
2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನ
ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ.ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023ರ ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ, 2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ.ಈ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ದಶಕಗಳ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯ ಕಂದಾಯ ಗ್ರಾಮ ರಚನೆ ಅಭಿಯಾನದ ಮುಖಾಂತರ ...









