಿನಮನ ಕಾರ್ಯಕ್ರಮ ಫೆಬ್ರವರಿ 14ರಂದು ಅರಮನೆ ಮೈದಾನ ಗಾಯಿತ್ರಿ ವಿಹಾರ ಆಯೋಜಿಸಲಾಗಿದೆ.ನುಡಿನಮನ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಮತ್ತು ಕೆಪಿಸಿಸಿ ನಾಯಕರಾದ ಎಸ್.ಮನೋಹರ್, ಜಿ.ಕೃಷ್ಣಪ್ಪ, ಸೇರಿದಂತೆ ಅನೇಕರು ಭಾಗವಹಿಸಿದರು.ಸಚಿವ ರಾಮಲಿಂಗಾರೆಡ್ಡಿರವರು ಮಾತನಾಡಿ ಶಾಸಕರಾಗಿ ಮತ್ತು ಸಚಿವರಾಗಿ ಭೀಮಣ್ಣ ಖಂಡ್ರೆರವರು ರಾಜ್ಯಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಶಿವಾಜಿನಗರ ಬಸ್ ನಿಲ್ದಾಣವನ್ನು ಭೀಮಣ್ಣ ಖಂಡ್ರೆರವರು ಗುದ್ದಲಿಪೂಜೆ ನೇರವೆರಿಸಿದ್ದರು. ಭೀಮಣ್ಣ ಖಂಡ್ರೆರವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಕಾರಣದಿಂದ ಬ್ರಿಟಿಷರು ಅವರ ಸಂಪತ್ತು ಆನ್ನು ಜಪ್ತಿ ಮಾಡಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ನೆನಪಿಸಿದರು.ಶತಾಯುಷಿ ಭೀಮಣ್ಣ ಖಂಡ್ರೆರವರಿಗೆ ಕರ್ನಾಟಕ ರತ್ನ ಕೊಡಮಾಡಬೇಕು ಮಾನ್ಯ ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಲಾಗುವುದು ...
‘ನರೇಗಾ ಬಚವೋ’ ಕರಾವಳಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ: ಕೇಂದ್ರದ ವಿರುದ್ಧ ಆಕ್ರೋಶ

‘ನರೇಗಾ ಬಚವೋ’ ಕರಾವಳಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ: ಕೇಂದ್ರದ ವಿರುದ್ಧ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಗೆ ತಿದ್ದುಪಡಿ ಮಾಡಿ ಹೆಸರು ಹಾಗೂ ಅನುಷ್ಠಾನ ವಿಧಾನದಲ್ಲಿ ಬದಲಾವಣೆ ತರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ‘ನರೇಗಾ ಬಚವೋ ಸಂಗ್ರಾಮ್ ಪಾದಯಾತ್ರೆ’ ಗಮನಸೆಳೆದಿದೆ.ಸುಳ್ಯದಿಂದ ಮೂಲ್ಕಿವರೆಗೆ ನಾಲ್ಕು ದಿನಗಳ ಪಾದಯಾತ್ರೆಗೆ ಸೋಮವಾರ ಚಾಲನೆ ಸಿಕ್ಕಿತ್ತು. ನೂರಾರು ಕಾರ್ಯಕರ್ತರು ಮೊದಲ ದಿನ ಭಾಗವಹಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ನಾಯಕರು “ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಬಡವರ ಪಾಲಿನ ವರದಾನವಾದ ಉದ್ಯೋಗ ಖಾತರಿ ಯೋಜನೆಯಲ್ಲಿ ತಿದ್ದುಪಡಿ ಮಾಡಿ ಅದರ ಮೂಲ ಉದ್ದೇಶವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಿದರು. ಯೋಜನೆಯನ್ನು ಪುನರ್‌ಸ್ಥಾಪಿಸಬೇಕೆಂದು ಒತ್ತಾಯಿಸಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅದರ ಭಾಗವಾಗಿ ಜಿಲ್ಲೆಯಲ್ಲಿ ಪಾದಯಾತ್ರೆ ನಡೆಯುತ್ತಿದೆ ಎಂದರು.“ಕೇಂದ್ರ ಸರ್ಕಾರ ಅನುದಾನವನ್ನು ಕಡಿತ ಮಾಡಿ ರಾಜ್ಯ ಸರ್ಕಾರದ ಮೇಲೆ ಹೊರೆ ಹಾಕುವ ಮೂಲಕ ಯೋಜನೆಯನ್ನು ಕ...
ಯಾವುದೇ ಕೆಮಿಕಲ್ ಫ್ಯಾಕ್ಟರಿ ಪೊಲೀಸರ ಕಣ್ತಪ್ಪಿಸಿ ನಡೆಯುವಂತಿಲ್ಲ

ಯಾವುದೇ ಕೆಮಿಕಲ್ ಫ್ಯಾಕ್ಟರಿ ಪೊಲೀಸರ ಕಣ್ತಪ್ಪಿಸಿ ನಡೆಯುವಂತಿಲ್ಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಗೊಂಡಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ನಿರಂತರವಾಗಿ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡು, ನೂರಾರು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದಾರೆ ತಿಳಿಸಿರುವ ಅವರು, ರಾಜ್ಯದಲ್ಲಿ ಯಾವುದೇ ರೀತಿಯ ಕೆಮಿಕಲ್ ಫ್ಯಾಕ್ಟರಿ ಪೊಲೀಸರ ಕಣ್ತಪ್ಪಿಸಿ ನಡೆಯುವಂತಿಲ್ಲ ಎಂದಿದ್ದಾರೆ.ಎಲ್ಲ ರೀತಿಯ ಫ್ಯಾಕ್ಟರಿಗಳಿಗೆ ಆಯಾ ವ್ಯಾಪ್ತಿಯ ಸ್ಥಳೀಯ ಪೊಲೀಸರು ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಫ್ಯಾಕ್ಟರಿಯಲ್ಲಿನ ಕಾರ್ಯಚಟುವಟಿಕೆ ಹಾಗೂ ಅಲ್ಲಿ ಬಳಸಲಾಗುವ ಕೆಮಿಕಲ್‌ಗಳು, ಯಂತ್ರಗಳ ಕುರಿತು ಹಿರಿಯ ಅಧಿಕಾರಿಗಳಿಗೆ ವರದಿ ನೀಡಬೇಕು ಎಂದು ಗೃಹ ಸಚಿವರು ತಿಳಿಸಿದ್ದಾರೆ. ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಗೊಂಡಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ನಿರಂತರವಾಗಿ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡು, ನೂರಾರು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದಾರೆ.. ರಾಜ್ಯದಲ್ಲಿ ಯಾವುದೇ ರೀತಿಯ...
ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ “ಡೇ ಕೇರ್‌ ಕಿಮೋಥೆರಫಿ” ಸೆಂಟರ್‌; ಸಚಿವ ದಿನೇಶ್ ಗುಂಡೂರಾವ್

ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ “ಡೇ ಕೇರ್‌ ಕಿಮೋಥೆರಫಿ” ಸೆಂಟರ್‌; ಸಚಿವ ದಿನೇಶ್ ಗುಂಡೂರಾವ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಕ್ಯಾನ್ಸರ್ ಚಿಕಿತ್ಸೆಯನ್ನು ಜನಸಾಮಾನ್ಯರ ಸನಿಹಕ್ಕೆ ಕೊಂಡೊಯ್ಯುವ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಫಲವಾಗಿ, ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಕೆ.ಎಂ.ಸಿ ಮಂಗಳೂರು ಸಹಯೋಗದೊಂದಿಗೆ ಆರಂಭಿಸಲಾದ 'ಹಬ್ ಅಂಡ್ ಸ್ಪೋಕ್' ಮಾದರಿಯ ಡೇ-ಕೇರ್ ಕೀಮೋಥೆರಪಿಯು ಇಂದು 100 ಯಶಸ್ವಿ ಚಿಕಿತ್ಸೆಗಳನ್ನು ಪೂರೈಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.​ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿರುವವರು ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಹಣ ಕೊಟ್ಟು ಚಿಕಿತ್ಸೆ ಪಡೆಯುವುದರಿಂದ ಆರ್ಥಿಕ ಮುಗ್ಗಟ್ಟಿಗೆ ಸಿಲುಕಬಾರದೆಂದು ಸರ್ಕಾರಿ ಆಸ್ಪತ್ರೆಯಲ್ಲೇ ಉಚಿತವಾಗಿ ಗುಣಮಟ್ಟದ ಕೀಮೋಥೆರಪಿ ಸೇವೆ ಒದಗಿಸುತ್ತಿರುವುದು ನಮ್ಮ ಆರೋಗ್ಯ ವ್ಯವಸ್ಥೆಯ ದೊಡ್ಡ ಗೆಲುವು. ಈ ಯಶಸ್ಸಿಗೆ ಕಾರಣರಾದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗೆಯನ್ನು ಸಚಿವರು ಅಭಿನಂದಿಸಿದ್ದಾರೆ.​ಈಗಾಗಲೇ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ "ಡೇ ಕೇರ್‌ ಕಿಮೋಥೆರಫಿ" ಸೆಂಟರ್‌ಗಳನ್ನು ಸ್ಥಾಪಿಸಿ ಉಚಿತ ಸೇವೆ ಒದಗಿಸುತ್ತಿದ್ದೇವೆ. ಇಲ್ಲಿ ನಾವು ಕೇವಲ ಚಿಕಿತ...