Thursday, August 13

ವಿದೇಶ

ಕಚೇರಿ ಅವಧಿ ಮುಗಿದ ನಂತರ ಮೇಲ್ಮನವಿ ವಿಚಾರಣೆ; RTI ಕಾರ್ಯಕರ್ತರನ್ನು ಹೀನಾಯವಾಗಿ ನಡೆದುಕೊಂಡ ಅಧೀಕ್ಷಕ ಇಂಜಿನೀಯರ್

ಕಚೇರಿ ಅವಧಿ ಮುಗಿದ ನಂತರ ಮೇಲ್ಮನವಿ ವಿಚಾರಣೆ; RTI ಕಾರ್ಯಕರ್ತರನ್ನು ಹೀನಾಯವಾಗಿ ನಡೆದುಕೊಂಡ ಅಧೀಕ್ಷಕ ಇಂಜಿನೀಯರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರಿಗಳು ಸಾರ್ವಜನಿಕರನ್ನು ಯಾವ ರೀತಿ ಹೀನಾಯವಾಗಿ ಕಾಣುತ್ತಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಗರಣಗಳ ವಿರುದ್ಧ ಹೋರಾಟ ನಡೆಸಿ ಭ್ರಷ್ಟಾಚಾರ ಮುಕ್ತ ಅಧಿಕಾರ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳುತ್ತದೆ ಹಾಗೂ ಹಿಂದಿನ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳನ್ನು ಬಯಲು ಮಾಡುವಲ್ಲಿ ಮುಂಚೂಣಿಯಲ್ಲಿದ್ದ ಸಚಿವ ಪ್ರಿಯಾಂಕ್ ಖರ್ಗೆಯವರು ಇದೀಗ ತಮ್ಮ ಇಲಾಖೆಯ ಅಧಿಕಾರಿಯ ಕರ್ತವ್ಯಲೋಪ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದೇ ಕುತೂಹಲದ ವಿಷಯ.ಈ ಸರ್ಕಾರದ ಅವಧಿಯಲ್ಲೂ ಅಧಿಕಾರಿಗಳ ದೌಲತ್ತು, ಕರ್ತವ್ಯಲೋಪಗಳು ಸಾರ್ವಜನಿಕರಿಗೆ ಸವಾಲಾಗಿದೆ ಎಂಬುದಕ್ಕೆ ದಾವಣಗೆರೆಯಲ್ಲಿ ನಡೆದಿರುವ ಈ ಪ್ರಕರಣ ಸಾಕ್ಷಿಯಾಗಿದೆ. ಬೆಂಗಳೂರಿನ ಆಲ್ವಿನ್ ಎಂ ಎಂಬವರು ಸಲ್ಲಿಸಿದ್ದ ಮಾಹಿತಿ ಹಕ್ಕು ಮೇಲ್ಮನವಿಯೊಂದರ ವಿಚಾರಣೆ ವೇಳೆ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವೃತ್ತದ ಅಧೀಕ್ಷಕ ಅಭಿಯಂತರ ಇಂದ್ರಕುಮಾರ್ ಅವರು ಮೇಲ್ಮನವಿ ಪ್ರತಿನಿಧಿ ಜೊತೆ ಹೀನಾಯವಾ...
ಸಂಪುಟ ಪುನಾರಚನೆ ವೇಳೆ ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಸಂಪುಟ ಪುನಾರಚನೆ ವೇಳೆ ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕೋಲಾರ: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ.ಕೋಲಾರದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ನೀಡುವ ಕುರಿತು ಮಾತನಾಡಿ, “ಸಂಪುಟ ಪುನಾರಚನೆ ವೇಳೆ ನೋಡೋಣ,” ಎಂದು ಹೇಳಿದರು.ಜಿಲ್ಲೆಯಲ್ಲಿ ನಾಲ್ಕು ಮಂದಿ ಶಾಸಕರು ಇದ್ದು, ಸಚಿವ ಸ್ಥಾನದ ಬೇಡಿಕೆ ಕುರಿತು ಪರಿಶೀಲಿಸಲಾಗುವುದು ಎಂದು ಸಿಎಂ ತಿಳಿಸಿದರು.ಇದೇ ವೇಳೆ ಮಾತನಾಡಿದ ಅವರು, ಯತ್ತಿನಹೊಳೆ ಯೋಜನೆ ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು....
ವಿದೇಶಿ ಮಾರುಕಟ್ಟೆಯಲ್ಲೂ ಪ್ರದರ್ಶನವಾಗಲಿದೆ ನಾಡಿನ ಉತ್ಪನ್ನಗಳು

ವಿದೇಶಿ ಮಾರುಕಟ್ಟೆಯಲ್ಲೂ ಪ್ರದರ್ಶನವಾಗಲಿದೆ ನಾಡಿನ ಉತ್ಪನ್ನಗಳು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ.ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಈಗ ಸ್ವಸಾಹಯ ಗುಂಪುಗಳ ಡಿಜಿಟಲ್ ಸಾಮರ್ಥ್ಯ ಹೆಚ್ಚಿಸಲು ಅಂತಾರಾಷ್ಟ್ರೀಯ ಖ್ಯಾತಿಯ "ವಾಲ್‌ಮಾರ್ಟ್‌" ಜೊತೆ ಒಪ್ಪಂದ ಮಾಡಿಕೊಂಡಿದೆ.ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಮತ್ತು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಮಂಗಳವಾರ "ವಾಲ್‌ಮಾರ್ಟ್‌ ವೃದ್ಧಿ" ಒಪ್ಪಂದಕ್ಕೆ ಸಹಿ ಹಾಕಿದರು. ಎನ್‌ಎಲ್‌ಎಂ ನಿರ್ದೇಶಕಿ ಆರ್. ಸ್ನೇಹಲ್ ಮತ್ತು ಐ2ಐ ಫೌಂಡೇಶನ್‌ನ ಟ್ರಸ್ಟಿ ಪಾರುಲ್ ಸೋನಿ ಸಹಿ ಹಾಕಿದರು.ಈ ಒಪ್ಪಂದದ ಅವಧಿ ಮೂರು ವರ್ಷಗಳಾಗಿರುತ್ತದೆ. ವಾಲ್ಮಾರ್ಟ್ ವೃದ್ಧಿಯ ಅನುಷ್ಠಾನ ಪಾಲುದಾರರಾದ "ಐಡಿಯಾಸ್ ಟು ಇಂಪ್ಯಾಕ್ಟ್" ಫೌಂಡೇಶನ್ ಮೂಲಕ ಸ್ವಸಹಾಯ ಗುಂಪುಗಳಿಗೆ ಉಚಿತ ...
ಬೀದರ್: ಭೀಕರ ಅಪಘಾತ: ತೆಲಂಗಾಣ ಮೂಲದ ಮೂವರು ಸಾವು

ಬೀದರ್: ಭೀಕರ ಅಪಘಾತ: ತೆಲಂಗಾಣ ಮೂಲದ ಮೂವರು ಸಾವು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೀದರ್: ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಕಾರು ಮತ್ತು ಕೊರಿಯರ್‌ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಘಟನೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.ಮೃತರನ್ನು ರಾಜಪ್ಪ, ನವೀನ್ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ. ಇವರಲ್ಲಿ ನಾಗರಾಜ್ ನಾರಾಯಣ ಖೇಡ್‌ನ ಪಿಯುಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು ಎಂದು ತಿಳಿದುಬಂದಿದೆ.ಮೃತರು ತೆಲಂಗಾಣ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರದ ದತ್ತಾತ್ರೇಯ ದೇಗುಲಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಸುದ್ದಿ ತಿಳಿಯುತ್ತಿದ್ದಂತೆಯೇ ಧನ್ನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಧನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ....
‘ದುಬಾರಿ ಬ್ರ್ಯಾಂಡ್‌ ಬೆಂಗಳೂರು ಬೇಡ, ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ’; ಅಶೋಕ್

‘ದುಬಾರಿ ಬ್ರ್ಯಾಂಡ್‌ ಬೆಂಗಳೂರು ಬೇಡ, ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ’; ಅಶೋಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು ಎಲ್ಲ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದಾಗಿ ಬೆಂಗಳೂರು ಗಾರ್ಬೇಜ್‌ ಸಿಟಿಯಾಗಿ ಬದಲಾಗಿದೆ. ಎಲ್ಲ ರಸ್ತೆಗಳಲ್ಲಿ ಗುಂಡಿಗಳು ಹಾಗೂ ಕಸದ ರಾಶಿ ಕಂಡುಬರುತ್ತಿದೆ. ನಗರಕ್ಕೆ ದ್ರೋಹ ಬಗೆದ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಹಾಗೂ ಒಂದು ವಾರ ಕಾಲ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್‌ 6 ರಿಂದ 15 ರವರೆಗೆ ಸಹಿ ಸಂಗ್ರಹ ಅಭಿಯಾನ ಮಾಡಲಾಗುವುದು ಎಂದು ತಿಳಿಸಿದರು.ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ. ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಆ ಹಣವನ್ನು...
‘ಸುರಂಗ ವಿವಾದ’: ಬಿಜೆಪಿ ನಾಯಕರಿಂದ ಸುಳ್ಳು ಆರೋಪ ಎಂದ ಕಾಂಗ್ರೆಸ್

‘ಸುರಂಗ ವಿವಾದ’: ಬಿಜೆಪಿ ನಾಯಕರಿಂದ ಸುಳ್ಳು ಆರೋಪ ಎಂದ ಕಾಂಗ್ರೆಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು ನಗರದ ಅಭಿವೃದ್ಧಿ ವಿರೋಧಿಗಳು ಹಾಗೂ ಸುರಂಗ ಮಾರ್ಗದ ಬಗ್ಗೆ ಸುಳ್ಳಿನ ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಪಕ್ಷದ ನಾಯಕರ ಆಧಾರ ರಹಿತ ಹೇಳಿಕೆ ವಿರುದ್ಧ ಪತ್ರಿಕಾಗೋಷ್ಠಿಯ ಮೂಲಕ ಬಿಜೆಪಿಯ ಭ್ರಷ್ಟಾಚಾರಿಗಳ ಅವೈಜ್ಞಾನಿಕ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ಬಳಿ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕೆಪಿಸಿಸಿ ಮಾಧ್ಯಮ ವಕ್ತಾರರಾದ ಎಂ. ಲಕ್ಷ್ಮಣ್, ಕೆಪಿಸಿಸಿ ನಾಯಕರಾದ ಎಸ್.ಮನೋಹರ್, ಸುಧಾಕರ್, ಆನಂದ್, ಪುಟ್ಟರಾಜು, ಕುಶಾಲ್ ಹರುವೇಗೌಡ, ನವೀನ್ ಜಂಟಿ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರುನಗರ ಅಭಿವೃದ್ದಿ ಕೆಲಸಗಳಿಗೆ ವಿರೋಧಿಸುತ್ತಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ತೇಜಸ್ವಿಸೂರ್ಯ ನಡೆಯನ್ನು ಖಂಡಿಸಿದರು.ಎಂ.ಲಕ್ಷ್ಮಣ್ ರವರು ಮಾತನಾಡಿ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸವನ್ನು ಬಿಜೆಪಿ ಪಕ್ಷ ಮಾಡುತ್ತಿದೆ. ಟನಲ್ ಮಾಡುವುದಕ್ಕೆ ಖಾಸಗಿ ಸಹಬಾಗಿತ್ವದಲ್ಲಿ ಕಾಮಗಾರಿ ನಡೆಯುತ್ತದೆ ಇದರಲ್ಲಿ ಏನು ಸಿಗುವುದಿಲ್ಲ ಎಂದು ಅಶೋಕ್, ತೇಜಸ್ವಿಸೂರ್ಯ ಕೊರಗುತ್ತಿದ್ದಾರೆ ಎಂದು ಟೀಕಿಸಿದರು...
ಎ ಖಾತಾ, ಬಿ ಖಾತಾ ಮೂಲಕ ದುಡ್ಡು ಹೊಡೆಯುವ ಸಂಚು; ಬಿಜೆಪಿ ಆರೋಪ

ಎ ಖಾತಾ, ಬಿ ಖಾತಾ ಮೂಲಕ ದುಡ್ಡು ಹೊಡೆಯುವ ಸಂಚು; ಬಿಜೆಪಿ ಆರೋಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಎ ಖಾತಾ, ಬಿ ಖಾತಾ ವಿಚಾರವಾಗಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ. ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಆ ಹಣವನ್ನು ಹೊಂದಿಸಲು ಈ ಕ್ರಮ ತರಬೇಕಿಲ್ಲ. ಇಷ್ಟೊಂದು ಹಣವನ್ನು ಜನರು ಪಾವತಿಸಲು ಸಾಧ್ಯವಿಲ್ಲ ಎಂದರು.ನೋಂದಣಿ ಮೇಲೆ 5% ಹೆಚ್ಚಿಸಿ ಕಮಿಶನ್‌ ಹೊಡೆಯಲು ಪ್ರಯತ್ನ ಮಾಡಲಾಗಿದೆ. ಕಸದ ಸೆಸ್‌ ತಂದು ಜನರ ಮೇಲೆ ಹೊರೆ ಹಾಕಲಾಗಿದೆ. ಬೆಸ್ಕಾಂನಲ್ಲಿ ಒಸಿ, ಸಿಸಿ ಮೂಲಕ ಹಣ ಸಂಗ್ರಹಿಸಲಾಗುತ್ತಿದೆ. ತಾತ್ಕಾಲಿಕವಾಗಿ ವಿದ್ಯುತ್‌ ಪಡೆದರೆ ಮೂರು ಪಟ್ಟು ಶುಲ್ಕ ನೀಡಬೇಕಿದ್ದು, ಇದನ್ನೇ ಬೆಸ್ಕಾಂನಿಂದ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅಶೋಕ್ ಆರೋಪಿಸಿದರು.ಜನರಿಗೆ ಇಂತಹ ದುಬಾರಿ ಬ್ರ್ಯಾಂಡ್‌ ಬೆಂಗಳೂರು ಬೇಕಿಲ್ಲ. ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ ಎಂದರು....
ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳು: ಎನ್ ಚಲುವರಾಯಸ್ವಾಮಿ

ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳು: ಎನ್ ಚಲುವರಾಯಸ್ವಾಮಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಗ್ಯಾರಂಟಿ ಯೋಜನೆಯನ್ನು ರಾಜ್ಯ ಸರ್ಕಾರವು ಬಡವರ ಜೀವನ ಸುಧಾರಣೆಗಾಗಿ ಜಾರಿಗೆ ತಂದಿದ್ದು ಇದು ರಾಹುಲ್ ಗಾಂಧಿಯವರ ಕನಸು ಆಗಿದೆ. ಮತ್ತು ಸಿದ್ದರಾಮಯ್ಯರವರ ಬಡವರ ಮೇಲಿನ ಕಾಳಜಿಯಿಂದ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿರುವುದು ಎಂದು ಹೇಳಿದರು.ಪಂಚ ಗ್ಯಾರಂಟಿಯಿಂದ ರಾಜ್ಯವು ಇತರೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂಬ ಮಾತು ಸತ್ಯವಲ್ಲ. ಪಂಚ ಗ್ಯಾರಂಟಿ ಅನುಷ್ಠಾನವಾದ ನಂತರ ಸರ್ಕಾರ ಕೊರತೆ ಇಲ್ಲದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಇತಿಹಾ...
ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ RSS ದೊಡ್ಡದಲ್ಲ; ಪ್ರಿಯಾಂಕ್ ಖರ್ಗೆ

ದೇಶಕ್ಕಿಂತ, ಸಂವಿಧಾನಕ್ಕಿಂತ, ಕಾನೂನಿಗಿಂತ RSS ದೊಡ್ಡದಲ್ಲ; ಪ್ರಿಯಾಂಕ್ ಖರ್ಗೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಕೆಲವು ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಷೇಧ ಚರ್ಚೆಗೆ ಮುನ್ನುಡಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ RSS ನಾಯಕರಿಗೆ ಒದಗಿಸುವ ಭದ್ರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ. ಆರೆಸ್ಸೆಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ.ಆರ್ಎಸ್ಎಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ?ಒಂದು NGO ಮುಖ್ಯಸ್ಥರಿಗೆ ಅತಿ ಭದ್ರತೆಯ ಲಿಐಸನ್ ಪ್ರೊಟೊಕಾಲ್ ಸೆಕ್ಯೂರಿಟಿ… pic.twitter.com/aUJvaiDYjo— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 3, 2025...
ಪರೀಕ್ಷೆ ವೇಳೆ ಮೂಗುತಿ, ಕಿವಿಯೋಲೆ ಬಿಚ್ಚಿಸಿದ KEA ವಿರುದ್ಧ ಯತ್ನಾಳ್ ಆಕ್ರೋಶ

ಪರೀಕ್ಷೆ ವೇಳೆ ಮೂಗುತಿ, ಕಿವಿಯೋಲೆ ಬಿಚ್ಚಿಸಿದ KEA ವಿರುದ್ಧ ಯತ್ನಾಳ್ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪರೀಕ್ಷೆಯಲ್ಲಿ ನಕಲು ತಡೆಯೋ ಭರದಲ್ಲಿ ಹೆಣ್ಣು ಮಕ್ಕಳ ಕಿವಿಯೋಲೆ, ಮೂಗುತಿಯನ್ನು ಬಿಚ್ಚಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕ್ರಮ ಅತಾರ್ಕಿಕ, ಅಮಾನವೀಯ ಎಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಧಿಕಾರಿಗಳ ಕ್ರಮವು ಹಿಂದೂ ವಿರೋಧಿ ನಿಲುವಾಗಿದೆ ಎಂದು ಆರೋಪಿಸಿದ್ದಾರೆ.ಮೂಗುತಿ ಹಾಗೂ ಕಿವಿಯೋಲೆ ಬಿಚ್ಚಿಸಿವುದರಿಂದ ನಕಲು ತಡೆಯಬಹುದು ಎಂದು ಪರೀಕ್ಷಾ ಪ್ರಾಧಿಕಾರ ತಿಳಿದಿದ್ದರೆ, ಅದು ಮೂರ್ಖತನದ ಪರಮಾವಾಧಿಯಷ್ಟೇ ಎಂದವರು ಹೇಳಿದ್ದಾರೆ.ತಂತ್ರಜ್ಞಾನ, ಸಿ.ಸಿ. ಕ್ಯಾಮೆರಾ ಗಳನ್ನೂ ಉಪಯೋಗಿಸಿ ಪರೀಕ್ಷೆಯಲ್ಲಿ ನಕಲು, ಅಕ್ರಮ ಆಗದಂತೆ ನೋಡಿಕೊಳ್ಳಬೇಕೇ ಹೊರತು ಈ ರೀತಿಯಾದ ಅವೈಜ್ಞಾನಿಕ ಕ್ರಮಗಳಿಂದ ಸಾಧ್ಯವಿಲ್ಲ. ಅಷ್ಟಕ್ಕೂ, ಕಿವಿಯೋಲೆ ಹಾಗೂ ಮೂಗುತಿಯಲ್ಲಿ ಏನನ್ನು ಅಡಗಿಸಿಕೊಳ್ಳಬಹುದು ಎಂಬುದನ್ನು ಪ್ರಾಧಿಕಾರ ಸ್ಪಷ್ಟೀಕರಿಸಬೇಕು ಎಂದಿದ್ದಾರೆ.ಈ ರೀತಿಯಾದ ಅವೈಜ್ಞಾನಿಕ, ಅತಾರ್ಕಿಕ ನಿರ್ಧಾರಗಳನ್ನು ಪರೀಕ್ಷಾ ಪ್ರಾಧಿಕಾರ ಕೈಗೊಂಡರೆ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಯತ್ನಾಳ್ ನೀಡಿದ್ದಾರೆ. ಪರೀಕ್ಷೆಯಲ್ಲಿ ನಕಲು ತಡೆಯೋ ಭರದಲ್ಲಿ ಹ...