Thursday, August 6

ವಿದೇಶ

15 ಭಾರತೀಯರನ್ನು ಬಲಿಪಡೆದ ಫು ಕ್ವೋಕ್ ಬೋಟ್ ದುರಂತ ಬಗ್ಗೆ ಸಮಗ್ರ ತನಿಖೆಗೆ ವಿಯೆಟ್ನಾಂ ಪ್ರಧಾನಿ ಆದೇಶ

15 ಭಾರತೀಯರನ್ನು ಬಲಿಪಡೆದ ಫು ಕ್ವೋಕ್ ಬೋಟ್ ದುರಂತ ಬಗ್ಗೆ ಸಮಗ್ರ ತನಿಖೆಗೆ ವಿಯೆಟ್ನಾಂ ಪ್ರಧಾನಿ ಆದೇಶ

ಪ್ರಮುಖ ಸುದ್ದಿ, ವಿದೇಶ
ಹನೋಯ್: ವಿಯೆಟ್ನಾಂನ ಫು ಕ್ವೋಕ್ ದ್ವೀಪದ ಸಮೀಪ ಸ್ಪೀಡ್ ಬೋಟ್ ಮಗುಚಿ 15 ಭಾರತೀಯ ಪ್ರವಾಸಿಗರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಲೆ ಮಿನ್ಹ್ ಹಂಗ್ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಸ್ಪೀಡ್ ಬೋಟ್‌ನಲ್ಲಿ 32 ಭಾರತೀಯ ಪ್ರವಾಸಿಗರು, ಮೂವರು ಸಿಬ್ಬಂದಿ ಹಾಗೂ ಒಬ್ಬ ವಿಯೆಟ್ನಾಂ ಪ್ರವಾಸಿ ಮಾರ್ಗದರ್ಶಿ ಸೇರಿ 36 ಮಂದಿ ಪ್ರಯಾಣಿಸುತ್ತಿದ್ದರು. ಮೇ ರುಟ್ ನ್ಗೋಯ್ ದ್ವೀಪದಿಂದ ಆನ್ ಥೋಯ್ ಬಂದರಿಗೆ ತೆರಳುತ್ತಿದ್ದ ವೇಳೆ ಬಲವಾದ ಗಾಳಿಯಿಂದ ತೀರದಿಂದ ಸುಮಾರು 400 ಮೀಟರ್ ದೂರದಲ್ಲಿ ಬೋಟ್ ಪಲ್ಟಿಯಾಯಿತು. ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಎಲ್ಲ 36 ಮಂದಿಯನ್ನು ರಕ್ಷಿಸಿದರು. ಅವರಲ್ಲಿ 21 ಮಂದಿ ಬದುಕುಳಿದರೆ, 15 ಭಾರತೀಯರು ಮೃತಪಟ್ಟಿದ್ದಾರೆ.ಪ್ರಧಾನಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ತುರ್ತು ವೈದ್ಯಕೀಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಪಘಾತದ ನೇರ ಹಾಗೂ ಪರೋಕ್ಷ ಕಾರಣಗಳನ್ನು ಪತ್ತೆಹಚ್ಚಿ, ಇಂತಹ ಘಟನೆಗಳು ಮರುಕ...
ಹಾರ್ಮುಜ್ ಜಲಸಂಧಿ  ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ

ಹಾರ್ಮುಜ್ ಜಲಸಂಧಿ ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ

ಪ್ರಮುಖ ಸುದ್ದಿ, ವಿದೇಶ
ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ನೌಕಾಯಾನ ಹಾಗೂ ಸಂಚಾರ ಸ್ವಾತಂತ್ರ್ಯ ಖಚಿತಪಡಿಸುವ ಕುರಿತು ತಾಂತ್ರಿಕ ಮತ್ತು ರಾಜಕೀಯ ಮಟ್ಟದ ಮಾತುಕತೆಗಳನ್ನು ಮುಂದುವರಿಸಲು ಇರಾನ್ ಮತ್ತು ಓಮನ್ ಒಪ್ಪಿಕೊಂಡಿವೆ ಎಂದು ಓಮನ್ ಸುದ್ದಿ ಸಂಸ್ಥೆ ತಿಳಿಸಿದೆ. ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಸ್ಕತ್‌ನಲ್ಲಿ ನಡೆದ ಸಭೆಯಲ್ಲಿ, ಅಂತರರಾಷ್ಟ್ರೀಯ ಕಾನೂನಿಗೆ ಅನುಗುಣವಾದ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಚರ್ಚೆ ಮುಂದುವರಿಸಲು ಎರಡೂ ದೇಶಗಳು ನಿರ್ಧರಿಸಿವೆ. ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳ ಆರೋಪದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚಿರುವ ಸಮಯದಲ್ಲೇ ಈ ಮಾತುಕತೆ ಮಹತ್ವ ಪಡೆದುಕೊಂಡಿದೆ. ಫೆಬ್ರವರಿಯಲ್ಲಿ ಅಮೆರಿಕ-ಇಸ್ರೇಲ್ ದಾಳಿಗಳ ಬಳಿಕ ಇರಾನ್ ಜಲಸಂಧಿಯ ಮೇಲಿನ ನಿಯಂತ್ರಣವನ್ನು ಬಿಗಿಗೊಳಿಸಿತ್ತು.ಇದೇ ವೇಳೆ, ಮಿಲಿಟರಿ ದಾಳಿಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಕದನ ವಿರಾಮ ಮುಕ್ತಾಯಗೊಂಡಿದ್ದರೂ, ಇರಾನ್ ಜೊತೆ ರಾಜತಾಂತ್ರಿಕ ಮಾತುಕತೆ ಮುಂದುವರಿಸಲು ಅಮೆರಿಕ ಒಪ್ಪಿಕೊಂಡಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ...
ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

ಪ್ರಮುಖ ಸುದ್ದಿ, ವಿದೇಶ
ಕ್ಯಾರಕಾಸ್: ಜೂನ್ 24ರಂದು ವೆನೆಜುವೆಲಾದಲ್ಲಿ ಸಂಭವಿಸಿದ ಭಕರ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 4,333ಕ್ಕೆ ಏರಿಕೆಯಾಗಿದೆ . 16,740 ಮಂದಿ ಗಾಯಗೊಂಡಿದ್ದು, 6,462 ಮಂದಿಯನ್ನು ರಕ್ಷಿಸಲಾಗಿದೆ. ಸಂತ್ರಸ್ತರಿಗಾಗಿ 94 ತಾತ್ಕಾಲಿಕ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 18,000ಕ್ಕೂ ಹೆಚ್ಚು ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.ದುರಂತದ ಪರಿಹಾರ ಕಾರ್ಯದಲ್ಲಿ ಸುಮಾರು 30,000 ಸ್ವಯಂಸೇವಕರು ಭಾಗಿಯಾಗಿದ್ದು, ಮನೆ ನಿರ್ಮಾಣ ಮತ್ತು ದುರಸ್ತಿ ಕಾರ್ಯದಲ್ಲೂ ಅವರನ್ನು ಬಳಸಿಕೊಳ್ಳಲು ಸರ್ಕಾರ ಯೋಜಿಸಿದೆ. ಭೂಕಂಪದಿಂದ ಮನೆ ಕಳೆದುಕೊಂಡ ಕುಟುಂಬಗಳಿಗಾಗಿ ಏಕೀಕೃತ ವಸತಿ ನೋಂದಣಿ ಆರಂಭಿಸಲಾಗಿದ್ದು, ಇದನ್ನು ಜನಗಣತಿ ಹಾಗೂ ಆರ್ಥಿಕ ನೆರವಿನ ಡೇಟಾಬೇಸ್ ಆಗಿ ಬಳಸಲಾಗುತ್ತದೆ ಎಂದು ಅಧ್ಯಕ್ಷ ಜಾರ್ಜ್ ರೊಡ್ರಿಗಸ್ ತಿಳಿಸಿದ್ದಾರೆ....
ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಅಮೆರಿಕದಿಂದ ವಾಯುದಾಳಿ

ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಅಮೆರಿಕದಿಂದ ವಾಯುದಾಳಿ

ಪ್ರಮುಖ ಸುದ್ದಿ, ವಿದೇಶ
ಟೆಹ್ರಾನ್: ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೊರ್ಮುಜ್ ಜಲಸಂಧಿಯನ್ನು ಇರಾನ್ ತಾತ್ಕಾಲಿಕವಾಗಿ ಮುಚ್ಚುವುದಾಗಿ ಘೋಷಿಸಿದ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಬೆಳವಣಿಗೆಗೆ ಪ್ರತಿಯಾಗಿ ಅಮೆರಿಕ ಇರಾನ್‌ನ ಪ್ರಮುಖ ಸೇನಾ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸೈಪ್ರಸ್ ಧ್ವಜದಡಿ ಸಂಚರಿಸುತ್ತಿದ್ದ ‘ಎಂವಿ ಜಿಎಫ್‌ಎಸ್ ಗ್ಯಾಲಕ್ಸಿ’ ಸರಕು ಹಡಗನ್ನು ತಡೆದು ದಾಳಿ ನಡೆಸಿದೆ ಎಂದು ಅಮೆರಿಕ ಆರೋಪಿಸಿದೆ. ಘಟನೆಯಲ್ಲಿ ಹಡಗಿನ ಎಂಜಿನ್ ವಿಭಾಗಕ್ಕೆ ಹಾನಿಯಾಗಿದ್ದು, ಒಬ್ಬ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅಮೆರಿಕ ಮಧ್ಯಪ್ರವೇಶ ಮುಂದುವರಿದಿರುವವರೆಗೆ ಹೊರ್ಮುಜ್ ಜಲಸಂಧಿಯಲ್ಲಿ ಯಾವುದೇ ಹಡಗುಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಇರಾನ್ ಘೋಷಿಸಿದೆ. ಈ ಕ್ರಮದಿಂದ ಜಾಗತಿಕ ತೈಲ ಪೂರೈಕೆ ಮತ್ತು ಸಮುದ್ರ ವ್ಯಾಪಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಈ ವಾರ ಇರಾನ್ ವಿರುದ್ಧ ಮೂರನೇ ಹಂತದ ಕಾರ್ಯಾಚರಣೆ ನಡೆಸಿರುವುದಾಗಿ ತಿಳಿಸಿದ್ದು, ವಾಣ...
ಕದನ ವಿರಾಮ ಅಂತ್ಯ, ಆದರೂ ಇರಾನ್ ಜೊತೆ ಮಾತುಕತೆ ಮುಂದುವರಿಕೆ: ಟ್ರಂಪ್

ಕದನ ವಿರಾಮ ಅಂತ್ಯ, ಆದರೂ ಇರಾನ್ ಜೊತೆ ಮಾತುಕತೆ ಮುಂದುವರಿಕೆ: ಟ್ರಂಪ್

ಪ್ರಮುಖ ಸುದ್ದಿ, ವಿದೇಶ
ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮ ಕೊನೆಗೊಂಡಿದ್ದರೂ, ಇರಾನ್ ಜೊತೆ ರಾಜತಾಂತ್ರಿಕ ಮಾತುಕತೆಗಳನ್ನು ಮುಂದುವರಿಸಲು ಅಮೆರಿಕ ಒಪ್ಪಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿದ ಟ್ರಂಪ್, ಇರಾನ್ ಮಾತುಕತೆ ಮುಂದುವರಿಸಲು ಮನವಿ ಮಾಡಿದ್ದು, ಅದಕ್ಕೆ ಅಮೆರಿಕ ಸಮ್ಮತಿಸಿದೆ. ಆದರೆ ಕದನ ವಿರಾಮ ಅಂತ್ಯಗೊಂಡಿರುವುದನ್ನು ಸ್ಪಷ್ಟಪಡಿಸಲಾಗಿದೆ ಎಂದು ಹೇಳಿದ್ದಾರೆ.ಕಳೆದ ತಿಂಗಳು ಘೋಷಿಸಿದ್ದ ಕದನ ವಿರಾಮದ ಬಳಿಕ ಇತ್ತೀಚಿನ ದಿನಗಳಲ್ಲಿ ಎರಡೂ ರಾಷ್ಟ್ರಗಳ ನಡುವೆ ಮತ್ತೆ ಭಾರೀ ಮಿಲಿಟರಿ ದಾಳಿಗಳು ನಡೆದಿವೆ. ವರದಿಗಳ ಪ್ರಕಾರ, ಅಮೆರಿಕ ಇರಾನ್‌ನ ವಾಯು ರಕ್ಷಣಾ ವ್ಯವಸ್ಥೆಗಳು, ಡ್ರೋನ್ ಹಾಗೂ ಕ್ಷಿಪಣಿ ಸಂಗ್ರಹಣಾ ಕೇಂದ್ರಗಳು ಸೇರಿದಂತೆ 170ಕ್ಕೂ ಹೆಚ್ಚು ಮಿಲಿಟರಿ ಗುರಿಗಳ ಮೇಲೆ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಕತಾರ್, ಬಹ್ರೇನ್ ಮತ್ತು ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ಬೆಳವಣಿಗೆಗಳು ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ...
ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

ಪ್ರಮುಖ ಸುದ್ದಿ, ವಿದೇಶ
ಇಸ್ಲಾಮಾಬಾದ್: ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಿಂದ ಕರಾಚಿಗೆ ಹೊರಟಿದ್ದ ಪಾಕಿಸ್ತಾನದ ಕೆ2 ಏರ್‌ವೇಸ್ ಸರಕು ವಿಮಾನವು ಮಂಗಳವಾರ ರಾತ್ರಿ ಅರಬ್ಬಿ ಸಮುದ್ರದ ಮೇಲೆ ರಾಡಾರ್ ಸಂಪರ್ಕ ಕಳೆದುಕೊಂಡಿದ್ದು, ವಿಮಾನದಲ್ಲಿದ್ದ ಐವರು ಸಿಬ್ಬಂದಿಗಾಗಿ ವ್ಯಾಪಕ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರದ ಮಾಹಿತಿ ಪ್ರಕಾರ, ಕಾರ್ಗೋ ವಿಮಾನದಲ್ಲಿ ಮಾರ್ಗಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ನ್ಯಾವಿಗೇಷನ್ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಿರುವುದಾಗಿ ಪೈಲಟ್ ಕರಾಚಿ ವಾಯು ಸಂಚಾರ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ನೀಡಿದ್ದರು. ಬಳಿಕ ಅಧಿಕಾರಿಗಳು ಅಗತ್ಯ ಮಾರ್ಗದರ್ಶನ ನೀಡಿದ್ದರು.ರಾತ್ರಿ 9.18ಕ್ಕೆ ವಿಮಾನದೊಂದಿಗೆ ಕೊನೆಯ ಸಂಪರ್ಕ ದಾಖಲಾಗಿತ್ತು. ಆದರೆ, ಕೆಲವೇ ನಿಮಿಷಗಳಲ್ಲಿ ವಿಮಾನ ದಿಕ್ಕು ಬದಲಾಯಿಸಿ ವೇಗವಾಗಿ ಕೆಳಮುಖವಾಗಿ ಇಳಿಯುತ್ತಿರುವುದು ರಾಡಾರ್‌ನಲ್ಲಿ ಗೋಚರಿಸಿತು. ರಾತ್ರಿ 9.22ರ ಸುಮಾರಿಗೆ, ಕರಾಚಿಯಿಂದ ಸುಮಾರು 155 ನಾಟಿಕಲ್ ಮೈಲಿ ಪಶ್ಚಿಮಕ್ಕೆ ವಿಮಾನದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿತು. ವಿಮಾನವು ಅರಬ್ಬಿ ಸಮುದ್...
ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

ಪ್ರಮುಖ ಸುದ್ದಿ, ವಿದೇಶ
ಡಮಾಸ್ಕಸ್: ಸಿರಿಯಾ ಪ್ರವಾಸದಲ್ಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಮಂಗಳವಾರ ಬಾಂಬ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಫ್ರಾನ್ಸ್ ಅಧ್ಯಕ್ಷೀಯ ಭವನ ಸ್ಪಷ್ಟಪಡಿಸಿದೆ. ಹೋಟೆಲ್ ಸಮೀಪ ಭಾರೀ ಸ್ಫೋಟದ ಶಬ್ದ ಕೇಳಿಬಂದ ತಕ್ಷಣ ಸಿರಿಯಾ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ, ಹೋಟೆಲ್ ಸುತ್ತಮುತ್ತಲಿನ ಪ್ರದೇಶವನ್ನು ಭದ್ರತಾ ವಲಯವನ್ನಾಗಿ ಘೋಷಿಸಿ ರಸ್ತೆಗಳನ್ನು ಬಂದ್ ಮಾಡಿವೆ.ಫ್ರಾನ್ಸ್ ಅಧ್ಯಕ್ಷೀಯ ಭವನ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, "ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಸಂಪೂರ್ಣ ಸುರಕ್ಷಿತರಾಗಿದ್ದು, ಅವರ ಭದ್ರತೆಗೆ ಯಾವುದೇ ಧಕ್ಕೆಯಾಗಿಲ್ಲ" ಎಂದು ತಿಳಿಸಲಾಗಿದೆ. ಸ್ಫೋಟಕ್ಕೆ ಕಾರಣವೇನು ಹಾಗೂ ಇದರ ಹಿಂದೆ ಯಾರ ಕೈವಾಡವಿದೆ ಎಂಬ ಕುರಿತು ತನಿಖೆ ಮುಂದುವರಿದಿದೆ. ಘಟನೆಯ ನಂತರ ಡಮಾಸ್ಕಸ್‌ನಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ....
ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

ಪ್ರಮುಖ ಸುದ್ದಿ, ವಿದೇಶ
ಲಂಡನ್: ಹಾರ್ಮುಜ್ ಜಲಸಂಧಿ ಸಮೀಪದ ಒಮಾನ್ ಕರಾವಳಿಯಲ್ಲಿ ಸಂಚರಿಸುತ್ತಿದ್ದ ತೈಲ ಟ್ಯಾಂಕರ್‌ಗೆ ಸೋಮವಾರ ಗುರುತು ಪತ್ತೆಯಾಗದ ಪ್ರೊಜೆಕ್ಟೈಲ್ ಅಪ್ಪಳಿಸಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಬ್ರಿಟನ್‌ನ ಸಮುದ್ರ ಭದ್ರತಾ ಸಂಸ್ಥೆ ಯುನೈಟೆಡ್ ಕಿಂಗ್‌ಡಮ್ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ (UKMTO) ತಿಳಿಸಿದೆ. ಒಮಾನ್‌ನ ಲಿಮಾಹ್ ಪ್ರದೇಶದಿಂದ ಸುಮಾರು ಎಂಟು ನಾಟಿಕಲ್ ಮೈಲುಗಳ ಪೂರ್ವದಲ್ಲಿ ಈ ಘಟನೆ ನಡೆದಿದೆ. ದಕ್ಷಿಣದತ್ತ ಸಾಗುತ್ತಿದ್ದ ಟ್ಯಾಂಕರ್‌ನ ಎಡಭಾಗಕ್ಕೆ ಪ್ರೊಜೆಕ್ಟೈಲ್ ಅಪ್ಪಳಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಅಮೆರಿಕ–ಇರಾನ್ ನಡುವಿನ ಕದನ ವಿರಾಮ ಹಾಗೂ ಶಾಂತಿ ಮಾತುಕತೆಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.ಮಧ್ಯಪ್ರಾಚ್ಯ ಸಂಘರ್ಷದ ವೇಳೆ ಹಾರ್ಮುಜ್ ಜಲಸಂಧಿಯಲ್ಲಿ ನಿರ್ಬಂಧ ಹಾಗೂ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳಿಂದ ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಾಗಿತ್ತು. ಬಳಿಕ ಅಮೆರಿಕ–ಇರಾನ್ ನಡುವಿನ ತಿಳುವಳಿಕೆ ಒಪ್ಪಂದದ ನಂತರ ಹಡಗುಗಳ ಸಂಚಾರ ಪುನರಾ...
ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

ಪ್ರಮುಖ ಸುದ್ದಿ, ವಿದೇಶ
ಜಕಾರ್ತಾ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂಡೋನೇಷ್ಯಾ ಸರ್ಕಾರ ತನ್ನ ದೇಶದ ಅತ್ಯುನ್ನತ ನಾಗರಿಕ ಗೌರವವಾದ 'ಬಿಂಟಾಂಗ್ ಆದಿಪೂರ್ಣ' ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದೆ. ಜಕಾರ್ತಾದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಪ್ರಧಾನಿ ಮೋದಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಇಂಡೋನೇಷ್ಯಾ ಗಣರಾಜ್ಯದ ಏಕತೆ, ನಿರಂತರತೆ ಹಾಗೂ ಸಮೃದ್ಧಿಗೆ ಅಸಾಧಾರಣ ಕೊಡುಗೆ ನೀಡಿದ ಜಾಗತಿಕ ನಾಯಕರಿಗೆ ಮಾತ್ರ ಈ ಗೌರವ ನೀಡಲಾಗುತ್ತದೆ. ಇಂಡೋನೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿರುವ ಪ್ರಧಾನಿ ಮೋದಿಗೆ ಈ ಪ್ರಶಸ್ತಿ ಲಭಿಸಿದೆ.ಪ್ರಶಸ್ತಿ ಸ್ವೀಕರಿಸಿದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಮತ್ತು ಇಂಡೋನೇಷ್ಯಾ ಇತಿಹಾಸ, ಸಂಸ್ಕೃತಿ ಹಾಗೂ ಪರಸ್ಪರ ವಿಶ್ವಾಸದ ಬಾಂಧವ್ಯವನ್ನು ಹೊಂದಿದ್ದು, ಭವಿಷ್ಯದಲ್ಲಿ ಸಮೃದ್ಧಿಯ ಪಯಣವನ್ನೂ ಒಟ್ಟಾಗಿ ಸಾಗಲಿವೆ ಎಂದು ಹೇಳಿದರು. ಜಾಗತಿಕ ಪ್ರಕ್ಷುಬ್ಧತೆಯ ಈ ಸಂದರ್ಭದಲ್ಲಿ ಸಂವಾದ ಮತ್ತು ರಾಜತಾಂತ್ರಿಕತೆಯೇ ಶಾಂತಿಯ ಮಾರ್ಗವಾಗಿದೆ. ಹಿಂದೂ ಮಹಾಸಾಗರ ಹಾಗೂ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ...
ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

ಪ್ರಮುಖ ಸುದ್ದಿ, ವಿದೇಶ
ದೋಹಾ (ಕತಾರ್): ಕತಾರ್‌ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಭಾರತದ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ವಿಸ್ತಾರವಾಗಿ ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಉಪ ರಾಯಭಾರಿ (Deputy Chief of Mission) ಸಂದೀಪ್ ಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು. ಸಂಘದ ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ, 2026–28ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಪರಿಚಯಿಸಲಾಯಿತು. ಜೊತೆಗೆ, ಮುಂದಿನ ಎರಡು ವರ್ಷಗಳಲ್ಲಿ ಹಮ್ಮಿಕೊಳ್ಳಲಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಮುದಾಯ ಸೇವಾ ಕಾರ್ಯಕ್ರಮಗಳ ರೂಪುರೇಷೆಯನ್ನು ಉಪ ರಾಯಭಾರಿಗಳ ಮುಂದೆ ಮಂಡಿಸಲಾಯಿತು.ಸಭೆಯಲ್ಲಿ ಮಾತನಾಡಿದ ಸಂದೀಪ್ ಕುಮಾರ್, ಕತಾರ್‌ನಲ್ಲಿರುವ ಭಾರತೀಯ ಸಮುದಾಯದ ಚಟುವಟಿಕೆಗಳನ್ನು ಶ್ಲಾಘಿಸಿ, ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರನ್ನು ಒಳಗೊಂಡ ಒಗ್ಗಟ್ಟಿನ ಕಾರ್ಯಪದ್ಧತಿ ಅಗತ್ಯವೆಂದು ಹೇಳಿದರು. ದೊಡ್ಡ ಪ್ರಮಾಣದ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗ...