Thursday, August 6

ವಿದೇಶ

ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

ಪ್ರಮುಖ ಸುದ್ದಿ, ವಿದೇಶ
ಕ್ಯಾರಕಾಸ್: ವೆನೆಜುವೆಲಾದಲ್ಲಿ ಸಂಭವಿಸಿದ ಅವಳಿ ಭೂಕಂಪಗಳ ಸಾವಿನ ಸಂಖ್ಯೆ 3,342ಕ್ಕೆ ಏರಿಕೆಯಾಗಿದ್ದು, 16,740 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿ ಅಧ್ಯಕ್ಷ ಜಾರ್ಜ್ ರೊಡ್ರಿಗಸ್ ತಿಳಿಸಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ಇದುವರೆಗೆ 6,462 ಮಂದಿಯನ್ನು ರಕ್ಷಿಸಲಾಗಿದ್ದು, 17,345 ಮಂದಿ ಸ್ಥಳಾಂತರಗೊಂಡಿದ್ದಾರೆ. ಪೀಡಿತರಿಗೆ ನೆರವು ನೀಡಲು 80 ತಾತ್ಕಾಲಿಕ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಜೂನ್ 24ರಂದು ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಅವಳಿ ಭೂಕಂಪಗಳ ಬಳಿಕ ಇದುವರೆಗೆ 995 ನಂತರದ ಕಂಪನಗಳು ದಾಖಲಾಗಿವೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ 29,567 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅವರಲ್ಲಿ 3,281 ಮಂದಿ ವಿದೇಶಿ ರಕ್ಷಣಾ ಸಿಬ್ಬಂದಿಯಾಗಿದ್ದಾರೆ.ಭೂಕಂಪ ದುರಂತದ ಹಿನ್ನೆಲೆಯಲ್ಲಿ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ. ಸಂತ್ರಸ್ತರ ಕುಟುಂಬಗಳೊಂದಿಗೆ ಸರ್ಕಾರ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ. ಇನ್ನೂ ಹತ್ತಾರು ಸಾವಿರ ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾ...
ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

ಪ್ರಮುಖ ಸುದ್ದಿ, ವಿದೇಶ
ನವದೆಹಲಿ: ಜಾಗತಿಕ ಭೌಗೋಳಿಕ ರಾಜಕೀಯ ಸವಾಲುಗಳ ನಡುವೆಯೂ ಇಂಧನ ಭದ್ರತೆ, ಕಾರ್ಯತಂತ್ರದ ಪೆಟ್ರೋಲಿಯಂ ಸಂಗ್ರಹ, ಪೂರೈಕೆ ಸರಪಳಿ ಮತ್ತು ಸಮುದ್ರ ಮಾರ್ಗದ ಇಂಧನ ಸಾಗಣೆಯನ್ನು ಬಲಪಡಿಸಲು ಭಾರತ ಮತ್ತು ಜಪಾನ್ ಸಹಕಾರ ವಿಸ್ತರಿಸಲು ಒಪ್ಪಿಕೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಸನೇ ತಕೈಚಿ ನಡುವಿನ ಮಾತುಕತೆ ಬಳಿಕ ಈ ಕುರಿತು ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಭಾರತದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹಾಗೂ ಜಪಾನ್‌ನ ಆರ್ಥಿಕ, ವ್ಯಾಪಾರ ಮತ್ತು ಕೈಗಾರಿಕಾ ಸಚಿವಾಲಯಗಳು ಸಹಕಾರದ ಪ್ರಮುಖ ಕ್ಷೇತ್ರಗಳನ್ನು ಗುರುತಿಸಿವೆ. ಕಾರ್ಯತಂತ್ರದ ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಸಂಗ್ರಹ ನಿರ್ವಹಣೆ, ತುರ್ತು ಪರಿಸ್ಥಿತಿ ನಿರ್ವಹಣೆ ಹಾಗೂ ಮಾರುಕಟ್ಟೆ ಸ್ಥಿರೀಕರಣಕ್ಕೆ ಸಂಬಂಧಿಸಿದ ಅನುಭವ ಮತ್ತು ಉತ್ತಮ ಪದ್ಧತಿಗಳನ್ನು ಪರಸ್ಪರ ಹಂಚಿಕೊಳ್ಳಲು ಉಭಯ ದೇಶಗಳು ನಿರ್ಧರಿಸಿವೆ.ಮೂರನೇ ರಾಷ್ಟ್ರಗಳಿಂದ ಇಂಧನ ಪೂರೈಕೆ ಮೂಲಗಳನ್ನು ಅನ್ವೇಷಿಸುವುದು, ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಮಾಹಿತಿ ವಿನಿಮಯ ಹಾಗೂ ಸಾಗರೋತ್ತರ ತೈಲ ಮತ್ತು ಅನಿಲ ಯೋಜನೆಗಳಲ್ಲಿ ಜಂಟಿ ಹೂಡ...
ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

ಪ್ರಮುಖ ಸುದ್ದಿ, ವಿದೇಶ
ನವದೆಹಲಿ: ಆಪಲ್‌ನ ಮೊದಲ ಮಡಚಬಹುದಾದ (Foldable) ಐಫೋನ್‌ಗಾಗಿ ತಂತ್ರಜ್ಞಾನ ಪ್ರಿಯರು ಹಲವು ವರ್ಷಗಳಿಂದ ಕಾಯುತ್ತಿದ್ದು, ಇದೀಗ ಅದು ಶೀಘ್ರದಲ್ಲೇ ಅನಾವರಣಗೊಳ್ಳುವ ಸಾಧ್ಯತೆ ಇದೆ. ಕಂಪನಿಯು ಇನ್ನೂ ಅಧಿಕೃತ ಘೋಷಣೆ ಮಾಡದಿದ್ದರೂ, ಇತ್ತೀಚಿನ ಸೋರಿಕೆಗಳ ಪ್ರಕಾರ ‘ಐಫೋನ್ ಅಲ್ಟ್ರಾ’ ಅನ್ನು ಐಫೋನ್ 18 ಪ್ರೊ ಸರಣಿಯೊಂದಿಗೆ ಸೆಪ್ಟೆಂಬರ್ 9ರಂದು ಪರಿಚಯಿಸುವ ಸಾಧ್ಯತೆ ಇದೆ. ವರದಿಗಳ ಪ್ರಕಾರ, ಐಫೋನ್ ಅಲ್ಟ್ರಾ 7.8 ಇಂಚಿನ ಒಳಭಾಗದ ಮಡಚಬಹುದಾದ OLED ಡಿಸ್‌ಪ್ಲೇ ಹಾಗೂ 5.5 ಇಂಚಿನ ಹೊರ ಡಿಸ್‌ಪ್ಲೇ ಹೊಂದಿರಲಿದೆ. ಹೊಸ A20 ಪ್ರೊ ಚಿಪ್‌ಸೆಟ್, 12GB LPDDR5X RAM ಮತ್ತು ಆಪಲ್ ಅಭಿವೃದ್ಧಿಪಡಿಸಿರುವ C2 ಮೋಡೆಮ್‌ ಇದರಲ್ಲಿ ಇರಬಹುದು ಎನ್ನಲಾಗಿದೆ. ಬ್ಯಾಟರಿ ಸಾಮರ್ಥ್ಯ 5,400mAh ರಿಂದ 5,800mAh ನಡುವಿರಬಹುದು ಎಂದು ವದಂತಿಗಳಿವೆ. ಕ್ಯಾಮೆರಾ ವಿಭಾಗದಲ್ಲಿ ಎರಡು 48 ಮೆಗಾಪಿಕ್ಸೆಲ್ ಹಿಂಬದಿ ಕ್ಯಾಮೆರಾಗಳು ಹಾಗೂ ಒಳ ಮತ್ತು ಹೊರ ಡಿಸ್‌ಪ್ಲೇಗಳಿಗೆ ಪ್ರತ್ಯೇಕ ಸೆಲ್ಫಿ ಕ್ಯಾಮೆರಾಗಳನ್ನು ನೀಡುವ ಸಾಧ್ಯತೆ ಇದೆ.ಸೋರಿಕೆಯಾದ ಮಾಹಿತಿಯ ಪ್ರಕಾರ, ಈ ಫೋನ್ ಸಾಮಾನ್ಯ ಫೋಲ್ಡಬಲ್ ವಿನ್ಯಾಸಕ್ಕಿಂತ ಅಗ...
ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

ಪ್ರಮುಖ ಸುದ್ದಿ, ವಿದೇಶ
ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರ (PoJK) ಮತ್ತೊಮ್ಮೆ ತೀವ್ರ ಅಶಾಂತಿಯ ಕೇಂದ್ರವಾಗಿದೆ. ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರದೇಶದಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೂ ನಿರ್ಬಂಧ ಹೇರಲಾಗಿದೆ. ಈ ಅಶಾಂತಿಯ ಕೇಂದ್ರಬಿಂದುವಿನಲ್ಲಿ ಜಂಟಿ ಅವಾಮಿ ಆಕ್ಷನ್ ಕಮಿಟಿ (JAAC) ನಡೆಸುತ್ತಿರುವ ಹೋರಾಟವಿದೆ. ಪಾಕಿಸ್ತಾನದಲ್ಲಿ ನೆಲೆಸಿರುವ ಜಮ್ಮು-ಕಾಶ್ಮೀರ ನಿರಾಶ್ರಿತರಿಗಾಗಿ ಮೀಸಲಿರುವ 53 ಸದಸ್ಯರ ವಿಧಾನಸಭೆಯ 12 ಸ್ಥಾನಗಳನ್ನು ರದ್ದುಪಡಿಸಬೇಕೆಂದು JAAC ಆಗ್ರಹಿಸುತ್ತಿದೆ. ಈ ಸ್ಥಾನಗಳ ಮೂಲಕ ಇಸ್ಲಾಮಾಬಾದ್ ಸ್ಥಳೀಯ ರಾಜಕೀಯದ ಮೇಲೆ ಪ್ರಭಾವ ಬೀರುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಆದರೆ ಪಾಕ್ ಆಕ್ರಮಿತ ಕಾಶ್ಮೀರದ ಸುಪ್ರೀಂ ಕೋರ್ಟ್, ಈ 12 ಸ್ಥಾನಗಳು ಸಂವಿಧಾನಬದ್ಧವಾಗಿದ್ದು, ಸಂವಿಧಾನ ತಿದ್ದುಪಡಿ ಇಲ್ಲದೆ ಅವುಗಳನ್ನು ರದ್ದುಪಡಿಸಲು ಸಾಧ್ಯವಿಲ್...
ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

ಪ್ರಮುಖ ಸುದ್ದಿ, ವಿದೇಶ
ವಿಕ್ಟೋರಿಯಾ (ಸೀಶೆಲ್ಸ್): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ. ಸೀಶೆಲ್ಸ್‌ನ 50ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾತನಾಡಿದ ಅವರು, ಸೀಶೆಲ್ಸ್ ಅನ್ನು ಭಾರತದ ಪ್ರಮುಖ ಸಮುದ್ರ ಪಾಲುದಾರ ಹಾಗೂ ವಿಶ್ವಾಸಾರ್ಹ ನೆರೆ ರಾಷ್ಟ್ರವೆಂದು ಬಣ್ಣಿಸಿದರು. ಭಾರತ–ಸೀಶೆಲ್ಸ್ ಸಂಬಂಧಗಳು ಶತಮಾನಗಳಷ್ಟು ಹಳೆಯದಾದ ಜನರ-ಜನರ ಬಾಂಧವ್ಯ ಮತ್ತು ಹಂಚಿಕೆಯ ಮೌಲ್ಯಗಳ ಮೇಲೆ ನಿರ್ಮಾಣವಾಗಿವೆ ಎಂದು ಮೋದಿ ಹೇಳಿದರು. ಸೀಶೆಲ್ಸ್‌ನ ಪ್ರಜಾಪ್ರಭುತ್ವ, ಸಾಂಸ್ಕೃತಿಕ ವೈವಿಧ್ಯತೆ ಮತ್ತು ರಾಷ್ಟ್ರೀಯ ಏಕತೆಯನ್ನು ಅವರು ಶ್ಲಾಘಿಸಿದರು. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭದ್ರತೆ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಉಭಯ ದೇಶಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದ ಪ್ರಧಾನಿ, ರಕ್ಷಣಾ ಸಹಕಾರ, ಕರಾವಳಿ ಭದ್ರತೆ, ತರಬೇತಿ ಹಾಗೂ ಸಾಮರ್ಥ್ಯ ವೃದ್ಧಿ ಕ್ಷೇತ್ರಗಳಲ್ಲಿನ ಸಹಯೋಗವನ್ನು ಉಲ್ಲೇಖಿಸಿದರು.ನೀಲಿ ಆರ್ಥಿಕತೆ, ಮೀನುಗಾರಿಕೆ, ಸಮುದ್ರ ವಿಜ್ಞಾನ, ನವೀಕರಿಸಬಹುದಾದ ಇಂಧನ ಮತ್ತ...
ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

ಪ್ರಮುಖ ಸುದ್ದಿ, ವಿದೇಶ
ಕಾಬೂಲ್: ಪೂರ್ವ ಅಫ್ಘಾನಿಸ್ತಾನದ ಹಲವು ಪ್ರದೇಶಗಳ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ವಾಯುದಾಳಿಯಲ್ಲಿ 35ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕರಾಚಿಯಲ್ಲಿರುವ ಅರೆಸೈನಿಕ ರೇಂಜರ್‌ಗಳ ಪ್ರಾದೇಶಿಕ ಕೇಂದ್ರದ ಮೇಲೆ ನಡೆದ ದಾಳಿಯಲ್ಲಿ ಮೂವರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ. ಕರಾಚಿ ದಾಳಿಯ ಹೊಣೆಯನ್ನು ಪಾಕಿಸ್ತಾನಿ ತಾಲಿಬಾನ್‌ನ ಬೇರ್ಪಟ್ಟ ಬಣವಾದ ಜಮಾತ್-ಉಲ್-ಅಹ್ರಾರ್ ಹೊತ್ತುಕೊಂಡಿದೆ. ಇದರ ಬೆನ್ನಲ್ಲೇ ಈ ದಾಳಿ ನಡೆದಿದೆ.ಪಾಕಿಸ್ತಾನ ಸೇನೆ ಅಫ್ಘಾನಿಸ್ತಾನದ ಪಕ್ತಿಕಾ, ಪಕ್ತಿಯಾ ಮತ್ತು ಕುನಾರ್ ಪ್ರಾಂತ್ಯಗಳಲ್ಲಿನ ಹಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಉಗ್ರರ ಅಡಗುತಾಣಗಳು ಮತ್ತು ಸುರಕ್ಷಿತ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ....
ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ

ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ

ಪ್ರಮುಖ ಸುದ್ದಿ, ವಿದೇಶ
ವಾಷಿಂಗ್ಟನ್: ಆರ್ಥಿಕ ಬೇಹುಗಾರಿಕೆ, ಸೈಬರ್ ದಾಳಿಗಳು ಮತ್ತು ವಾಣಿಜ್ಯ ಹೂಡಿಕೆಗಳ ಮೂಲಕ ಅಮೆರಿಕದ ಕೃತಕ ಬುದ್ಧಿಮತ್ತೆ (AI) ಹಾಗೂ ಇತರೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಸ್ವಾಧೀನಪಡಿಸಿಕೊಳ್ಳಲು ಚೀನಾ ಪ್ರಯತ್ನಿಸುತ್ತಿದೆ ಎಂದು ಅಮೆರಿಕದ ಶಾಸಕರು ಎಚ್ಚರಿಕೆ ನೀಡಿದ್ದಾರೆ. ಚೀನಾದ ಕಮ್ಯುನಿಸ್ಟ್ ಪಕ್ಷದ ಕುರಿತ ಹೌಸ್ ಸೆಲೆಕ್ಟ್ ಕಮಿಟಿ ವಿಚಾರಣೆಯಲ್ಲಿ ಮಾತನಾಡಿದ ರಕ್ಷಣಾ ಗುಪ್ತಚರ ಸಂಸ್ಥೆಯ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಡೇವಿಡ್ ಶೆಡ್, ಅಮೆರಿಕದ ತಾಂತ್ರಿಕ ಮತ್ತು ವಾಣಿಜ್ಯ ರಹಸ್ಯಗಳನ್ನು ಪಡೆಯಲು ಬೀಜಿಂಗ್ ವ್ಯಾಪಕ ಜಾಲವನ್ನು ನಿರ್ಮಿಸಿದೆ ಎಂದು ಆರೋಪಿಸಿದರು. ಸೈಬರ್ ಬೇಹುಗಾರಿಕೆ, ಶೈಕ್ಷಣಿಕ ಸಹಯೋಗ, ಮಾನವ ಗುಪ್ತಚರ ಜಾಲ ಮತ್ತು ವಾಣಿಜ್ಯ ಹೂಡಿಕೆಗಳ ಮೂಲಕ ಚೀನಾ ತನ್ನ ತಾಂತ್ರಿಕ ಹಾಗೂ ಮಿಲಿಟರಿ ಸಾಮರ್ಥ್ಯವನ್ನು ವಿಸ್ತರಿಸುತ್ತಿದೆ ಎಂದು ಅವರು ಹೇಳಿದರು. ಕೃತಕ ಬುದ್ಧಿಮತ್ತೆ, ದೂರಸಂಪರ್ಕ, ಜೈವಿಕ ತಂತ್ರಜ್ಞಾನ, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಸುಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆಗಳ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಗಳು ಪ್ರಮುಖ ಗುರಿಯಾಗಿವೆ ಎಂದರು.ವಿಚಾರಣ...
ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

ಪ್ರಮುಖ ಸುದ್ದಿ, ವಿದೇಶ
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆ ಹಡಗಿನ ಮೇಲೆ ನಡೆದ ಡ್ರೋನ್ ದಾಳಿಗೆ ಪ್ರತಿಯಾಗಿ ಅಮೆರಿಕ ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಕಳೆದ ವಾರ ಕದನ ವಿರಾಮ ಹಾಗೂ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ತೆರೆಯುವ ಕುರಿತು ಉಭಯ ದೇಶಗಳ ನಡುವೆ ಮಧ್ಯಂತರ ಒಪ್ಪಂದವಾಗಿದ್ದರೂ, ಈ ಘಟನೆ ಮತ್ತೆ ಉದ್ವಿಗ್ನತೆ ಹೆಚ್ಚಿಸಿದೆ. ಸರಕು ಹಡಗಿನ ಮೇಲಿನ ಡ್ರೋನ್ ದಾಳಿ ಕದನ ವಿರಾಮದ ಸ್ಪಷ್ಟ ಉಲ್ಲಂಘನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಇರಾನ್‌ನ ಕ್ಷಿಪಣಿ ಉಡಾವಣಾ ಕೇಂದ್ರಗಳು, ಡ್ರೋನ್ ತಾಣಗಳು ಹಾಗೂ ಕರಾವಳಿ ರಾಡಾರ್ ವ್ಯವಸ್ಥೆಗಳ ಮೇಲೆ ನಿಖರ ವಾಯುದಾಳಿ ನಡೆಸಿರುವುದಾಗಿ ತಿಳಿಸಿದೆ.ಇದಕ್ಕೆ ಪ್ರತಿಕ್ರಿಯಿಸಿರುವ ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಅಜೀಜಿ, ಹಾರ್ಮುಜ್ ಜಲಸಂಧಿಯ ನಿಯಂತ್ರಣ ಇರಾನ್‌ನಲ್ಲಿದ್ದು, ಅದು ಕದನ ವಿರಾಮ ಉಲ್ಲಂಘನೆಯಲ್ಲ ಎಂದು ಹೇಳಿದ್ದಾರೆ. ಈ ಬೆಳವಣಿಗೆಯಿಂದ ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹ...
ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

ಪ್ರಮುಖ ಸುದ್ದಿ, ವಿದೇಶ
ರೇಕ್‌ಜಾವಿಕ್: ಭಾರತ ಮೊದಲ ಬಾರಿಗೆ ಐಸ್ಲ್ಯಾಂಡ್‌ನಲ್ಲಿ ತನ್ನ ಮಾವಿನ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಿದೆ. Embassy of India in Reykjavik ಹಾಗೂ APEDA ಸಹಯೋಗದಲ್ಲಿ ಜೂನ್ 24 ಮತ್ತು 25ರಂದು Reykjavik ಮತ್ತು Akureyriಗಳಲ್ಲಿ ಭಾರತೀಯ ಮಾವಿನ ಪ್ರಚಾರ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮಗಳಲ್ಲಿ ದಶೇರಿ, ಚೌಸಾ, ಲ್ಯಾಂಗ್ರಾ ಮತ್ತು ಕೇಸರ್ ಸೇರಿದಂತೆ ಪ್ರೀಮಿಯಂ ಭಾರತೀಯ ಮಾವಿನ ಪ್ರಭೇದಗಳನ್ನು ಪ್ರದರ್ಶಿಸಲಾಗಿದ್ದು, ಐಸ್ಲ್ಯಾಂಡ್‌ನ ಆಮದುದಾರರು, ರಾಜತಾಂತ್ರಿಕರು ಹಾಗೂ ವ್ಯಾಪಾರ ವಲಯದಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಭಾರತೀಯ ರಾಯಭಾರಿ ಆರ್. ರವೀಂದ್ರ ಅವರು ಭಾರತೀಯ ಮಾವಿನ ವಿಶಿಷ್ಟ ಸುವಾಸನೆ ಹಾಗೂ ಉನ್ನತ ಗುಣಮಟ್ಟವನ್ನು ಉಲ್ಲೇಖಿಸಿ, ಐಸ್ಲ್ಯಾಂಡ್ ಮಾರುಕಟ್ಟೆಯಲ್ಲಿ ರಫ್ತು ವಿಸ್ತರಣೆಗೆ ಮಹತ್ವದ ಅವಕಾಶಗಳಿವೆ ಎಂದು ಹೇಳಿದರು. ಐಸ್ಲ್ಯಾಂಡ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವ್ಯಾಪಾರ ಒಪ್ಪಂದಗಳ ನಿರ್ದೇಶಕ ಸ್ವೀನ್ ಕೆ. ಐನಾರ್ಸನ್, ಭಾರತ–ಇಎಫ್‌ಟಿಎ ವ್ಯಾಪಾರ ಹಾಗೂ ಆರ್ಥಿಕ ಪಾಲುದಾರಿಕೆ ಒಪ್ಪಂದದಿಂದ ಭಾರತೀಯ ಮಾವಿನ ಆಮದು ಹೆಚ್ಚಲು ಹೊಸ ದಾರ...
ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

ಪ್ರಮುಖ ಸುದ್ದಿ, ವಿದೇಶ
ಕ್ಯಾರಕಾಸ್: ದಕ್ಷಿಣ ಅಮೆರಿಕಾದ ರಾಷ್ಟ್ರ ವೆನೆಜುವೆಲಾದಲ್ಲಿ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ಭಾರಿ ಆತಂಕ ಸೃಷ್ಟಿಸಿದ್ದು, ಸರ್ಕಾರ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದೆ. ಶತಮಾನ ಕಂಡರಿಯದ ಈ ಭೀಕರ ಸಾವಿರಾರು ಜನರು ಸಾವನ್ನಾಪಿರುವ ಶಂಕೆ ಇದ್ದು, ಈ ಸಂಖ್ಯೆ ಲಕ್ಷ ದಾಟುವ ಆತಂಕವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಪ್ರಕಾರ, ಮೊದಲು 7.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುಮಾರು ಒಂದು ನಿಮಿಷದೊಳಗೆ 7.5 ತೀವ್ರತೆಯ ಮತ್ತೊಂದು ಪ್ರಬಲ ಭೂಕಂಪ ದಾಖಲಾಗಿದೆ. ಎರಡೂ ಭೂಕಂಪಗಳ ಕೇಂದ್ರಬಿಂದು ರಾಜಧಾನಿ ಕ್ಯಾರಕಾಸ್‌ನ ಪಶ್ಚಿಮಕ್ಕೆ ಸುಮಾರು 160 ಕಿಲೋಮೀಟರ್ ದೂರದಲ್ಲಿರುವ ಮೊರೊನ್ ಕರಾವಳಿ ಪ್ರದೇಶದ ಸಮೀಪ ಇತ್ತು. ಭೂಕಂಪಗಳ ಪರಿಣಾಮವಾಗಿ ಕ್ಯಾರಕಾಸ್ ಸೇರಿದಂತೆ ಹಲವು ನಗರಗಳಲ್ಲಿ ಕಟ್ಟಡಗಳಿಗೆ ಹಾನಿಯಾಗಿದ್ದು, ಕೆಲವು ಕಟ್ಟಡಗಳು ಕುಸಿದಿರುವ ವರದಿಗಳು ಬಂದಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹಾನಿಯ ದೃಶ್ಯಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಭೂಕಂಪಗಳು ಕೇವಲ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದ್ದರಿಂದ ಅವುಗಳ ಪರಿಣಾಮ ಹೆಚ್ಚು ತೀ...