Thursday, August 13

ವಿದೇಶ

ಕಲಬುರಗಿ, ಬೀದರ್ ನಿಂದ ಸಹಿತ ಪ್ರಾದೇಶಿಕ ವಿಮಾನ ಸಂಪರ್ಕ ಬಲಪಡಿಸಲು ಉಡಾನ್ ಯೋಜನೆ ಮುಂದುವರಿಸಲು ಆಗ್ರಹ

ಕಲಬುರಗಿ, ಬೀದರ್ ನಿಂದ ಸಹಿತ ಪ್ರಾದೇಶಿಕ ವಿಮಾನ ಸಂಪರ್ಕ ಬಲಪಡಿಸಲು ಉಡಾನ್ ಯೋಜನೆ ಮುಂದುವರಿಸಲು ಆಗ್ರಹ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಳಗಾವಿ: ಪ್ರಾದೇಶಿಕ ವಿಮಾನ ಸಂಪರ್ಕವನ್ನು ಬಲಪಡಿಸಲು ಉಡಾನ್ ಸೇವೆ 10ವರ್ಷಗಳಿಗೆ ಮುಂದುವರೆಸುವ ಅಗತ್ಯವಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.ಕಲಬುರಗಿ ವಿಮಾನ ನಿಲ್ದಾಣದ ಭೂ ಸ್ವಾಧೀನ ಹಾಗೂ ಇಲ್ಲಿನ ಕಟ್ಟಡಗಳ ವೆಚ್ಚವನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರವೇ ಭರಿಸಿದೆ.ಉಡಾನ್ ಯೋಜನೆ ಈ ಮಾರ್ಗದಲ್ಲಿ ಕೇವಲ 3 ವರ್ಷಗಳ ಕಾಲ ಮಾತ್ರ ಜಾರಿಯಲ್ಲಿದ್ದು, ನಂತರ ಸ್ಥಗಿತಗೊಂಡಿವೆ. ಈ ಮಾರ್ಗದಲ್ಲಿ ಪ್ರಸ್ತುತ ಕಾರ್ಯಾಚರಣೆ ನಡೆಸುತ್ತಿರುವ ಸಂಸ್ಥೆಯ ವಿಮಾನ ಸೇವೆಯನ್ನು ಮುಂದುವರಿಸುವ ಉದ್ದೇಶದಿಂದ, ಉಡಾನ್ ಯೋಜನೆಯಡಿ ಅರ್ಹ ನಿರ್ವಾಹಕರಿಂದ ಹೊಸದಾಗಿ ಬಿಡ್ಗಳನ್ನು ಆಹ್ವಾನಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದವರು ತಿಳಿಸಿದ್ದಾರೆ.ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ನಾಗರಿಕ ವಿಮಾನ ಮಾರ್ಗಗಳಿಗೆ ನೀಡಲಾಗುತ್ತಿರುವ ಹಣಕಾಸು ನೆರವು ಪ್ರಸ್ತುತ ಕೇವಲ 3 ವರ್ಷಗಳಿಗೆ ಮಾತ್ರ ಸೀಮಿತವಾಗಿದೆ. ಈ ಅವಧಿ ಮುಗಿದ ಬಳಿಕ ಹಲವು ಪ್ರದೇಶಗಳಲ್ಲಿ ವಿಮಾನ ಸೇವೆಗಳು ಸ್ಥಗಿತಗೊಳ್ಳುತ್ತಿದೆ. ಪ್ರಯಾಣಿಕರ ಸಂಖ್ಯೆ ಹಾಗೂ ಮಾರ್ಗದ ಸ್ಥಿರತೆ ಸಾಧಿಸಲು ಮೂರು ವರ್ಷಗಳ ಅವಧಿ ...
ಕನ್ನಡ ಮಾತನಾಡುವ ಮಕ್ಕಳ ಬಗ್ಗೆ ತಾರತಮ್ಯ ಎಸಗಿದರೆ ಶಾಲೆಗಳ ವಿರುದ್ಧ ಕ್ರಮ; ಸರ್ಕಾರದ ಎಚ್ಚರಿಕೆ

ಕನ್ನಡ ಮಾತನಾಡುವ ಮಕ್ಕಳ ಬಗ್ಗೆ ತಾರತಮ್ಯ ಎಸಗಿದರೆ ಶಾಲೆಗಳ ವಿರುದ್ಧ ಕ್ರಮ; ಸರ್ಕಾರದ ಎಚ್ಚರಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಳಗಾವಿ: "ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಯಾಗಿದ್ದರೂ, 'ಕನ್ನಡ' ಭಾಷೆಯನ್ನು ಕಡ್ಡಾಯವಾಗಿ ಕಲಿಸಲೇಬೇಕು" ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಶಾಲೆಗಳ ಮಾನ್ಯತೆ ನವೀಕರಣ (Renewal) ಮಾಡುವ ಸಂದರ್ಭದಲ್ಲಿಯೇ, ಕನ್ನಡ ಭಾಷೆಯನ್ನು ಕಲಿಸಲೇಬೇಕು ಎಂದು ನಾವು ಆಡಳಿತ ಮಂಡಳಿಯಿಂದ ಲಿಖಿತ ಮುಚ್ಚಳಿಕೆ (Undertaking) ಬರೆಸಿಕೊಳ್ಳುತ್ತಿದ್ದೇವೆ. ಒಂದು ವೇಳೆ ಮುಚ್ಚಳಿಕೆ ಬರೆದುಕೊಟ್ಟ ನಂತರವೂ ಕನ್ನಡ ಕಲಿಸದೇ ಇರುವುದು ಅಥವಾ ಕನ್ನಡ ಮಾತನಾಡುವ ಮಕ್ಕಳ ಬಗ್ಗೆ ತಾರತಮ್ಯ ಎಸಗುತ್ತಿರುವುದು ನಮ್ಮ ಗಮನಕ್ಕೆ ಬಂದರೆ ಅಂತಹ ಶಾಲೆಗಳ ವಿರುದ್ಧ ಮುಲಾಜಿಲ್ಲದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದವರು ತಿಳಿಸಿದ್ದಾರೆ.ಶಾಲೆಗಳ ಬಗ್ಗೆ ದೂರುಗಳು ಬಂದಾಗ ತಕ್ಷಣವೇ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲನೆ ನಡೆಸಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಶಾಲಾ ಹಂತದಲ್ಲಿ ಕನ್ನಡ ಭಾಷೆಯನ್ನು ಕಾಪಾಡುವುದು ಮತ್ತು ಬೆಳೆಸುವುದು ನಮ್ಮ ಸರ್ಕಾರದ ಹಾಗೂ ಶಿಕ್ಷಣ ಇಲಾಖೆಯ ಆದ್ಯ ಕರ್ತವ್ಯ ಇದರಲ್ಲಿ ಯಾವುದೇ ರಾಜಿಯಿಲ್ಲ ಎಂದವರು ಹೇಳಿದ್ದಾರೆ. "ರಾಜ್ಯದ ಯಾವುದ...
ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ; 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದ

ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ; 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ ನಿರ್ಮಾಣ ಸಂಬಂಧ 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.ಆಲಮಟ್ಟಿಯಿಂದ ಕುಷ್ಟಗಿವರೆಗೆ ನೂತನ ರೈಲ್ವೆ ಮಾರ್ಗದ ಕುರಿತಾಗಿ ವಿಜಯಪುರದ ಸಂಸದರಾದ ರಮೇಶ್ ಜಿಗಜಿಣಗಿ ಹಾಗೂ ಬಾಗಲಕೋಟೆಯ ಸಂಸದರಾದ ಪಿಸಿ ಗದ್ದಿಗೌಡರ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರುಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿ ಚರ್ಚಿಸಲಾಗಿತ್ತು. ಈ ನೂತನ ರೈಲ್ವೆ ಮಾರ್ಗದ ಸರ್ವೆ ಕಾರ್ಯ ಮುಗಿದಿದ್ದು, ಮೇ 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ (DPR) ತಯಾರಾಗಲಿದೆ ಎಂದು ಪತ್ರ ಮುಖೇನ ತಿಳಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಂಚಿಕೊಂಡಿದ್ದಾರೆ. .ಕರ್ನಾಟಕದಲ್ಲಿ ರೈಲ್ವೆ ಸಂಪರ್ಕ ಮತ್ತಷ್ಟು ಹೆಚ್ಚು ಅಭಿವೃದ್ದಿಗೊಳಿಸುವ ಮೂಲಕ ವಾಣಿಜ್ಯೋದ್ಯಮದ ಜೊತೆ ಸುಲಭ ಸಂಚಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವರಿಗೆ ಹಾಗೂ ಕೇಂದ್ರ ರೈಲ...
‘ಗೃಹಲಕ್ಷ್ಮಿ’ ಕಂತು ವಿಳಂಬ: ಕ್ಷಮೆ ಯಾಚಿಸಿದ ಸಚಿವೆ ಸಚಿವೆ ಹೆಬ್ಬಾಳ್ಕರ್

‘ಗೃಹಲಕ್ಷ್ಮಿ’ ಕಂತು ವಿಳಂಬ: ಕ್ಷಮೆ ಯಾಚಿಸಿದ ಸಚಿವೆ ಸಚಿವೆ ಹೆಬ್ಬಾಳ್ಕರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಕಂತುಗಳ ವಿತರಣೆಯಲ್ಲಿ ಲೋಪವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನದಲ್ಲಿ ಒಪ್ಪಿಕೊಂಡರು. ಈ ವಿಷಯದಲ್ಲಿ ವಿರೋಧ ಪಕ್ಷಗಳು ತಮ್ಮನ್ನು ಗುರಿಯಾಗಿಸಿಕೊಂಡಿವೆ ಎಂದು ಆರೋಪಿಸಿದ ಅವರು, ತಾವು ಮಹಿಳೆಯಾಗಿರುವುದರಿಂದ ಪ್ರತ್ಯೇಕವಾಗಿ ಟೀಕಿಸಲಾಗುತ್ತಿದೆ ಎಂದು ಹೇಳಿದರು. ಈ ಹೇಳಿಕೆಗೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಫಲಾನುಭವಿಗಳಿಗೆ ತಲಾ 2,000 ರೂ.ಗಳ ಎರಡು ಕಂತುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸದನಕ್ಕೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಆರೋಪಿಸಿದ ಬಿಜೆಪಿ, ಸಚಿವೆ ಬೇಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವೆ, ಸದನದ ಸದಸ್ಯರ ಭಾವನೆಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸಿದರು. ಆದರೆ ಇದು ಸದಸ್ಯರ ಭಾವನೆಗಳ ವಿಷಯವಲ್ಲ, ಫಲಾನುಭವಿಗಳಿಗೆ ಕ್ಷಮೆಯಾಚಿಸದಿರುವುದೇ ಪ್ರಶ್ನೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.ನಂತರ ಸಚಿವೆ ಕ್ಷಮೆಯಾಚಿಸಿದರೂ, “ನಾನು ಮಹಿಳೆ ಎಂಬ ಕಾರಣಕ್ಕೆ ನನ್ನನ್ನು ಗುರಿ...
ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಕಾಂಗ್ರೆಸ್

ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಕಾಂಗ್ರೆಸ್

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು , ಮತ ಕಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಮುಗಿಯುವುದೇ ಎಂದು ಕೇಳಿದಾಗ, "ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತ ಕಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರಿಯಲಿದೆ ಎಂದರು.ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು ನಮ್ಮ ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡಲಾಗುವುದು ಎಂದು ತಿಳಿಸಿದರು.ಜಿ.ಸಿ.ಚಂದ್ರಶೇಖರ್ ಅವರು ಬಿಎಲ್‌ ಎ ಗುರುತಿನ ಚೀಟಿ ನೀಡಲು ತಯಾರು ಮಾಡಿಕೊಂಡಿದ್ದಾರೆ. ಎಐಸಿಸಿಯಿಂದ ಒಪ್ಪಿಗೆ ಪಡೆಯಲು ತೆಗೆದುಕೊಂಡು ಹೋಗಲಾಗುವುದು. ನಾವು ಇಡೀ ದೇಶದಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹ ಮಾಡಿದ್ದೇವೆ.ದೆಹಲಿಯಲ್ಲಿನ ಪ್ರತಿಭಟನೆಯಲ್ಲಿ ಜನರಲ್ಲಿ ಇದ್ದ ಉತ್ಸಾಹ 2028 ಹಾಗೂ 2029ರ ಚುನಾವಣೆಗೆ ನಾಂದಿಯಾಡಿದೆ. ಈ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯತೆ ಇದೆ ಎಂದು ಪಕ್...
ಜಿಬಿಎ ಚುನಾವಣೆ; 369 ವಾರ್ಡ್’ಗಳ ಆಕಾಂಕ್ಷಿಗಳಿಂದ ಅರ್ಜಿ ಅಹ್ವಾನ

ಜಿಬಿಎ ಚುನಾವಣೆ; 369 ವಾರ್ಡ್’ಗಳ ಆಕಾಂಕ್ಷಿಗಳಿಂದ ಅರ್ಜಿ ಅಹ್ವಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: "ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಸಚಿವರ ಜೊತೆ ಚರ್ಚಿಸಿ ಈ ಅರ್ಜಿ ಜೊತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಿದ್ದು, ಸಾಮಾನ್ಯವರ್ಗಕ್ಕೆ 50 ಸಾವಿರ ಹಾಗೂ ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್ಲೈನ್ ಅರ್ಜಿ ಹಾಕಲು ಅವಕಾಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು....
ಹೈಕಮಾಂಡ್ ನಿಂದ ಅಭಯ? ಡಿಕೆಶಿ ಉತ್ತರ ಇದು

ಹೈಕಮಾಂಡ್ ನಿಂದ ಅಭಯ? ಡಿಕೆಶಿ ಉತ್ತರ ಇದು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಹೈಕಮಾಂಡ್ ಮುಖಂಡರನ್ನು ಸೌಹಾರ್ದ ಭೇಟಿ ಮಾಡಿದ್ದೇವೆಯೇ ಹೊರತು ನಾಯಕತ್ವ ವಿಚಾರಕ್ಕಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ನೋಡಿದರೆ ನಮ್ಮ ನಾಯಕರು ಕುಶಲೋಪರಿ ವಿಚಾರಿಸುತ್ತಾರೆ ಎಂದರು. "ನಮ್ಮ ನಾಯಕರಿಗೆ ನನ್ನನ್ನು ನೋಡಿದ ತಕ್ಷಣ ಅರ್ಥವಾಗುತ್ತದೆ. ನನ್ನ ಕುಶಲೋಪರಿ ವಿಚಾರಿಸುತ್ತಾರೆ. ಇದು ಸೌಹಾರ್ದಯುತ ಭೇಟಿ, ವೈಯಕ್ತಿಕ ಭೇಟಿ ಅಲ್ಲ. ಇದರ ಹೊರತಾಗಿ ಬೇರೆ ವಿಚಾರಗಳನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಆಗುವುದಿಲ್ಲ. ಅದರ ಅವಶ್ಯಕತೆ ಇಲ್ಲ" ಎಂದರು.ಬಹಳ ವರ್ಷಗಳ ನಂತರ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, "ಇದು ಸುಳ್ಳು, ನಾವು ಭೇಟಿಯಾಗಿದ್ದಾಗ ಹೇಳಿಕೊಳ್ಳುವುದಿಲ್ಲ" ಎಂದರು. ಈ ಬಾರಿಯ ಭೇಟಿಯಲ್ಲಿ ನಿಮಗೆ ಅಭಯ ಸಿಕ್ಕಿದೆಯಂತೆ, ಸಮಸ್ಯೆ ಬಗೆಹರಿಯಲಿದೆ ಎಂದು ಕೇಳಿದಾಗ, "ನಿಮ್ಮ ಅರ್ಥ ಏನಿದೆಯೋ, ನನಗೆ ಯಾವ ಸಮಸ್ಯೆ ಇಲ್ಲ. ನೀವು (ಮಾಧ್ಯಮಗಳು) ಸಮಸ್ಯೆ ಸೃಷ್ಟಿಸುತ್ತಿದ್ದೀರಿ" ಎಂದು ಹೇಳಿದರು....
ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ವಿಧಿವಶ

ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ವಿಧಿವಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಾಜಿ ಸಚಿವ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ.ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು.92 ವರ್ಷ ವಯಸ್ಸಿನ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ....

ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನಿಸಲಾಗಿದೆ.ಈ ಕುರಿತಂತೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ KSIIDC ಮತ್ತೊಂದು ಭರವಸೆಯ ಹೆಜ್ಜೆಯನ್ನು ಇರಿಸಿದೆ. ನಗರದ ಹೊರವಲಯದಲ್ಲಿ ಆಯ್ಕೆ ಮಾಡಲಾದ 3 ಸ್ಥಳಗಳ ವಿವರವಾದ ಕಾರ್ಯತಂತ್ರ ಮತ್ತು ಕಾರ್ಯಸಾಧ್ಯತಾ ವರದಿ ಸಿದ್ದಪಡಿಸಲು ಟೆಂಡರ್ ಕರೆಯುವ ಮೂಲಕ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಅವರು ತಿಳಿಸಿದ್ದಾರೆ.ಈ ಕ್ರಮವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ನಡೆಸಿದ ಪ್ರಾಥಮಿಕ ಪರಿಶೀಲನೆಯ ನಂತರ ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಅವರು, ಪ್ರಸ್ತಾವಿತ ಗ್ರೀನ್‌ಫೀಲ್ಡ್ (ಹೊಸ) ವಿಮಾನ ನಿಲ್ದಾಣವು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ವಾಯು ಸಂಚಾರ ಬೇಡಿಕೆಯನ್ನು ಪೂರೈಸಲು ಮತ್ತು ಕರ್ನಾಟಕದ ದೀರ್ಘಕಾಲೀನ ವಾಯುಯಾನ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಭದ್ರಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದ್ದಾರೆ....
ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನೆಲಮಂಗಲದಿಂದ ತುಮಕೂರುವರೆಗೆ ಸುಮಾರು 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು 2027ರ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವ ವಿಶ್ವಾಸವನ್ನು ಸಂಸದ ಡಾ.ಸುಧಾಕರ್ ವ್ಯಕ್ತಪಡಿಸಿದ್ದಾರೆ.ಕೇಂದ್ರ ಸರ್ಕಾರದ ಭಾರತ್ ಮಾಲಾ ಯೋಜನೆಯಡಿ ನೆಲಮಂಗಲದಿಂದ ತುಮಕೂರುವರೆಗೆ ಸುಮಾರು ₹2,000 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶನಿವಾರ ಅವರು ಪರಿಶೀಲಿಸಿದರು.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ತೊಡಕುಗಳಿಂದ ಕಾಮಗಾರಿ ವಿಳಂಬವಾಗಿದ್ದು, 2027ರ ಮಾರ್ಚ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.ನಿರ್ಮಾಣ ಹಂತದಲ್ಲಿರುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು, ಈ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ, ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್ ಹಾಗೂ ಸುರಕ್ಷ...