Wednesday, August 12

ವಿದೇಶ

ಬೆಂಗಳೂರು ಬಳಿ ಅಪಘಾತ; ಧಗಧಗಿಸಿ  ಹೊತ್ತಿ ಉರಿದ ಬಸ್

ಬೆಂಗಳೂರು ಬಳಿ ಅಪಘಾತ; ಧಗಧಗಿಸಿ ಹೊತ್ತಿ ಉರಿದ ಬಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಸಮೀಪದ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿ ಶುಕ್ರವಾರ ಬೆಳಗಿನ ಜಾವ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬಸ್‌ನಲ್ಲಿ ಇದ್ದ ಸುಮಾರು 40 ಪ್ರಯಾಣಿಕರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಸಂಭವಿಸಿದ ಈ ಘಟನೆಗೆ, ರಸ್ತೆ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ಚಾಲಕ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವುದು ಕಾರಣ ಎನ್ನಲಾಗಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ ಬಸ್ ಅಪಘಾತದ ಬಳಿಕ ಕ್ಷಣಾರ್ಧದಲ್ಲೇ ಬೆಂಕಿಗೆ ಆಹುತಿಯಾಯಿತು.ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಚಾಲಕ ಹಾಗೂ ಪ್ರಯಾಣಿಕರು ತಕ್ಷಣ ಬಸ್‌ನಿಂದ ಹೊರಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಪರಿಣಾಮ ಲಗೇಜ್ ಬಾಕ್ಸ್‌ನಲ್ಲಿ ಇಟ್ಟಿದ್ದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಬೆಲೆಬಾಳುವ ವಸ್ತುಗಳನ್ನು ಕಳೆದುಕೊಂಡ ಪ್ರಯಾಣಿಕರು ಅಸಹಾಯ ಸ್ಥಿತಿಗೆ ತಲು...
ಬೆಂಗಳೂರು ಸಿಂಹಿಣಿಯರಿಗೆ ಒಲಿದ ಡಬ್ಲ್ಯುಪಿಎಲ್ ಚಾಂಪಿಯನ್ ಪಟ್ಟ

ಬೆಂಗಳೂರು ಸಿಂಹಿಣಿಯರಿಗೆ ಒಲಿದ ಡಬ್ಲ್ಯುಪಿಎಲ್ ಚಾಂಪಿಯನ್ ಪಟ್ಟ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ವಡೋದರಾ: ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ 2026ರ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕೊನೆಯ ಓವರ್‌ನಲ್ಲಿ ರೋಚಕ ಜಯ ಸಾಧಿಸುವ ಮೂಲಕ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ನಾಲ್ಕನೇ ಬಾರಿ ಫೈನಲ್‌ನಲ್ಲಿ ಸೋಲು ಕಂಡು ರನ್ನರ್‌ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತು.ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 203 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡ ಕೊನೆಯ ಓವರ್‌ನಲ್ಲಿ ಗೆಲುವು ಸಾಧಿಸಿ, ಡಬ್ಲ್ಯುಪಿಎಲ್ ಫೈನಲ್ ಇತಿಹಾಸದಲ್ಲೇ ಅತಿದೊಡ್ಡ ಮೊತ್ತವನ್ನು ಬೆನ್ನಟ್ಟಿದ ತಂಡ ಎಂಬ ದಾಖಲೆ ಬರೆದಿತು.ಡೆಲ್ಲಿ ಪರ ಲಿಜಿಲ್ಲೆ ಲೀ ಮತ್ತು ಶೆಫಾಲಿ ವರ್ಮಾ ಮೊದಲ ವಿಕೆಟ್‌ಗೆ 49 ರನ್‌ಗಳ ಜೊತೆಯಾಟ ನೀಡಿದರು. ಶೆಫಾಲಿ ಔಟಾದ ಬಳಿಕ ನಾಯಕಿ ಜೆಮಿಮಾ ರಾಡ್ರಿಗಸ್ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಲಿಜಿಲ್ಲೆ ಲೀ 37 ರನ್‌ಗಳಿಗೆ ವಿಕೆಟ್ ಒಪ್ಪಿಸಿದರೂ, ನಾಲ್ಕನೇ ಕ್ರಮಾಂಕದಲ್ಲಿ ಬಂದ ಲಾರಾ ವುಲ್ಫಾರ್...
ಭೀಕರ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸಾವು

ಭೀಕರ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸಾವು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಗದಗ: ಜಿಲ್ಲೆಯ ಜಿಗಲೂರು ಕ್ರಾಸ್ ಬಳಿ ಗುರುವಾರ ಪ್ರಯಾಣಿಕ ವಾಹನ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಮೃತರನ್ನು ಗಜೇಂದ್ರಗಡದ ಶಿವಾಜಿಪೇಟೆ ನಿವಾಸಿಗಳಾದ ಅನ್ನಪೂರ್ಣ (56), ಸಂಗೀತಾ ಹೊಸಮಣಿ (48) ಮತ್ತು ಮರಿಯಮ್ಮ ಹುನಗುಂದ (55) ಎಂದು ಗುರುತಿಸಲಾಗಿದೆ. ಇವರು ರೋಣ ತಾಲ್ಲೂಕಿಗೆ ನೆಲಗಡಲೆ ಕೊಯ್ಲು ಕೆಲಸಕ್ಕಾಗಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಗಜೇಂದ್ರಗಡದ ಶಿವಾಜಿ ನಗರ ಪ್ರದೇಶದ ದಿನಗೂಲಿ ಕಾರ್ಮಿಕರು ಪ್ರಯಾಣಿಕ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ವಾಹನ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಐಎಂಎಸ್) ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಆರು ಮಂದಿಗೆ ಕೈ–ಕಾಲುಗಳಲ್ಲಿ ಮುರಿತಗಳಾಗಿವೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಘಟನಾ ಸ್ಥಳಕ್ಕೆ ರೋ...
‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಆರೋಪವನ್ನು ಮುಂದಿಟ್ಟು ಬಿಜೆಪಿ ಶಾಸಕರು ಹೋರಾಟವನ್ನು ಮುಂದುವರಿಸಿದ್ದಾರೆ.ಮಂಗಳವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿರುವ ಶಾಸಕರು, ಅಬಕಾರಿ ಸಚಿವರ ರಾಜೀನಾಮೆಗೆ ಪಟ್ಟುಹಿಡಿದರು. ವಿಧಾನ ಪರಿಷತ್ ಸದಸ್ಯರೂ ಈ ಹೋರಾಟವನ್ನು ಬೆಂಬಲಿಸಿದ್ದು, ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ್ದಾರೆ.ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸಿ ಗಮನಸೆಳೆದರು. ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ.#CongressFailsKarnataka#CongressLootsKarnataka pic.twitter.com/gIXKHQR4o3— N Ravi Kumar (@nrkbjp) February 4, 2026...
ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ "ಲ್ಯಾಂಡ್ ಲಾರ್ಡ್" ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ ಎಂದಿರುವ ಸಿದ್ದರಾಮಯ್ಯ, ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ ಎಂದಿದ್ದಾರೆ.ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ಅವರು ವಿಸ್ವಾಸ ವ್ಯಕ್ತಪಡಿಸಿದ್ದಾರೆ. ....
ಅಬಕಾರಿ ಇಲಾಖೆ ಹಗರಣ: ಸಚಿವ ತಿಮ್ಮಾಪುರ ರಾಜೀನಾಮೆಗೆ ಅಶೋಕ್ ಒತ್ತಾಯ 

ಅಬಕಾರಿ ಇಲಾಖೆ ಹಗರಣ: ಸಚಿವ ತಿಮ್ಮಾಪುರ ರಾಜೀನಾಮೆಗೆ ಅಶೋಕ್ ಒತ್ತಾಯ 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್‌ ಮಂಜೂರಾತಿಗೆ ಲಂಚ, ವರ್ಗಾವಣೆ ಮಾಡಿಸಲು ಲಂಚ ಪಡೆಯಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಆಡಿಯೋಗಳು ಬಿಡುಗಡೆಯಾಗಿ ಲೋಕಾಯುಕ್ತದಲ್ಲಿ ದೂರುಗಳು ದಾಖಲಾಗಿವೆ. ಆದ್ದರಿಂದ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಅಬಕಾರಿ ಇಲಾಖೆಯು ಭ್ರಷ್ಟಾಚಾರದ ಅಪರಾಧಿ ನಂ.1 ಇಲಾಖೆಯಾಗಿದೆ. ಲೈಸೆನ್ಸ್‌ಗೆ ಲಂಚ, ವರ್ಗಾವಣೆಗೆ ಹಣ ಫಿಕ್ಸ್‌ ಹೀಗೆ ಮೊದಲಾದ ರೀತಿಯಲ್ಲಿ ಅಕ್ರಮ ನಡೆಯುತ್ತಿದೆ. ವಿಬಿ ಜಿ ರಾಮ್‌ ಜಿ ಯೋಜನೆಯನ್ನು ವಿರೋಧಿಸಿರುವ ಕಾಂಗ್ರೆಸ್‌ ನಾಯಕರು ಮಹಾತ್ಮ ಗಾಂಧೀಜಿಯ ಆದರ್ಶಗಳ ಬಗ್ಗೆ ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಪಕ್ಷ ಗಾಂಧೀಜಿಯ ಆದರ್ಶ ಪಾಲಿಸುತ್ತಿಲ್ಲ. ಸರ್ಕಾರಿ ಅಧಿಕಾರಿಗಳ ಕಡೆಯಿಂದ ಮಾಡಿರುವ ವಾಟ್ಸಾಪ್‌ ಸಂದೇಶದಲ್ಲಿ, ಹುಬ್ಬಳ್ಳಿಯಲ್ಲಿ ವಸತಿ ಇಲಾಖೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಹಾಗೂ ಡಿಸಿಎಂ ಭಾಗವಹಿಸುವುದರಿಂದ ಹೆಚ್ಚು ಜನರು ಬರುತ್ತಿದ್ದಾರೆ. ಆದ್ದರಿಂದ ಮದ್ಯದಂಗಡಿಗ...
ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕೈಗೊಳ್ಳುತ್ತಿರುವ ನಿರ್ಣಯವು ನಿಯಮ ಬಾಹಿರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.ವಿಧಾನಸಭಾ ಅಧಿವೇಶನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ನಿಯಮಾವಳಿಗಳನ್ನು ಮೀರಿ ಕೇಂದ್ರ ಸರ್ಕಾರವನ್ನು ತೆಗಳುವ ನಿರ್ಣಯವನ್ನು ಮಂಡಿಸಿದ್ದಾರೆ. ನಿಯಮ ಪ್ರಕಾರ ಎಲ್ಲರಿಗೂ ಏಳು ದಿನ ಮುನ್ನ ನೋಟಿಸ್‌ ನೀಡಬೇಕು. ಮುಖ್ಯಮಂತ್ರಿ ದೌರ್ಜನ್ಯ ಮಾಡಿ, ಕೇಂದ್ರ ಸರ್ಕಾರವನ್ನು ಕೆಟ್ಟ ರೀತಿಯಲ್ಲಿ ಬೈದಿದ್ದಾರೆ. ಇದು ಸದನದ ನಿರ್ಣಯ ಎಂದು ದೂರಿದರು.ಇದನ್ನು ಕಾಂಗ್ರೆಸ್‌ ಸರ್ಕಾರದ ನಿರ್ಣಯ, ರಾಹುಲ್‌ ಗಾಂಧಿಯ ನಿರ್ಣಯ ಎಂದು ಹೇಳಬೇಕು ಎಂದು ಟೀಕಿಸಿದ ಅಶೋಕ್, ಅಧಿವೇಶನದಲ್ಲಿ ನಿಯಮಬಾಹಿರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸುವುದು ಸರಿಯಲ್ಲ ಎಂದರು.ಮಾಜಿ ಸಿಎಂ ಎಸ್‌.ಎಂ.ಕೃಷ್ಣ ರಾಜ್ಯಕ್ಕೆ ವಿಮಾನ ನಿಲ್ದಾಣ, ಮೆಟ್ರೊ ತಂದರು. ಕಾವೇರಿ ನೀರಿನ ಸಮಸ್ಯೆ ಬಗೆಹರಿಸಿದರು. ಇದನ್ನು ಮುತ್ಸದ್ಧಿತನ ಎನ್ನುತ್ತಾರೆ. ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯದ ಅಭಿವೃದ್ಧಿ ಬೇಕಿಲ್ಲ. ಅವರ ಅಭಿವೃದ್ಧಿ ಹಾಗೂ ಪಕ್ಷದ ಅಭಿವೃದ್ಧ...
‘ಸೋಶಿಯಲ್ ಮೀಡಿಯಾ’ ಬಗ್ಗೆ ಜಾಗೃತಿ ಶಿಕ್ಷಣ ಅನಿವಾರ್ಯ ; ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಹಿರಿಯ ವಕೀಲ ಮನೋರಾಜ್ ಶಿಫಾರಸು

‘ಸೋಶಿಯಲ್ ಮೀಡಿಯಾ’ ಬಗ್ಗೆ ಜಾಗೃತಿ ಶಿಕ್ಷಣ ಅನಿವಾರ್ಯ ; ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಹಿರಿಯ ವಕೀಲ ಮನೋರಾಜ್ ಶಿಫಾರಸು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ ಬಗ್ಗೆ ಅಭಿಪ್ರಾಯಾಗಲು ಕೇಳಿಬಂದಿವೆ. ಇನ್ನೊಂದೆಡೆ, ಸಾಮಾಜಿಕ ಮಾಧ್ಯಮ ಕುರಿತ ಜಾಗೃತಿಗೆ ಪೂರಕವಾಗಿ ಶೈಕ್ಷಣಿಕ ಪಠ್ಯಕ್ರಮ ರೂಪಿಸಬೇಕೆಂದು ಆಡಳಿತ ಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ. ಈ ಸಂಬಂಧ ಸರ್ಕಾರಕ್ಕೆ ಕಾಂಗ್ರೆಸ್ ಕಾನೂನು ಘಟಕದಿಂದ ಪ್ರಸ್ತಾವನೆಯೊಂದು ಸಲ್ಲಿಕೆಯಾಗುವ ಮೂಲಕ ಸೋಶಿಯಲ್ ಮೀಡಿಯಾ ಕುರಿತ ಬೆಳವಣಿಗೆಗಳಿಗೆ ನಿರ್ಣಾಯಕ ತಿರುವು ಸಿಕ್ಕಿದೆ.ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್ ಅವರು ಸೋಮವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಸಿ.ಕೆ.ಶಿವಕುಮಾರ್, ಗೃಹಸಚಿವ ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿ, ಕಾನೂನು ರೂಪಿಸುವುದಷ್ಟೇ ಅಲ್ಲ, ವಿದ್ಯಾರ್ಥಿ ಬದುಕಿನಲ್ಲೇ ಸಾಮಾಜಿಕ ಮಾಧ್ಯಮ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡುವ ಅಗತ್ಯದತ್ತ ಗಮನಸೆಳೆದ...
ರಾಜ್ಯದಲ್ಲಿರುವುದು 80% ಸರ್ಕಾರ: ಪ್ರತಿಪಕ್ಷ ನಾಯಕ ಟೀಕೆ

ರಾಜ್ಯದಲ್ಲಿರುವುದು 80% ಸರ್ಕಾರ: ಪ್ರತಿಪಕ್ಷ ನಾಯಕ ಟೀಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿರುವುದು 80% ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಮೂರು ಬಾರಿ ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಬಿಜೆಪಿ ಸರ್ಕಾರವಿದ್ದರೂ 40 ಪರ್ಸೆಂಟ್‌ ಎಂದು ಆರೋಪ ಮಾಡಲಾಗಿತ್ತು. ಮಧ್ಯವರ್ತಿಗಳ ಹಾವಳಿ, ಹಿಂದಿನ ಸರ್ಕಾರಕ್ಕಿಂತ ದುಪ್ಪಟ್ಟು ಕಮಿಶನ್‌, 80 ಪರ್ಸೆಂಟ್‌ ಕಮಿಶನ್ ಹೀಗೆ ಮೊದಲಾದ ಆರೋಪಗಳನ್ನು ಮಾಡಿದ್ದಾರೆ. ಅವರು ಮಾಡಿರುವ ಆರೋಪ ರಾಹುಲ್‌ ಗಾಂಧಿಯ ತನಕ ಹೋಗಿದೆ. ಆಂಧ್ರದವರಿಗೆ ಟೆಂಡರ್‌ ನೀಡಲಾಗಿದೆ, ಹಳೆ ಬಿಲ್‌ಗಳಿಗೆ ಹೆಚ್ಚಿನ ಕಮಿಶನ್‌ ಪಡೆಯಲಾಗುತ್ತಿದೆ, 37,370 ಕೋಟಿ ರೂ. ಬಾಕಿ ಇದೆ ಎಂದಿದ್ದರೂ ಸರ್ಕಾರ ಕ್ರಮ ವಹಿಸಿಲ್ಲ, ಮುಷ್ಕರ ಮಾಡದೇ ಬೇರೆ ದಾರಿಯಿಲ್ಲ ಎಂದು ಗುತ್ತಿಗೆದಾರರ ಸಂಘ ತಿಳಿಸಿದೆ. ನಗರಾಭಿವೃದ್ಧಿ ಇಲಾಖೆ ಸಚಿವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಘ ಪತ್ರ ಬರೆದಿದೆ. ಇಷ್ಟೆಲ್ಲ ಆಪಾದನೆಗಳು ಬಂದರೂ ಗುತ್ತಿಗೆದಾರರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದರೆ, ಸರ್ಕಾರ ತಪ...
‘ದೀರ್ಘ ಸಿನಿ ಪ್ರಯಾಣಕ್ಕೆ ಎಲ್ಲರ ಸಹಕಾರ ಕಾರಣ’; ಕಿಚ್ಚ ಸುದೀಪ್

‘ದೀರ್ಘ ಸಿನಿ ಪ್ರಯಾಣಕ್ಕೆ ಎಲ್ಲರ ಸಹಕಾರ ಕಾರಣ’; ಕಿಚ್ಚ ಸುದೀಪ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ಮೂರು ದಶಕಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್, ಮುಂದಿನ ದಿನಗಳಲ್ಲಿ ಇನ್ನಷ್ಟು ಶ್ರಮಪಟ್ಟು ಕೆಲಸ ಮಾಡುವುದಾಗಿ ಹೇಳಿದ್ದಾರೆ.ಈ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳು, ನಿರ್ದೇಶಕರು, ಬರಹಗಾರರು, ನಿರ್ಮಾಪಕರು ಹಾಗೂ ಕನ್ನಡ ಚಲನಚಿತ್ರೋದ್ಯಮದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ತಮ್ಮ ದೀರ್ಘ ಸಿನಿ ಪ್ರಯಾಣಕ್ಕೆ ಎಲ್ಲರ ಸಹಕಾರ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.“ಮೂರು ದಶಕಗಳ ನಂತರವೂ ಈ ಚಿತ್ರಜಗತ್ತಿನಲ್ಲಿ ನಿಂತಿರುವುದು ಅನಂತ ಕೃತಜ್ಞತೆಯ ವಿಷಯ. ಕನಸುಗಳು, ಅನುಮಾನಗಳು ಮತ್ತು ನಿರೀಕ್ಷೆಗಳೊಂದಿಗೆ ಬಂದ ಒಬ್ಬ ಹುಡುಗನಿಗೆ ಇದು ನಾನು ಊಹಿಸಿದ್ದಕ್ಕಿಂತಲೂ ದೊಡ್ಡ ಅನುಭವವಾಗಿದೆ. ಇದಕ್ಕೆ ಕಾರಣರಾದವರು ಎಲ್ಲರೂ ನೀವು” ಎಂದು ಸುದೀಪ್ ಹೇಳಿದ್ದಾರೆ.ಅಭಿಮಾನಿಗಳನ್ನು ತಮ್ಮ ಶಕ್ತಿ ಮತ್ತು ಪ್ರೇರಣೆಯಾಗಿ ಉಲ್ಲೇಖಿಸಿರುವ ಅವರು, ನಿರ್ದೇಶಕರು ಮತ್ತು ಬರಹಗಾರರು ತಮ್ಮ ಮೇಲೆ ನಂಬಿಕೆ ಇಟ್ಟು ಹೊಸ ಸವಾಲುಗಳಿಗೆ ಪ್ರೇರೇಪಿಸಿದುದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ನಿರ್ಮಾಪಕರ ಧೈರ್ಯ ಮತ...