
ಡಿಸೆಂಬರ್ 10ರಂದು ‘ಬೃಹತ್ ಬೆಳಗಾವಿ ಚಲೋ’; ಆಶಾ ಕಾರ್ಯಕರ್ತೆಯರಿಗೆ ಹೀಗೊಂದು ಕರೆ
ಬೆಂಗಳೂರು: ಕೊಟ್ಟ ಭರವಸೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಡಿಸೆಂಬರ್ ೧೦ರಂದು "ಬೃಹತ್ ಬೆಳಗಾವಿ ಚಲೋ" ಹೋರಾಟ ಹಮ್ಮಿಕೊಂಡಿದೆ. ಅಂದು ಬೆಳಗಾವಿ ಸುವರ್ಣ ಸೌಧ ಬಳಿ ರಾಜ್ಯದ ವಿವಿಧೆಡೆಯ ಆಶಾ ಕಾರ್ಯಕರ್ತೆಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ.ಆಶಾ ಕಾರ್ಯಕರ್ತೆಯರು 2008-9ನೇ ಸಾಲಿನಿಂದ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೊದಲಿಗೆ ಕೆಲವೇ ಸಾವಿರ ಸಂಖ್ಯೆಯಲ್ಲಿ ಇದ್ದ ಈ ಕಾರ್ಯಕರ್ತೆಯರ ಸಂಖ್ಯೆ ಕೆಲವೇ ವರ್ಷಗಳಲ್ಲಿ, 42000ಕ್ಕೂ ಹೆಚ್ಚಿನ ಸಂಖ್ಯೆಗೆ ಏರಿತು. ಅಲ್ಲಿಂದ ಇಲ್ಲಿಯವರೆಗೂ ಕಳೆದ 18 ವರ್ಷಗಳಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಕುಟುಂಬಗಳ ತಾಯಿ-ಮಗು ಹಾಗೂ ಜನ ಸಾಮಾನ್ಯರಿಗೆ ಸರ್ಕಾರದ ಎಲ್ಲಾ ಆರೋಗ್ಯ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾ ಬಂದಿದ್ದಾರೆ. ಮಾರಣಾಂತಿಕ ಸಾಂಕ್ರಾಮಿಕ ಕೊರೋನಾ ಹರಡಿದ ಸಂದರ್ಭದಲ್ಲಿ ಅ...









