
ಸ್ಪೀಕರ್ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಡಿದ ಬಿಜೆಪಿ ನಾಯಕರ ವಿರುದ್ಧ ಹಕ್ಕುಚ್ಯುತಿ ದೂರು; ಕಾಂಗ್ರೆಸ್ MLC ಐವನ್ ಡಿಸೋಜಾ
ಮಂಗಳೂರು: ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ದ ಬಿಜೆಪಿ ನಾಯಕರು ಮಾಡಿರುವ ಭ್ರಷ್ಟಾಚಾರದ ಆರೋಪ ಸತ್ಯಕ್ಕೆ ದೂರವಾದುದು. ರಾಜಕೀಯ ದುರುದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದ್ದು, ಇದರಿಂದ ಸದನ ಹಕ್ಕುಚ್ಯುತಿ ಉಂಟಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪ್ರತಿಕ್ರಿಯಿಸಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಐವನ್ ಡಿಸೋಜಾ, ಯು.ಟಿ.ಖಾದರ್ ಅವರು ಶಾಸನ ಸಭೆಯ ಅತ್ಯನ್ನತ ಹುದ್ದೆಯಾಗಿರುವ ವಿಧಾನಸಭಾಧ್ಯಕ್ಷರಾಗಿದ್ದಾರೆ. ಆ ಸ್ಥಾನದಲ್ಲಿರುವವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಸಂದರ್ಭದಲ್ಲಿ ಶಾಸನಾತ್ಮಕ ಪ್ರಕ್ರಿಯೆಗಳನ್ನು ಅನುಸಬೇಕಾಗುತ್ತದೆ. ಅದನ್ನು ಹೊರತಾಗಿ ವಿಧಾನಸಭೆಯ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಹಾಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಹಾಲಿ ಸ್ಪೀಕರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿದರು. ಇದು ಸದನವನ್ನು ನಿಂದಿಸಿದ ಹಾಗೂ ಹಕ್ಕುಚ್ಯುತಿಯ ನಡೆಯಾಗಿರುವುದರಿಂದ ಅವರ ವಿರುದ್ದ ಹಕ್ಕುಚ್ಯುತಿ ದೂರನ್ನು ನೀಡಲಾಗುವುದು ಎಂದು ಐವನ್ ಡಿಸೋಜಾ ತಿಳಿಸಿದರು.ಯು.ಟಿ.ಖಾದರ್ ರವರು ವಿಧಾನಸಭಾ ಸಚಿವಾಲಯದ ಮು...









