Thursday, August 13

ವಿದೇಶ

ಕಿಚ್ಚ ಸುದೀಪ್ ಅವರ ‘ಮಾರ್ಕ್’; 110 ದಿನಗಳ ಶ್ರಮದ ಫಲ

ಕಿಚ್ಚ ಸುದೀಪ್ ಅವರ ‘ಮಾರ್ಕ್’; 110 ದಿನಗಳ ಶ್ರಮದ ಫಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಚೆನ್ನೈ: ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಮಾಸ್ ಆಕ್ಷನ್ ಎಂಟರ್‌ಟೈನರ್ “ಮಾರ್ಕ್” ಚಿತ್ರವು ಈ ವರ್ಷದ ಕ್ರಿಸ್‌ಮಸ್ ಸಮಯದಲ್ಲಿ ಬಿಡುಗಡೆಯಾಗಲಿದೆ. ಸುಮಾರು 110 ದಿನಗಳ ಕಾಲ ನಡೆದ ನಿರಂತರ ಶೂಟಿಂಗ್ ಹಾಗೂ ಅಸಂಖ್ಯಾತ ಕಾಲ್‌ಶೀಟ್‌ಗಳ ನಂತರ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.ತಂಡದವರೊಂದಿಗೆ ಗುಂಪುಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಸುದೀಪ್, “ಮಾರ್ಕ್ ಚಿತ್ರದ ಯಶಸ್ಸು ಒಟ್ಟಾಗಿ ಕೆಲಸ ಮಾಡಿದ ತಂಡದ ಸಾಮೂಹಿಕ ಪ್ರಯತ್ನದ ಫಲ. ಪ್ರತಿ ದಿನ ಗುರಿಯತ್ತ ನಿಷ್ಠೆಯಿಂದ ಕೆಲಸ ಮಾಡಿದ ತಂಡದ ಶ್ರಮದ ಫಲ ಇದು,” ಎಂದು ತಿಳಿಸಿದ್ದಾರೆ.“ಜುಲೈ 7 ರಂದು ನಮ್ಮ ಪ್ರಯಾಣ ಆರಂಭವಾಯಿತು. ಪ್ರಾರಂಭದಲ್ಲಿ ಅಸಾಧ್ಯವೆಂದು ತೋರಿದ್ದುದನ್ನು ಸಾಧಿಸುವ ದೃಢನಿಶ್ಚಯದಿಂದ ನಾವು ಹೊರಟಿದ್ದೆವು. ಈ ಪ್ರಯಾಣ ಯಶಸ್ವಿಯಾಗಲು ಕೆಲವರ ಶ್ರಮವಲ್ಲ, ಪ್ರತಿಯೊಬ್ಬ ಸದಸ್ಯನ ಪರಿಶ್ರಮ ಕಾರಣವಾಗಿದೆ. ಪ್ರತಿದಿನ ಒಂದೇ ಉದ್ದೇಶದಿಂದ ಎಲ್ಲರೂ ಕೆಲಸ ಮಾಡಿದರು — ಗುರಿ ತಲುಪುವವರೆಗೆ ಅಡೆತಡೆಗಳನ್ನು ಮೀರಿ ಪ್ರಯತ್ನಿಸಿದರು” ಎಂದು ಅವರು ಬರೆದಿದ್ದಾರೆ.ಚಿತ್ರದ ಶೂಟಿ...
‘ಭಯೋತ್ಪಾದಕರು ಮತ್ತು ನಿಮ್ಮನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತೂಗುತ್ತಾರೆಂಬ ಭಯವೇ?; ‘ಕಾಂಗ್ರೆಸ್ಸಿಗರಿಗೆ ಸಿ.ಟಿ.ರವಿ ಪ್ರಶ್ನೆ

‘ಭಯೋತ್ಪಾದಕರು ಮತ್ತು ನಿಮ್ಮನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತೂಗುತ್ತಾರೆಂಬ ಭಯವೇ?; ‘ಕಾಂಗ್ರೆಸ್ಸಿಗರಿಗೆ ಸಿ.ಟಿ.ರವಿ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್ಸಿನವರಿಗೆ ಬಾಂಬ್ ಸ್ಫೋಟದ ಕುರಿತು ಆತಂಕ ಇಲ್ಲ; ಚುನಾವಣೆಗೆ ಮೊದಲು ಯಾಕೆ ಆಗಿದೆ ಎಂಬುದೇ ಅವರ ಆತಂಕ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಟೀಕಿಸಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಬಾಂಬ್ ಸ್ಫೋಟಕ್ಕೆ ಕಾರಣವಾದವರು ಡಾ.ಉಮರ್, ಡಾ.ಆದಿಲ್, ಡಾ.ಶಹೀನಾ, ಡಾ.ಮೊಹಿಯುದ್ದೀನ್ ಮೊದಲಾದವರು ಇದ್ದಾರೆ. ಅಲ್ ಫಲಾಹ್ ವೈದ್ಯಕೀಯ ಕಾಲೇಜನ್ನೇ ಭಯೋತ್ಪಾದನೆಯ ತಾಣವಾಗಿ ಇಟ್ಟುಕೊಂಡು ದೊಡ್ಡ ಪ್ರಮಾಣದಲ್ಲಿ ಆರ್‍ಡಿಎಕ್ಸ್ ಸಂಗ್ರಹಿಸಿದ್ದರು. ಸುಮಾರು 3 ಸಾವಿರ ಕೆಜಿ ಆರ್‍ಡಿಎಕ್ಸ್ ಸಂಗ್ರಹ ಮಾಡಿದ್ದರು ಎಂದು ವಿವರಿಸಿದರು. ಇದು ಇಡೀ ಬೆಂಗಳೂರನ್ನೇ ಸುಟ್ಟು ಹಾಕಿಬಿಡಬಹುದು ಎಂದು ತಿಳಿಸಿದರು. ಅಪಾರ ಪ್ರಮಾಣದಲ್ಲಿ ರಿಸಿನ್ ಎಂಬ ಆರ್ಸೆನಿಕ್ ಥರದ ವಿಷ ತಯಾರಿಸಿದ್ದರು. ಅವರು ಅಂದುಕೊಂಡ ಯೋಜನೆ ಪ್ರಕಾರ ನಡೆದಿದ್ದರೆ ಬಹುಶಃ ಭಾರತದಲ್ಲಿ ಜಗತ್ತೇ ಬೆಚ್ಚಿ ಬೀಳುವಂಥ ಭಯೋತ್ಪಾದನಾ ದುಷ್ಕøತ್ಯ ನಡೆಯುತ್ತಿತ್ತು ಎಂದು ಹೇಳಿದರು. ಲಕ್ಷಾಂತರ ಜನರನ್ನು ಕೊಲ್ಲುವ ಸಂಚು ಮಾಡಿದ್ದರು ಎಂದು ವಿವರಿಸಿದರು.ಲ...
‘ಮೇಕೆದಾಟು ದಿಗ್ವಿಜಯವು ಕಾನೂನು ತಂಡದ ಪ್ರಯತ್ನದ ಫಲ’ ಎಂದ ಅಡ್ವೋಕೇಟ್ ಜನೆರಲ್ ಶಶಿಕಿರಣ್ ಶೆಟ್ಟಿ

‘ಮೇಕೆದಾಟು ದಿಗ್ವಿಜಯವು ಕಾನೂನು ತಂಡದ ಪ್ರಯತ್ನದ ಫಲ’ ಎಂದ ಅಡ್ವೋಕೇಟ್ ಜನೆರಲ್ ಶಶಿಕಿರಣ್ ಶೆಟ್ಟಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದಂತಾಗಿದೆ.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ಸರ್ಕಾರದ ಅಡ್ವೋಕೇಟ್ ಜನೆರಲ್ ಕೆ ಶಶಿಕಿರಣ್ ಶೆಟ್ಟಿ, ರಾಜ್ಯದ ಪಾಲಿಗೆ ಇದೊಂದು ಅಭೂತಪೂರ್ವ ಗೆಲುವಾಗಿದೆ. ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದಾಗಿ ಈ ಗೆಲುವು ಲಭಿಸಿದೆ ಎಂದಿದ್ದಾರೆ.ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಾ ಬಂದಿತ್ತಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಕರ್ನಾಟಕದ ಮಹತ್ವಾಕಾಂಕ್ಷೆಯ ಯೋಜನೆ ಮುಂದುವರೆಯಲು ಹಾದಿ ಸುಲಭವಾದಂತಾಗಿದೆ ಎಂದು ಕೆ ಶಶಿ ಕಿರಣ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.ಮೇಕೆದಾಟು ಯೋಜನೆಯು ಪರಿಸರಸ್ನೇಹಿ ...
‘ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು’; ಸಿದ್ದರಾಮಯ್ಯ

‘ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು’; ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರಿನ ಗಾಂಧಿನಗರದಲ್ಲಿ ನಡೆದ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ ಒಳಗೊಂಡ, ಸರ್ವರ ಅಭಿವೃದ್ಧಿಯ ಸಮಾಜ ನಿರ್ಮಾಣ ನನ್ನ ಗುರಿ ಎಂದರು. ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ. ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ… pic.twitter....
ಸರ್ಕಾರ ಈಗ ಪಾಪರ್‌ ಆಗಿದೆ. ನೌಕರರಿಗೆ, ಸಿಬ್ಬಂದಿಗೆ ಸಂಬಳ ಕೊಡಲು ಆಗುತ್ತಿಲ್ಲ

ಸರ್ಕಾರ ಈಗ ಪಾಪರ್‌ ಆಗಿದೆ. ನೌಕರರಿಗೆ, ಸಿಬ್ಬಂದಿಗೆ ಸಂಬಳ ಕೊಡಲು ಆಗುತ್ತಿಲ್ಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸರ್ಕಾರ ಈಗ ಪಾಪರ್‌ ಆಗಿದೆ. ನೌಕರರಿಗೆ, ಸಿಬ್ಬಂದಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ರೈತವಿರೋಧಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದರು.ರಾಜ್ಯಾದ್ಯಂತ ಮೆಕ್ಕೆಜೋಳ ಬೆಳೆದ ರೈತರಿಗೆ ಬೆಂಬಲ ಬೆಲೆ ನೀಡಿ ಖರೀದಿಸಲು ರೈತರು ಬೇಡಿಕೆ ಇಟ್ಟಿದ್ದಾರೆ. ಆದರೆ ರೈತ ವಿರೋಧಿ ಸರ್ಕಾರ ಒಂದೇ ಒಂದು ಖರೀದಿ ಕೇಂದ್ರ ತೆರೆದಿಲ್ಲ. ಕಾಲಾಹರಣ ಮಾಡದೆ ಕೂಡಲೇ ಖರೀದಿ ಆರಂಭಿಸಬೇಕು, ಇಲ್ಲದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.ಈರುಳ್ಳಿ ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಮಾರುಕಟ್ಟೆಯಲ್ಲಿ ಸಿಗುತ್ತಿರುವ ದರ ಕಳೆ ಕೀಳಿಸಿದ ಕೂಲಿಯ ಹಣ ಗಿಟ್ಟುತ್ತಿಲ್ಲ. ಇಂತಹ ಸ್ಥಿತಿಯಲ್ಲಿ ನೆರವಿಗೆ ಧಾವಿಸಿ ಈರುಳ್ಳಿ ಖರೀದಿಸಲು ಕ್ರಮ ಕೈಗೊಳ್ಳಬೇಕಿದ್ದ ಸರ್ಕಾರ ಮೀನಾ ಮೇಷ ಎಣಿಸುತ್ತಿದೆ. ಮಾತಿಗೊಮ್ಮೆ ತಮ್ಮದು ರೈತ ಪರ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಬೆನ್ನು ತಟ್ಟಿಕೊಳ್ಳುತ್ತಾರೆ, ಇದೇನಾ ರೈತರ ಪರವಾದ ಕಾಳಜಿ ಎಂದ...
ದೆಹಲಿ ಸ್ಫೋಟ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಕೀಳು ಮಟ್ಟದ ರಾಜಕೀಯ ಎಂದ ವಿಜಯೇಂದ್ರ

ದೆಹಲಿ ಸ್ಫೋಟ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಕೀಳು ಮಟ್ಟದ ರಾಜಕೀಯ ಎಂದ ವಿಜಯೇಂದ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 12 ನಾಗರಿಕರು ಮೃತಪಟ್ಟು, ಹಲವರು ಗಾಯಗೊಂಡ ಭಯೋತ್ಪಾದಕ ಕೃತ್ಯದ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ, ಮತ್ತಿತರ ಕಾಂಗ್ರೆಸ್ ನಾಯಕರ ಬೇಜವಾಬ್ದಾರಿ, ಅಸಂವೇದನೀಯ, ಕೀಳು ರಾಜಕೀಯ ಹೇಳಿಕೆಗಳು ಖಂಡನೀಯ ಮಾತ್ರವಲ್ಲ ಆತಂಕಕಾರಿಯೂ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಕಾಂಗ್ರೆಸ್ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ದೇಶದ ವಿರುದ್ಧ ನಡೆದಿರಬಹುದಾದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಇಡೀ ದೇಶ ಒಂದು ಧ್ವನಿಯಲ್ಲಿ ಮಾತನಾಡಬೇಕಾದ ಸೂಕ್ಷ್ಮ ಸಂದರ್ಭದಲ್ಲೂ ಇವರುಗಳು ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ರಾಜ್ಯದ ದುರಂತ, ದೇಶದ ದೌರ್ಭಾಗ್ಯ. ಕಾಂಗ್ರೆಸ್ ಪಕ್ಷಕ್ಕೆ ದೇಶದ ಭದ್ರತೆ, ನಾಗರಿಕರ ಸಾವು-ನೋವುಗಳು, ನಮ್ಮ ಸೈನಿಕರ ತ್ಯಾಗ, ರಾಷ್ಟ್ರೀಯ ಗೌರವಗಳಂತಹ ವಿಷಯಗಳೂ ಕೂಡ ಕೇವಲ ರಾಜಕೀಯ ಅಸ್ತ್ರವಾಗಿರುವುದು ನಿಜಕ್ಕೂ ಆತಂಕಕಾರಿಯಾಗಿದೆ ಎಂದಿದ್ದಾರೆ.2019ರ ಭೀಕರ ಪುಲ್ವಾಮಾ ದಾಳಿಯ ನಂತರವೂ ಕಾಂಗ್ರೆಸ್‌ ನಾಯಕರು, ಪಾ...
ದಾವಣಗೆರೆ-KIA ನಡುವೆ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆ ಪ್ರಾರಂಭ

ದಾವಣಗೆರೆ-KIA ನಡುವೆ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆ ಪ್ರಾರಂಭ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದಾವಣಗೆರೆ ಸುತ್ತಮುತ್ತಲ ಜನರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣ ಮತ್ತಷ್ಟು ಸುಲಭವಾಗಲಿದೆ. ದಾವಣಗೆರೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ಬಸ್ ಸೌಕರ್ಯ ಕಲ್ಪಿಸುವುದಾಗಿ ಸಾರಿಗೆ ಸಚಿವ ರಾಮಲೀಗಾ ರೆಡ್ಡಿ ನೀಡಿರುವ ಭರವಸೆ ಈಡೇರಿದೆ.ಹೊಸದಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆ ಪ್ರಾರಂಭವಾಗಿದ್ದು, ಈ ಬಸ್ಸುಗಳಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಚಾಲನೆ ನೀಡಿದರು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸ್ಸುಗಳಿಗೆ ಹಸಿರು ನಿಶಾನೆ ತೋರಿದ ಸಚಿವರು,ಫ್ಲೈ ಬಸ್ ಪ್ರಯಾಣಿಕರಿಗೆ ನಂದಿನಿ ಉತ್ಪನ್ನಗಳ ಸ್ಯ್ನಾಕ್ಸ್ ವಿತರಣೆ ಮಾಡಿ ನೂತನ ಕಾರ್ಯಕ್ರಮಗಳಿಗೆ ಮುನ್ನುಡಿ ಬರೆದರು.ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಸಾರಿಗೆ ಸಚಿವರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮೊದಲ ಬಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಂದ...
ದೆಹಲಿಯ ಸ್ಪೋಟದ ನಂತರ ರಾಜ್ಯದಲ್ಲೂ ಬಿಗಿ ಭದ್ರತೆ

ದೆಹಲಿಯ ಸ್ಪೋಟದ ನಂತರ ರಾಜ್ಯದಲ್ಲೂ ಬಿಗಿ ಭದ್ರತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಜನರಲ್ಲಿ ಸಿಎಂ ಮನವಿ ಮಾಡಿದ್ದಾರೆ....
ಏರ್ಪೋರ್ಟ್’ನಲ್ಲಿ ನಮಾಜ್ ಮಾಡಲು ಅವಕಾಶ, ಬಿಜೆಪಿ ನಾಯಕರ ಆಕ್ರೋಶ

ಏರ್ಪೋರ್ಟ್’ನಲ್ಲಿ ನಮಾಜ್ ಮಾಡಲು ಅವಕಾಶ, ಬಿಜೆಪಿ ನಾಯಕರ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಅಂಕುಶ ಹಾಕಲು ಸಚಿವ ಪ್ರಿಯಾಂಕ್ ಖರ್ಗೆ ಪ್ರಯತ್ನ ನಡೆಸಿರುವ ವಿಚಾರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಆದರೆ, ಮತ್ತೊಂದೆಡೆ ಏರ್ಪೋರ್ಟ್ ಆವರಣದಲ್ಲಿ ಸಾಮೂಹಿಕ ನಮಾಜ್ ನಡೆಸಲು ಅವಕಾಶ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ನಮಾಜ್ ಬಗ್ಗೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಸಹಿತ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳಿಗೆ ರಾಜ್ಯ ಸರ್ಕಾರ ಹೊಣೆ ಎಂದು ಅವರು ದೂರಿದ್ದಾರೆ. How is this even allowed inside the T2 Terminal of Bengaluru International Airport?Hon’ble Chief Minister @siddaramaiah and Minister @PriyankKharge do you approve of this?Did these individuals obtain prior permission to offer Namaz in a high-security airport zone?Why is it… pic.twitter.com/iwWK2rYWZa— Vijay Prasad (@v...
ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ಆರೋಪ: ಸಿಎಂ, ಗೃಹ ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಆಗ್ರಹ

ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ಆರೋಪ: ಸಿಎಂ, ಗೃಹ ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ದೊರಕುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೆಸಾರ್ಟ್‍ಗೆ ಹೋಗಬೇಕಾದ ಅವಶ್ಯಕತೆ ಇಲ್ಲ; ಜೈಲಿಗೆ ಹೋದರೆ ಸಾಕು. ನಿಮಗೆ ಗಾಂಜಾ, ಡ್ರಿಂಕ್ಸ್ (ದಾರೂ) ಸಿಗುತ್ತದೆ. ಬ್ಲೂಫಿಲಂ ನೋಡಬೇಕಾದರೆ ಅದೂ ಸಿಗುತ್ತದೆ. ಮೊಬೈಲ್‍ನಲ್ಲಿ ಮಾತನಾಡಲೂ ವ್ಯವಸ್ಥೆ ಇದೆ. ಇವರಿಗೆ ನಾಚಿಕೆ ಆಗಬೇಕಲ್ಲವೇ ಎಂದು ಆಕ್ಷೇಪಿಸಿದರು.ಭಯೋತ್ಪಾದಕನ ಕೈಗೆ ಮೊಬೈಲ್ ಸಿಗುವುದಾದರೆ ದೇಶದ್ರೋಹದ ಚಟುವಟಿಕೆಗೆ ರಾಜಾಶ್ರಯ ನೀಡಿದಂತೆ ಅಲ್ಲವೇ ಎಂದು ಕೇಳಿದರು. ಉಮೇಶ್ ರೆಡ್ಡಿ ಎಂಬ ಅತ್ಯಾಚಾರಿ ಜೈಲಿನಲ್ಲಿ ಮೋಜು ಮಸ್ತಿ ಮಾಡಬಹುದಾದರೆ, ಜೈಲಿನಲ್ಲಿ ಕ್ರಿಮಿನಲ್‍ಗಳಿಗೆ ರಾಜಾಶ್ರಯ ಇದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು.ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಮಾದಕ ವಸ್ತು ಉತ್ಪಾದನಾ ಕಾರ್ಖಾನೆ ಆರಂಭವಾಗುತ್ತದೆ. ಕರ್ನಾಟಕದವರಿಗೆ ಮಾಹಿತಿಯೇ ಇಲ್ಲ; ಮಹಾರಾಷ್ಟ್ರ ಪ...