Thursday, August 13

ವಿದೇಶ

‘ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ’; ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

‘ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ’; ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: “ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಮಾತನಾಡಿದರು. “ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಿಸುತ್ತಿದ್ದೇವೆ. ಇಂದು ಬೆಳಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಇಂದಿರಾ ಗಾಂಧಿ ಅವರ ಸಮಾಧಿಗೆ ಹೋಗಿ ಗೌರವ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿ ಅವರು ನನನ್ನು ಕರೆದು ಅವರ ಸಮಾಧಿ ಸುತ್ತಮುತ್ತಲ ಜಾಗ ಅಭಿವೃದ್ಧಿ ಪಡಿಸಲು ಸೂಚಿಸಿದ್ದರು. ಜೊತೆಗೆ ಪೆರಂಬೂರಿನಲ್ಲಿರುವ ರಾಜೀವ್ ಗಾಂಧಿ ಅವರ ಸಮಾಧಿಗೆ ಗ್ರಾನೈಟ್ ಹಾಕುವ ಭಾಗ್ಯ ನನಗೆ ಸಿಕ್ಕಿದೆ. ನಾನು ಹಾಗೂ ನನ್ನ ಸಹೋದರ ನಮ್ಮದೇ ಕ್ವಾರೆಯಿಂದ ಗ್ರಾನೈಟ್ ಕಲ್ಲನ್ನು ತೆಗೆದುಕೊಂಡು ಹೋಗಿ ಅಲ್ಲಿ ಹಾಕಿ ನಮ್ಮ ಕೈಲಾದ ಸೇವೆ ಮಾಡುವ ಭಾಗ್ಯ ಸಿಕ್ಕಿತು” ಎಂದು ಸ್ಮರಿಸಿದರು.“ನಮ್ಮ ನಾಯಕರು ಮತಕಳ...
ಮೇಕೆದಾಟು : ಶೀಘ್ರದಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಹೊಸ ಯೋಜನಾ ವರದಿ ಸಲ್ಲಿಕೆಗೆ ನಿರ್ಧಾರ

ಮೇಕೆದಾಟು : ಶೀಘ್ರದಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಹೊಸ ಯೋಜನಾ ವರದಿ ಸಲ್ಲಿಕೆಗೆ ನಿರ್ಧಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯೂಎಂಎ) ಹೊಸ ವಿವರವಾದ ಯೋಜನಾ ವರದಿ (ಡಿಪಿಆರ್) ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಂಗಳವಾರ ತಿಳಿಸಿದ್ದಾರೆ.ಪಾಟಿಯಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ಆದೇಶದ ನಂತರ ಯೋಜನೆಯನ್ನು ಮುಂದುವರಿಸುವ ವಿಧಾನವನ್ನು ಇಂದು ಚರ್ಚಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶದ ಸಮಗ್ರ ವಿವರಗಳನ್ನು ಒಳಗೊಂಡ ಹೊಸ ಡಿಪಿಆರ್ ಅನಿವಾರ್ಯವಾಗಿದೆ. ಹಾರೋಬೆಲೆಯಲ್ಲಿ ಯೋಜನಾ ಕಚೇರಿಯನ್ನು ಈಗಾಗಲೇ ಆರಂಭಿಸಿದ್ದೇವೆ. ರಾಮನಗರದಲ್ಲಿ ಮುಖ್ಯ ಎಂಜಿನಿಯರ್ ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗಳನ್ನು ತೆರೆಯಲಾಗುತ್ತಿದ್ದು, ಅಗತ್ಯ ಸಿಬ್ಬಂದಿಯನ್ನೂ ನಿಯೋಜಿಸುತ್ತೇವೆ” ಎಂದರು.ಹಿಂದಿನ ಡಿಪಿಆರ್ ಅನ್ನು ಸಿಡಬ್ಲ್ಯೂಎಂಎ ತಿರಸ್ಕರಿಸಿದ್ದ ಹಿನ್ನೆಲೆಯಲ್ಲಿ ಹೊಸ ವರದಿ ಕಡ್ಡಾಯವಾಗಿದೆ...
‘ಜೈಲಲ್ಲಿ ಚಳಿ ಹೆಚ್ಚಾಗಿದೆ; ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ, ಕಂಬಳಿ ಬೇಕು’ ಎಂದ ನಟ

‘ಜೈಲಲ್ಲಿ ಚಳಿ ಹೆಚ್ಚಾಗಿದೆ; ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ, ಕಂಬಳಿ ಬೇಕು’ ಎಂದ ನಟ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಅಭಿಮಾನಿ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಬುಧವಾರ ಹೆಚ್ಚುವರಿ ಕಂಬಳಿಗಾಗಿ ಬೆಂಗಳೂರಿನ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ ಸುದ್ದಿಯ ಕೇಂದ್ರದರು. ಚಳಿಯಿಂದಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲವೆಂದು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ತಿಳಿಸಿದರು.CCH-57 ನ್ಯಾಯಾಲಯದಲ್ಲಿ ಹಾಜರಾದ ದರ್ಶನ್, “ಚಳಿಯಿಂದ ನಿದ್ರೆ ಆಗುತ್ತಿಲ್ಲ. ಜೈಲು ಅಧಿಕಾರಿಗಳು ಕಂಬಳಿ ಕೊಡುವುದಿಲ್ಲ, ಮನೆಯವರು ಕಳಿಸಿದ ಕಂಬಳಿಯನ್ನೂ ಅನುಮತಿಸಿಲ್ಲ” ಎಂದು ದೂರಿದರು.ನ್ಯಾಯಾಧೀಶರು ಈ ಹೇಳಿಕೆಯ ಮೇಲೆ ಅಸಮಾಧಾನ ವ್ಯಕ್ತಪಡಿಸಿ, ನ್ಯಾಯಾಲಯದ ಪದೇಪದೇ ಸೂಚನೆಗಳ ಹೊರತಾಗಿಯೂ ಜೈಲು ಅಧಿಕಾರಿಗಳು ಕಂಬಳಿಯನ್ನು ನಿರಾಕರಿಸುತ್ತಿರುವುದೇಕೆ ಎಂದು ಪ್ರಶ್ನಿಸಿದರು. ಶೀತ ವಾತಾವರಣದಲ್ಲಿರುವ ಕೈದಿಗೆ ಕಂಬಳಿ ನೀಡದಿರುವುದು ಹೇಗೆ ನ್ಯಾಯಸಮ್ಮತ ಎಂದು ಗರಂ ಆದ ನ್ಯಾಯಾಧೀಶರು, ತಕ್ಷಣವೇ ಕಂಬಳಿಯನ್ನು ಒದಗಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.ಪ್ರಕರಣದ ಮತ್ತೊಬ್ಬ ಆರೋಪಿ ನಾಗರಾಜ್ ಕೂಡ “ಜೈಲಿನಲ್ಲಿ ಚಳಿ ಜಾಸ್ತಿ, ಆದರೆ ಕಂಬಳಿ ಕೊಡುತ್ತಿ...
ಬೈಕ್ ಕಳ್ಳರ ಬೆನ್ನತ್ತಿದ ಖಾಕಿ; ಇಬ್ಬರ ಬಂಧನ, ಹತ್ತಾರು ಬೈಕುಗಳ ವಶ

ಬೈಕ್ ಕಳ್ಳರ ಬೆನ್ನತ್ತಿದ ಖಾಕಿ; ಇಬ್ಬರ ಬಂಧನ, ಹತ್ತಾರು ಬೈಕುಗಳ ವಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ಕಳ್ಳರ ಹಾವಳಿಗೆ ವೈಟ್'ಫೀಲ್ಡ್ ಉಪವಿಭಾಗ ಪೊಲೀಸರು ಅಂಕುಶ ಹಾಕಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಎಸಿಪಿ ರೀನಾ ಸುವರ್ಣ ನೇತೃತ್ವದ ಪೊಲೀಸರು ಕಳ್ಳರನ್ನು ಜೈಲಿಗಟ್ಟಿದ್ದಾರೆ. ಸುಮಾರು 20 ಬೈಕುಗಳನ್ನು ವಶಪಡಿಸಿಕೊಂಡಿದ್ದಾರೆ.ಮಹದೇವಪುರ ಸಮೀಪದ ಗೋಪಾಲನ್ ಇಂಟರ್ ನ್ಯಾಷನ್ ಸ್ಕೂಲ್ ಬಳಿ ನಿಲ್ಲಿಸಲಾಗಿದ್ದ ಯಮಹ ಆರ್'ಎಕ್ಸ್ ಬೈಕ್ ಕಳೆದುಹೋಗಿರುವ ಬಗ್ಗೆ ನಾಗರಾಜು ಎಂಬವರು ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪದೇ ಪದೇ ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಎಸಿಪಿ ರೀನಾ ಸುವರ್ಣ ಅವರು ಮಹದೇವಪುರ ಠಾಣೆಯ ಇನ್ಸ್‌ಪೆಕ್ಟರ್ ‌ ಜಿ.ಪ್ರವೀಣ್ ಬಾಬು, PSIಗಳಾದ ಮಹೇಶ್, ಪರಶುರಾಮ್ ಮತ್ತು ಸುನೀಲ್ ಕಡ್ಡಿ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆಗೆ ಮುನ್ನುಡಿ ಬರೆದರು.ಕಳ್ಳರಿಗಾಗಿ ಖೇಡಾ ತೋಡಿದ ಈ ಪೊಲೀಸರು ರಾಮಮೂರ್ತಿನಗರ ನಿವಾಸಿಗಳಾದ ಮನು ಬಿನ್ ದ್ಯಾವೇಗೌಡ ಮತ್ತು ಸಚ್ಚಿನ್ ಬಿನ್ ಬಾಲರಾಜು ಎಂಬಿಬ್ಬರನ್ನು ಬಂಧಿಸಿ ಬೆಂಗಳೂರಿನ ಹಲವೆಡೆ ನಡೆದಿರುವ ಪ್ರಕರಣಗಳನ್ನು ಬೇಧಿಸಿದ್...
ಕೆಎಸ್‌ಸಿಎ ಚುನಾವಣೆ ಮುಂದೂಡಿಕೆಗೆ ವೆಂಕಟೇಶ್ ಪ್ರಸಾದ್ ಆಕ್ಷೇಪ

ಕೆಎಸ್‌ಸಿಎ ಚುನಾವಣೆ ಮುಂದೂಡಿಕೆಗೆ ವೆಂಕಟೇಶ್ ಪ್ರಸಾದ್ ಆಕ್ಷೇಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನವೆಂಬರ್‌ 30ಕ್ಕೆ ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಚುನಾವಣೆಯನ್ನು ಮುಂದೂಡಿರುವುದಕ್ಕೆ ಸಂಸ್ಥೆಯ ಮಾಜಿ ವೇಗಗೋಲಂದಾಜು ವೆಂಕಟೇಶ್ ಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆಯನ್ನು ಡಿಸೆಂಬರ್‌ 30ಕ್ಕೆ ಮುಂದೂಡಿರುವುದು ಸರಿಯಲ್ಲ ಎಂದಿದ್ದಾರೆ.ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪ್ರಸಾದ್, “ಈ ನಿರ್ಧಾರ ನಮಗೆ ಸಂಪೂರ್ಣ ಆಘಾತಕರ. ಕೆಎಸ್‌ಸಿಎನಲ್ಲಿ ರಾಜಕೀಯಕ್ಕಲ್ಲ, ಕ್ರಿಕೆಟ್‌ಗೆ ಆದ್ಯತೆ ಸಿಗಬೇಕು. ನಾವು ಯಾವುದೇ ರಾಜಕೀಯ ಉದ್ದೇಶದಿಂದ ಬಂದಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉನ್ನತ ಮಟ್ಟದ ಕ್ರಿಕೆಟ್‌ಗೆ ಪುನರ್ಜೀವನ ನೀಡುವುದು, ಅಂತರರಾಷ್ಟ್ರೀಯ ಪಂದ್ಯಗಳು ಮತ್ತು ಐಪಿಎಲ್‌ ಮರಳಿ ಬರಲು ಸೂಕ್ತ ವಾತಾವರಣ ಸೃಷ್ಟಿಸುವುದು ನಮ್ಮ ಏಕೈಕ ಗುರಿ,” ಎಂದು ಹೇಳಿದ್ದಾರೆ.ಚುನಾವಣೆಯು ನಿಗದಿಪಡಿಸಿದ ದಿನಾಂಕದಲ್ಲಿ ನಡೆಯಲೇಬೇಕು. ಕೆಎಸ್‌ಸಿಎ ಈಗ ನಿರ್ಣಾಯಕ ಹಂತದಲ್ಲಿದೆ. ಬದಲಾವಣೆಯ ಅಗತ್ಯ ತೀವ್ರವಾಗಿದೆ. ಈಗಾಗಲೇ ನಡೆಯುತ್ತಿರುವ ಋತುವಿನಲ್ಲಿ ಕ್ರಿಕೆಟ್‌ ಸಂಕಷ್ಟಕ್ಕೆ ಸಿಲುಕಿದೆ. ಹೊಸ ಸಮಿತಿಯು ತನ್ನ ದೃಷ್ಟಿಕೋನವನ್ನು ಜಾರ...

ಇದು ಕೆಟ್ಟ ಸರಕಾರ, ಅವರಾಗಿಯೇ ಬಿದ್ದರೆ ಅದವರ ಹಣೆಬರೆಹ; ಸಿ.ಟಿ.ರವಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರಕಾರವು ಮೊದಲು ನೆರೆ ಪರಿಹಾರ ನೀಡಿ ಬಳಿಕ ಕೇಂದ್ರದಿಂದ ಪರಿಹಾರ ಕೇಳಬೇಕಿತ್ತು ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಧಾನಿಯವರದು ಮತ್ತು ಮುಖ್ಯಮಂತ್ರಿಗಳದು ಸಾಂವಿಧಾನಿಕ ಹುದ್ದೆಗಳು. ಅವರ ಪರಸ್ಪರ ಭೇಟಿ, ಮಾತುಕತೆಯನ್ನು ರಾಜಕೀಯ ದೃಷ್ಟಿಯಿಂದ ನೋಡಲಾಗದು; ನೋಡಬಾರದು ಎಂದು ಪ್ರಶ್ನೆಗೆ ಉತ್ತರಿಸಿದರು. ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು, ನೆರೆ ಪರಿಹಾರವಾಗಿ ರಾಜ್ಯದ ಬೊಕ್ಕಸದಿಂದ ಹಣ ನೀಡಿ ಬಳಿಕ ಕೇಂದ್ರದಿಂದ ಕೇಳುವ ವಾಡಿಕೆಯನ್ನು ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ಮಾಡಿದ್ದಾರೆ. ಬೇರೆ ಬೇರೆ ಮುಖ್ಯಮಂತ್ರಿಗಳೂ ಇದನ್ನೇ ಮಾಡಿದ್ದರು. ಕೇಂದ್ರ ಎನ್‍ಡಿಆರ್‍ಎಫ್ ನಿಯಮದಡಿ ಸಮೀಕ್ಷೆ ಮಾಡಿ ಕೊಡಬೇಕಾದುದನ್ನು ಕೊಟ್ಟೇ ಕೊಡುತ್ತದೆ. ಅದಕ್ಕೂ ಮೊದಲು ರಾಜ್ಯದ ಬೊಕ್ಕಸದಿಂದ ಬಿಡುಗಡೆ ಮಾಡುವುದು ಎಲ್ಲ ಮುಖ್ಯಮಂತ್ರಿಗಳು, ಸರಕಾರಗಳು ಪಾಲಿಸಿಕೊಂಡು ಬಂದ ಪದ್ಧತಿ. ಅದನ್ನು ಮುಖ್ಯಮಂತ್ರಿಗಳು ಮಾಡಬೇಕಿತ್ತು ಎಂದು ನುಡಿದರು. ಕಬ್ಬಿನ ವಿಚ...
ಬಿಹಾರದಲ್ಲಿ BJPಯ ಒಕ್ಕೂಟ ಗೆದ್ದಿದೆ; ಆದರೆ ಅಡ್ವಾಣಿ ಮುಂದೆ ಸೋತರೇ ಮೋದಿ? ರಾಜಕೀಯ ವಿಶ್ಲೇಷಕ ರಮೇಶ್ ಬಾಬು ಹೇಳೋದು ಹೀಗೆ

ಬಿಹಾರದಲ್ಲಿ BJPಯ ಒಕ್ಕೂಟ ಗೆದ್ದಿದೆ; ಆದರೆ ಅಡ್ವಾಣಿ ಮುಂದೆ ಸೋತರೇ ಮೋದಿ? ರಾಜಕೀಯ ವಿಶ್ಲೇಷಕ ರಮೇಶ್ ಬಾಬು ಹೇಳೋದು ಹೀಗೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯಭೇರಿ ಭಾರಿಸಿರಬಹುದು, ಆದರೆ, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಕಡಿಮೆಯಾಗಿರುವುದನ್ನು ಆ ಫಲಿತಾಂಶ ತೋರಿಸಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರೂ ಆದ, ಶಾಸಕ ರಮೇಶ್ ಬಾಬು ವಿಶ್ಲೇಷಿಸಿದ್ದಾರೆ.ಸಂಸದೀಯ ವಿಶ್ಲೇಷಕರೂ ಆದ ರಮೇಶ್ ಬಾಬು ಅವರು, ಬಿಹಾರ ಫಲಿತಾಂಶ ಬಗ್ಗೆ ತಮ್ಮದೇ ದಾಟಿಯಲ್ಲಿ ವಿಶ್ಲೇಷಿಸಿ ಪ್ರತಿಕ್ರಿಯೆ ನೀಡಿದ್ದಾರೆ. 'ಬಿಹಾರದಲ್ಲಿ ಕಾಂಗ್ರೆಸ್ ಪಕ್ಷದ ಸೋಲನ್ನು ನಾವು ಒಪ್ಪಿಕೊಳ್ಳುತ್ತಿದ್ದೇವೆ. ಅದೇ ಸಮಯದಲ್ಲಿ ರಾಜಕೀಯ ಪಕ್ಷವಾಗಿ ಮತ್ತು ಪಕ್ಷವಾಗಿ ಗೌರವದಿಂದ ಹೇಳಿಕೊಳ್ಳುವುದರೊಂದಿಗೆ, ಬಿಜೆಪಿ ಹಲವಾರು ಅಂಶಗಳಿಗೆ ಜವಾಬ್ದಾರರಾಗಿರಬೇಕು' ಎಂದು ಅವರು ಪ್ರತಿಪಾದಿಸಿದ್ದಾರೆ.ಬಿಹಾರದಲ್ಲಿ 2025 ರ ಎನ್‌ಡಿಎಯ ಗೆಲುವು ಪ್ರಭಾವಶಾಲಿಯಾಗಿದ್ದರೂ, ಫಲಿತಾಂಶವನ್ನು ಆಳವಾಗಿ ಗಮನಿಸಿದರೆ, ನರೇಂದ್ರ ಮೋದಿಗೆ ವೈಯಕ್ತಿಕವಾಗಿ ಹಿನ್ನಡೆಯಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ರಮೇಶ್ ಬಾಬು ಬೊಟ್ಟುಮಾಡಿದ್ದಾರೆ. 2010ರಲ್ಲಿ ಎಲ್.ಕೆ.ಅಡ್ವಾಣಿ ಇನ್ನೂ ರಾಷ್ಟ್ರೀಯ ಮಟ್ಟದಲ್ಲಿ ಅತ್ಯುನ್ನತ ವ್...
ಶಿರಾಡಿ ಘಾಟ್‌ಗೆ ಒಪ್ಪಿಗೆ, ಬೆಂಗಳೂರಿಗೆ ವಿರೋಧ!; ಬಿಜೆಪಿ ನಿಲುವಿಗೆ ಕಾಂಗ್ರೆಸ್ ಟೀಕೆ.

ಶಿರಾಡಿ ಘಾಟ್‌ಗೆ ಒಪ್ಪಿಗೆ, ಬೆಂಗಳೂರಿಗೆ ವಿರೋಧ!; ಬಿಜೆಪಿ ನಿಲುವಿಗೆ ಕಾಂಗ್ರೆಸ್ ಟೀಕೆ.

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಟನಲ್ ವಿಚಾರದಲ್ಲಿ ಬಿಜೆಪಿಯದ್ದು ಪರಿಸರ ಕಾಳಜಿಯೋ ಅಥವಾ ರಾಜಕೀಯವೋ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಶಿರಾಡಿ ಘಾಟ್‌ಗೆ ಒಪ್ಪಿಗೆ ಸೂಚಿಸಿರುವ ಬಿಜೆಪಿ ನಾಯಕರು, ಬೆಂಗಳೂರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕೆ ಮಾಡಿದೆ.ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, 'ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಲೋಕಕ್ಕೆ ತಿಳಿಯುವುದಿಲ್ಲ ಎಂದು ಭಾವಿಸುವಂತೆ, ಬಿಜೆಪಿಗರು ತಮ್ಮ ನಾಟಕ ಯಾರಿಗೂ ಗೊತ್ತಾಗುವುದಿಲ್ಲ ಎಂದು ಭಾವಿಸಿದ್ದಾರೆ' ಎಂದು ವ್ಯಂಗ್ಯವಾಡಿದೆ.'ಬೆಂಗಳೂರಿನಲ್ಲಿ ಉದ್ದೇಶಿತ ಟನಲ್ ರಸ್ತೆ ಯೋಜನೆಯಿಂದ ಪರಿಸರ ಸರ್ವನಾಶವಾಗಿಬಿಡುತ್ತದೆ ಎಂಬಂತೆ ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರದ ಹೆದ್ದಾರಿ ಸಚಿವರಾದ ನಿತೀನ್ ಗಡ್ಕರಿ ಅವರು ಯುನೆಸ್ಕೋ ಮಾನ್ಯತೆ ಪಡೆದಿರುವ ಪಶ್ಚಿಮ ಘಟ್ಟಗಳಾದ ಶಿರಾಡಿ ಘಾಟ್ ನಲ್ಲಿ ಟನಲ್ ಕೊರೆಯಲು ಅನುಮತಿ ನೀಡಿದ್ದಾರೆ. ಇದರ ಬಗ್ಗೆ ಬಿಜೆಪಿಯ ಬೃಹಸ್ಪತಿಗಳು ಯಾಕೆ ಉಸಿರು ಬಿಡುತ್ತಿಲ್ಲ?' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.'ಬಿಜೆಪಿಯವರು ಶಿರಾಡಿ ಘಾಟ್ ನಲ್ಲಿ ಟನಲ...
ವೃಕ್ಷಮಾತೆ ಖ್ಯಾತಿಯ ಸಾಲುಮರ ತಿಮ್ಮಕ್ಕ ವಿಧಿವಶ

ವೃಕ್ಷಮಾತೆ ಖ್ಯಾತಿಯ ಸಾಲುಮರ ತಿಮ್ಮಕ್ಕ ವಿಧಿವಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವೃಕ್ಷಮಾತೆ ಖ್ಯಾತಿಯ ಸಾಲುಮರ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅವರು ತಮ್ಮ 114ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.ತುಮಕೂರು ಜಿಲ್ಲೆಯ ಗುಬ್ಬಿ ಸಮೀಪ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಮಕ್ಕಳಿಲ್ಲದ ಅವರು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಬೆಳೆಸಿದ್ದರು. ಹಾಗಾಗಿ ಅವರು ಸಾಲು ಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾದಾರು. ಅವರ ಈ ಸಾಧನೆಯನ್ನು ಗೌರವಿಸಿ ಕೇಂದ್ರ ಸರ್ಕಾರ 2019ರಲ್ಲಿ ಪದ್ಮಶ್ರೀ ನೀಡಿತ್ತು. ಸಂತಾಪ: ಗಿಡಮರಗಳ ಲಾಲನೆ-ಪಾಲನೆ ಪರಿಸರ ಸಂರಕ್ಷಣೆಗೆ ಟೊಂಕಕಟ್ಟಿ ನಿಂತಿರುವ ಸಾವಿರಾರು ಪರಿಸರ ಪ್ರೇಮಿಗಳಿಗೆ ಆದರ್ಶವಾಗಿರುವ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114 ವರ್ಷ) ಅವರು ಇಹಲೋಕ ತ್ಯಜಿಸಿದರು ಎನ್ನುವ ಸುದ್ದಿ ತಿಳಿದು ಮನಸ್ಸು ಭಾರವಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಸಂ...
2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಸರ್ಕಾರ

2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಸರ್ಕಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಸರ್ಕಾರವು 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪಟ್ಟಿ ಅನುಮೋದನೆಗೊಂಡಿದೆ. ರಾಷ್ಟ್ರೀಯ ಹಬ್ಬಗಳು ಹಾಗೂ ಪ್ರಮುಖ ಧಾರ್ಮಿಕ ಹಬ್ಬಗಳನ್ನು ಒಳಗೊಂಡಂತೆ ಒಟ್ಟು 20 ರಜೆಗಳು ಈ ಪಟ್ಟಿ ಒಳಗೊಂಡಿವೆ. 2026ರ ಸಾರ್ವತ್ರಿಕ ರಜಾ ದಿನಗಳು:ಜನವರಿ 15 (ಗುರುವಾರ) – ಉತ್ತರಾಯಣ ಪುಣ್ಯಕಾಲ / ಮಕರ ಸಂಕ್ರಾಂತಿ ಜನವರಿ 26 (ಸೋಮವಾರ) – ಗಣರಾಜ್ಯೋತ್ಸವ ಮಾರ್ಚ್ 19 (ಗುರುವಾರ) – ಯುಗಾದಿ ಹಬ್ಬ ಮಾರ್ಚ್ 21 (ಶನಿವಾರ) – ಖುತುಬ್-ಎ-ರಂಜಾನ್ ಮಾರ್ಚ್ 31 (ಮಂಗಳವಾರ) – ಮಹಾವೀರ ಜಯಂತಿ ಏಪ್ರಿಲ್ 3 (ಶುಕ್ರವಾರ) – ಗುಡ್ ಫ್ರೈಡೇ ಏಪ್ರಿಲ್ 14 (ಮಂಗಳವಾರ) – ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಏಪ್ರಿಲ್ 20 (ಸೋಮವಾರ) – ಬಸವ ಜಯಂತಿ / ಅಕ್ಷಯ ತೃತೀಯ ಮೇ 1 (ಶುಕ್ರವಾರ) – ಕಾರ್ಮಿಕ ದಿನಾಚರಣೆ ಮೇ 28 (ಗುರುವಾರ) – ಬಕ್ರೀದ್ ಜೂನ್ 26 (ಶುಕ್ರವಾರ) – ಮೊಹರಂ ಆಗಸ್ಟ್ 15 (ಶನಿವಾರ) – ಸ್ವಾತಂತ್ರ್ಯ ದಿನಾಚರಣೆ ಆಗಸ್ಟ್ 26 (ಬುಧವಾರ) – ಈದ್-ಮಿಲಾದ್ ...