
‘ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ’; ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ
ಬೆಂಗಳೂರು: “ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಮಾತನಾಡಿದರು. “ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಿಸುತ್ತಿದ್ದೇವೆ. ಇಂದು ಬೆಳಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಇಂದಿರಾ ಗಾಂಧಿ ಅವರ ಸಮಾಧಿಗೆ ಹೋಗಿ ಗೌರವ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿ ಅವರು ನನನ್ನು ಕರೆದು ಅವರ ಸಮಾಧಿ ಸುತ್ತಮುತ್ತಲ ಜಾಗ ಅಭಿವೃದ್ಧಿ ಪಡಿಸಲು ಸೂಚಿಸಿದ್ದರು. ಜೊತೆಗೆ ಪೆರಂಬೂರಿನಲ್ಲಿರುವ ರಾಜೀವ್ ಗಾಂಧಿ ಅವರ ಸಮಾಧಿಗೆ ಗ್ರಾನೈಟ್ ಹಾಕುವ ಭಾಗ್ಯ ನನಗೆ ಸಿಕ್ಕಿದೆ. ನಾನು ಹಾಗೂ ನನ್ನ ಸಹೋದರ ನಮ್ಮದೇ ಕ್ವಾರೆಯಿಂದ ಗ್ರಾನೈಟ್ ಕಲ್ಲನ್ನು ತೆಗೆದುಕೊಂಡು ಹೋಗಿ ಅಲ್ಲಿ ಹಾಕಿ ನಮ್ಮ ಕೈಲಾದ ಸೇವೆ ಮಾಡುವ ಭಾಗ್ಯ ಸಿಕ್ಕಿತು” ಎಂದು ಸ್ಮರಿಸಿದರು.“ನಮ್ಮ ನಾಯಕರು ಮತಕಳ...








