Thursday, August 13

ವಿದೇಶ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಳಗಾವಿ: ಯಾವುದೇ ಕಾರಣಕ್ಕೂ ಸರ್ಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಪರಿಷತ್‌ನಲ್ಲಿ ಸ್ಪಷ್ಟಪಡಿಸಿದರು.ಕಾಂಗ್ರೆಸ್ ಪಕ್ಷದ ನಾಗರಾಜ್ ಯಾದವ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಸರ್ಕಾರ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮೇಲ್ದರ್ಜೆಗೇರಿಸಲಾಗುವುದು. ಯಾವುದೇ ಕಾರಣಕ್ಕೂ ಇವುಗಳನ್ನು ಖಾಸಗಿಯವರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು.ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಿರ್ಲಕ್ಷ್ಯದಿಂದ ರೋಗಿಯ ಹೊಟ್ಟೆಯ ಗಡ್ಡೆಯ ಬದಲು ಕರಳು ತೆಗೆದು ಹಾಕಲಾಗಿದೆ ಎಂಬ ವದಂತಿ ಹರಡಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆ. ಈತ ಮದ್ಯವ್ಯಸನಿಯಾಗಿದ್ದು, ಕರುಳಿನಲ್ಲಿ ರಂಧ್ರವಿರುವ ಬಗ್ಗೆ ತಾಲೂಕಿನ ಆಸ್ಪತ್ರೆಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ. ರ...
ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಳಗಾವಿ: ಅನ್ನಭಾಗ್ಯದ ಅಕ್ಕಿಯು ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು ಎಂದು ಶಾಸಕ ಸಿ.ಟಿ.ರವಿ ಒತ್ತಾಯಿಸಿದ್ದಾರೆ.ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಅನ್ನಭಾಗ್ಯದ ಅಕ್ಕಿಯ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಹಾಗೂ ಅಕ್ರಮಗಳ ಬಗ್ಗೆ ಆಕ್ರೋಶ ಹೊರಹಾಕಿದರು.ಅನ್ನಭಾಗ್ಯದ ಅಕ್ಕಿಯು ಹೊರ ರಾಜ್ಯಗಳಿಗೆ, ಹೊರ ದೇಶಗಳಿಗೆ ಅಕ್ರಮವಾಗಿ ಸಾಗಣೆಯಾಗುತ್ತಿದ್ದು, ಇದರಲ್ಲಿ ಅಧಿಕಾರಿಗಳ ಕೈವಾಡವಿರುವುದನ್ನು ಸರ್ಕಾರದ ಖಚಿತಪಡಿಸಿದೆ. ಈ ಅಕ್ರಮ ನಿರಂತರವಾಗಿ ನಡೆದಿದೆ ಎಂದಾದರೆ, ಇದರ ಜಾಲ ರಾಜ್ಯದಾದ್ಯಂತ ವ್ಯಾಪಿಸಿದೆ ಎಂದರ್ಥ ಎಂದು ಪ್ರಶ್ನಿಸಿದರು.ಇದೆಲ್ಲವೂ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದಿಯೇ? ಅಥವಾ ಸರ್ಕಾರವೂ ಇದರಲ್ಲಿ ಭಾಗಿಯಾಗಿದೆಯೇ? ಇದಕ್ಕೆಲ್ಲ ಕಡಿವಾಣ ಯಾವಾಗ? ಇದಕ್ಕಾಗಿ ತಕ್ಷಣವೇ ಎಸ್ಐಟಿ ರಚನೆಯಾಗಿ, ತನಿಖೆಯಾಗಬೇಕು ಎಂದರು. ಅನ್ನಭಾಗ್ಯದ ಅಕ್ಕಿಯು ಹೊರ ರಾಜ್ಯಗಳಿಗೆ, ಹೊರ ದೇಶಗಳಿಗೆ ಅಕ್ರಮವಾಗಿ ಸಾಗಣೆಯಾಗುತ್ತಿದ್ದು, ಇದರಲ್ಲಿ ಅಧಿಕಾರಿಗಳ ಕೈವಾಡವಿರುವುದನ್ನು ಸರ್...
ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರವೂ ಮೆಕ್ಕೆ ಜೋಳ ಬೆಳೆ ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದೆ...ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ದಿನಾಂಕ 02.12.2025 ರಂದು ತಿದ್ದುಪಡಿ ಆದೇಶ ಹೊರಡಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಹಾಗೂ ಕೃಷಿ ಸಚಿವ ಎನ್ .ಚಲುವರಾಯಸ್ವಾಮಿಯವರ ವಿಶೇಷ ಕಾಳಜಿ ಹಾಗೂ ಪ್ರಯತ್ನದಿಂದ ಸಂಕಷ್ಟದಲ್ಲಿದ್ದ ಮೆಕ್ಕೆ ಜೋಳ ಬೆಳೆಯುವ ರೈತರ ಪರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.ಪ್ರತಿ ಎಕರೆಗೆ 12 ಕ್ವಿಂಟಾಲ್ ಲೆಕ್ಕದಲ್ಲಿ ಗರಿಷ್ಠ 20 ಕ್ವಿಂಟಾಲ್ ಮೆಕ್ಕೆಜೋಳವನ್ನು ಮಾತ್ರ ಬೆಂಬಲ ಬೆಲೆ ರೂ. 2400 ಪ್ರತಿ ಕ್ವಿಂಟಾಲ್ ದರದಲ್ಲಿ ಖರೀದಿಸಲು ಈ ಹಿಂದೆ ಆದೇಶ ಹೊರಡಿಸಲಾಗಿತ್ತು. ಇದೀಗ ಈ ಮಿತಿಯನ್ನು 50 ಕ್ವಿಂಟಾಲ್‌ಗೆ ಏರಿಕೆ ಮಾಡುವ ಮೂಲಕ ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ತಮ್ಮ ಉತ್ಪನ್ನವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವ ಅವಕಾಶ ಕಲ್ಪಿಸಲಾಗಿದೆ.FRUITS ತಂತ್ರಾಂಶದಲ್ಲಿ ನೋಂದಾಯಿತವಾಗಿರುವ ರೈತರ ಜಮೀನು ವಿಸ್ತೀರ್ಣದ ಆಧಾರದ ಮ...
ಡ್ರಗ್ಸ್‌ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ..

ಡ್ರಗ್ಸ್‌ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಗೃಹ ಸಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.ಬೆಂಗಳೂರು ಸಿಟಿ ಪೊಲೀಸ್‌ ಹಾಗೂ ಫೆಡರೇಷನ್‌ ಆಫ್‌ ಹಿಸ್ಟೋರಿಕ್‌ ವೆಹಿಕಲ್ಸ್‌ ಆಫ್‌ ಇಂಡಿಯಾ (ಎಫ್ಎಚ್ ವಿಐ) ಸಹಯೋಗದಲ್ಲಿ ಪೌಲ್‌ ಜಾನ್‌ ರೆಸಾರ್ಟ್‌ ಮತ್ತು ಹೊಟೇಲ್‌ ಸಂಸ್ಥೆ ಭಾನುವಾರ ಆಯೋಜಿಸಿದ್ದ ಡ್ರಗ್ಸ್‌ ಮುಕ್ತ ಕರ್ನಾಟಕಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ ಜಾಗೃತಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು."ಕರ್ನಾಟಕ ಮಾತ್ರವಲ್ಲ, ವಿಶ್ವದೆಲ್ಲೆಡೆ ಸಮಾಜ ಮಾದಕ ವ್ಯಸನದ ಜತೆ ಹೋಗುತ್ತಿದೆ. ಮಾದಕ ವಸ್ತುಗಳನ್ನು ಯಾರು ಬೆಂಬಲಿಸುತ್ತಾರೋ ಅವರು ಮನುಷ್ಯರಲ್ಲ, ಜನರ ಜೀವನದ ಜತೆ ಆಟವಾಡುತ್ತಾರೆ. ಅವರ ಭವಿಷ್ಯ, ಆರೋಗ್ಯವನ್ನು ನಾಶ ಮಾಡುತ್ತಾರೆ. ಇದನ್ನು ಮನಗಂಡು ನಮ್ಮ ಸರ್ಕಾರ ಕರ್ನಾಟಕವನ್ನು ಮಾದಕ ವ್ಯಸನ ಮಕ್ತ ರಾಜ್ಯವಾಗಿ ರೂಪಿಸುವ ಬಗ್ಗೆ ಸರ್ಕಾರ ಘೋಷಿಸಿತ್ತು," ಎಂದರು."ಘೋಷಣೆಯಾದ ಕೂಡಲೇ ಕರ್ನಾಟಕ ಮಾದಕ ವ್ಯಸ...
ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅಪರೂಪದ ಕಾಯಿಲೆಗಳಿಗೆ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಖ್ಯಾತಿ ಪಡೆದಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಈಗ ಮತ್ತೊಂದು ಸಾಧನೆ ಮಾಡಿದೆ.ವಿಲ್ಮ್ಸ್ ಟ್ಯೂಮರ್ ಎಂಬ ಮೂತ್ರಪಿಂಡದ ಕ್ಯಾನ್ಸರ್‌ಗೆ ತುತ್ತಾಗಿ, ಒಂದೇ ಒಂದು ಮೂತ್ರಪಿಂಡದಿಂದ ಜೀವನ ಸಾಗಿಸುತ್ತಿದ್ದ 9 ವರ್ಷದ ಬಾಲಕನಿಗೆ ಅಸ್ಥಿ ಮಜ್ಜೆ ಕಸಿ/ ಮೂಳೆ ಮಜ್ಜೆಯ ಕಸಿ (ಬಿಎಂಟಿ)ಯನ್ನು ಯಶಸ್ವಿಯಾಗಿ ನಿರ್ವಹಿಸಿ ಮಹತ್ವದ ಮೈಲಿಗಲ್ಲು ಸಾಧಿಸಲಾಗಿದೆ.ಬಾಲಕನಿಗೆ ಡಿಸೆಂಬರ್ 2022 ರಲ್ಲಿ ವಿಲ್ಮ್ಸ್ ಟ್ಯೂಮರ್ ಇರುವುದು ಪತ್ತೆಯಾಯಿತು. ಕೀಮೋಥೆರಪಿ ಚಿಕಿತ್ಸೆ ನೀಡಿ ಎಡ ಮೂತ್ರಪಿಂಡಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ತದನಂತರ ರೇಡಿಯೇಷನ್ ಚಿಕಿತ್ಸೆ ನೀಡಲಾಯಿತು. ದುರದೃಷ್ಟವಶಾತ್, ಏಪ್ರಿಲ್ 2025 ರಲ್ಲಿ ಮರುಕಳಿಸಿತು. ಆಗ ಅವನು ಬದುಕುಳಿಯುವ ಅತ್ಯುತ್ತಮ ಅವಕಾಶವೆಂದರೆ ಹೆಚ್ಚಿನ ಪ್ರಮಾಣದ ಕೀಮೋಥೆರಪಿ ಮತ್ತು ನಂತರ ಸ್ಟೆಮ್ ಸೆಲ್ ಟ್ರಾನ್ಸ್‌ಪ್ಲಾಂಟೇಶನ್ ಎಂದು ಕಿದ್ವಾಯಿ ವೈದ್ಯರು ತೀರ್ಮಾನಿಸಿದರು.ಕಿದ್ವಾಯಿ ಆಸ್ಪತ್ರೆಯ ವೈದ್ಯರಾದ ಡಾ. ವಸುಂಧರಾ ಕೈಲಾಸನಾಥ್, ಬಿಎಂಟಿ – ಸಹ ಪ್ರಾಧ್ಯಾಪಕರು ಮತ...
ಬೆಳಗಾವಿ ಅಧಿವೇಶನ; 9ರಂದು ಸಾವಿರಾರು ರೈತರಿಂದ ಸುವರ್ಣಸೌಧಕ್ಕೆ ಮುತ್ತಿಗೆ

ಬೆಳಗಾವಿ ಅಧಿವೇಶನ; 9ರಂದು ಸಾವಿರಾರು ರೈತರಿಂದ ಸುವರ್ಣಸೌಧಕ್ಕೆ ಮುತ್ತಿಗೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕು. ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಗಮನ ಸೆಳೆಯಬೇಕು; ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟದ ಕುರಿತು, ನೀರಾವರಿ ಸಮಸ್ಯೆ ಬಗ್ಗೆ ಚರ್ಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿಯ ಚಳಿಗಾಲದ ಅಧಿವೇಶನದ ಕುರಿತು ನಾನು, ವಿಪಕ್ಷ ನಾಯಕರು, ಬಿಜೆಪಿ- ಜೆಡಿಎಸ್ ಮುಖಂಡರು ಒಟ್ಟಿಗೆ ಕೂತು ಸವಿಸ್ತಾರವಾಗಿ ಚರ್ಚಿಸಿದ್ದೇವೆ ಎಂದರು. ಪ್ರತಿ ಬಾರಿ ಬೆಳಗಾವಿ ಅಧಿವೇಶನದಲ್ಲಿ ನಾಮಕಾವಾಸ್ತೆ ಒಂದು ದಿನ ಚರ್ಚೆ ನಡೆಯುತ್ತಿದೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದ್ದು, ಅಲ್ಲಿನ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕೆಂಬ ಆಶಯ ಅವರದಾಗಿತ್ತು ಎಂದು ವಿವರಿಸಿದರು. ಆದು ಆಗುತ್ತಿಲ್ಲ ಎಂದು ಟೀಕಿಸಿದರು.ಅಧಿವೇಶನದ ಆರಂಭದ ದಿನಗಳಲ್ಲೇ ಈ ಸಮಸ್ಯೆಗಳನ್ನು ಚರ್ಚಿಸಲು ತೀ...
ಕಡೂರು ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ

ಕಡೂರು ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್‌ ತೆರವು ವಿವಾದ ಸಣ್ಣ ಗಲಾಟೆಯಾಗಿ ಆರಂಭಗೊಂಡಿದ್ದು, ಕೊನೆಗೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರ ಮೇಲೆ ನಡೆದ ಮಾರಣಾಂತಿಕ ದಾಳಿಗೆ ಕಾರಣವಾಗಿದೆ.ಪ್ರಾಥಮಿಕ ತನಿಖೆ ಪ್ರಕಾರ, ಸಂಜಯ್ ಮತ್ತು ಮಿಥುನ್ ಎಂಬ ಯುವಕರು ಮಚ್ಚುಗಳಿಂದ ದಾಳಿ ನಡೆಸಿ ಗಣೇಶ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಐವರನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಆರೋಪಿ ಸಂಜಯ್ ತೀವ್ರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಗಣೇಶ್ ಗೌಡ ಅವರು ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದು, ಸ್ಥಳೀಯ ರಾಜಕೀಯದಲ್ಲಿ ಸಕ್ರಿಯ ಮುಖವಾಗಿದ್ದರು. ಘಟನೆಯ ವೇಳೆ ಅವರು ಕಾರಿನಲ್ಲಿ ತೆರಳುತ್ತಿದ್ದಾಗ, ಕಲ್ಮರಡಿ ಮಠದ ಸಮೀಪ ಬೈಕ್‌ನಲ್ಲಿ ಹಿಂಬಾಲಿಸಿ ಬಂದ ಆರೋಪಿಗಳು ಕಾರನ್ನು ಅಡ್ಡಗಟ್ಟಿ ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಚ್ಚು ಸೇರಿದಂತೆ ಕೆಲವು...
ಡಿವೈಡರ್‌ಗೆ ಡಿಕ್ಕಿ; ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನ

ಡಿವೈಡರ್‌ಗೆ ಡಿಕ್ಕಿ; ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಧಾರವಾಡ: ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಾರು ಅಪಘಾತದಲ್ಲಿ ಸಜೀವ ದಹನಗೊಂಡು ಮೃತಪಟ್ಟು ದಾರುಣ ಘಟನೆ ಸಂಭವಿಸಿದೆ.ಶುಕ್ರವಾರ ರಾತ್ರಿ ಹಾವೇರಿಯಿಂದ ಮುರ್ಗೋಡಿನಲ್ಲಿರುವ ತಮ್ಮ ನಿವಾಸದತ್ತ ತೆರಳುತ್ತಿದ್ದ ವೇಳೆ, ಅಣ್ಣಿಗೇರಿ ಸಮೀಪ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಂಧನ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ.ಕಣ್ಣುಮುಚ್ಚುವಷ್ಟರಲ್ಲಿ ಕಾರು ಮಿಂಚಿನಂತೆ ಹೊತ್ತಿ ಉರಿದಿದ್ದು, ಒಳಗಿದ್ದ ಇನ್ಸ್‌ಪೆಕ್ಟರ್ ಬದುಕಿದ್ದಂತೆಯೇ ಸುಟ್ಟು ಕರಕಲಾಗಿ ಸಾವನ್ನಪ್ಪಿದ್ದಾರೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾಹಿತಿ ನೀಡಿದ್ದಾರೆ.ಅಪಘಾತ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ....
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ/ ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಶುಕ್ರವಾರ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಿಂದ ಇನ್ಸ್‌ಪೆಕ್ಟರ್ ರಾಮಕೇಶ್ ಅವರ ಸಹಿಯೊಂದಿಗೆ ನೋಟಿಸ್ ಜಾರಿ ಮಾಡಲಾಗಿದೆ. ಡಿಸೆಂಬರ್ 19 ರಂದು ಅಥವಾ ಅದಕ್ಕೂ ಮೊದಲು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್ ಅವರಿಗೆ ಸೂಚಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಶಿವಕುಮಾರ್ ಅವರ ಬಳಿ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಹಾಗಾಗಿ ನೋಟಿಸ್ ನೀಡಲಾಗಿದೆ.ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಶಿವಕುಮಾರ್ ಅವರಿಂದ ವಿವರವಾದ ಹಣಕಾಸು ಮತ್ತು ವಹಿವಾಟು ಸಂಬಂಧಿತ ಮಾಹಿತಿಯನ್ನು ಕೋರಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ.ಶಿವಕುಮಾರ್, ಅವರ ಸಂಬಂಧಿತ ಕಂಪನಿಗಳು, ಸಂಸ್ಥೆಗಳು ಇತ್ಯಾದಿಗಳಿಂದ ಯಂಗ್ ಇಂಡಿಯನ್ (YI) ಎಂಬ ಕಂಪನಿಗೆ ನೀಡಿದ ಮೊತ್ತದ ವಿವರಗಳು ಮತ್ತು ವಿಭಜನೆಯ ಬಗ್ಗೆ ಮಾಹಿತಿಯನ್ನು ಒ...
ವಾಣಿಜ್ಯ ತೆರಿಗೆ : ಬೋಗಸ್ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪ್ರಕರಣಗಳಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ಸಿಎಂ ಸಲಹೆ

ವಾಣಿಜ್ಯ ತೆರಿಗೆ : ಬೋಗಸ್ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪ್ರಕರಣಗಳಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ಸಿಎಂ ಸಲಹೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನಸೌಧದಲ್ಲಿ ನಡೆದ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನವೆಂಬರ್‌ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ನಿವ್ವಳ ಸಂಗ್ರಹ ರೂ.72,131 ಕೋಟಿ ಮಾಡಲಾಗಿದ್ದು, ಶೇಕಡಾವಾರು ಶೇ.90 ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್‌ಟಿ ರೂ.53,522 ಕೋಟಿ, ಕೆಎಸ್‌ಟಿ ರೂ.17,595 ಕೋಟಿ ಮತ್ತು ವೃತಿ ತೆರಿಗೆ ರೂ.1,014 ಕೋಟಿ ಸಂಗ್ರಹಿಸಲಾಗಿದೆ ಎಂದು ವಿವರಿಸಿದ್ದಾರೆ.ಆರಂಭದ ಐದು ತಿಂಗಳಲ್ಲಿ ಎಪ್ರಿಲ್‌ನಿಂದ ಆಗಸ್ಟ್‌ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್‌ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರ ಸಾಧ್ಯವಾಗಿದೆ ಎಂದಿದ್ದಾರೆ.ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ...