
ಲಾಲ್ಬಾಗ್ ಉಳಿಸಲು ನವೆಂಬರ್ 2 ರಂದು ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್ಬಾಗ್ನಲ್ಲಿ ನವೆಂಬರ್ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ. ಎಲ್ಲಿ ಯಾರ ಮನೆ ಹೋಗಲಿದೆ ಎಂದು ತಿಳಿಯುತ್ತಿಲ್ಲ. ಲಾಲ್ಬಾಗ್ನಲ್ಲಿ 6 ಎಕರೆ ಜಮೀನು ಕಬಳಿಕೆ ಮಾಡಿ ಯೋಜನೆ ಮಾಡಲಾಗುತ್ತದೆ. ಇದಕ್ಕೆ ಯಾವ ಇಲಾಖೆಯೂ ಅನುಮತಿ ನೀಡಿಲ್ಲ. ಬಿಹಾರ ಚುನಾವಣೆ ಬಂದಿರುವುದರಿಂದ ಹಣ ಮಾಡಲು ಈ ಯೋಜನೆ ಜಾರಿ ಮಾಡುತ್ತಿರಬಹುದು. ಲಾಲ್ಬಾಗ್ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಘೋಷಣೆಯಡಿ ಇದೇ ನವೆಂಬರ್ 2 ರ ಭಾನುವಾರ ಬೆಳಗ್ಗೆ 8 ಗಂಟೆಗೆ ಲಾಲ್ಬಾಗ್ನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಎಲ್ಲ ಶಾಸಕರು ಸಭೆ ಸೇರಿ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಹೋರಾಟ ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಬಿಜೆಪಿ ಅವಧಿಯಲ್ಲಿ ರಸ್ತೆ ದುರಸ್ತಿಗೆ 8,000 ಕೋಟಿ ರೂ....







