Thursday, August 13

ವಿದೇಶ

ಲಾಲ್‌ಬಾಗ್‌ ಉಳಿಸಲು ನವೆಂಬರ್‌ 2 ರಂದು ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಲಾಲ್‌ಬಾಗ್‌ ಉಳಿಸಲು ನವೆಂಬರ್‌ 2 ರಂದು ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್‌ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ. ಎಲ್ಲಿ ಯಾರ ಮನೆ ಹೋಗಲಿದೆ ಎಂದು ತಿಳಿಯುತ್ತಿಲ್ಲ. ಲಾಲ್‌ಬಾಗ್‌ನಲ್ಲಿ 6 ಎಕರೆ ಜಮೀನು ಕಬಳಿಕೆ ಮಾಡಿ ಯೋಜನೆ ಮಾಡಲಾಗುತ್ತದೆ. ಇದಕ್ಕೆ ಯಾವ ಇಲಾಖೆಯೂ ಅನುಮತಿ ನೀಡಿಲ್ಲ. ಬಿಹಾರ ಚುನಾವಣೆ ಬಂದಿರುವುದರಿಂದ ಹಣ ಮಾಡಲು ಈ ಯೋಜನೆ ಜಾರಿ ಮಾಡುತ್ತಿರಬಹುದು. ಲಾಲ್‌ಬಾಗ್‌ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಘೋಷಣೆಯಡಿ ಇದೇ ನವೆಂಬರ್‌ 2 ರ ಭಾನುವಾರ ಬೆಳಗ್ಗೆ 8 ಗಂಟೆಗೆ ಲಾಲ್‌ಬಾಗ್‌ನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಎಲ್ಲ ಶಾಸಕರು ಸಭೆ ಸೇರಿ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಹೋರಾಟ ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಬಿಜೆಪಿ ಅವಧಿಯಲ್ಲಿ ರಸ್ತೆ ದುರಸ್ತಿಗೆ 8,000 ಕೋಟಿ ರೂ....
ಕರುನಾಡಿನ ಸಾಧಕರಿಗೆ ಕಿರೀಟ: 70 ಮಂದಿ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿಘೋಷಣೆ

ಕರುನಾಡಿನ ಸಾಧಕರಿಗೆ ಕಿರೀಟ: 70 ಮಂದಿ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿಘೋಷಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆಗೈದ 70 ಮಂದಿ ಗಣ್ಯರು ಈ ಬಾರಿಗೆ ಗೌರವಕ್ಕೆ ಭಾಜನರಾಗಿದ್ದಾರೆ.ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ಸಾಹಿತ್ಯ, ಸಂಗೀತ, ಜಾನಪದ, ವೈದ್ಯಕೀಯ, ಶಿಕ್ಷಣ, ಕ್ರೀಡೆ, ಮಾಧ್ಯಮ, ಸಮಾಜಸೇವೆ ಸೇರಿದಂತೆ ವಿವಿಧ ರಂಗಗಳಲ್ಲಿ ಈ ಎಲ್ಲರೂ ಸಲ್ಲಿಸಿದ ಅನನ್ಯ ಸೇವೆಯು ಇತರರಿಗೆ ಸ್ಪೂರ್ತಿಯಾಗಲಿ ಎಂದು ಶುಭ ಹಾರೈಸಿದ್ದಾರೆ. 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ನಾಡಿನ‌ ಎಲ್ಲಾ ಗಣ್ಯ ಮಹನೀಯರಿಗೆ ಅಭಿನಂದನೆಗಳು. ಸಾಹಿತ್ಯ, ಸಂಗೀತ, ಜಾನಪದ, ವೈದ್ಯಕೀಯ, ಶಿಕ್ಷಣ, ಕ್ರೀಡೆ, ಮಾಧ್ಯಮ, ಸಮಾಜಸೇವೆ ಸೇರಿದಂತೆ ವಿವಿಧ ರಂಗಗಳಲ್ಲಿ ಈ ಎಲ್ಲರೂ ಸಲ್ಲಿಸಿದ ಅನನ್ಯ ಸೇವೆಯು ಇತರರಿಗೆ ಸ್ಪೂರ್ತಿಯಾಗಲಿ ಎಂದು ಹಾರೈಸುತ್ತೇನೆ. pic.twitter.com/yoM3YHF6rj— Siddaramaiah (@siddaramaiah) October 30, 2025...
RSS ಪಥಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಓ ಪ್ರವೀಣ್ ಕುಮಾರ್ ಅಮಾನತು ಆದೇಶಕ್ಕೆ ಕೆಎಸ್‌ಎಟಿ ತಡೆ

RSS ಪಥಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಓ ಪ್ರವೀಣ್ ಕುಮಾರ್ ಅಮಾನತು ಆದೇಶಕ್ಕೆ ಕೆಎಸ್‌ಎಟಿ ತಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಅಸ್ತಿತ್ವದಲ್ಲಿಲ್ಲದ ಕಾನೂನು ಅಸ್ತ್ರ ಪ್ರಯೋಗಿಸಲು ಪ್ರಯತ್ನಿಸುತ್ತಿರುವ ಸರ್ಕಾರಕ್ಕೆ ಮತ್ತೆ ಮತ್ತೆ ಮುಜುಗರದ ಸನ್ನಿವೇಶ ಎದುರಾಗುತ್ತಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ.ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ (ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ) ತಡೆ ನೀಡಿದೆ.ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಮಾಧ್ಯಮ 'X'ನಲ್ಲಿ ಪ್ರತಿಕ್ರಿಯಿಸಿದ್ದು, 'ರಾಯಚೂರಿನ ಲಿಂಗಸೂಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಪಿಡಿಒ ಪ್ರವೀಣ್‌ಕುಮಾರ್ ಅವರನ್ನು ಅಮಾನತುಗೊಳಿಸಿರುವುದನ್ನು ನನ್ನ ಕಾನೂನು ಕಚೇರಿಯು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಮುಂದೆ ಪ್ರಶ್ನಿಸಿತ್ತು. ರಾಜಕೀಯ ಒತ್ತಡದಿಂದ ಯಾಂತ್ರಿಕವಾಗಿ...
ಹಿಂಗಾರು ಹಂಗಾಮಿಗೆ ರಸಗೊಬ್ಬರದ ಕೊರತೆ ಇಲ್ಲ: ಚಲುವರಾಯಸ್ವಾಮಿ

ಹಿಂಗಾರು ಹಂಗಾಮಿಗೆ ರಸಗೊಬ್ಬರದ ಕೊರತೆ ಇಲ್ಲ: ಚಲುವರಾಯಸ್ವಾಮಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ಅನಾನುಕೂಲವಾಗದಂತೆ ರಸಗೊಬ್ಬರ ವಿತರಣೆ ಮಾಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ ಹಾಗು 5 ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕರೆ ನೀಡಿದರು. ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ಸಚಿವರು ನಿರ್ದೇಶನ ನೀಡಿದರು.ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ. ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ ರೈತರು ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು. ಇಲಾ...
‘ಯಾವುದೇ ಜಾತಿಗಳಿಗೂ ರೋಸ್ಟರ್’ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು’: ಅಧಿಕಾರಿಗಳಿಗೆ ಸಿಎಂ ಸೂಚನೆ

‘ಯಾವುದೇ ಜಾತಿಗಳಿಗೂ ರೋಸ್ಟರ್’ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು’: ಅಧಿಕಾರಿಗಳಿಗೆ ಸಿಎಂ ಸೂಚನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಚರ್ಚೆ ನಡೆದಿದೆ.ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದವರು ತಿಳಿಸಿದರು.ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂ...
ಸ್ಪೀಕರ್ ಸಚಿವಾಲಯದ ಕರ್ಮಕಾಂಡ; ಬಿಜೆಪಿ ಶಾಸಕರ ವೈಫಲ್ಯದತ್ತ ಬೊಟ್ಟು ಮಡಿದ ಕಾನೂನು ತಜ್ಞ ಮನೋರಾಜ್ ರಾಜೀವ್

ಸ್ಪೀಕರ್ ಸಚಿವಾಲಯದ ಕರ್ಮಕಾಂಡ; ಬಿಜೆಪಿ ಶಾಸಕರ ವೈಫಲ್ಯದತ್ತ ಬೊಟ್ಟು ಮಡಿದ ಕಾನೂನು ತಜ್ಞ ಮನೋರಾಜ್ ರಾಜೀವ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಮಂಗಳೂರು: ವಿಧಾನಸಭೆ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಡಿದ್ದು, ಸ್ಪೀಕರ್‌ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರ ಆರೋಪ ಮಾಡಿದೆ. ಹಣಕಾಸು ಇಲಾಖೆಯ ತಿರಸ್ಕಾರದ ನಡುವೆಯೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯಪ್ರವೇಶದಿಂದ ಅನುಮತಿ ಪಡೆದು ದುಪ್ಪಟ್ಟು ದರದಲ್ಲಿ ಖರೀದಿ ನಡೆಸಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.ಈ ಬಗ್ಗೆ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿ ನಡೆಸಿ ಮಾಡಿರುವ ಆರೋಪ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ವಿಚಾರದಲ್ಲಿ ಕರಾವಳಿಯ ಬಿಜೆಪಿ ನಾಯಕರೂ ಯು.ಟಿ.ಖಾದರ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.ಈ ಬೆಳವಣಿಗೆ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಹಿರಿಯ ವಕೀಲರೂ ಆದ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರೂ ಆದ ಮನೋರಾಜ್ ರಾಜೀವ್, ಬಿಜೆಪಿ ನಾಯಕರ ವೈಫಲ್ಯಗಳನ್ನು ಮುಂದಿಟ್ಟು ಪ್ರತಿಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂದಿನ ಸರ್ಕಾರದಲ್ಲಿ ಬಿಜೆಪಿ ನಾಯಕರು ಹಲವಾರು ರೀತಿ ಹಗರಣಗಳಲ್ಲಿ ಭಾ...
ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಟೆಂಡರ್ ಆರೋಪ; ಸಚಿವ ಹೆಚ್.ಸಿ.ಮಹದೇವಪ್ಪ ಸ್ಪಷ್ಟನೆ

ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಟೆಂಡರ್ ಆರೋಪ; ಸಚಿವ ಹೆಚ್.ಸಿ.ಮಹದೇವಪ್ಪ ಸ್ಪಷ್ಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ ಹಗರಣ ನಡೆದಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದು ಅರ್ಹತೆ ಇಲ್ಲದ ಸಂಸ್ಥೆಗಳಿಗೆ ಟೆಂಡರ್‌ ನೀಡಲಾಗಿದೆ ಎಂಬ ಆರೋಪವನ್ನು ಸಚಿವ ಹೆಚ್.ಸಿ.ಮಹದೇವಪ್ಪ ಅಲ್ಲಗಳೆದಿದ್ದಾರೆ.ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಇದು ವಾಸ್ತವಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿರುವಂತಹ ಸಂಗತಿಯಾಗಿದ್ದು, ಮಾಧ್ಯಮಗಳ ಮೂಲಕ ತಪ್ಪಾದ ವಿವರಗಳನ್ನು ಸಾರ್ವಜನಿಕರಿಗೆ ನೀಡುವ ಪ್ರಯತ್ನ ಮಾಡಲಾಗಿದೆ ಎಂದಿದ್ದಾರೆ.ಆರೋಪ ಮಾಡುತ್ತಿರುವ ಜನರಿಗೆ ಸರ್ಕಾರದ ಯೋಜನೆಗಳಿಗೆ ನಿಗದಿ ಪಡಿಸಲಾದ ಅನುದಾನದ ಕುರಿತಾಗಿ ಮಾಹಿತಿಯೇ ಇಲ್ಲ ಎಂಬುದು ಸ್ಪಷ್ಟವಾಗಿದೆ. ಮುಖ್ಯವಾಗಿ ಇಲ್ಲಿ ನಿಯಮಾವಳಿಗಳ ಪ್ರಕಾರವೇ ಅರ್ಹ ಸಂಸ್ಥೆಗಳಿಗೆ ಟೆಂಡರ್ ನೀಡಲಾಗಿದ್ದು, ಟೆಂಡರ್ ನ ನಿಯಮಾವಳಿಗಳನ್ನು ಸರಿಯಾಗಿ ತಿಳಿಯದೇ ಯಾರೋ ಪಟ್ಟಭದ್ರ ಹಿತಾಸಕ್ತಿಗಳು ಮಾಡಿರುವ ಆಧಾರ ರಹಿತವಾದ ಆರೋಪಗಳನ್ನು ಆಧರಿಸಿ ಸುದ್ಧಿಯನ್ನು ಪ್ರಕಟಿಸಲಾಗಿದ್ದು, ದಯಮಾಡಿ ಮಾಧ್ಯಮಗಳು ಸರಿಯಾದ ಅಂಶಗಳನ್ನು ಪರಿಶೀಲನೆ ಮಾಡಿ ಸುದ್ದಿಯನ್ನು ಪ್ರಕಟಿಸುವ ಜವಾಬ್ದಾರಿ ತೋರಬೇಕೆಂದು ಅವರು ವಿನಂತ...
ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ: ಬಿ.ವೈ.ವಿಜಯೇಂದ್ರ

ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ: ಬಿ.ವೈ.ವಿಜಯೇಂದ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ "ಎಟಿಎಂ" ಆಗಿ ಪರಿವರ್ತಿಸಿದೆ, ಕಳೆದ ಎರಡೂವರೆ ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯ ಮತ್ತು ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. The Congress Government has turned Karnataka into an “ATM" for the Congress high command with zero development in the last two and a half years and corruption spreading even to the Speaker’s office.The administration has collapsed due to the open power tussle between… pic.twitter.com/atnQvqxbq5— BJP Karnataka (@BJP4Karnataka) October 28, 2025ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಮುಕ್ತ ಅಧಿಕಾರ ಜಗಳದಿಂದಾಗಿ ಆಡಳಿತವು ಕುಸಿದಿದೆ, ಆದರೆ ಜನರು ಬಳಲುತ್ತಿದ್ದಾರೆ. ರೈತರು ಯಾವುದೇ ಪರಿಹಾರವಿಲ್ಲದೆ ಸಂಕಷ್ಟದಲ್ಲಿದ್ದಾರೆ, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ...
RSS ನಿರ್ಬಂಧ ಯತ್ನಕ್ಕೆ ಹಿನ್ನಡೆ; ಹೈಕೋರ್ಟ್ ಆದೇಶದಿಂದ ಸ್ವಯಂಸೇವಕರು ಖುಷ್

RSS ನಿರ್ಬಂಧ ಯತ್ನಕ್ಕೆ ಹಿನ್ನಡೆ; ಹೈಕೋರ್ಟ್ ಆದೇಶದಿಂದ ಸ್ವಯಂಸೇವಕರು ಖುಷ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: RSS ಮೇಲೆ ನಿರ್ಬಂಧ ವಿಧಿಸುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಆಘಾತ ನೀಡಿದೆ.ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಚಟುವಟಿಕೆಗಳನ್ನು ನಿರ್ಬಂಧಿಸಿ ಸರ್ಕಾರ ಹೊರಡಿಸಿದ್ದ ಆದೇಶ ಆದೇಶಕ್ಕೆ ಹೈಕೋರ್ಟ್​ ತಡೆ ನೀಡಿದೆ.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ನ ಧಾರವಾಡ ಪೀಠಕ್ಕೆ ಸಲ್ಲಿಸಲಾಗಿದ್ದ ದಾವೆ ಕುರಿತಂತೆ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್​ಗೆ ನೋಟಿಸ್ ನೀಡಿದೆ.ಅಕ್ಟೋಬರ್18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಹೊರಡಿಸಲಾಗಿದ್ದ ಆದೇಶವೂ RSS ನ ಶತಾಬ್ದಿ ಪಥಸಂಚಲನಕ್ಕೂ ಅಡ್ಡಿಯಾಗಿತ್ತು. ಈ ಆದೇಶ ಮೂಲಕ ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ ಎಂಬ ಆಕ್ರೋಶವೂ ವ್ಯಕ್ತವಾಗಿತ್ತು....
ಕೇಂದ್ರ ಉಕ್ಕಿನ ಸಚಿವರ ಕ್ಷೇತ್ರದಲ್ಲೇ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ: ಚೆಲುವರಾಯಸ್ವಾಮಿ

ಕೇಂದ್ರ ಉಕ್ಕಿನ ಸಚಿವರ ಕ್ಷೇತ್ರದಲ್ಲೇ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ: ಚೆಲುವರಾಯಸ್ವಾಮಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೇಂದ್ರದ ಉಕ್ಕಿನ ಸಚಿವರ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಿ.ಸಿ ಸಿ ಬ್ಯಾಂಕ್ ಚುನಾವಣೆಯಲ್ಲಿ 8 ಜನ ಕಾಂಗ್ರೆಸ್ ಬೆಂಬಲ 8 ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್ ಚೆಲುವರಾಯಸ್ವಾಮಿ ಅವರು ಹೇಳಿದ್ದಾರೆ.ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಜೆ ಡಿಎಸ್ ಪಕ್ಷದವರು ಚೇಸ್ಟೆ ಬಿಟ್ಟು ಸೋಲು-ಗೆಲುವನ್ನ ಸಮವಾಗಿ ತೆಗೆದುಕೊಳ್ಳಬೇಕು. ಇಂದು ಕಾಂಗ್ರೆಸ್ ಬೆಂಬಲಿತ ಮತ್ತೋಬ್ಬ ಪ್ರತಿನಿಧಿ ಆಯ್ಕೆಯಾಗುವ ಸಾಧ್ಯತೆ ಇದೆ, ಉಳಿದ 3 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಶಾಸಕರು, ಪಕ್ಷದ ಮುಖಂಡರು ಜವಾಬ್ದಾರಿ ತೆಗೆದುಕೊಂಡು ಚುನಾವಣೆ ಮಾಡಿದ್ದಾರೆ ಎಂದು ಹೇಳಿದರು.ಸಹಕಾರ ಕ್ಷೇತ್ರದ ಪರಿಕಲ್ಪನೆ ಕಟ್ಟಿದ್ದು ಶಂಕರೇಗೌಡರು, ನಾನು ಸಹ ಸಹಕಾರ ಕ್ಷೇತ್ರದಿಂದ ಬಂದಿಲ್ಲ ಸ್ಥಳಿಯ ಪಂಚಾಯತ್ ನಿಂದ ಬಂದವನು, ಸಹಕಾರ ಕ್ಷೇತ್ರ ಸಾರ್ವಜನಿಕರಿಗೆ ಅತ್ತಿರವಾಗಿದೆ ಎಂದು ತಿಳಿಸಿದರು.ನಮ್ಮ ಗೆಲುವಿಗೆ ಕಾರಣರಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ನಮ್ಮ ಕೆಲಸ. ಕಾಂಗ್ರೆಸ್ ಅತೀ ಹೆಚ್ಚು ಸ್ಥಾ...